ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವವು ವರ್ಚುವಲ್ ಮೂಲಕ ಅಕ್ಟೋಬರ್ 20ರಂದು ಸಂಜೆ 4 ಗಂಟೆಗೆ ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯ ಸಿಟಿ ಕ್ಯಾಂಪಸ್ನಲ್ಲಿ ನಡೆಯಲಿದೆ ಎಂದು ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಸ್ ಐತಾಳ್ ತಿಳಿಸಿದರು.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀನಿವಾಸ್ ವಿಶ್ವವಿದ್ಯಾಲಯದ 2ನೇ ವಾರ್ಷಿಕ ಘಟಿಕೋತ್ಸವವು ಅಕ್ಟೋಬರ್ 20ರಂದು ನಡೆಯಲಿದೆ. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಸಿಎ.ಎ ರಾಘವೇಂದ್ರ ರಾವ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಈ ಘಟಿಕೋತ್ಸವದಲ್ಲಿ ಉಡುಪಿಯ ಪಲಿಮಾರು ಮಠದ ಶ್ರೀ ವಿದ್ಯಾಪೀಠ ತೀರ್ಥ ಸ್ವಾಮೀಜಿಯವರಿಗೆ ಶ್ರೀನಿವಾಸ್ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪದವಿಯನ್ನು ನೀಡಲಿದ್ದೇವೆ. ಇನ್ನು ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿಗಳಾದ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ. ಸಿ.ಎನ್. ಅಶ್ವಥ್ ನಾರಾಯಣ ಅವರು ಅವರು ಘಟಿಕೋತ್ಸವವನ್ನು ಉದ್ದೇಶಿಸಿ ಮಾತನಾಡಲಿರುವರು ಎಂದರು.
ಆನಂತರ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಶ್ರೀನಿವಾಸ್ ಮಯ್ಯ ಅವರು, ಈ ಘಟಿಕೋತ್ಸವದಲ್ಲಿ 11 ಮಂದಿಗೆ ಚಿನ್ನದ ಪದಕ, 232 ಪದವಿ, 87 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು, 1 ಸಂಶೋಧನಾ ವಿದ್ಯಾರ್ಥಿಗೆ ಪಿ.ಹೆಚ್.ಡಿ. ಪದವಿ 1 ಡಿ.ಲಿಟ್ ಪದವಿಯಂತೆ ಒಟ್ಟು 38 ರ್ಯಾಂಕ್ಗಳೊಂದಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಸಚಿವ ಡಾ. ಅನಿಲ್ ಕುಮಾರ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಸಚಿವ, (ಅಭಿವೃದ್ದಿ) ಡಾ. ಅಜಯ್ ಕುಮಾರ್, ಮಾಧ್ಯಮ ಸಂಯೋಜಕಿ ಅಶ್ವಿನಿ ಉಪಸ್ಥಿತರಿದ್ದರು.