Home ಕರಾವಳಿ Archive by category ಉಳ್ಳಾಳ (Page 3)

ಮುಡಿಪು: ಕಾರು ಢಿಕ್ಕಿ: ಗಲ್ಫ್ ಉದ್ಯೋಗಿ ಸಾವು

ಮುಡಿಪು : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ಸಂಭವಿಸಿದೆ. ಬಂಟ್ವಾಳ  ಕರೋಪಾಡಿ ನಿವಾಸಿ ಸಿದ್ದಿಖ್ 48)  ಮೃತಪಟ್ಟವರು. ಗಲ್ಫ್  ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು  ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ

ಉಳ್ಳಾಲ: ಕಾರ್, ಬೈಕ್ ಗೆ ಢಿಕ್ಕಿ: ಕೊಲ್ಯ ನಿವಾಸಿ ದಾರುಣ ಸಾವು

ಉಳ್ಳಾಲ: ಒಂದೇ ಧಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಮುಂಬದಿ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ರಾ.ಹೆ66 ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಇಂದು ಮಧ್ಯಾಹ್ನ ಸಂಭವಿಸಿದೆ. ಜೀಪಿನಲ್ಲಿದ್ದ ಯುವಕರು ಗಾಂಜಾ ನಶೆಯಲ್ಲಿದ್ದು, ಅವರ ಅಜಾಗರೂಕತೆಯಿಂದ ಘಟನೆ ಸಂಭವಿಸಿದೆ ಎಂದು ಆರೋಪಿಸಿ

ಉಳ್ಳಾಲ: ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿಗೆ ಹುಟ್ಟೂರ ಸನ್ಮಾನ

ದೇರಳಕಟ್ಟೆ : ಹುಟ್ಟೂರ ಅಭಿನಂದನಾ ಸಮಿತಿ ಉಳ್ಳಾಲ ತಾಲೂಕು ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜ್ ಸಭಾಂಗಣದಲ್ಲಿ ನಡೆಯಿತು. ನಿವೃತ್ತ ನ್ಯಾಯಾಧೀಶರಾದ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯಾಂಗ ಇಲ್ಲದೆ ದೇಶದ ಆಡಳಿತ ನಡೆಯಲು ಸಾಧ್ಯವಿಲ್ಲ. ಇಂದಿನ ಪರಿಸ್ಥಿತಿಯಲ್ಲಿ ಕಾರ್ಯಾಂಗದ

ಉಳ್ಳಾಲ: ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ: ಸ್ಥಳಕ್ಕೆ ತಹಶೀಲ್ದಾರ್, ಮುಖ್ಯಾಧಿಕಾರಿ, ಎಸಿಪಿ ಭೇಟಿ ಪರಿಶೀಲನೆ

ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾರ್ ಪುಟ್ಟರಾಜು, ಎಸಿಪಿ ಧನ್ಯಾ ನಾಯಕ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆನಂದ್ ಅವರು ಠಾಣೆಗೆ ದೂರು

ಉಳ್ಳಾಲ: ಗಾಂಜಾ ಮಾರಾಟ ಯತ್ನ, ಓರ್ವನ ಬಂಧನ

ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ.ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22) ಬಂಧಿತ.ಬಂಧಿತನಿಂದ ರೂ. 9,660 ಬೆಲೆಯ 322 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಠಾಣಾ ಉಪನಿರೀಕ್ಷಕ ನಾಗರಾಜ್ ಹಾಗೂ

ನಾಪತ್ತೆಯಾದ ವಿವಾಹಿತನ ಮೃತದೇಹ ಪತ್ತೆ

ಉಳ್ಳಾಲ: ಕಳೆದ ಸೋಮವಾರದಿಂದ ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡ ಬಡಾವಣೆ ನಿವಾಸಿ ಗೌತಮ್ ಎಮ್(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಠೆ , ಕಲಶಾಭಿಷೇಕದ ಹೊರೆಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ

ಉಳ್ಳಾಲ: ಗಾಂಜಾ ಮತ್ತಿನಲ್ಲಿ ದಾಂಧಲೆ: ಸಾರ್ವಜನಿಕರಿಂದ ತರಾಟೆ, ಪೊಲೀಸರಿಂದ ಬಂಧನ

ಉಳ್ಳಾಲ: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲೆಸೆದು ದಾಂಧಲೆ ನಡೆಸಿದ್ದು, ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮದ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ

ಉಳ್ಳಾಲ: ಯುವಕನ ಕೊಲೆಯತ್ನ : ಆರೋಪಿ ಬಂಧನ

ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ಧಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ-ಕೊಲ್ಯ ಕಡೆಗೆ ಬೈಕಿನಲ್ಲಿ

ತೊಕ್ಕೊಟ್ಟು: ಐಸ್ ಕ್ರೀಮ್ ಪಾರ್ಲರ್ ವೈಟರ್ ಆತ್ಮಹತ್ಯೆ

ಉಳ್ಳಾಲ: ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಆಗಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಎಂಬಾತ ಪಿಲಾರ್ ನ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೋಡೌನ್ ನ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಿಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದರು. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾರೆ. ಕಳೆದ ಏಳು ವರುಷದಿಂದ ತೊಕ್ಕೊಟ್ಟುವಿನ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ

ಉಳ್ಳಾಲ: ಸಿಪಿಐಎಂ ಹಿರಿಯ ಮುಖಂಡ ನಾರಾಯಣ ತಲಪಾಡಿ ನಿಧನ

ಉಳ್ಳಾಲ: ಸಿಪಿಐಎಂ ಪಕ್ಷದ ಹಿರಿಯ ಮುಖಂಡ ತಲಪಾಡಿ ನಾರ್ಲ ನಿವಾಸಿ ನಾರಾಯಣ ತಲಪಾಡಿ( 68) ಹೃದಯಾಘಾತದಿಂದ ಇಂದು ನಿಧನ ಹೊಂದಿದರು. ಪಕ್ಷದ ಚಟುವಟಿಕೆ ನಿಮಿತ್ತ ಉಪ್ಪಳದ ಮುಖಂಡರೊಬ್ಬರ ಮನೆಗೆ ತೆರಳಿ ವಾಪಸ್ಸಾಗುವಾಗ ಹೃದಯಾಘಾತ ಉಂಟಾಗಿದೆ.ಇವರು ಸಿಪಿಐಎಂ ಉಳ್ಳಾಲ ವಲಯ ಸಮಿತಿ ಸದಸ್ಯರು, ದಲಿತ ಹಕ್ಕುಗಳ ಹೋರಾಟ ಸಮಿತಿ ಜಿಲ್ಲಾ ಸದಸ್ಯರು, ಕೋಟೆಕಾರು ಸರ್ಕಲ್ ಬೀಡಿ ಲೇಬರ್ ಯೂನಿಯನ್ ವಲಯ ಸಮಿತಿ ಸದಸ್ಯ, ಕೆಪಿಆರ್ ಎಸ್ ರೈತ ಸಂಘದ ಜಿಲ್ಲಾ ಸಮಿತಿ ಸದಸ್ಯರು, ಕೋಟೆಕಾರು