ಮಂಜೇಶ್ವರ : ಟೀಮ್ ಮಂಜುಶ್ರೀ ತುಳುನಾಡ್ ಸಂಸ್ಥೆಯ ಬಡವು ಯೋಜನೆಯ 57ನೇ ಸೇವಾ ಕಾರ್ಯದ ವತಿಯಿಂದ ಉಪ್ಪಳ ಸಮೀಪದ ಪೈವಳಿಕೆ ಲಾಲ್ಬಾಗ್ ಬೋಳಂಗಳ ನಿವಾಸಿ ಕಲ್ಯಾಣಿ ಕೃಷ್ಣ ದಂಪತಿಗಳ ಕುಟುಂಬಕ್ಕೆ ದಿನಸಿ ಸಾಮಾಗ್ರಿಗಳನ್ನು ಹಸ್ತಾಂತರಿಸಲಾಯಿತು. ಕಲ್ಯಾಣಿ ಕೃಷ್ಣ ದಂಪತಿಗಳ ಮನೆಯು ಶೋಚನಿಯಾವಸ್ಥೆಯಲ್ಲಿದ್ದು, ಅಲ್ಲದೇ ಮುಪ್ಪಿನ ಕಾಲದಲ್ಲಿ ದುಡಿದು ಸಾಕಾಬೇಕಾದ ಮಕ್ಕಳ
ಕಾಸರಗೋಡು ಜು 22: ಕೇಂದ್ರ ಸಾಹಿತ್ಯ ಅಕಾಡೆಮಿ ವತಿಯಿಂದ ಬದಿಯಡ್ಕ ಸಂಸ್ಕೃತಿ ಭವನದಲ್ಲಿ ಗ್ರಾಮಲೋಕ ಎಂಬ ಕೊಂಕಣಿ ಸಾಹಿತ್ಯ ಕಾರ್ಯಕ್ರಮ ನಡೆಯಿತು. ಕೊಂಕಣಿ ಸಾಹಿತಿ, ಭಾಷಾ ತಜ್ನ ಡಾ. ಕಸ್ತೂರಿ ಮೋಹನ್ ಪೈ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿಯ ಕೊಂಕಣಿ ವಿಭಾಗದ ಸಂಯೋಜಕರಾದ ಮೆಲ್ವಿನ್ ರೊಡ್ರಿಗಸ್ ಗ್ರಾಮಲೋಕ ಕಾರ್ಯಕ್ರಮದ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ಸಭಿಕರಿಗೆ ನೀಡಿದರು. ಬದಿಯಡ್ಕ ಗ್ರಾಮ ಪಂಚಾಯತ್ ಸದಸ್ಯರಾದ ಡಿ ಶಂಕರ ಗ್ರಾಮಲೋಕ
ಬಹುಭಾಷಾ ಸಂಗಮ ಭೂಮಿಯಾದ ಮಂಜೇಶ್ವರ ದ ಸರಕಾರಿ ಕ್ಷೇಮಾಭಿವೃದ್ಧಿ ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರ ದಲ್ಲಿ ಸಮಗ್ರ ಶಿಕ್ಷಾ ಕಾಸರಗೋಡು ಬಿ ಅರ್ ಸಿ ಮಂಜೇಶ್ವರದ ಸಹಭಾಗಿತ್ವದಲ್ಲಿ ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023 ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಯವರು ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೆರೋ ರವರು ಇಂದಿನ ಕಾಲಘಟ್ಟದಲ್ಲಿ ಕಥೆಯ ಅಗತ್ಯದ ಬಗ್ಗೆ
ಪೊಲೀಸರಿಗೆ ಬಂದೂಕು ತೋರಿಸಿ ಆಕ್ರಮಣ ಗೈಯಲು ಯತ್ನಿಸಿದ ಹಾಗೂ ಲಾರಿಯೊಂದನ್ನು ಅಪಹರಣಗೈದ ಪ್ರಕರಣದ ಇಬ್ಬರು ಆರೋಪಿಗಳನ್ನು ಮಂಜೇಶ್ವರ ಹಾಗೂ ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಮೀಯಪದವು ನಿವಾಸಿಗಳಾದ ರಹಿಂ ಹಾಗೂ ಲತೀಫ್ ಬಂಧಿತ ಆರೋಪಿಗಳು. ರಹೀಂ ಎಂಬಾತನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಅದೇ ರೀತಿ ಲತೀಫ್ ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಇವರ ವಿರುದ್ಧ ಕೇರಳ ಹಾಗೂ ಕರ್ನಾಟಕದ ವಿವಿಧ ಪೊಲೀಸ್ ಠಾಣೆಗಳಲ್ಲಿ 14 ಪ್ರಕರಣಗಳು ಇರುವುದಾಗಿ
ಮಂಜೇಶ್ವರ : ಮಂಜೇಶ್ವರ ರೈಲ್ವೇ ನಿಲ್ದಾಣಕ್ಕೆ ಸಮೀಪವಿರುವ ಉದ್ಯಾವರ ರೈಲ್ವೇ ಕ್ರಾಸಿಂಗ್ ಗೇಟ್ ಮೂಲಕ ಹಾದು ಹೋಗುವ ಪ್ರಯಾಣಿಕರಿಗೆ ನಿರಂತರ ಅಡಚಣೆಯಾಗಿದೆ. ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು, ಕಚೇರಿಗೆ ಹೋಗುವವರು ಹಾಗೂ ಜನ ಸಾಮಾನ್ಯರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಯಾವುದೇ ಮುನ್ಸೂಚನೆ ಕೂಡ ನೀಡದೆ ರೈಲ್ವೇ ಗೇಟ್ನ್ನು ಇಲ್ಲಿ ಬಂದ್ ಮಾಡುತ್ತಾರೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ಮಂಜೇಶ್ವರ ರಥಬೀದಿ ಅಥವಾ ಹೊಸಂಗಡಿ ಭಾಗದಿಂದ
ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) (Oommen Chandy) ವಿಧಿವಶರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು(ಜುಲೈ 18) ಕೊನೆಯುಸಿರೆಳೆದಿದ್ದಾರೆ. .
ಕಾಸರಗೋಡು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ಭಾರತ ಉದ್ಯೋಗ ಕೇಂದ್ರ ಆಶ್ರಯದಲ್ಲಿ ಮಂಜೇಶ್ವರ ಗೋವಿಂದ ಪೈ ಮೆಮೋರಿಯಲ್ ಕಾಲೇಜಿನ ಸಹಯೋಗದಲ್ಲಿ ಉದ್ಯೋಗ ಮೇಳ-2023 ನಡೆಯಿತು. ಕೇರಳದ ವಿದ್ಯಾವಂತ ಯುವಕ/ಯುವತಿಯರಿಗೆ ಸೌಕರ್ಯ ವಲಯದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ರಾಷ್ಟ್ರೀಯ ಉದ್ಯೋಗ ಸೇವಾ ಇಲಾಖೆಯ ಮೂಲಕ ಉಚಿತ ಉದ್ಯೋಗ ವಲಯಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಯ ಅಂಗವಾಗಿ 50 ಕ್ಕೂ ಹೆಚ್ಚು ಅಧಿಕಾರಿಗಳು
ಮಂಜೇಶ್ವರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ಮೂಲನೆಗೆ ಹಸಿರು ಕರ್ಮ ಸೇನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ಶುಲ್ಕವನ್ನು ಪಡೆದು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಕೊಂಡೊಯ್ಯುತ್ತಿರುವುದು ಸ್ಥಳೀಯರಲ್ಲಿ ಅಲ್ಪವಾದರೂ ಸಮಾಧಾನವನ್ನು ಹುಟ್ಟಿಸಿದೆ. ಕೆಲವೊಂದು ಕುಟುಂಬಗಳು ಈಗಲೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯಗಳನ್ನು ಹಾಕುತ್ತಿರುವುದು ಮುಂದುವರಿದಿದೆ. ಇಂತಹ ತ್ಯಾಜ್ಯಗಳನ್ನು ಹುಡುಕಿಕೊಂಡು ಬರುತ್ತಿರುವ ಬೀದಿ ನಾಯಿಗಳು
ಮಂಜೇಶ್ವರ: ಹೊಸಂಗಡಿ – ವರ್ಕಾಡಿ – ಆನೆಕಲ್ಲು ರಸ್ತೆಯ ವಿವಿಧ ಕಡೆ ರಸ್ತೆ ಬದಿ ಬೃಹತ್ ಮರಗಳು ಅಪಾಯಕಾರಿ ಸ್ಥಿತಿಯಲ್ಲಿ ಇದ್ದು, ಇನ್ನು ಕೆಲವು ಕೊಂಬೆಗಳು ಮುರಿದು ಬೀಳುವ ಹಂತದಲ್ಲಿವೆ. ಮಳೆಗಾಲ ಆರಂಭಗೊಂಡ ಬಳಿಕ ಈಗಾಗಲೇ ಹಲವಾರು ಅನಾಹುತಗಳು ಸಂಭವಿದೆ. ಇಲಾಖೆ ಈ ಬಗ್ಗೆ ಎಚ್ಚರ ವಹಿಸದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಮಂಜೇಶ್ವರದ ಬಹುತೇಕ ಪ್ರದೇಶಗಳಲ್ಲೂ ಒಣಗಿದ, ರೋಗಗ್ರಸ್ತ ಮತ್ತು ಬೃಹತ್ ಮರಗಳು, ರೆಂಬೆಗಳನ್ನು ಮಳೆಗಾಲಕ್ಕೆ
ಪೆರ್ನಾಳ್ ಹಬ್ಬ ಆಚರಿಸಲೆಂದು ಸಂಬಂಧಿಕರ ಮನೆಗೆ ಬಂದಿದ್ದ ಯುವಕರಿಬ್ಬರು ಮಸೀದಿಯ ಸಮೀಪದ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೊಗ್ರಾಲ್ ಕೊಪ್ಪಳದಲ್ಲಿ ಶನಿವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಮಂಜೇಶ್ವರ ಮಜಿಬೈಲ್ ನಿವಾಸಿ ಖಾದರ್ – ನಸೀಮಾ ದಂಪತಿಗಳ ಮಕ್ಕಳಾದ ಅಬ್ದುಲ್ ನಾಝಿಂ (22) ಹಾಗೂ ಮೊಹಮ್ಮದ್ ನವಾ (17) ಮೃತ ದುರ್ದೈವಿಗಳು. ಸ್ಥಳಕ್ಕಾಗಮಿಸಿದ ಸ್ಥಳೀಯರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ಆಸ್ಪತ್ರೆಗೆ