Home ಕರಾವಳಿ Archive by category ಬೆಳ್ತಂಗಡಿ (Page 7)

ನೆಲ್ಯಾಡಿ: ಶಿರಾಡಿ ಘಾಟ್‍ನಲ್ಲಿ ಅಕ್ಕಿ ಸಾಗಾಟದ ಲಾರಿ ಬೆಂಕಿಗಾಹುತಿ

ನೆಲ್ಯಾಡಿ: ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಬೆಂಕಿಗಾಹುತಿ ಆಗಿರುವ ಘಟನೆ ನಡೆದಿದೆ. ಶಿರಾಡಿ ಘಾಟ್‍ನ ಡಬಲ್ ಟರ್ನ್‍ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಚಾಲಕ ಹಾಗೂ

ಬೆಂಗಳೂರು: ಅರಣ್ಯ ಭೂಮಿ ಒತ್ತುವರಿ, ಅರಣ್ಯಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕ ಹರೀಶ್ ಪೂಂಜಾ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ ದೂರು ನೀಡಿದ್ದಾರೆ. ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ

ನೆಲ್ಯಾಡಿ: ಅವಾಚ್ಯ ಪದ ಬಳಕೆ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪ್ರಕರಣ ದಾಖಲು

ನೆಲ್ಯಾಡಿ: ವಲಯ ಅರಣ್ಯಾಧಿಕಾರಿಗಳನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಬೆದರಿಕೆಯನ್ನು ಕೂಡ ಹಾಕಿದ್ದಾರಲ್ಲದೆ, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ. ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ

ನೆಲ್ಯಾಡಿ: ನೂಜಿಬಾಳ್ತಿಲ ಸಿಡಿಲು ಬಡಿದು ಹಾನಿಯಾದ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ನೆಲ್ಯಾಡಿ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ನಡುವಳಿಕೆ ನೇಮಣ್ಣ ಗೌಡ ಅವರ ಮನೆಗೆ ಸಿಡಿಲು ಬಡಿದುಸಿಡಿಲು ಬಡಿದು ಹಾನಿಗೊಂಡಿರುತ್ತದೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಅವರ ಮನೆಗೆ ಭೇಟಿ ನೀಡಿ ಸಿಡಿಲು ಬಡಿದ ಸ್ಥಳವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳ ಜೊತೆ ಮಾತನಾಡಿ ಸಿಡಿಲಿನಿಂದ ಹಾನಿಯಾದ ಮನೆಗೆ ಸರ್ಕಾರದಿಂದ ಪರಿಹಾರವನ್ನು ಶೀಘ್ರವಾಗಿ ನೀಡಬೇಕು ಎಂದು ಸೂಚಿಸಿದರು. ಈ ಸಂದರ್ಭದಲ್ಲಿ ರಾಕೇಶ್ ರೈ ಕೆಡೆಂಜಿ, ಭಾಸ್ಕರ ಗೌಡ ಇಚಿಲಂಪಾಡಿ,

ನೆಲ್ಯಾಡಿ :ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿ

ನೆಲ್ಯಾಡಿ : ಸೋಮವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಸೌತಡ್ಕ ಸಮೀಪದ ಕೆಲವು ಮನೆಗಳಿಗೆ ಹಾನಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಇಲ್ಲಿ ನಿವಾಸಿಗಳಾದ ಜಮೀಲಾ, ಮರಿಯಮ್ಮ, ಪಾರ್ವತಿ, ಸುರೇಶ್ ಪೂಜಾರಿ, ಮೂಸೆ ಕುಂಞಿ, ಜೋಹರ, ಹಮೀದ್ ಎಂಬುವರ ಮನೆಗೆ ಭಾಗಶಃ ಹಾನಿಯಾಗಿದ್ದು, ಮನೆಯ ಹೆಂಚು ಮತ್ತು ಶೀಟುಗಳು ಹಾರಿಹೋಗಿವೆ. ಈ ಸಂದರ್ಭ ಕೆಲವು ಮನೆಗಳಲ್ಲಿ ಹಿರಿಯರು ಮತ್ತು ಪುಟ್ಟ ಮಗು ಮನೆಯೊಳಗಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ

ಆದರ್ಶ್ ಶೆಟ್ಟಿ ನೆಲ್ಯಾಡಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ನೆಲ್ಯಾಡಿ: ತೆಲಂಗಾಣ ರಾಜ್ಯದ ವಾರಂಗಲ್ ನಲ್ಲಿ ನಡೆಯುತ್ತಿರುವ ದಕ್ಷಿಣ ವಲಯ ಅಂತರ್ ರಾಜ್ಯ ಮಟ್ಟದ ಜೂನಿಯರ್ ಅಥ್ಲೆಟಿಕ್ಸ್ 18ರ ವಯೋಮಾನದ ಬಾಲಕರ ಕ್ರೀಡಾಕೂಟದಲ್ಲಿ ಆದರ್ಶ್ ಶೆಟ್ಟಿ ಇವರು ಎತ್ತರ ಜಿಗಿತ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ದೈಹಿಕ ಶಿಕ್ಷಕರಾದ ಏಲಿಯಸ್ ಪಿಂಟೋ, ರಾಜೇಶ್ ಮೂಲ್ಯ ಹಾಗೂ ಪುಷ್ಪರಾಜ್ ಇವರಿಗೆ ತರಬೇತಿಯನ್ನು ನೀಡಿದ್ದಾರೆ. ಪ್ರಸ್ತುತ ಇವರು ಪುತ್ತೂರು ಸಂತ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನ, ಅಧ್ಯಯನ ಪ್ರವಾಸ

ನೆಲ್ಯಾಡಿ: ಅರಣ್ಯ ಇಲಾಖೆ ವತಿಯಿಂದ ಚಿಣ್ಣರ ವನ್ಯ ದರ್ಶನಕ್ಕೆ ಕಳೆಂಜ ಗ್ರಾಮದ ಮರಕ್ಕಡ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳು ಕುದುರೆಮುಖ, ಶೃಂಗೇರಿ, ಹೊರನಾಡು, ಇತರ ಪರಿಸರಗಳಿಗೆ ಅಧ್ಯಯನ ಪ್ರವಾಸ ಕೈಗೊಂಡರು. ಪ್ರಯಾಣಕ್ಕೆ ಕಳೆಂಜ ಅರಣ್ಯ ಸಮಿತಿ ಅಧ್ಯಕ್ಷ ಧನಂಜಯ ಗೌಡ ಹಸಿರು ನಿಶಾನೆ ತೋರಿಸಿ ಶುಭಕೋರಿದರು. ಈ ಸಂದರ್ಭದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ.ಕೆ, ಕಳೆಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಂಜುನಾಥ ಗೌಡ, ಅರಣ್ಯ ಪಾಲಕರಾದ ಪ್ರಶಾಂತ್,

ನೆಲ್ಯಾಡಿ: ಕೊಣಾಲು ಸಂತ ತೋಮಸರ ದೇವಾಲಯದಲ್ಲಿ ಸಂಭ್ರಮದ ಕೊಯಿನೋನಿಯ 2023 ಆಚರಣೆ

ನೆಲ್ಯಾಡಿ: ಕೊಣಾಲು ದಿಯುವಾಂಜಲಿಸ್ಟಿಕ್ ಅಸೋಸಿಯೇಷನ್ ಆಫ್ ದ ಈಸ್ಟ್ ಇದರ ಅದೀನದಲ್ಲಿರುವ ಸಂತ ತೋಮಸ್ ಯಾಕೋಬಾಯ ಸುರಿಯಾನಿ ಚರ್ಚಿನಲ್ಲಿ ತಾಯಂದಿರಿಗೋಸ್ಕರ ಕೊಯಿನೋನಿಯಾ ಮದರ್ಸ್ ಡಿವೋಷನಲ್ ಫೆಲೋಶಿಪ್ ಕಾರ್ಯಕ್ರಮ ಮರ್ತ ಮರಿಯಾಮ್ ಮಹಿಳಾ ಸಮಾಜದ ನಿರ್ದೇಶಕರಾಗಿರುವ ವೆರಿ.ರೇ. ಪಿ.ಕೆ ಅಬ್ರಹಾಂ ಕೋರ್ ಎಪಿಸ್ಕೋಪೋ ಅವರ ನಿರ್ದೇಶನದಲ್ಲಿ ಏರ್ಪಡಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತ ತೋಮೊಸರ ದೇವಾಲಯದ ವಿಕಾರ್ ಆಗಿರುವ ರೇ.ಫಾ.ಅನೀಶ್ ಪಾರಾಶೆರಿಲ್

🛑ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ, ಲಾರಿ ಸಮೇತ ಸೊತ್ತು ವಶ

ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಎನ್.ಎಚ್. 75ರ ಲಾವತ್ತಡ್ಕ ಎಂಬಲ್ಲಿ ಅಕ್ರಮವಾಗಿ ಅಕೇಶಿಯಾ ಉರುವಲು ಸಾಗಾಟ ಮಾಡುತ್ತಿದ್ದ ಕೆಎ21 ಬಿ 3478 ಸಂಖ್ಯೆಯ ಲಾರಿಯನ್ನು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ ರವರ ಮಾರ್ಗದರ್ಶನದಲ್ಲಿ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಕೊಕ್ಕಡ ಸಾಹುಲ್ ಹಮೀದ್ ಪರಾರಿಯಾಗಿದ್ದಾನೆ. ರೆಖ್ಯ ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ತದಲಗಿ, ಬೀಟ್ ಫಾರೆಸ್ಟರ್‌ಗಳಾದ ನಿಂಗಪ್ಪ ಅವರಿ, ಸುನೀಲ್ ನಾಯ್ಕ್ ಕಾರ್ಯಾಚರಣೆಯಲ್ಲಿದ್ದರು.

ನೆಲ್ಯಾಡಿ :ವಿಶ್ವವಿದ್ಯಾನಿಲಯ ಕಾಲೇಜು : ವಿದ್ಯಾರ್ಥಿ ಸಂಘದ ಆಯ್ಕೆ

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜು ಆಗಿರುವ ನೆಲ್ಯಾಡಿಯ ವಿಶ್ವವಿದ್ಯಾನಿಲಯ ಪದವಿ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ತೃತೀಯ ವರ್ಷದ ಕಲಾ ವಿಭಾಗದ ವಿದ್ಯಾರ್ಥಿ ಸಂದೀಪ್ ಕುಮಾರ್ ಎಂ.ಬಿ ಕಾರ್ಯದರ್ಶಿಯಾಗಿ ಅನುಪ್ರಿಯ, ಸಹ ಕಾರ್ಯದರ್ಶಿಯಾಗಿ ವನಿತಾ, ಲಲಿತ ಕಲಾ ಸಂಘದ ಕಾರ್ಯದರ್ಶಿಯಾಗಿ ಕೌಶಲ್ಯ ಡಿ.ಬಿ, ಲಲಿತಕಲಾ ಸಂಘದ ಜೊತೆ ಕಾರ್ಯದರ್ಶಿಯಾಗಿ ಮಾಲಿನಿ ಸಿ.ಎ, ಹಾಗೂ