Home ಕರಾವಳಿ Archive by category ಮಂಗಳೂರು (Page 16)

ಮಂಗಳೂರು: ಗೂಗಲ್ ನಕ್ಷೆಯಲ್ಲಿ ಮಂಗಳಾದೇವಿ ದೇವಾಲಯದ ಹೆಸರು ತಿರುಚು.

ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.

ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್‍ನಲ್ಲಿ ಜಾಬ್ ವೇಕೆನ್ಸಿ

ಮಂಗಳೂರಿನ ಪ್ರತಿಷ್ಠಿತ ಕಂಪೆನಿಯಾದ ಕುಂಬ್ಳೆ ಸೋಲಾರ್ ಎನರ್ಜಿ ಸೊಲ್ಯೂಷನ್ ಪ್ರೈವೆಟ್ ಲಿಮಿಟೆಡ್‍ನಲ್ಲಿ ಇಲೆಕ್ಟ್ರಿಷನ್, ಪಿಟ್ಟರ್ಸ್, ಇಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಖಾಲಿ ಹುದ್ದೆಗಳಿದ್ದು, ಡಿ.16ರಂದು ನೇಮಕಾತಿ ಪ್ರಕ್ರಿಯೆ ನಡೆಯಲಿದೆ.ಡಿಸೆಂಬರ್ 16ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ನೇಮಕಾತಿ ನಡೆಯಲಿದ್ದು, Mail id. [email protected] ಅಥವಾ 0824 4251019 / 4261019 ಗೆ ಸಂಪರ್ಕಿಸಬಹುದು.

ಮಂಗಳೂರು: ಡಿ.15ರಂದು ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ಮತ್ತು ಫಾರ್ಮಸಿ ವತಿಯಿಂದ ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರ

ಮಂಗಳೂರಿನ ವೆಲೆನ್ಸಿಯದಲ್ಲಿ ಕಾರ್ಯಾಚರಿಸುತ್ತಿರುವ ವೇದಂ ಆರೋಗ್ಯ ಆಯುರ್ವೇದ ಆಸ್ಪತ್ರೆ ಮತ್ತು ಫಾರ್ಮಸಿ ವತಿಯಿಂದ ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವನ್ನು ಡಿ.15 ರಂದು ಹಮ್ಮಿಕೊಂಡಿದ್ದಾರೆ.ಉಚಿತ ವೈದ್ಯಕೀಯ ಮೂಳೆ ಸಾಂದ್ರತೆ ಪರೀಕ್ಷಾ ಶಿಬಿರವು ವೆಲೆನ್ಸಿಯಾದ ವೇದಂ ಆರೋಗ್ಯ ಆಸ್ಪತ್ರೆಯಲ್ಲಿ ಡಿ.15 ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ನಡೆಯಲಿದ್ದು, ವಯಸ್ಸಾದ 35 ವರ್ಷಗಳಿಗೂ ಮೇಲ್ಪಟ್ಟವರಿಗೆ ಎಲ್ಲಾ ರೀತಿಯ ಸಂಧಿವಾತಗಳಿಗೆ

ವಂಚಕ ಕಂಪೆನಿಗಳು ಜನರನ್ನು ದೋಚಲು ಸರಕಾರಗಳ ನೀತಿಗಳೇ ಕಾರಣ – ಮುನೀರ್ ಕಾಟಿಪಳ್ಳ

ಜನಸಾಮಾನ್ಯರ ಮುಗ್ದತೆ, ಅಸಹಾಯಕತೆಯನ್ನು ದುರುಪಯೋಗಪಡಿಸಿಕೊಂಡು ವಂಚಿಸುವ ಹಣಕಾಸು, ಮಾರ್ಕೆಟಿಂಗ್, ಚೈನ್ ಲಿಂಕ್, ಸ್ಕೀಮ್ ಕಂಪೆನಿಗಳು ಕಾನೂನಿನ ಭಯವಿಲ್ಲದೆ ದಿನಕ್ಕೊಂದರಂತೆ ಮಂಗಳೂರು ನಗರದಲ್ಲಿ ತಲೆ ಎತ್ತುತ್ತಿವೆ. ಇಂತಹ ಕಂಪೆನಿಗಳ ವೈಭವೋಪೇತ ಕಾರ್ಯಕ್ರಮಗಳಲ್ಲಿ ರಾಜಕೀಯ ನೇತಾರರು, ಧಾರ್ಮಿಕ ಕ್ಷೇತ್ರದ ಗಣ್ಯರು ಮುಂದಾಲೋಚನೆ ಇಲ್ಲದೆ ಕಾಣಿಸಿಕೊಳ್ಳುವುದು ವಂಚಕ ಕಂಪೆನಿಗಳಿಗೆ ಜನಸಾಮಾನ್ಯರ ನಡುವೆ ವಿಶ್ವಾಸಾರ್ಹತೆಯನ್ನು ಗಳಿಸಲು ಸಹಾಯ ಮಾಡುತ್ತದೆ‌. ಇಂತಹ

ಮಂಗಳೂರು: ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು

ನವಮಂಗಳೂರು ಬಂದರಿಗೆ ಐಷಾರಾಮಿ ಸೆವೆನ್ ಸೀಸ್ ನ್ಯಾವಿಗೇಟರ್ ಪ್ರವಾಸಿ ಹಡಗು ಆಗಮಿಸುವುದರೊಂದಿಗೆ ಈ ಬಾರಿಯ ಕ್ರೋಸ್ ಸೀಸನ್ ಅರಂಭಗೊಂಡಿತು. ನಾರ್ವೆಯ ಒಡೆತನದ, ಬಹಾಮಾಸ್ ಧ್ವಜ ಹೊಂದಿದ್ದು 500 ಪ್ರಯಾಣಿಕರು ಮತ್ತು 350 ಸಿಬಂದಿಯನ್ನು ಹೊಂದಿದೆ. 173 ಮೀಟರ್ ಉದ್ದವಿರುವ ಈ ಹಡಗು ಆಗಿದ್ದು, 28,803 ಟನ್ ಭಾರ, ಮತ್ತು 7.5 ಮೀಟರ್ ಆಳವಿದೆ. ಹಡಗಿನಿಂದ ಇಳಿದ ಕ್ರೂಸ್ ಪ್ರಯಾಣಿಕರಿಗೆ ಚೆಂಡೆ ಮತ್ತು ಯಕ್ಷಗಾನ, ಭರತನಾಟ್ಯ ಪ್ರದರ್ಶನದೊಂದಿಗೆ ಸಾಂಪ್ರದಾಯಿಕ ಸ್ವಾಗತ

ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಮಂಗಳೂರಿನ ಮೊಹಮ್ಮದ್ ಆಶಿಕ್

ಮಂಗಳೂರಿನ ಮೊಹಮ್ಮದ್ ಆಶಿಕ್ ಮಾಸ್ಟರ್ ಚೆಫ್ ಇಂಡಿಯಾ-2023 ವಿಜೇತರಾಗಿ ಹೊರಹೊಮ್ಮಿದರು. ನಂಬಿ ಜೆಸ್ಸಿಕಾ ಮರಕ್ ಮತ್ತು ರುಖ್ಸಾರ್ ಸಯೀದ್, ಸೂರಜ್ ಅವರೊಂದಿಗೆ ಕ್ರಮವಾಗಿ ಮೊದಲ ಮತ್ತು ಎರಡನೇ ರನ್ನರ್ ಅಪ್ ಸ್ಥಾನಗಳನ್ನು ಪಡೆದರು. ಮೊಹಮ್ಮದ್ ಆಶಿಕ್ ಇದಿಗ ಮಂಗಳೂರಿನಲ್ಲಿ ಚಿರಪರಿಚಿತ ಹೆಸರು ಮಂಗಳೂರಿನ ಕುಲುಕಿ ಹಬ್ ಎನ್ನುವ ಸಣ್ಣ ಜ್ಯೂಸ್ ಮಳಿಗೆಯಿಂದ ಸಾಗಿ ಇಂದು ಭಾರತದ ದೊಡ್ಡ ರಿಯಾಲಿಟಿ ಶೋ ಸೋನಿ ಟಿವಿಯ ಮಾಸ್ಟರ್ ಚೆಫ್ ಇಂಡಿಯಾದಲ್ಲಿ ವಿಜೆತರಾದವರು.ಹೋಟೆಲ್

ಮುಸ್ಲಿಂ ಯುವತಿ ವರಿಸಿದ ಬಜರಂಗದಳ ದ ಯುವಕ

ಡಿಸೆಂಬರ್ 1ರಿಂದ ನಾಪತ್ತೆಯಾಗಿದ್ದ ಸುರತ್ಕಲ್‍ನ 19ರ ಆಯಿಶಾ ಮತ್ತು 31ರ ಬಜರಂಗ ದಳದ ಪ್ರಶಾಂತ್ ಭಂಡಾರಿ ಮದುವೆ ಆಗಿರುವುದು ಶರಣ್ ಪಂಪ್‍ವೆಲ್ ಅವರ ಶುಭಾಶಯಪೋಸ್ಟ್ ನಿಂದ ಸ್ಪಷ್ಟಗೊಂಡಿದೆ. ಆಯಿಷಾಳು ಅಕ್ಷತಾ ಆಗಿ ನಮ್ಮ ಪ್ರಶಾಂತರನ್ನು ಹಿಂದೂ ರೀತ್ಯಾ ಮದುವೆ ಆಗಿದ್ದಾರೆ. ಶುಭಾಶಯ ಹೇಳಿ ಈ ಮತಾಂತರ ಸಮರ್ಥಿಸಿದ್ದಾರೆ. ಆಯಿಷಾ ಅಲಿಯಾಸ್ ಅಕ್ಷತಾಳ ಹೆತ್ತವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದವರು. ಆಯಿಷಾ ತಂದೆ ಸುರತ್ಕಲ್‍ನಲ್ಲಿ

ಉತ್ತರ ಕನ್ನಡ: ಶಿರಸಿಯಲ್ಲಿ ಭೀಕರ ರಸ್ತೆ ಅಪಘಾತ ; ಮಂಗಳೂರಿನ ಕಂದಾವರ ಮೂಲದ ನಾಲ್ವರ ದುರ್ಮರಣ

ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕು ಬಂಡಲ ಗ್ರಾಮದಲ್ಲಿ ಶುಕ್ರವಾರ ಕಾರು ಮತ್ತು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಕುಮಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು

ಖಾಸಗಿ ಬಸ್‍ಗಳಲ್ಲಿ ಕನ್ನಡ ನಾಮಫಲಕ ಬಳಕೆಗೆ ವಿರೋಧ

ಉಡುಪಿ ಮತ್ತು ಮಣಿಪಾಲದಲ್ಲಿ ಸಂಚರಿಸುವ ಬಸ್‍ಗಳಲ್ಲಿ ಕನ್ನಡದಲ್ಲಿ ನಾಮಫಲಕ ಹಾಕುವುದನ್ನು ಪ್ರಾದೇಶಿಕ ಸಾರಿಗೆ ಕಚೇರಿ ಕಡ್ಡಾಯಗೊಳಿಸಿದೆ.ಇತ್ತೀಚೆಗೆ ನಡೆದ ಜನಸ್ಪಂದನ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈಗಿರುವ ಇಂಗ್ಲಿಷ್ ನಾಮಫಲಕಗಳ ಜೊತೆಗೆ ಕನ್ನಡದಲ್ಲಿ ಮಾರ್ಗ ಸಂಖ್ಯೆಗಳು ಮತ್ತು ಗಮ್ಯಸ್ಥಾನವನ್ನು ನಾಮಫಲಕಗಳಲ್ಲಿ ಪ್ರದರ್ಶಿಸುವಂತೆ ಆರ್‍ಟಿಒ ಎಲ್ಲಾ ಬಸ್ ನಿರ್ವಾಹಕರಿಗೆ ಸೂಚಿಸಿದೆ. ಗಡುವು ಮುಗಿದ ನಂತರ ಬಸ್ ನಿರ್ವಾಹಕರು

ಕಟೀಲು: ದಶಾವತಾರ ಯಕ್ಷಗಾನ ಮಂಡಳಿಯಿಂದ 6 ಮೇಳಗಳ ತಿರುಗಾಟ ಆರಂಭ

ಇತಿಹಾಸ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಳದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟಕ್ಕೆ ದೇವಲಯದಲ್ಲಿ ಪ್ರಥಮ ಸೇವೆಯಾಟದೊಂದಿಗೆ ಪ್ರಾರಂಭವಾಯಿತು.ಈ ವೇಳೆ ದೇವಳದ ಪ್ರಧಾನ ಅರ್ಚಕ ಅನಂತ ಪದ್ಮನಾಭ ಅಸ್ರಣ್ಣ ಅವರು ಯಕ್ಷಗಾನ ಕಲಾವಿದರಿಗೆ ಗೆಜ್ಜೆ ಹಸ್ತಾಂತರಿಸಿದರು.ಗೆಜ್ಜೆ ಮುಹೂರ್ತದ ಮೊದಲು ಮೇಳಗಳ ಕಲಾವಿದರಿಂದ ತಾಳಮದ್ದಳೆ ನಡೆಯಿತು ನಂತರ ರಥಬೀದಿಯಲ್ಲಿ ಚೌಕಿ ಪೂಜೆ ನಡೆದು 6 ಮೇಳಗಳಿಂದಲು ದೇವಿ ಮಹಾತ್ಮೆ