Home ಕರಾವಳಿ Archive by category ಮಂಗಳೂರು (Page 19)

ಕೊಟ್ಟಾರಚೌಕಿ ಸರ್ಕಲ್‍ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು

ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್‍ಗೆ ಇಡಲಾಗುವುದು ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ. ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ.

33 ವರುಷಗಳ ಬಳಿಕ ಮಂಗಳೂರು ವಿವಿಗೆ ಕಬಡ್ಡಿ ಕಿರೀಟ

ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್

ಮಂಗಳೂರು: ಕಾವೂರಿನಲ್ಲಿ ಮಾರುಕಟ್ಟೆ ಸಂಕೀರ್ಣ ಖಾಲಿ: ಅಂಗಡಿ ಪಡೆದ ವ್ಯಾಪಾರಸ್ಥರು ವಾರದೊಳಗೆ ಸ್ಥಳಾಂತರಗೊಳ್ಳಬೇಕು: ಮೇಯರ್ ಸುಧೀರ್

ಕಾವೂರಿನಲ್ಲಿ ಸ್ಮಾರ್ಟ್ ಸಿಟಿ ಅನುದಾನದಿಂದ ನಿರ್ಮಿಸಲಾದ ಕೋಟ್ಯಾಂತರ ರೂಪಾಯಿ ಮೌಲ್ಯದ ಮಾರುಕಟ್ಟೆಯ ಸಂಕೀರ್ಣ ಖಾಲಿ ಬಿದ್ದಿದ್ದು, ಅಂಗಡಿ ಪಡೆದ ವ್ಯಾಪಾರಸ್ಥರು ಒಂದು ವಾರದ ಒಳಗಾಗಿ ಸ್ಥಳಾಂತರಗೊಳ್ಳಬೇಕು ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದು ಅನಿವಾರ್ಯ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದ್ದಾರೆ. ಕಾವೂರಿನಲ್ಲಿ ನಿರ್ಮಾಣವಾಗಿರುವ ಮಾರುಕಟ್ಟೆ ಸಂಕೀರ್ಣವನ್ನು ಅವರು ವೀಕ್ಷಿಸಿ, ಮಾಧ್ಯಮದೊಂದಿಗೆ ಮಾತನಾಡಿದರು. ಉತ್ತಮವಾದಂತ ಮೀನು ಮಾರುಕಟ್ಟೆ

ಮಂಗಳೂರು: ಡಿಕೆಶಿ ಕೇಸ್ ವಾಪಸ್ ಹಿಂಪಡೆದಿರುವುದು ಖಂಡನೀಯ: ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೇಳಿಕೊಳ್ಳಲು ಆಶ್ಚರ್ಯ ಎನಿಸುವಂತಹ ಬಹಳ ನೋವಿನ ಸಂಗತಿ ನಡೆದಿದ್ದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಭ್ರಷ್ಟಾಚಾರ ಆರೋಪದಡಿಯಲ್ಲಿ ಸಿಬಿಐ ತನಿಖೆ ಮಾಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟ ಸಿಬಿಐ ತನಿಖೆಗೆ ಕೊಟ್ಟ ಅನುಮತಿ ವಾಪಾಸು ತೆಗೆದುಕೊಂಡಿರುವುದು ಖಂಡನೀಯ ಎಂದು ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬಿಜೆಪಿ ಮಂಗಳೂರು ಮಂಡಲ ಕಚೇರಿಯಲ್ಲಿ

ಮಂಗಳೂರಿನಲ್ಲಿ ಅಂತರ್ ರಾಷ್ಟ್ರೀಯ ಈಜುಕೊಳ ಲೋಕಾರ್ಪಣೆ

19ನೇ ರಾಷ್ಟ್ರೀಯ ಹಿರಿಯರ ಈಜುಸ್ಪರ್ಧೆಯ ಆರಂಭದೊಂದಿಗೆ ನಗರದ ಎಮ್ಮೆಕೆರೆ ಪ್ರದೇಶದಲ್ಲಿ ಒಲಂಪಿಕ್ಸ್ ಮಾನದಂಡದ ಪ್ರಕಾರ ನಿರ್ಮಿಸಿರುವ ಅತ್ಯಾಧುನಿಕ ಈಜುಕೊಳ ಉದ್ಘಾಟನೆಗೊಂಡಿದೆ. ಈಜುಕೊಳ ಉದ್ಘಾಟಿಸಿದ ನಗರಾಭಿವೃದ್ಧಿ ಸಚಿವ ಸುರೇಶ್ ಬಿ.ಎಸ್ ಮಾತನಾಡಿ, ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಆದಾಯ ಸೃಷ್ಟಿಸುವ ಯೋಜನೆಗಿಂತ ಹೆಚ್ಚಾಗಿ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ. ಇನ್ನು ಮುಂದೆಯಾದರೂ ಮಹಾನಗರ ಪಾಲಿಕೆಯ ಯಾವುದಾದರೂ ಯೋಜನೆಯಡಿ ಆದಾಯ ವೃದ್ಧಿಸುವ

ಕರಾವಳಿಯಲ್ಲಿ ಸಾಧಾರಣ ಮಳೆ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗಗದ ಕೆಲವು ಕಡೆಗಳಲ್ಲಿ ಅಲಲ್ಲಿ ಸಾಧಾರಣ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವಣವಿದ್ದು, ಮಾಧ್ಯಹ್ನಾದ ಸಮಯದಲ್ಲಿ ಮಳೆ ಸುರಿದಿದೆ. ಕರಾವಳಿಯಲ್ಲಿ ಹಿಂಗಾರು ಕ್ಷೀಣಿಸುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಜಿಲ್ಲೆಯ ಅಲಲ್ಲಿ ಮೋಡ ಮತ್ತು ಸಾಧಾರಣ ಮಳೆಯ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಯಾವುದೇ ಅಲರ್ಟ್ ಘೋಷಿಸಿಲ್ಲ.

ಮಂಗಳೂರು ; ಶವ ಕೊಳೆಸಿದ ಮಂಗಳೂರಿನ ಆಸ್ಪತ್ರೆಗೆ ಗ್ರಾಹಕರ ನ್ಯಾಯಾಲಯದಿಂದ ದಂಡ ಪ್ರಯೋಗ

ಹಣ ಪಡೆದು ಶವಾಗಾರದಲ್ಲಿ ಶವ ಇಟ್ಟು ಕೊಳೆಸಿದ ಕಾರಣಕ್ಕೆ ಮಂಗಳೂರು ನಗರದ ಆಸ್ಪತ್ರೆ ಒಂದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಗ್ರಾಹಕರ ನ್ಯಾಯಾಲಯವು ವಾರಸುದಾರರಿಗೆ ರೂ. 5 ಲಕ್ಷ ಪರಿಹಾರ ನೀಡುವಂತೆ ಸೂಚಿಸಿದೆ. ತಿಂಗಳೊಳಗೆ ಪರಿಹಾರ ನೀಡಲು ವಿಫಲರಾದಲ್ಲಿ 8% ಬಡ್ಡಿ ಸೇರಿಸಿ ನೀಡುವಂತೆಯೂ ಸೂಚಿಸಲಾಗಿದೆ. 2019ರ ಅಕ್ಟೋಬರ್ 25ರಂದು ವಿಲ್ಸನ್ ಆಲನ್ ಫೆರ್ನಾಂಡೀಸ್ ಸಾವಿಗೀಡಾದರು. ವಿದೇಶದ ಬಂಧು ಬರಲಿ ಎಂದು ಮಂಗಳೂರಿನ ಒಂದು ಆಸ್ಪತ್ರೆಗೆ ಹಣ ನೀಡಿ ಅಲ್ಲಿನ ಶವಾಗಾರದಲ್ಲಿ

ಮಂಗಳೂರು – ಡಿ.10ರಂದು ಅಂತರ್ ಧರ್ಮೀಯ ಸೌಹಾರ್ದ ಕ್ರೀಡಾ ಕೂಟ

ಕಥೋಲಿಕ್ ಸಭಾ ಮಂಗಳೂರು ಪ್ರದೇಶ, ಆಂಜೆಲೊರ್ ಘಟಕ ಮತ್ತು ಅಂತರ್ ಧರ್ಮೀಯ ಸಂವಾದ ಆಯೋಗ, ಆಂಜೆಲೊರ್ ಚರ್ಚ್ ವತಿಯಿಂದ ಪುರುಷರಿಗೆ ವಾಲಿಬಾಲ್ ಹಾಗೂ ಮಹಿಳೆಯರಿಗೆ ತ್ರೋಬಾಲ್ ಪಂದ್ಯಾವಳಿಯನ್ನು ಡಿ.10 ನಗರದ ಕಪಿತಾನಿಯೊ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಆಂಜೆಲೊರ್ ಚರ್ಚ್‍ನ ಅಂತರ್ ಧರ್ಮೀಯ ಆಯೋಗದ ಸಂಚಾಲಕರಾಧ ಫೆಲಿಕ್ಸ್ ಮೊರಾಸ್ ತಿಳಿಸಿದರು. ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು.

ಮಣ್ಣಗುಡ್ಡೆಯ ವರ್ಟೆಕ್ಸ್ ಲಾಂಜ್‍ನಲ್ಲಿಎನ್ನಿಯೋಂಗ್ ಕೊರಿಯಾ

ಮಂಗಳೂರಿನ ಮಣ್ಣಗುಡ್ಡೆಯ ವರ್ಟೆಕ್ಸ್ ಲಾಂಜ್ ಮತ್ತು ಬೈ ಲೈಪ್ ಸಹಯೋಗದಲ್ಲಿ ಎನ್ನಿಯೋಂಗ್ ಕೊರಿಯಾ ಕಾರ್ಯಕ್ರಮವು ವರ್ಟೆಕ್ಸ್ ಲಾಂಜ್ ನಲ್ಲಿ ನಡೆಯಿತು. ಮಂಗಳೂರಿನ ಮಣ್ಣಗುಡ್ಡೆಯ ಗಾಂಧಿ ಪಾರ್ಕ್ ಪಕ್ಕದಲ್ಲಿರುವ ವರ್ಟೆಕ್ಸ್ ಲಾಂಜ್ ನಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮ ನಡೆಸಿ ,ಸೈ ಎನ್ನಿಸಿಕೊಂಡಿದ್ದಾರೆ.ಇದೀಗ ಎನ್ನಿಯೋಂಗ್ ಕೊರಿಯಾ ಮನೋರಂಜನಾ ಕಾರ್ಯಕ್ರಮ ನಡೆಯುತ್ತಿದ್ದು, ನವೆಂಬರ್ 23ರಿಂದ ಆರಂಭಗೊಂಡು, 26ರತನಕ ನಡೆಯಲಿದೆ. ಇಲ್ಲಿ ವಿವಿಧ ಮನೋರಂಜನಾ

ಸುರತ್ಕಲ್: ವಿಜಯಕುಮಾರ್ ಕೊಡಿಯಾಲ್ ಬೈಲ್‌ರಿಗೆ ರಂಗಚಾವಡಿ ಪ್ರಶಸ್ತಿ

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇವರ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ, ರಂಗಚಾವಡಿ ಪ್ರಶಸ್ತಿ ೨೦೨೩ ಪ್ರದಾನ ಸಮಾರಂಭ ಡಿಸೆಂಬರ್ ೩ ರಂದು ಭಾನುವಾರ ಸಂಜೆ ೪.೩೦ ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ. 2023 ರ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಖ್ಯಾತ ನಾಟಕ ರಚನೆಕಾರ- ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್