Home ಕರಾವಳಿ Archive by category ಮಂಗಳೂರು (Page 20)

ಜಾಗತಿಕ ಮೀನು ಕ್ಷಾಮಕ್ಕೆ ಮಂಗಳೂರು ಮುನ್ನುಡಿ

ವಿಶ್ವ ಸಂಸ್ಥೆಯು 2055ಕ್ಕೆ ಜಗತ್ತು ಮೀನಿನ ಕ್ಷಾಮ ಎದುರಿಸಲಿದೆ ಎಂದು ಎಚ್ಚರಿಸಿತ್ತು. ಆ ಬಗೆಗೆ ಎಚ್ಚರಿಸಿ ಆಗಲೇ ಲೇಖನ ಬರೆಯಲಾಗಿದೆ. ಈಗ ಮೀನಿನ ಕ್ಷಾಮವು ತುಳುನಾಡನ್ನು ಸಮೀಪಿಸಿದೆ. ಮೀನು ಬರಕ್ಕೆ ಕಾರಣವೇನು? ಅತಿ ಮೀನುಗಾರಿಕೆ, ಮಾಲಿನ್ಯ, ಮೀನು ಆವಾಸದ ನೆಲೆ ನಾಶ, ಹವಾಮಾನ ಬದಲಾವಣೆ ಇವೆಲ್ಲ ಕಾರಣಗಳಿವೆ. ಈಗ ಭೂಬಿಸಿಯ ಗುಮ್ಮ ಒಳತೂರಿದೆ. ಈಗಾಗಲೇ ಲೋಕದ 80%

ಮಂಗಳೂರು ; ಅಪಾಯಕ್ಕೆ ಆಹ್ವಾನ ನೀಡುವಂತಿದ್ದ, ತ್ರಿಶೂಲ ರೀತಿಯಲ್ಲಿದ್ದ ಕಬ್ಬಿಣದ ಸರಳುಗಳ ಕತ್ತರಿಸುವ ಕಾರ್ಯ

ಖಾಸಗಿ ಸಂಸ್ಥೆಯೊಂದು ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಉರ್ವಾ ಸ್ಟೋರ್‍ಗಳ ನಡುವೆ ಡಿವೈಡರ್‍ಗೆ ಕಬ್ಬಿಣದ ಚೂಪಾದ ಸರಳುಗಳನ್ನು ಅಳವಡಿಸಲಾಗಿದ್ದು, ಅದರಲ್ಲಿ ತ್ರಿಶೂಲ ರೀತಿಯ ಚೂಪಾದ ಕಬ್ಬಿಣದ ಸರಳುಗಳಿದ್ದು ಇದು ಅಪಾಯವನ್ನ ಆಹ್ವಾನಿಸುವಂತಿತ್ತು. ಯಾವುದೇ ಅಪಘಾತಗಳು ನಡೆದಾಗ ಆ ಡಿವೈಡರ್ ಮೇಲೆ ಬಿದ್ದರೆ ಜೀವಕ್ಕೆ ಹಾನಿಯಾಗುವ ಸಾಧ್ಯತೆ ಹೆಚ್ಚಾಗುವಂತಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರಾದ ಯತೀಶ್ ಬೈಕಂಪಾಡಿ ಅವರು ಸಂಬಂಧ ಪಟ್ಟ ಅಧಿಕಾರಿಗಳ

ಸುರತ್ಕಲ್: ಕಳೆದು ಹೋಗಿದ್ದ ಮೊಬೈಲ್ ವಾರಸುದಾರರಿಗೆ ಹಸ್ತಾಂತರ

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಹಿಂದೆ ಮೊಬೈಲ್ ಫೋನೊಂದು ಕಳೆದು ಹೋಗಿದ್ದು, ವಾರಸುದಾರರಿಗೆ ಮರಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸುರತ್ಕಲ್‍ನ ಕುಳಾಯಿ ನಿವಾಸಿ ವಿ4 ನ್ಯೂಸ್‍ನ ಕ್ಯಾಮರಾಮೆನ್ ಶರತ್ ಸಾಲ್ಯಾನ್ ಅವರ ಪುತ್ರಿ ಶಿವಾನಿಯವರ ಮೊಬೈಲ್ ಪೋನ್ ಖಾಸಗಿ ಬಸ್‍ನಲ್ಲಿ ಕಳೆದು ಹೋಗಿತ್ತು. ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಕಾರ್ಯಪ್ರವೃತ್ತರಾದ ಪೊಲೀಸರು ಸಿಇಐಆರ್ ಪೋರ್ಟಲ್ ಆ್ಯಪ್

ಮಂಗಳೂರಿನಲ್ಲಿ ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಿಗೆ ಸೇಬು ಹಣ್ಣಿನ ಹಾರದ ಅದ್ಧೂರಿ ಸ್ವಾಗತ

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರಿಗೆ ಆಗಮಿಸಿದ ಬಿ. ವೈ ವಿಜಯೇಂದ್ರ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು. ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ನಗರಕ್ಕೆ ಆಗಮಿಸಿದ ಅವರು, ತೆರೆದ ವಾಹನದ ಮೂಲಕ ನಗರದ ಬಂಟ್ಸ್ ಹಾಸ್ಟೆಲ್‍ನಿಂದ ಸಿವಿ ನಾಯಕ್ ಹಾಲ್ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದರು. ಈ ವೇಳೆ ಬಿಜೆಪಿಯ ಮಹಿಳಾ ಕಾರ್ಯಕರ್ತರು ಆರತಿ ಬೆಳಗಿ, ತಿಲಕ ಹಚ್ಚಿ ಬರಮಾಡಿಕೊಂಡರು, ಜೊತೆಗೆ ಸೇಬು ಹಣ್ಣಿನ ಹಾರದ ಮೂಲಕ ಭರ್ಜರಿ ಸ್ವಾಗತ ಮಾಡಿದರು.

ಸುರತ್ಕಲ್‍ ; ಅಪರೂಪದ ಖಾಯಿಲೆಯಿಂದ ಬಳಲುತ್ತಿರುವ ಯುವಕ – ಸಹಾಯದ ನಿರೀಕ್ಷೆಯಲ್ಲಿ ಬಡ ಕುಟುಂಬ

ಸುರತ್ಕಲ್‍ನ ನಿವಾಸಿಯಾದ ಕಿರಣ್ ದೇವಾಡಿಗ ಎಂಬವರು ಅಪರೂಪದ ಎಲುಬು ಕ್ಯಾನ್ಸರ್‍ಗೆ ತುತ್ತಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಚಿಕತ್ಸೆಗಾಗಿ ಸಾವಿರಾರು ರೂಪಾಯಿ ಖರ್ಚಾಗಿದ್ದು, ಕಿರಣ್ ಮನೆಯವರು ದಾನಿಗಳ ಸಹಾಯದ ನಿರೀಕ್ಷೆಯಲ್ಲಿದ್ದಾರೆ. ಸೋಮನಾಥ್ ದೇವಾಡಿಗ ಅವರು ಹುಟ್ಟು ಅಂಗವಿಕಲರಾಗಿದ್ದು, ವೃದ್ದಾಪ್ಯ ಹಾಗೂ ಸಂಕಷ್ಠದ ಸಮಯದಲ್ಲಿ ತನ್ನ ಒಬ್ಬನೇ ಮಗನಾದ 28 ವರ್ಷ ಪ್ರಾಯದ ಕಿರಣ್ ದೇವಾಡಿಗ ಅವರು

ಮಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿ.ವೈ.ವಿಜಯೇಂದ್ರ

ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಅಭಿವೃದ್ಧಿ ಯೋಜನೆಗಳಿಗೆ ಸರಕಾರದಿಂದ

ನೈತಿಕ ಮೌಲ್ಯವನ್ನು ಉಳಿಸುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು- ಶಿವಾನಂದ ತಗಡೂರು

ಮಂಗಳೂರು: ಆಧುನಿಕ ಯುಗದಲ್ಲಿ ತನ್ನ ವೃತ್ತಿ ಬದ್ಧತೆ‌ ಮತ್ತು ನೈತಿಕ ಮೌಲ್ಯಗಳನ್ನು ಉಳಿಸಿಕೊಳ್ಳುವುದು ಪತ್ರಕರ್ತನ ಮುಂದಿರುವ ದೊಡ್ಡ ಸವಾಲು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ. ಮಂಗಳೂರಿನಕುದ್ಮುಲ್ ರಂಗರಾವ್ ಪುರಭವನದಲ್ಲಿ ನ.21 ರಂದು ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇಂದು ವೃತ್ತಿ ಬದ್ಧತೆ ಇರುವ

ಮಂಗಳೂರು : ಪ್ರಜಾಪ್ರಭುತ್ವ ದಲ್ಲಿ ಮಾಧ್ಯಮದ ಪಾತ್ರ ಮಹತ್ವದ್ದು – ನಳಿನ್ ಕುಮಾರ್ ಕಟೀಲ್

ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮಗಳಿಗೆ ಅತ್ಯಂತ ಮಹತ್ವದ ಪಾತ್ರವಿದೆ. ವಸ್ತು ನಿಷ್ಠ ಹಾಗೂ ವಿಶ್ವಾಸಾರ್ಹ ಸುದ್ದಿಗಳನ್ನು ಜನತೆಗೆ ತಿಳಿಸುವ ಹೊಣೆಗಾರಿಕೆ ಮಾಧ್ಯಮಗಳ ಮೇಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4 ನೇ ಜಿಲ್ಲಾ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ದ.ಕ. ಜಿಲ್ಲೆಯ ಪತ್ರಕರ್ತರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ

ಮಂಗಳೂರು : ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯದ ಮೂಲಕ ಹಳ್ಳಿಯ ಜನರ ಸಮಸ್ಯೆಯ

ಮಂಗಳೂರು: ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿದ್ದ ಯುವಕ ಕೊನೆಗೂ ತಾಯ್ನಾಡಿಗೆ..!!

ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ಇದೇ ವೇಳೆ ಮಾತನಾಡಿದ ಚಂದ್ರಶೇಖರ್ ಮಾಧ್ಯಮಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ