Home Archive by category ಕರಾವಳಿ (Page 41)

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವ, ಕುಣಿತ ಭಜನೆ

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ

ಸುಳ್ಯ: ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಗೊನೆ ಮುಹೂರ್ತ

ಸುಳ್ಯ ತಾಲೂಕು ಪೆರುವಾಜೆಯ ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜ.30ರಂದು ಜಾತ್ರಾ ಮಹೋತ್ಸವ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಗೊನೆ ಮುಹೂರ್ತ ನೆರವೇರಿತು. ಶ್ರೀ ದೇವರ ವಾರ್ಷಿಕ ಉತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ದಿನಾಂಕ ಜ.30ರಂದು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ ಮತ್ತು ಶುದ್ದಿ ಕಲಶ ಬೆಳಗ್ಗೆ 10 ಗಂಟೆಯಿಂದ

ಕಾರ್ಕಳ : ಅತ್ತೂರು ಸಂತ ಲಾರೆನ್ಸ್ ಬಸಿಲಿಕಾ ಚರ್ಚ್‌ನ ವಾರ್ಷಿಕ ಮಹೋತ್ಸವ

ಕಾರ್ಕಳ: ಅತ್ತೂರು ಸಂತ ಲಾರೆನ್ಸರ ಕ್ಷೇತ್ರ ಕಾರ್ಣಿಕ ಕ್ಷೇತ್ರವಾಗಿದೆ ಇದೊಂದು ಪ್ರಾರ್ಥನೆ ಕೇಂದ್ರವಾಗಿದೆ ಈ ಕ್ಷೇತ್ರದಲ್ಲಿ ಸುಮಾರು 300 ವರ್ಷಗಳಿಂದ ಅತ್ತೂರು ಸಂತ ಲಾರೆನ್ಸರ ಹಬ್ಬವನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ದೇಶ ವಿದೇಶಗಳಿಂದ ಲಕ್ಷಾಂತರ ಜನರು ಈ ಪುಣ್ಯಕ್ಷೇತ್ರಕ್ಕೆ ಬಂದು ಪ್ರಾರ್ಥಿಸುತ್ತಾರೆ. ಅವರಿಗೆ ಸಂತ ಲಾರೆನ್ಸರು ಎಲ್ಲವನ್ನು ಕೊಟ್ಟಿರುತ್ತಾರೆ. ಈ ಪುಣ್ಯಕ್ಷೇತ್ರದಲ್ಲಿ ಅಸಾಧ್ಯವಾದುದು ಸಾಧ್ಯವಾಗಿದೆ. ಜಾತಿ ಮತ ಭೇದವಿಲ್ಲದೆ ಎಲ್ಲಾ

ಪುತ್ತೂರು: ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಕಳೆದ ಏಳು ವರ್ಷಗಳಿಂದ ಇಲ್ಲಿನವರ ಬೇಡಿಕೆ ಇತ್ತು. ಈ ರಸ್ತೆಗೆ ಸದ್ಯಕ್ಕೆ 5 ಲಕ್ಷ ಅನುದಾನ ನೀಡಿದ್ದೇನೆ. ಮುಂದೆ ಇದೇ ರಸ್ತೆಗೆ 15

* ಮೂಡುಬಿದಿರೆ: ಶ್ರೀ ರಾಮನ ಮಂದಿರ ನಿರ್ಮಾಣಕ್ಕಾಗಿ ಬೆಳುವಾಯಿಯಲ್ಲಿ ನಿರಂತರ ಬೆಳಗಿದ ನಂದಾದೀಪ

ಮೂಡುಬಿದಿರೆ : ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಶ್ರೀರಾಮನ ಮಂದಿರವು ಯಾವುದೇ ಅಡೆತಡೆಯಿಲ್ಲದೆ ನಿರ್ಮಾಣವಾಗಬೇಕೆಂಬ ಸಂಕಲ್ಪದೊಂದಿಗೆ ಬೆಳುವಾಯಿಯ ಮನೆಯೊಂದರ ದೇವರ ಕೋಣೆಯಲ್ಲಿ ಕಳೆದ ಮೂರೂವರೆ ವರ್ಷಗಳಿಂದ “ನಂದಾದೀಪ” ನಿರಂತರ ಬೆಳಗುತ್ತಿದೆ. 2020 ರ ಆಗಸ್ಟ್ 4ರಂದು ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಯಿತು. ಆ ದಿನದಿಂದಲೇ ಬಿಜೆಪಿಯ ಸ್ಥಾನೀಯ ಸಮಿತಿಯ ಮಾಜಿ ಅಧ್ಯಕ್ಷ ಸುರೇಶ್ ಕುಮಾರ್ ಬೆಳುವಾಯಿ ಮತ್ತು ಅವರ

ಕೋಲ್ಪೆ: ಭರವಸೆಯ ಬೆಳಕು ಸಮಿತಿ ಕಚೇರಿ ಉದ್ಘಾಟನೆ

ನೆಲ್ಯಾಡಿ: ಭರವಸೆಯ ಬೆಳಕು ಸಮಿತಿ ಕೋಲ್ಪೆ ಇದರ ಕಚೇರಿ ಉದ್ಘಾಟನೆ ಕಾರ್ಯಕ್ರಮ ಬಹು ಇರ್ಷಾದ್ ದಾರಿಮಿ ಉಸ್ತಾದ್ ಮಿತ್ತಬೈಲ್ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಹಮ್ಮದ್ ಶರೀಫ್ ದಾರಿಮಿ ಅಲ್ ಹೈತಮಿ ಮುದರ್ರಿಸ್ ಕೋಲ್ಪೆ. ಕೋಲ್ಪೆ ಜಮಾಹತ್ ಅಧ್ಯಕ್ಷರಾದ ಕೆ.ಕೆ ಅಬೂಬಕ್ಕರ್. ಭರವಸೆಯ ಬೆಳಕು ಸಮಿತಿಯ ಅಧ್ಯಕ್ಷರಾದ ಯು.ಕೆ.ಅಬ್ದುಲ್ ಹಮೀದ್. ಕಲಂದರ್ ಷಾ ದಪ್ ಸಮಿತಿ ಅಧ್ಯಕ್ಷರಾದ ಇಕ್ಬಾಲ್ ಕೋಲ್ಪೆ. ಮಿಲೇನಿಯಂ ಬ್ರದರ್ಸ್ ಅಧ್ಯಕ್ಷರಾದ

ಕೊಕ್ಕಡ: ಕೃಷಿ ತೋಟಕ್ಕೆ ಕಾಡಾನೆ ದಾಳಿ; ಅಡಿಕೆ, ಬಾಳೆ ಕೃಷಿ ಧ್ವಂಸ

ಕೊಕ್ಕಡ: ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಸಮೀಪದ ವಡ್ರಳಿಕೆ ಎಂಬಲ್ಲಿ ಕಾಡಾನೆ ಕೃಷಿ ತೋಟಗಳಿಗೆ ದಾಳಿ ನಡೆಸಿದ್ದು, ಅಪಾರ ಪ್ರಮಾಣದಲ್ಲಿ ಕೃಷಿ ನಾಶ ಉಂಟಾಗಿದೆ. ರಫಾಯಲ್ ಸ್ಟ್ರೆಲ್ಲಾ ಎಂಬವರ ತೋಟಕ್ಕೆ ದಾಳಿ ಮಾಡಿದ ಕಾಡಾನೆ ಅಡಿಕೆ, ಬಾಳೆ ಕೃಷಿಯನ್ನು ಧ್ವಂಸ ಮಾಡಿದ್ದು, ಇದರಿಂದಾಗಿ ಕೃಷಿಕರಿಗೆ ಅಪಾರ ನಷ್ಟ ಉಂಟಾಗಿದೆ.ಪದೇ ಪದೇ ಈ ರೀತಿಯ ದಾಳಿಯಿಂದ ಕೃಷಿಕರಿಗೆ ತೊಂದರೆ ಉಂಟಾಗಿದೆ. ಸಂಬಂಧಪಟ್ಟ ಇಲಾಖೆಯವರು ಪರಿಶೀಲಿಸಿ, ಕೃಷಿ ನಷ್ಟದ ಬಗ್ಗೆ

*ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ: ಶ್ರೀದೇವರ ದರ್ಶನ ಬಲಿಸೇವೆ

ವಿಟ್ಲ: ಮಹಾತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ವಿಜೃಂಭಣೆಯಿಂದ ನಡೆಯುತ್ತಿದ್ದು, ಇಂದು ಶ್ರೀ ಕ್ಷೇತ್ರದಲ್ಲಿ ದರ್ಶನ ಬಲಿಸೇವೆಯು ನಡೆಯಿತು. ಜನವರಿ 14 ರಂದು ಧ್ವಜರೋಹಣ ಮೂಲಕ ವರ್ಷಾವಧಿ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಗಿತ್ತು. ಅದೇ ದಿನ ರಾತ್ರಿ ಲಕ್ಷದೀಪೋತ್ಸವ, ಉತ್ಸವ ಬಲಿ, ಪ್ರತಿನಿತ್ಯ ರಾತ್ರಿ ನಿತ್ಯೋತ್ಸವ ನಡೆಯುತ್ತಿದೆ. 18ರಂದು ಕೇಪುನಿಂದ ಶ್ರೀ ಮಲರಾಯ ದೈವದ ಭಂಡಾರ ಆಗಮಿಸಿ, ರಾತ್ರಿ ಬಯ್ಯದ ಬಲಿ ನಡೆದಿದೆ. ಜ.20ರಂದು ಹೂತೇರು

ಅಯೋಧ್ಯೆಯಲ್ಲಿ ದ.ಕ. ಜಿಲ್ಲೆಯ ಬಿಜೆಪಿ ಮುಖಂಡರು

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಇಡೀ ದೇಶದಲ್ಲೂ ರಾಮಮಂದಿರದ ಉದ್ಘಾಟನೆ ಸಂಭ್ರಮ ಮನೆ ಮಾಡಿದೆ. ರಾಮಲಲ್ಲಾ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಭಾಗಿಯಾಗಲು ಮಂಗಳೂರಿನಿಂದ ಬಿಜೆಪಿಯ ಜಿಲ್ಲಾ ಕೋಶಾಧಿಕಾರಿ ಜಿತೇಂದ್ರ ಕೊಟ್ಟಾರಿಯವರೂ ತೆರಳಿದ್ದಾರೆ. ಅವರ ಜೊತೆಗೆ ಡಾ. ಡಿ ವಿರೇಂದ್ರ ಹೆಗ್ಗಡೆ, ಡಾ. ಕಲ್ಲಡ್ಕ ಪ್ರಭಾಕರ್ ಭಟ್, ನಿಟ್ಟೆ ಸಂಸ್ಥೆಯ ವಿಶಾಲ್ ಹೆಗ್ಡೆ, ಎಂ.ಬಿ. ಪುರಾಣಿಕ್ ದಂಪತಿ, ಸೇರಿದಂತೆ ಜಿಲ್ಲೆಯ ಎಲ್ಲಾ

ಚಿನ್ನದ ಗಂಟಿನ ದೇಶಗಳು

ಭಾರತದಲ್ಲಿ 15 ದಿನಗಳಲ್ಲಿ ಚಿನ್ನದ ಬೆಲೆ 1,650 ರೂಪಾಯಿ ಕಡಿಮೆ ಆಗಿದೆ ಎಂಬುದು ಸುದ್ದಿ. ಹಿಂದೆ ಸಾವಿರಗಟ್ಟಲೆ ಏರಿದ್ದು ಹಳಸಿದ ಸುದ್ದಿ. ಇದರ ನಡುವೆ ಫೋರ್ಬ್ಸ್ 2023ರ ಆಧಾರದ ಮೇಲೆ 2024ರಲ್ಲಿ ಲೋಕದ ಸ್ವರ್ಣ ಸಾಮ್ರಾಜ್ಯಗಳ ಪಟ್ಟಿ ಬಿಡುಗಡೆ ಮಾಡಿದೆ. ಅನ್ನದಾತುರಕಿಂತ ಚಿನ್ನದಾತುರ ಮೇಲೆ, ಅದನ್ನೂ ಮೀರಿಸಿದ್ದು ಹೆಣ್ಣು ಗಂಡೊಲವು, ಅದನ್ನು ಮೀರಿಸುವುದು ಮನ್ನಣೆ ಸನ್ಮಾನದ ತುಡಿತ ಎನ್ನಲಾಗಿದೆ. ಚಿನ್ನದಾತುರವನ್ನು ಪ್ಲಾಟಿನಂ ಕೆಲವೆಡೆ ಮುರಿದಿದೆ. ಹೆಣ್ಣು