Home Archive by category ಕರಾವಳಿ (Page 51)

ವಸ್ತು ವಿಜ್ಞಾನ ಕ್ಷೇತ್ರದಲ್ಲಿ ಪ್ರೊ. ಅಂಜನಾದೇವಿ ಸಾಧನೆ: ಜರ್ಮನಿಯ ಐಎಫ್ ಡಬ್ಲ್ಯೂ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆ

ಜರ್ಮನಿಯ ಡ್ರಸ್ಡೆನ್ನಿನ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಕೆಮಿಸ್ಟ್ರಿ ಯ ನಿರ್ದೇಶಕರಾಗಿ ಮಂಗಳೂರು ಮೂಲದ ಪ್ರೊ. ಅಂಜನಾದೇವಿಯವರು ಆಯ್ಕೆಯಾಗಿದ್ದಾರೆ. ಈ ಕುರಿತು ಜರ್ಮನಿಯ ಲೈಬ್ನಿಚ್ ಘನ ಸ್ಥಿತಿ ಮತ್ತು ವಸ್ತುಗಳ ಸಂಶೋಧನಾ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯು ತನ್ನ ಹಿರಿಯ ಡಾಕ್ಟರಲ್ ವಿದ್ಯಾರ್ಥಿಗಳಲ್ಲಿ

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ

ಮಾಜೀ ಮಂತ್ರಿಗೆ ಮಾಜೀ ಮಂತ್ರಿಯ ನುಡಿ ಛಡಿಯೇಟು

ನನ್ನನ್ನು ಗಡಿಪಾರು ಮಾಡುವುದಕ್ಕೆ ಮೊದಲು ನೀನು ಗಡಿಪಾರು ಆಗುವುದರಿಂದ ರಕ್ಷಿಸಿಕೋ ಎಂದು ಮಾಜೀ ಸಚಿವ ಬಿ. ಕೆ. ಹರಿಪ್ರಸಾದ್ ಅವರು ಮತ್ತೊಬ್ಬ ಮಾಜೀ ಮಂತ್ರಿ ಶ್ರೀರಾಮುಲುಗೆ ಎಚ್ಚರಿಕೆ ನೀಡಿದ್ದಾರೆ. ರಾಮುಲು ಅವರೆ ನೀವು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ವರದಿಯಲ್ಲಿ ಹಲವು ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಬರೆದು ಹೇಳಿದ್ದೀರಿ. ಕಳ್ಳ ಗಣಿಗಾರಿಕೆ ಮಾಡಿ, ತೆರಿಗೆ ವಂಚಿಸಿ ದೇಶದ್ರೋಹ ಮಾಡಿದ್ದೀರಿ. ನಿಮ್ಮ ಗೃಹ ಮಂತ್ರಿ ಅಮಿತ್ ಶಾರನ್ನು ಕೋರ್ಟು

ಪುತ್ತೂರು : ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಈಶ್ವರಮಂಗಲ ಸಮೀಪದ ಸುಳ್ಯಪದವು ಕನ್ನಡ್ಕದಲ್ಲಿ ನಡೆದಿದೆ. ಕನ್ನಡ್ಕ ನಿವಾಸಿ, ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಾ (16ವ) ಮೃತ ಯುವತಿ.ದೀಕ್ಷಾ ಮನೆಯ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೀಕ್ಷಾ ವಾಣಿಜ್ಯ ವಿಭಾಗದಲ್ಲಿ ಕಲಿಯುತ್ತಿದ್ದು, ನಾಳೆ ಅವರಿಗೆ ಲ್ಯಾಬ್ ಪರೀಕ್ಷೆಯಿತ್ತು ಎಂದು

ಕುಂದಾಪುರ: ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ 29ನೇ ವಾರ್ಷಿಕ ಮಹಾಸಭೆ

ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ 29ನೇ ವಾರ್ಷಿಕ ಅಧಿವೇಶನ, ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ, ವಿಪ್ರ ಸನ್ಮಾನ, ವಿಚಾರಗೋಷ್ಠಿ ಕಾರ್ಯಕ್ರಮಗಳು ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದಲ್ಲಿ ನಡೆಯಿತು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರಣಕಟ್ಟೆ ಶ್ರೀ ಕೃಷ್ಣಮೂರ್ತಿ ಮಂಜ ಅವರು ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ಬ್ರಾಹ್ಮಣರಲ್ಲಿ ಇರುವ ಸದ್ಗುಣಗಳು ಮತ್ತು ಪ್ರತಿಭೆ ಆಧಾರದ ಮೇಲೆಯೇ ಜೀವನವನ್ನು ತಾತ್ವಿಕತೆಯೊಂದಿಗೆ ನಡೆಸಬೇಕು.

ಬಂಟ್ವಾಳ: ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ ವಿಫಲ: ಪ್ರಭಾಕರ ಪ್ರಭು ಆರೋಪ

ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಾರ್ವಜನಿಕರ ಕುಂದು ಕೊರತೆ ನಿವಾರಿಸುವಲ್ಲಿ ಕಂದಾಯ

ಪುತ್ತೂರು: ಪಂಜಳ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮುಂಡೂರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲ ಮೇಳದಲ್ಲಿ ಮಾತನಾಡಿದರು.ಪುಟ್ಟ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಇಲ್ಲಿ ನೀಡಲಾಗುತ್ತಿದ್ದು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವಂತೆ ಶಾಸಕರು ಮನವಿ ಮಾಡಿದರು.

ಪಡುಬಿದ್ರಿ: ಮರಳು ಕದ್ದು ಸಾಗಾಟ: ಚಾಲಕ, ಮರಳು ಸಹಿತ ಟಿಪ್ಪರ್ ವಶಕ್ಕೆ

ಪಡುಬಿದ್ರಿ: “ಶ್ರೀ ಕಟೀಲು” ಹೆಸರಿನ ಟಿಪ್ಪರ್ ನಲ್ಲಿ ಕದ್ದು ಮರಳು ಸಾಗಿಸುತ್ತಿದ್ದ ಈಚರ್ ಲಾರಿ ಮರಳು ಸಹಿತ ಅದರ ಚಾಲಕನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೆ.ಎ.20-ಎ.ಬಿ. 3474 ನೋದಾನಿ ಸಂಖ್ಯೆಯ ಶ್ರೀ ಕಟೀಲ್ ಹೆಸರಿನ ಈಚರ್ ನಲ್ಲಿ ಚಾಲಕ ಪ್ರಮೋದ್ ಎಂಬಾತ ಅಕ್ರಮವಾಗಿ ಮರಳು ಸಾಗಿಸುವಾಗ ವಾಹನ ತಪಾಸಣೆ ನಡೆಸುತ್ತಿದ್ದ ಪಡುಬಿದ್ರಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಮರಳುಗಾರಿಕೆ ಬಗ್ಗೆ ಪರ್ಮಿಟ್ ಆಗಲಿ, ಪರವಾನಿಗೆ ಯಾಗಲಿ,

ಉಡುಪಿ: ಹಿಂದುಗಳ ಮೇಲೆ ಸರ್ಕಾರದಿಂದ ಧಮನಕಾರಿ ಅಸ್ತ್ರ ಪ್ರಯೋಗ: ಆರ್. ಅಶೋಕ್

ರಾಜ್ಯ ಸರ್ಕಾರ ಹಿಂದುಗಳ ಮೇಲೆ ಧಮನಕಾರಿ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ. ಈ ಹಿಂದೆ ದೇಣಿಗೆ ಕೇಳಿದಾಗ ರಾಮಮಂದಿರವನ್ನು ವಿವಾದಿತ ಎಂದಿದ್ದರು. ಅಯೋಧ್ಯೆಯ ಬಗ್ಗೆ ಸಿದ್ದರಾಮಯ್ಯರಿಗೆ ದ್ವೇಷ ಮತ್ತು ವೈರತ್ವ ಇದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಅಲ್ಪಸಂಖ್ಯಾತ ಮತ ಕ್ರೋಡೀಕರಿಸಿ ಚುನಾವಣೆಗೆ ಸಿದ್ಧತೆ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ೧೦ ಸಾವಿರ ಕೋಟಿ ಕಾಲೋನಿಗೆ ೧ ಸಾವಿರ ಕೋಟಿ

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ