‘ಪಡು ತಿರುಪತಿ’ಎಂದೇ ಕೀರ್ತಿ ಪಡೆದ ಕಾರ್ಕಳದಲ್ಲಿ ಸೂರ್ಯೋದಯಕ್ಕೂ ಮೊದಲು ‘ವಿಶ್ವರೂಪ ದರ್ಶನ’ ನೆರವೇರಿದೆ. ಕಾರ್ಕಳದ ಭಕ್ತರು ಜಾತಿ, ಮತ, ಪಂಥಗಳ ಭೇದವಿಲ್ಲದೆ ಭಾಗವಹಿಸುವ ಉತ್ಸವ ಇದು. ಕಾರ್ತಿಕ ಮಾಸ ಬಂತೆಂದರೆ ಪಂಡರಾಪುರದ ವಿಠಲ ದೇವಸ್ಥಾನಕ್ಕೆ ಸಾವಿರಾರು ಭಜಕರು ಭಾರತದ ಮೂಲೆಮೂಲೆಗಳಿಂದ ಬಂದು ಸೇರಿ ಕುಣಿತ ಭಜನೆ ಮಾಡುವುದು, ವಿಠಲ
ಮಂಗಳೂರಿನ ವಿ.ಟಿ.ರೋಡ್ ಬಾಲಕ ವೃಂದ, ಶ್ರೀ ಶಾರದಾ ಪೂಜಾ ಸಮಿತಿಯ ವತಿಯಿಂದ ನಗರದ ಶ್ರೀ ವಿಠೋಭ ದೇವಸ್ಥಾನದ ರಸ್ತೆಯಲ್ಲಿರುವ ಶ್ರೀ ಕೃಷ್ಣ ಮಂದಿರದ ಸಭಾಗೃಹದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವವು ಅ.23 ರ ವರೆಗೆ ನಡೆಯಲಿದೆ.ಅ.18ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಅ.19ರಂದು ದೇವಿಯ ಪ್ರತಿಷ್ಠೆ, ಅ.20ರಂದು ಚಂಡಿಕಾ ಹವನ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ, ರಾತ್ರಿಪೂಜೆ ನಡೆಯಿತು. ಅ.21 ರಂದು ಮಧ್ಯಾಹ್ನ ಪೂಜೆ ನಂತರ ನಂತರ ಸಂಜೆ 6.30ಕ್ಕೆ ವಿಶೇಷ
ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ಹುಲಿ ವೇಷ ತಂಡ ಸಿದ್ಧವಾಗಿದೆ. ಈ ಬಾರಿ ಅಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದಲ್ಲಿ ಹೆಣ್ಣು ಮಕ್ಕಳ ತಂಡದ ಹುಲಿವೇಷ ಕುಣಿತ ವಿಶೇಷ ಗಮನ ಸೆಳೆಯಲಿದೆ. ಈ ಮೂಲಕ ಸಾಂಪ್ರದಾಯಿಕ ಕಲೆಯಾದ ಹುಲಿ ವೇಷ ಕುಣಿತವನ್ನು ಉಳಿಸಿ ಬೆಳೆಸುವಲ್ಲಿ ದರ್ಪಣ ಸಂಸ್ಥೆಯ ಹೆಣ್ಣು ಮಕ್ಕಳ ತಂಡ ಮುಂದಡಿಯಿಟ್ಟಿದೆ. ಈ ಕುರಿತು ದರ್ಪಣ ಸಂಸ್ಥೆಯ ನೃತ್ಯ ನಿರ್ದೇಶಕಿ ರಮ್ಯಾ ಅವರು ಮಾತನಾಡಿ ನಮ್ಮ ದರ್ಪಣ ಸಂಸ್ಥೆಯಲ್ಲಿ ಸುಮಾರು ಏಳು ವರ್ಷಗಳಿಂದ ಮಹಿಳೆಯರು ಹಾಗೂ
ಬಂಟ್ವಾಳ: ನರಹರಿ ಸದಾಶಿವ ದೇವಾಲಯದಲ್ಲಿ ಇಂದು ಆಟಿ ಅಮವಾಸ್ಯೆ, ತೀರ್ಥ ಸ್ನಾನ ನಡೆಯಿತು. ಪ್ರತಿ ವರ್ಷವೂ ಆಟಿ ತಿಂಗಳಲ್ಲಿ ಬರುವ ಅಮವಾಸ್ಯೆ ದಿನದಂದು ಇಲ್ಲಿನ ತೀರ್ಥ ಸ್ನಾನ ನಡೆಯುತ್ತದೆ. ತೀರ್ಥ ಬಾವಿಯಲ್ಲಿ ತೀರ್ಥ ಸ್ನಾನ ಮಾಡಿದರೆ ಸಕಲ ಇಷ್ಟಾರ್ಥಗಳು ನೆರವೇರುವುದು ಎಂಬ ಪ್ರತೀತಿ ಇದೆ. ಇಂದು ಮುಂಜಾನೆಯಿಂದಲೇ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.
ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಸುದರ್ಶನ ಹೋಮ ನಡೆಸಿ, ಪೂರ್ಣಾಹುತಿಯ ನಂತರ ಶೀರೂರು ಮಠದ ಸ್ವಾಮಿಗಳಾದ ಶ್ರೀ ಶ್ರೀ ವೇದದವರ್ಧನ ತೀರ್ಥರು ತಾಮ್ರದಿಂದ ತಯಾರಿಸಿದ ಸುದರ್ಶನ ಹಾಗೂ ಪಾಂಚಜನ್ಯ ಮುದ್ರೆಯನ್ನು, ಅದೇ ಅಗ್ನಿಯಲ್ಲಿ ಕಾಯಿಸಿ ಎಲ್ಲಾ
ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠ ಹಾಗೂ ಅಷ್ಟಮಠಗಳಲ್ಲಿ ಮುದ್ರಾಧಾರಣೆ ನಡೆಯಿತು. ಮಳೆಗಾಲದ
ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ ನಡೆದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಭಂಡಾರ ಇಳಿದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ ನೇಮೋತ್ಸವ ನಡೆಯಿತು. ಈ ಸಂದರ್ಭ ದೇಗುಲದ ವ್ಯವಸ್ಥಾಪನ ಸಮಿತಿ ಮತ್ತು ಸಮಿತಿ ಅಧ್ಯಕ್ಷ ಯು.ಎ. ಪ್ರಭಾಕರ
ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.
ದಿನ ಕಳೆದಂತೆ ಹತ್ತಿರವಾಗುತ್ತಿದೆ ಉಡುಪಿಯ ಭವ್ಯ ಆಚರಣೆ. ಇಡೀ ಜಗತ್ತಿನಲ್ಲೇ ವಿಶಿಷ್ಟವಾದ ಸಂಪ್ರದಾಯಗಳಲ್ಲಿ ಒಂದು, ಶತಮಾನಗಳಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿರುವ “ಪರ್ಯಾಯ”ಮಹೋತ್ಸವ. ಉಡುಪಿಯ 8 ಮಠಗಳ ನಡುವೆ ಶ್ರೀ ಕೃಷ್ಣ ದೇವಾಲಯದ ಜವಾಬ್ದಾರಿಗಳ ಹಸ್ತಾಂತರವನ್ನೇ ಪರ್ಯಾಯ ಮಹೋತ್ಸವ ಎನ್ನುತ್ತಾರೆ. ಪ್ರಸ್ತುತ ಕೃಷ್ಣಪುರ ಮಠದ ವಿದ್ಯಾಸಾಗರ ತೀರ್ಥರು ಶ್ರೀ ಕೃಷ್ಣನ ಆರಾಧನೆಯಲ್ಲಿ ತೊಡಗಿದ್ದರೆ, ಮುಂದಿನ ಸರದಿಯಲ್ಲಿ
ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಧಾನದ ಅಷ್ಟಬಂಧ ಬ್ರಹ್ಮಕುಂಭಾಭೀಷೇಕದ ಅಂಗವಾಗಿ ಸ್ಕಂದ ಮಂಟಪದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಇಂದಿನ ಯುಗದಲ್ಲಿ ಸಂಸ್ಕಾರವನ್ನು