ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಗ್ರಾಮಸ್ಥರು ದೂರು ನೀಡಿರುವ ಹಿನ್ನೆಲೆಯಲ್ಲಿ ಆಯುರ್ವೇದ ವೈದ್ಯ 47ರ ಡಾ. ಸತೀಶ್ ತಾಕೊಲೆ ಮಾಡಿಕೊಂಡಿದ್ದಾರೆ. ಅವರ ಮೃತ ಶರೀರವು ಕುಶಾಲನಗರ ತಾಲೂಕಿನ ಆನೆಕಾಡು ಬಳಿ ಹೆದ್ದಾರಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದೆ.ಮಂಡ್ಯದ ಶಿವಳ್ಳಿಯಲ್ಲಿ ಇವರು ವೆಂಕಟೇಶ್ವರ ಕ್ಲಿನಿಕ್ ನಡೆಸುತ್ತಿದ್ದರು. ಅಲ್ಲಿ ಅಕ್ರಮ ಭ್ರೂಣ ಹತ್ಯೆ ಮತ್ತಿತರ
ಹಾಸನದಲ್ಲಿ ನಿನ್ನೆ ಕಾಸಗಿ ಶಾಲೆಯ ಶಿಕ್ಷಕಿಯನ್ನು ಅಪಹರಿಸಿದ್ದ ತಂಡವನ್ನು ಬೆನ್ನಟ್ಟಿ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿಯಲ್ಲಿ ಅಡ್ಡ ಹಾಕಿದ ಪೋಲೀಸರು ಶಿಕ್ಷಕಿ ಅರ್ಪಿತಳನ್ನು ಗಂಡಾಂತರದಿಂದ ಪಾರು ಮಾಡಿದರು. ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಅರ್ಪಿತ ಟೀಚರಾಗಿ ದುಡಿಯುತ್ತಿದ್ದಳು. ಸಂಬಂಧಿಕರಾದ ರಾಮು ಮನೆಯವರು ಹದಿನೈದು ದಿನಗಳ ಹಿಂದೆ ಮದುವೆ ಪ್ರಸ್ರಾಪ ಮುಂದಿಟ್ಟಿದ್ದರು. ಆದರೆ ಅರ್ಪಿತ ಒಪ್ಪಿರಲಿಲ್ಲ. ಆದ್ದರಿಂದ ರಾಮು ಮತ್ತು ತಂಡದವರು ಆಕೆಯನ್ನು ಶಾಲೆಯ
ಈ ಮಳೆಗಾಲ ಸರಿಯಾಗಿರದೆ ಕರ್ನಾಟಕದ 223 ತಾಲೂಕುಗಳು ಬರಪೀಡಿತ. ಸೋಮಾರಿ ಕೇಂದ್ರ ಸರಕಾರ ಪರಿಹಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಸದ್ಯ ಬಾಧಿತ ರೈತರಿಗೆ ರೂಪಾಯಿ 2,000ದಷ್ಟಾದರೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಕಚೇರಿ ಕೃಷ್ಣದಲ್ಲಿ ಅವರು ಮಂತ್ರಿ ಮತ್ತು ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು. ಕೇಂದ್ರ ಸರಕಾರವು ತನ್ನ ಕಿಸೆಯಿಂದ ಪರಿಹಾರ ನೀಡುವುದಿಲ್ಲ. ರಾಜ್ಯದ ತೆರಿಗೆ ಪಾಲು ನೀಡದೆ ಬಾಕಿ
2023ರಲ್ಲಿ ಜಗತ್ತಿನ ತಾಪಮಾನವು ಜಾಗತಿಕ ದಾಖಲೆ ಬರೆದಿದೆ. ಅತಿರೇಕದ ಹವಾಮಾನದ ವೈಪರೀತ್ಯಗಳು ಲೋಕವನ್ನು ವಿನಾಶ ಮತ್ತು ಹತಾಶೆಗೆ ದೂಡಿದೆ ಎಂದು ವಿಶ್ವ ಸಂಸ್ಥೆಯ ಹವಾಮಾನ ವಿಭಾಗದ ಮುಖ್ಯಸ್ಥ ಪ್ಯಾಟೆರಿ ಟಾಲನ್ ಹೇಳಿದರು. 2023ರಲ್ಲಿ ಪ್ರಪಂಚದ ಬಿಸಿ ಮಟ್ಟವು ಹಿಂದಿನೆಲ್ಲ ದಾಖಲೆಗಳನ್ನು ಮುರಿದಿದೆ. ಹಸಿರು ಮನೆ ಅನಿಲದ ಪ್ರಮಾಣ ಅತಿಯಾಗಿದೆ. ಅಂಟಾರ್ಕ್ಟಿಕ್ನಲ್ಲಿ ಹೊಸದಾಗಿ ಬೀಳುವ ಮಂಜು ಪ್ರಮಾಣ ತೀರಾ ಕಡಿಮೆ ಆಗಿದೆ. ಕಳೆದ 9 ವರುಷಗಳಿಂದ ಬಿಸಿ ಮಟ್ಟ ಏರುತ್ತ
ಬೆಂಗಳೂರಿನ ದೊಮ್ಮಲೂರಿನ ಜೀವನಭೀಮನಗರಕ್ಕೆ ಹೋಗುಬ ಬಸ್ಸು ನೋಡಿರುತ್ತೀರಿ. ಹೆಸರು ಹಲಗೆ, ಬಾಯಿ ಮಾತಲ್ಲೂ ಜೀವನಭೀಮನಗರ ಕೇಳಿರುತ್ತೀರಿ. ಆದರೆ ಇದು ಜೀವನಬಿಮಾ ನಗರ. ನಾವು ವಿಮೆ ಎನ್ನುವುದೇ ಬಡಗಣ ಭಾರತದ ಬಿಮಾ. ಪೀಣ್ಯದಲ್ಲಿ ಎಂಟನೆಯ ಮೈಲಿ ಇದೆ. ಬಿಎಂಟಿಸಿ ಕನ್ನಡದಲ್ಲಿ ಮೈಲಿ ಎಂದು ಸರಿ ತೋರಿಸಿದರೂ ಇಂಗ್ಲಿಷಿನಲ್ಲಿ mile ಬದಲು ಮೇಲ್ (mail) ಎಂದು ತಪ್ಪು ತೋರಿಸುತ್ತದೆ.ಬೆಂಗಳೂರಿನ ಸಾಲು ಐಯ್ಯಂಗಾರ್ ತಪ್ಪು ಫಲಕಗಳಿಗೆ ಜೊತೆಯಾಗಿ ಕೆಲವು ಐಯ್ಯರ್ ಮೆಸ್
ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನ(ರಿ) ಅರಂತೋಡು ಸುಳ್ಯ ಸಂಸ್ಥೆಯ ವತಿಯಿಂದ ಬೆಂಗಳೂರಿನಲ್ಲಿ ವಿವಿಧ ಕ್ಷೇತ್ರದಲ್ಲಿ ದುಡಿಯುತ್ತಿರುವರಿಗೆ ಸಮಾಜ ಸುಧಾರಕ ಜಾತ್ಯತೀತ ತತ್ವದ ಪ್ರತಿಪಾದಕ ದಿವಂಗತ ತೆಕ್ಕಿಲ್ ಮೊಹಮದ್ ಹಾಜಿ ಸ್ಮಾರಕವಾಗಿ ನೀಡುವ “ತೆಕ್ಕಿಲ್ ಎಕ್ಸಲೆನ್ಸ್ ಅವಾರ್ಡ್ 2021” ನ್ನು ಕರ್ನಾಟಕ ಸರಕಾರದ ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್ ಫರೀದ್ ರವರಿಗೆ ತೆಕ್ಕಿಲ್ ಗ್ರಾಮೀಣಭಿವೃದ್ಧಿ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಂ
ಬೆಂಗಳೂರು ಶಿವಾಜಿನಗರದ ಕುಕ್ಸ್ ರಸ್ತೆಯ ಬಿ ಅಡ್ಡ ರಸ್ತೆಯ ಬಿಬಿಎಂಪಿ ನರ್ಸರಿ ಶಾಲೆ ಮಧ್ಯ ರಾತ್ರಿ ಬಿದ್ದು ಹೋಗಿದೆ. ಮಕ್ಕಳಾಗಲಿ, ಜನರಿಗಾಗಲಿ ಅಪಾಯವಾಗಿಲ್ಲ ಎಂಬುದು ಸಮಾಧಾನಕರ. 80 ವರ್ಷಗಳಷ್ಟು ಹಳೆಯ ಈ ಶಾಲೆಯಲ್ಲಿ ವ 80ರಷ್ಟು ಮಕ್ಕಳು ಇದ್ದರು. ಶಾಲೆಯ ಎಲ್ಲ, ಪರಿಕರ, ಮಕ್ಕಳ ಆಟದ ಸಾಮಾನುಗಳು ಮಾತ್ರವಲ್ಲ ಅಕ್ಕಪಕ್ಕಗಳಲ್ಲಿ ನಿಲ್ಲಿಸಿದ್ದ ಹಲವು ವಾಹನಗಳು ಹಾನಿಗೊಂಡಿವೆ. ಸದ್ಯ ಬಿಬಿಎಂಪಿಯವರು ಮಣ್ಣು ಸರಿಸುವ ಕೆಲಸದಲ್ಲಿ ಈಡುಗೊಂಡಿದ್ದಾರೆ
ರಾಜ್ಯ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್ ಕೆ ಅತೀಖ್ ಅವರನ್ನು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿಯಾಗಿ ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಈವರೆಗೆ ಆ ಹುದ್ದೆಯಲ್ಲಿದ್ದ ಡಾ. ರಜನೀಶ್ ಗೋಯಲ್ ಅವರನ್ನು ಆ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ. ಎಲ್ ಕೆ ಅತೀಖ್ ಅವರು ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿಯೂ ಮುಂದಿನ ಆದೇಶದವರೆಗೆ ಹೆಚ್ಚುವರಿ ಹೊಣೆ ನಿರ್ವಹಿಸಲಿದ್ದಾರೆ.
ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಸಿನಿಮಾದ ಪ್ರೀಕ್ವೆಲ್ ಕಾಂತಾರ ಚಾಪ್ಟರ್ ಫಸ್ಟ್ ಲುಕ್ ಹಾಗೂ ಟೀಸರ್ ಬಿಡುಗಡೆಯಾಗಿದೆ. ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂದು
ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳು ಚಿನ್ನದ ಪದಕಕ್ಕೆ ಭಾಜನವಾಗಿದೆ. ಬೆಂಗಳೂರು ಕಂಬಳದಲ್ಲಿ ಬೈಂದೂರಿನ ಕೋಣ ಪ್ರಥಮ ಚಿನ್ನ ಗೆದ್ದ ಕೋಣ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದೆ. ಬೊಳಂಬೆಳ್ಳದ ಪರಮೇಶ್ವರ ಭಟ್ ಮಾಲೀಕತ್ವದ ಕೋಣಗಳು 6.5 ಕೋಲು ನೀರು ಎತ್ತರಕ್ಕೆ ನೀರು ಚಿಮ್ಮಿಸಿ ಚಿನ್ನದ ಪಡೆದಿವೆ. ಬಾನೆತ್ತರಕ್ಕೆ ನೀರು ಚಿಮ್ಮಿಸುತ್ತಾ ಈ ಕೋಣಗಳ ಓಟ ನೋಡುಗರ ಮೈನವಿರೇಳಿಸುವಂತಿತ್ತು. ಈ ಕುರಿತು ಕೋಣಗಳ ಮಾಲೀಕರು