Home Archive by category ಶೈಕ್ಷಣಿಕ (Page 2)

ಮೂಡುಬಿದಿರೆ:ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (ಅಟೋನೊಮಸ್)

ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಕಾಲೇಜಿಗೆ 2023-24ರಿಂದ ಮುಂದಿನ ಹತ್ತು ವರ್ಷಗಳಿಗೆ

ಬೆಂಗಳೂರು: ಡಿ.23ರಂದು ಕೆಇಎ ಮರು ಪರೀಕ್ಷೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೆÇಲೀಸ್ ಸಬ್ ಇನ್ಸ್‍ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್‍ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.2021ರ ಜನವರಿ 21ರಂದು ಪೆÇಲೀಸ್ ಇಲಾಖೆಯಿಂದ 545

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ

ಮೂಡುಬಿದಿರೆ: ಡಿ.14ರಿಂದ 17ರವರೆಗೆ ಆಳ್ವಾಸ್ ವಿರಾಸತ್ ನಲ್ಲಿ ಆಹಾರೋತ್ಸವ, ಕೃಷಿ-ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮಹಾಮೇಳ-2023 ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಶ್ರಯದಲ್ಲಿ ನಡೆಯುವ ಆಳ್ವಾಸ್ ವಿರಾಸತ್ ಸಂದರ್ಭದಲ್ಲಿ ಅನ್ವೇಷಣಾತ್ಮಕ ಕೃಷಿಕ, ಶತಾಯುಷಿ ಮಿಜಾರುಗುತ್ತು ಆನಂದ ಆಳ್ವರ ಸ್ಮರಣಾರ್ಥ ವಿದ್ಯಾಗಿರಿಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಡಿಸೆಂಬರ್ 14ರಿಂದ 17ರವರೆಗೆ

ಮಂಗಳೂರು :’ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ಗೆ ಚಾಲನೆ

ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜೆಪ್ಪು ಸೈಂಟ್ ಜೋಸೆಫ್ಸ್ ಸೆಮಿನರಿ ಬಳಿಯ ಮರಿಯ ಜಯಂತಿ ಹಾಲ್ನಲ್ಲಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ದಶಮಾನೋತ್ಸವದ ನಿಮಿತ್ತ ‘ಕ್ಲಾಸ್ ಆನ್

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ ವಿಸ್ಮೃತಿಗೆ ಒಳಗಾಗಬಾರದು ಎಂದರು. ಕನ್ನಡದ ಅಕ್ಷರಗಳ ಪ್ರತಿಯೊಂದು ಧ್ವನಿಯ ವೈಜ್ಞಾನಿಕ

ನೆಲ್ಯಾಡಿ: ಕನ್ನಡಿಗರು ಅಭಿಮಾನದಿಂದ ನಾನು ಕನ್ನಡಿಗನೆಂದು ಹೇಳಿಕೊಳ್ಳಬೇಕು -ಗಣರಾಜ್ ಕುಂಬ್ಳೆ

ಬೆಥನಿ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ಪತಾಕೆಯನ್ನು ಹಾರಿಸಿ, ಕನ್ನಡದ ವೈಭವವನ್ನು ಸಾರುವ ಸಂದೇಶವನ್ನು ನೀಡುವುದರ ಮೂಲಕ ಹಾಗೂ ತಾಯಿ ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ.ತೋಮಸ್ ಬಿಜಿಲಿ ಅವರು ವಹಿಸಿ ಕನ್ನಡಿಗರು ನಾಡು ನುಡಿ ಸಂಸ್ಕೃತಿಯನ್ನು ಉಳಿಸಿಕೊಳ್ಳಬೇಕು, ಈ ಕೆಲಸ ವಿದ್ಯಾರ್ಥಿಗಳಿಂದಲೇ

ಬಾಲವಿಕಾಸದಲ್ಲಿ ಶಾರದಾ ಪೂಜೆ

ವಿಟ್ಲ : ಅಕ್ಟೋಬರ್ 21 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಶಾರದಾ ಪೂಜೆ ನೆರವೇರಿತು. ಮೊದಲಿಗೆ ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ವೇದಮೂರ್ತಿ ಅನಂತ್ ಭಟ್ ಕಶೆಕೋಡಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿದ ಪೂಜಾ ಕೈಂಕರ್ಯದಲ್ಲಿ ಶಾರದಾ ಪೂಜೆ ಹಾಗೂ ಶಾಲಾ ವಾಹನಗಳಿಗೆ ಪೂಜೆ ನಡೆಯಿತು. ಇದರ ಜೊತೆಗೆ ಶಾಲಾ ಗಣಕಯಂತ್ರಗಳು, ಶಾಲಾ

ಪುತ್ತೂರು: ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟ- ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರಕಾರಿ ಪ್ರೌಢಶಾಲೆ ಏನೆಕಲ್ಲು ಇದರ ಸಂಯುಕ್ತ ಆಶಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ಪ್ರೌಢ ಶಾಲಾ ಮತ್ತು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.ಈ ಪಂದ್ಯಕೂಟದಲ್ಲಿ ಬೆಥನಿ ಶಾಲೆಯ ಆಯುಶಾ ಹಿಬಾ ಬೆಸ್ಟ್ ಆಲ್ ರೌಂಡರ್ ಆಗಿ ಹಾಗೂ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಯಿಂದ 30-09-2023 ರಂದು ಮಾದಕ ದೃವ್ಯ ಜಾಗೃತಿ ಜಾಥಾ

ಮಂಗಳೂರು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಪದವಿ, ಪದವಿ ಪೂರ್ವ, ಪ್ರೌಢ ಹಾಗೂ ಪ್ರಾಥಮಿಕ ವಿಭಾಗಗಳ ಜಂಟಿ ಆಶ್ರಯದಲ್ಲಿ “ಮಾದಕದೃವ್ಯ ಜಾಗೃತಿ ಜಾಥಾ”ವನ್ನು ಶನಿವಾರ, ಸಪ್ಟೆಂಬರ್ 30, 2023 ರಂದು ಬೆಳಗ್ಗೆ 9.15 ಕ್ಕೆ ಆಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಕೋರ್ಟ್ ವಾರ್ಡಿನ ಕಾರ್ಪೊರೇಟರ್ ಶ್ರೀ ಎ ಸಿ ವಿನಯರಾಜ್ ಇವರು ಜಾಥಾಕ್ಕೆ ಚಾಲನೆ ನೀಡಲಿರುವರು. ಮಂಗಳೂರಿನ ಸಹಾಯಕ ಪೆÇೀಲಿಸ್ ಆಯುಕ್ತರಾದ ಶ್ರೀ ಎಸ್. ಮಹೇಶ್ ಕುಮಾರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ