Home Archive by category ಶೈಕ್ಷಣಿಕ (Page 6)

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆಗೆ ಪಿಎಚ್ ಡಿ ಪದವಿ

ಉಜಿರೆಯ ಎಸ್ ಡಿ ಎಂ ಕಾಲೇಜಿನ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಗೀತಾಏ.ಜೆ.ಇವರು ಮಂಡಿಸಿದ  “ಇನ್ಸ್ಟಿಟ್ಯೂಷನಲ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಆ್ಯಸ್ ಎ ಪಿಆರ್ ಟೂಲ್ ಇನ್ ಹೈಯರ್ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್: ಎ ಸ್ಟಡಿ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಕುವೆಂಪುವಿಶ್ವವಿದ್ಯಾಲಯ ಡಾಕ್ಟರೇಟ್

 ಬಲಿಷ್ಠ ಸಮಾಜ ನಿರ್ಮಾಣದಲ್ಲಿ ಮಹಿಳಾ ಸಂಘಟನೆಗಳ ಪಾತ್ರಮುಖ್ಯ : ಶ್ರೀಮತಿ ಸೋನಿಯಾ ಯಶೋವರ್ಮ

ಉಜಿರೆ :ಬಲಿಷ್ಠ ಸಮಾಜದ ನಿರ್ಮಾಣದಲ್ಲಿ ಮಹಿಳಾ ಸಂಘಟನೆಗಳ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಉಜಿರೆ ಧೀಮತಿ ಜೈನ ಮಹಿಳಾ ಸಮಾಜದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ದಲ್ಲಿ ಧೀಮತಿ ಮಹಿಳಾಸಮಾಜದ ಗೌರವಾಧ್ಯಕ್ಷರಾದ ಸೋನಿಯಾ ಯಶೋವರ್ಮ ಅಭಿಪ್ರಾಯಪಟ್ಟರು. ಎಲ್ಲರೂ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡರೆ ಸಮುದಾಯವನ್ನು ಬಲಗೊಳಿಸಬಹುದು ಎಂದು ಅಭಿಪ್ರಾಯಪಟ್ಟರು  ಸಂಘದ ನಿಕಟಪೂರ್ವ ಅಧ್ಯಕ್ಷರಾದ ರೇಖಾ .ಡಿ.ಚೌಟ ಸಂಘದ ಕಾರ್ಯಚಟುವಟಿಕೆಗಳಿಗೆ

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಇ-ಲಿಟ್ ಫೆಸ್ಟ್

ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿರುವ ವಿಮರ್ಶಕರ ಪೈಕಿ ಹೆಚ್ಚಿನವರು ಇಂಗ್ಲಿಷ್ ಭಾಷೆಯಿಂದ ಬಂದವರು, ಇವರೆಲ್ಲಾ ಕನ್ನಡ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಎಸ್. ಡಿ.ಎಂ. ಪದವಿ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾದ್ಯಾಪಕÀ ಡಾ. ರಾಜಶೇಖರ ಹಳೆಮನೆ ಅಭಿಪ್ರಾಯ ವ್ಯಕ್ತಪಡಿಸಿದರು. ಉಜಿರೆ ಶ್ರೀ. ಧ. ಮಂ. ಸ್ನಾತಕೊತ್ತರ ಕೇಂದ್ರದ ಇಂಗ್ಲಿಷ್ ವಿಭಾಗದಿಂದ ಆಯೋಜಿಸಿದ್ದ ಇ-ಲಿಟ್ ಫೆಸ್ಟ್‍ನ ಮುಖ್ಯ ಅತಿಥಿಗಳಾಗಿ ಅವರು

ಎಸ್.ಡಿ.ಎಂ ವಿಜ್ಞಾನ ವಿದ್ಯಾರ್ಥಿಗಳು ಐಡಿಇಎ ಪ್ರಯೋಗಾಲಯಕ್ಕೆ ಭೇಟಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನ ವಿಜ್ಞಾನ ವಿಭಾಗದ ಇಪ್ಪತ್ತಾರು ವಿದ್ಯಾರ್ಥಿಗಳು ವಾಮಂಜೂರು ಸೈಂಟ್ ಜೋಸೆಫ್ ತಾಂತ್ರಿಕ ಕಾಲೇಜಿನ ಐಡಿಇಎ ಪ್ರಯೋಗಾಲಯಕ್ಕೆ ಇತ್ತೀಚಿಗೆ ಭೇಟಿನೀಡಿದರು. ವಿದ್ಯಾರ್ಥಿಗಳಿಗೆ 3ಡಿ ಪ್ರಿಂಟಿಂಗ್, ಲೇಝರ್ ಡಿಸೈನ್ ಪ್ರಿಂಟಿಂಗ್, ಪಿಸಿಬಿ ಪ್ರಿಂಟಿಂಗ್, ವುಡ್ ಡಿಸೈನ್ ಪ್ರಿಂಟಿಂಗ್ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು. ಸ್ವತಃ ವಿದ್ಯಾರ್ಥಿಗಳೇ ಪ್ರಯೋಗಗಳನ್ನು ಮಾಡುವ ಮೂಲಕ ವೃತ್ತಿ ಕೌಶಲ್ಯಗಳನ್ನು ಹೆಚ್ಚಿಸಿಕೊಂಡರು. ಇಂತಹ

‘ಸ್ವಯಂ ಅಧ್ಯಯನದಿಂದ ಜೀವನದಲ್ಲಿ ಯಶಸ್ಸು’

ಉಜಿರೆ: ವಿದ್ಯಾರ್ಥಿಗಳು ಗುರು ಕಲಿಸಿಕೊಟ್ಟದ್ದನಷ್ಟೇ ಕಲಿಯುವುದಕ್ಕೆ ಸೀಮಿತರಾಗದೆ, ಸ್ವಯಂ ಅಧ್ಯಯನವನ್ನು ನಡೆಸುವುದರಿಂದ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಾರ್ಯ ನಿರ್ವಾಹಕ ನಿರ್ದೇಶಕ ಡಾ. ಎಲ್ ಹೆಚ್ ಮಂಜುನಾಥ್ ನುಡಿದರು.ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಶ್ರೀ ಧ. ಮಂ. ಕಾಲೇಜಿನ ಬಿ.ವೊಕ್ ವಿಭಾಗವು ಆಯೋಜಿಸಿದ್ದ ಎರಡು ದಿನಗಳ ರಾಜ್ಯ ಮಟ್ಟದ ಎಜು ಕಲ್ಚರಲ್ ಫೆಸ್ಟ್ ಉದ್ಘಾಟಿಸಿ

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಮಕ್ಕಳ ಹಕ್ಕುಗಳ ಕಾರ್ಯಾಗಾರ

ಉಜಿರೆ : ಸರ್ವತೋಮುಖ ಬೆಳವಣ ಗೆಗೆ ಪೂರಕವಾಗುವ ಮಕ್ಕಳ ಹಕ್ಕುಗಳ ಕುರಿತ ಅರಿವು ವ್ಯಾಪಕವಾಗಬೇಕು ಎಂದು ಟೋಕಿಯೊದ ಪ್ರೆಸ್ ಆಲ್ಟರ್ನೇಟಿವ್ ಪತ್ರಿಕೆಯ ಸಲಹೆಗಾರ್ತಿ ಮನೋರಮ ಭಟ್ ಜಿ.ವಿ ಅಭಿಪ್ರಾಯಪಟ್ಟರು. ಎಸ್ .ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ಸಮಾಜ ಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ್ದ ಎರಡು ದಿನಗಳ ಮಕ್ಕಳ ಹಕ್ಕುಗಳ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜದಲ್ಲಿ ಮಕ್ಕಳು ಸಬಲರಾಗಬೇಕಾದರೆ ಅವರ ಕುಟುಂಬ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಎಲ್ಲ

ಶ್ರದ್ಧೆ ಮತ್ತು ಆಸಕ್ತಿಯಿಂದ ನಿರಂತರವಾಗಿ ಅಭ್ಯಾಸ ಮಾಡಿ ಶಿಕ್ಷಣದಲ್ಲಿ ಸಾಧನೆ ಮಾಡಬೇಕು : ಪೂರಣ್ ವರ್ಮ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಪೂರಣ್ ವರ್ಮಾ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಪೆರಾಜೆ ಮಾಣಿ ಬಂಟ್ವಾಳ ತಾಲೂಕು ಇದರ ವಿಸ್ತೃತ ನೂತನ ವಿದ್ಯಾಲಯಕ್ಕೆ ಶನಿವಾರ ಭೇಟಿ ನೀಡಿದರು. ನೂತನ ಶಿಕ್ಷಣ ಸಂಸ್ಥೆಯ ವ್ಯವಸ್ಥೆಯಲ್ಲಿ ಆಧುನಿಕ ಸೌಲಭ್ಯದ ಬಗ್ಗೆ ಪರಿಶೀಲನೆ ನಡೆಸಿ ವಿವಿಧ ಮಾಹಿತಿಯನ್ನು ಪಡೆದುಕೊಂಡರು. ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಸಂಸ್ಥಾಪಕ

ನಿಟ್ಟೆ ವಿಶ್ವವಿದ್ಯಾಲಯ : ಜೂನ್ 8-11ರ ವರೆಗೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರ ಪ್ರದರ್ಶನ

ನಿಟ್ಟೆ ವಿಶ್ವವಿದ್ಯಾಲಯವು ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ನಾಲ್ಕನೇ ಆವೃತ್ತಿಯ ನಿಟ್ಟೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಹಾಗೂ ಛಾಯಾಚಿತ್ರಗಳ ಪ್ರದರ್ಶನಗಳನ್ನು ಜೂನ್ 8 ರಿಂದ 11 ರ ವರೆಗೆ ಮಂಗಳೂರಿನ ಭಾರತ್ ಸಿನಿಮಾಸ್‍ನಲ್ಲಿ ಆಯೋಜಿಸಲಾಗಿದೆ ಎಂದು ನಿಟ್ಟೆ ಇನ್ಸ್ಟಿಟ್ಯೂಷನ್ ಆಫ್ ಕಮ್ಯುನಿಕೇಶನ್ ನ ಮುಖ್ಯಸ್ಥ ಪ್ರೊ. ರವಿರಾಜ್ ಅವರು ತಿಳಿಸಿದ್ದಾರೆ . ಅವರು ನಗರದ ಪ್ರೆಸ್ ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಚಯ’ ವಿಶೇಷ ಕಾರ್ಯಕ್ರಮ

ಉಜಿರೆ: ಶ್ರೇಷ್ಠ ಹವ್ಯಾಸಗಳು ಮಾನವನ ಅಭಿವೃದ್ಧಿಗೆ ಪೂರಕ ಎಂದು ರುಡ್ ಸೆಟಿ ಸಂಸ್ಥೆಯ ತರಬೇತುದಾರೆ ಅನಸೂಯಾ ಅಭಿಪ್ರಾಯಪಟ್ಟರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಇತ್ತೀಚೆಗೆ ಹಾಬಿ ಸರ್ಕಲ್ ವತಿಯಿಂದ ಆಯೋಜಿಸಲಾಗಿದ್ದ ಒಂದು ದಿನದ ‘ಸಂಚಯ’ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಹವ್ಯಾಸಗಳಲ್ಲಿ ತೊಡಗುವುದರಿಂದ ಸಂತೋಷ ಲಭಿಸುತ್ತದೆ. ಮನುಷ್ಯನ ಜೀವನವನ್ನು ಹಸನುಗೊಳಿಸುವ ಶಕ್ತಿ ಉತ್ತಮ ಹವ್ಯಾಸಗಳಿಗಿದೆ ಎಂದು ಅವರು ತಿಳಿಸಿದರು.