Home ಕರಾವಳಿ Archive by category ಸುಳ್ಯ

ಸುಳ್ಯ: ಯುವಕ ನೇಣು ಬಿಗಿದು ಆತ್ಮಹತ್ಯೆ

ನೇಣು ಬಿಗಿದು ಆತ್ಮಹತ್ಯೆ ಸುಳ್ಯ. ಬೆಳ್ಳಾರೆ ನೆಟ್ಟಾರು ನವಗ್ರಾಮ ನಿವಾಸಿ ಚರಣ್ ಎಂಬ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಮನೆಯ ಹಿತ್ತಲಿನಲ್ಲಿರುವ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಅನಾರೋಗ್ಯ ಮತ್ತು ಖಿನ್ನತೆಯಿಂದ ಬಳಲುತ್ತಿದ್ದು ಆತ್ಮಹತ್ಯೆ ಮಾಡಲು ಕಾರಣ ಬೆಳ್ಳಾರೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

ಸುಳ್ಯ: ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ-ಪ್ರಮುಖ ಆರೋಪಿ ಮುಸ್ತಾಫ ಪೈಚಾರ್ NIA ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ತಂಡ ಮೂವರನ್ನು ಸಕಲೇಶಪುರ ತಾಲೂಕಿನ ಆನೆಮಹಲ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುಳ್ಯ ಮೂಲದ ಮುಸ್ತಫಾ ಪೈಚಾರ್, ಸೋಮವಾರಪೇಟೆ ಮೂಲದ ಇಲ್ಯಾಸ್ ಹಾಗೂ ಸಿರಾಜ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಪ್ರಕರಣದ ನಾಲ್ಕನೇ ಆರೋಪಿ ಎಂದು ಗುರುತಿಸಲಾಗಿದ್ದ ಮುಸ್ತಫಾ ಪೈಚಾರ್ ಹಾಗೂ ಇಲ್ಯಾಸ್ ಆನೆಮಹಲ್‌ನ ಸಿರಾಜ್ ಬಳಿ ಕೆಲಸಕ್ಕೆ ಸೇರಿದ್ದರು ಎನ್ನಲಾಗಿದ್ದು, ಆರೋಪಿಗಳಿಗೆ ಆಶ್ರಯ ನೀಡಿದ್ದ

2023-24ನೇ ಸಾಲಿನ SSLC ಪರೀಕ್ಷಾ ಫಲಿತಾಂಶ ಪ್ರಕಟ – ಉಡುಪಿ ಪ್ರಥಮ, ದ.ಕ. ದ್ವಿತೀಯ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ. 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬೆಂಗಳೂರಿನ ಮಲ್ಲೇಶ್ವರಂನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿತು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು. ಈ ಬಾರಿಯ ಫಲಿತಾಂಶ

ಮೇ 9ರಂದು ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟ

2023-24ನೇ ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಮೇ 9ರಂದು ಪ್ರಕಟಗೊಳ್ಳಲಿದೆ. ಮಾರ್ಚ್ 25 ರಿಂದ ಎಪ್ರಿಲ್ 06ರವರೆಗೆ ಎಸೆಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ತಿಳಿಸಿದೆ.

ಸುಳ್ಯ: ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವ: ಸಂಭ್ರಮದಿಂದ ನಡೆದ ದೇವರ ದರ್ಶನ ಬಲಿ ಉತ್ಸವ

ಸುಳ್ಯ: ಪುನಃ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಮುಳುಗೆದ್ದ ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ಇದೀಗ ವಾರ್ಷಿಕ ಜಾತ್ರೋತ್ಸವಕ್ಕೆ ಸಿದ್ಧಗೊಂಡಿದ್ದು ಗುರುವಾರ ಬೆಳಿಗ್ಗೆ ಕ್ಷೇತ್ರದಲ್ಲಿ ದರ್ಶನಬಲಿ ಉತ್ಸವ ನಡೆಯಿತು. ದೇವರ ವಿಗ್ರಹ ಹೊತ್ತ ಪ್ರಸಾದ ಅಡಿಗರು ದರ್ಶನ ಬಲಿ ಉತ್ಸವದ ವಿಧಿ ವಿಧಾನಗಳನ್ನು ನೆರವೇರಿಸಿದರು.ದೇಗುಲದ ಪ್ರಧಾನ ಅರ್ಚಕ ಅನಂತಕೃಷ್ಣ ಪಾಂಗಣ್ಣಾಯ ಹಾಗೂ ಇತರ ಅರ್ಚಕರು ಸಹಕರಿಸಿದರು. ಕೊಂಬು, ವಾದ್ಯ, ಚೆಂಡೆ,

ಸುಳ್ಯ: ಮೇ 2ರಂದು ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆಯ ಉದ್ಘಾಟನೆ

ಸುಳ್ಯದಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಮೇ 2ರಂದು ಉದ್ಘಾಟನೆಗೊಳ್ಳಲಿದೆ. ಸುಳ್ಯದ ಒಡಬೈಯಲ್ಲಿ ನೆಕ್ಸಾ ಕಾರುಗಳ ಪ್ರದರ್ಶನ ಮಳಿಗೆ ಆರಂಭಗೊಳ್ಳಲಿದೆ. ನೆಕ್ಸಾ ಕಾರುಗಳ ಪ್ರದರ್ಶನ ಮತ್ತು ಮಾರಾಟ, ಹಳೇ ಕಾರುಗಳ ವಿನಿಮಯ ಮತ್ತು ಮಾರಾಟ, ಇನ್ಶೂರೆನ್ ರಿನಿವಲ್ ಹಾಗೂ ಸುಲಭ ವಾಹನ ಸಾಲ ಸೌಲಭ್ಯಗಳು ಲಭ್ಯವಿದೆ  ಹೆಚ್ಚಿನ ಮಾಹಿತಿಗಾಗಿ ನೆಕ್ಸಾ ಮಾಂಡೋವಿ ಮೋಟರ್ಸ್ ಪ್ರೈವೇಟ್ ಲಿಮಿಟೆಡ್, ಸಮಿಟ್ ಅಪಾರ್ಟ್ಮೆಂಟ್ ಬಿಲ್ಡಿಂಗ್, ಏರ್ಪೋರ್ಟ್ ರೋಡ್, ಮೇರಿ ಹಿಲ್,

ನಾನೆಂಬ ಅಹಂಭಾವ ಇರುವಲ್ಲಿ ಶಾಂತಿ ನೆಲೆಸಲು ಅಸಾಧ್ಯ: ಒಡಿಯೂರು ಶ್ರೀ

ಸುಳ್ಯ: ನಾನು ಎಂಬ ಅಹಂಭಾವ ಹಾಗೂ ಆಸೆ ಇರುವಲ್ಲಿ ಶಾಂತಿ ನೆಲೆಸಲು ಸಾಧ್ಯವಿಲ್ಲ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಮಹಾಸ್ವಾಮೀಜಿ ಹೇಳಿದರು. ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಸೋಮವಾರ ಆಯೋಜಿಸಲಾದ ಮೂರನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತಾ ಅವರು ಮಾತನಾಡಿದರು. ಸಂಸ್ಕಾರ, ಶಿಸ್ತು, ಸಂಯಮಗಳು ಜೊತೆಗಿದ್ದರೆ ಭವ್ಯ ಬದುಕಿನಲ್ಲಿ ದಿವ್ಯತೆಯ ಅನುಭವವನ್ನು

ಮಂಡೆಕೋಲು ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ, ಪ್ರಸಾದ ಸ್ವೀಕಾರ

ಸುಳ್ಯ: ಅಷ್ಟಬಂಧ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಶುಭವಸರದಲ್ಲಿರುವ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಅವರು ಸೋಮವಾರ ಭೇಟಿ ನೀಡಿದರು. ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಪಡೆದು ವ್ಯವಸ್ಥೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬಳಿಕ ಅನ್ನಪ್ರಸಾದ ಸ್ವೀಕರಿಸಿ ತೆರಳಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್,

ಸುಳ್ಯ:  ಭಕ್ತಿ ಸಂಭ್ರಮದಲ್ಲಿ ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಸುಳ್ಯ:  ಅಷ್ಟುದ್ದದ ವೇದಿಕೆ..,ಕಣ್ಕುಕ್ಕುವ ಬಣ್ಣಬಣ್ಣದ ಲೈಟಿಂಗ್ಸ್ ಗಳು, ಕಿವಿಗಿಂಪಾದ ಸಂಗೀತದ ಅಲೆ.., ವೇದಿಕೆಗೆ ಮೆರುಗನ್ನೀಯುವ ಕಾಷ್ಠ ಕಲೆಗಳ ಶೃಂಗಾರ…ಅದರಲ್ಲಿ ಭಾರತೀಯ ಸಂಸ್ಕೃತಿಗಳಿಗೆ ಕನ್ನಡಿ ಹಿಡಿಯುವಂತಹ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು… ಇದು ನಗರದಂಚಿನಲ್ಲಿರುವ ಯಾವುದೋ ಬೃಹತ್ ಸಂಸ್ಥೆ ಆಯೋಜಿಸಿದ ಕಾರ್ಯಕ್ರಮಗಳ ವೇದಿಕೆಯ ವರ್ಣನೆಯಲ್ಲ. ಮಂಡೆಕೋಲು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಆಯೋಜಿಸಲಾದ

ಮಂಡೆಕೋಲು: ಬ್ರಹ್ಮಕಲಶೋತ್ಸವ ಸಂಭ್ರಮದಲ್ಲಿ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ

ಸುಳ್ಯ: ಪರಿಶುದ್ಧವಾದ ಮನಸ್ಸಿನಿಂದ ಸ್ಮರಿಸಿ, ಆರಾಧಿಸಿದರೆ ಭಗವಂತನು ಒಲಿಯುತ್ತಾನಲ್ಲದೆ ದುಃಖಿತ ಮನಸ್ಸಿಗೆ ನೆಮ್ಮದಿಯ ಸಾಂತ್ವನ ದೊರೆಯುತ್ತದೆ ಎಂದು ಮಂಗಳೂರಿನ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಹೇಳಿದರು.  ಮಂಡೆಕೋಲಿನ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಶನಿವಾರ ನಡೆದ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಜೀವನದಲ್ಲಿ ಬರುವ ಕಷ್ಟ