ಸಿಕ್ಕಿಂ ಸರಕಾರಕ್ಕೆ ರೂ. 4,500 ಕೋಟಿ ವಂಚಿಸಿರುವನು ಎನ್ನಲಾದ ಕೊಯಮತ್ತೂರು ಮೂಲದ ಸ್ಯಾಂಟಿಯಾಗೋ ಮಾರ್ಟಿನ್ ಮ್ಯಾನ್ಮಾರ್ನಲ್ಲಿ ಕೆಲಸ ಮಾಡಿ ಭಾರತಕ್ಕೆ ಹಿಂತಿರುಗಿದವನು. ನಾನಾ ದಾರಿಯಿಂದ ಲಾಟರಿ ರಾಜ ಎನಿಸಿ, ಫ್ಯೂಚರ್ ಗೇಮಿಂಗ್ ಹಾಗೂ ಹೋಟೆಲ್ಗಳ ಮಾಲಕನಾಗಿರುವನು. 1,368 ಕೋಟಿ ರೂಪಾಯಿಯ ಚುನಾವಣಾ ಬಾಂಡ್ ಕೊಂಡಿರುವ ಈತ ರಾಜಕೀಯ ಪಕ್ಷಗಳಿಗೆ ತನ್ನ
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16 ಹಾಲಿ ಸಂಸದರನ್ನು ಮತ್ತು 12 ಮಹಿಳೆಯರನ್ನು ಕಣಕ್ಕಿಳಿಸಿದೆ. ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ದ್ದಾರೆ,
ಪ್ರಧಾನಿ ಮೋದಿಯವರು ಅರುಣಾಚಲ ಪ್ರದೇಶದಲ್ಲಿ ಸುರಂಗ ಮಾರ್ಗ ಉದ್ಘಾಟಿಸಿದರು. ಈ ಸುರಂಗ ಮಾರ್ಗವು ಗಡಿ ಉದ್ದಕ್ಕೂ ಹಬ್ಬುವ ರಸ್ತಗೆ ಪ್ರಮುಖ ಸಂಪರ್ಕವಾಗಿದೆ. ಅರ್ಧ ಕಿಲೋಮೀಟರಿಗಿಂತಲೂ ಚಿಕ್ಕದಾದರೂ ಈ ಸುರಂಗವು ಚೀನಾದ ಗಡಿಯ ಆ ಕಡೆಯ ರಸ್ತೆಗೆ ಸಮಾನಾಂತರ ರಸ್ತೆ ಜಾಲ ಹೊಂದುವುದರಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಚೀನಾದ ಗಡಿಯ ಹತೋಟಿ ರೇಖೆಯು 3,488 ಕಿಲೋಮೀಟರ್ ಇದ್ದು, ಅರುಣಾಚಲ ಪ್ರದೇಶದ ಗಡಿ ತುಂಬ ಸೂಕ್ಷ್ಮ ಪ್ರದೇಶವೆನಿಸಿದೆ.
ಕೇರಳದ ಮುಖ್ಯಮಂತ್ರಿಯಾಗಿದ್ದ ಎ. ಕೆ. ಕರುಣಾಕರ್ ಮಕ್ಕಳು ಎರಡು ದಾರಿ ಹಿಡಿದಿದ್ದರೂ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳದೆ ಮುರಳೀಧರನ್ರಿಗೆ ಟಿಕೆಟ್ ನೀಡಿದೆ. ಮರಳೀಧರನ್ರು ಸದ್ಯ ವಡಕ್ಕರ ಸಂಸದರು. ಆದರೆ ಅವರಿಗೆ ಈಗ ತ್ರಿಶೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ತ್ರಿಶೂರು ಕರುಣಾಕರನ್ರ ಮೂಲ ನೆಲೆ. ಪದ್ಮಜಾರು ಬಿಜೆಪಿಗೆ ಸೇರಿರುವುದರಿಂದ ಮುರಳೀಧರನ್ರಿಗೆ ಕ್ಷೇತ್ರ ಬದಲಿಸಿ ಟಿಕೆಟ್ ನೀಡಲಾಗಿದೆ. ತ್ರಿಶೂರ್ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಕರುಣಾಕರನ್
ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ಕರಾಳ ದಿನ ಎಂದು ಕರೆದದ್ದು ತಪ್ಪಲ್ಲ. ಅದು ಅವರು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ. ಸರಕಾರದ ಕ್ರಮಗಳನ್ನು ಟೀಕಿಸುವ ಹಕ್ಕು ಪ್ರಜಾಪ್ರಭುತ್ವದಲ್ಲಿ ಪ್ರಜೆಗೆ ಇದೆ ಎಂದೂ ಅದು ಹೇಳಿದೆ. ಇದೇ ಸಂದರ್ಭದಲ್ಲಿ ಇನ್ನೊಂದು ಮಾತನ್ನು ಸಹ ಸುಪ್ರೀಂ ಕೋರ್ಟು ಹೇಳಿದೆ. ಪಾಕಿಸ್ತಾನಕ್ಕೆ ಯಾರಾದರೂ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದರೆ ಅದು ಅಪರಾಧ ಆಗುವುದಿಲ್ಲ. ಅದು ಸ್ನೇಹ ಸೂಚಕ
ಉತ್ತರ ಕರ್ನಾಟಕ ಮೂಲದ ಬೆಂಗಳೂರು ನಿವಾಸಿ ಇನ್ಫೋಸಿಸ್ ಸ್ಥಾಪಕರಲ್ಲಿ ಒಬ್ಬರಾದ ಸುಧಾ ಮೂರ್ತಿಯವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಬಗೆಗೆ ಪ್ರಧಾನಿ ಮೋದಿಯವರು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿ, ರಾಷ್ಟ್ರಪತಿಯವರು ತಮ್ಮನ್ನು ನೇಮಿಸಿರುವುದು ಆನಂದ ತಂದಿದೆ ಎಂದು ಸಂತೋಷ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನಾಮ ನಿರ್ದೇಶನ ಮಾಡಿದ್ದಾರೆ. ಇದರಿಂದ ನಾರೀ ಶಕ್ತಿಗೆ ಬಲ ಬಂದಂತಾಗಿದೆ ಎಂದೂ ಹೇಳಲಾಗಿದೆ.
ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ ಹೆಸರಲ್ಲೇ ನಿರಂಕುಶ ಅಧಿಕಾರದ ಅಮಲು ಈಗ ಸ್ಪಷ್ಟವಾಗಿದೆ. ಅದಾನಿ, ಅಂಬಾನಿ ಮಂದಿ ಪ್ರಧಾನಿ ಕಚೇರಿಯಲ್ಲಿ ಧಾರಾಳವಾಗಿ ಸಿಗುತ್ತಾರೆ. ಜಾರಿ ನಿರ್ದೇಶನಾಲಯ ಪ್ರತಿಪಕ್ಷಗಳನ್ನು ಮಾತ್ರ
ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು. ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು ಚಿನ್ನಾಭರಣ ಹಸ್ತಾಂತರಕ್ಕೆ ತಾತ್ಕಾಲಿಕ ತಡೆ ನೀಡಿದರು.
ದಿಲ್ಲಿ : ಮಾರ್ಚ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಎಲ್ಲೆಡೆ ರೈಲು ತಡೆ ನಡೆಸಲಾಗುತ್ತದೆ ಎಂದು ದಿಲ್ಲಿ ಚಲೋ ಪ್ರತಿಭಟನೆಯ ರೈತರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಸಂಘಟನೆ ಕೂಟವು ಈ ಬಗೆಗೆ ಹೇಳಿಕೆ ನೀಡಿದ್ದು, ಎಲ್ಲರೂ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ರೈತ ಸಂಘಟನೆಯವರು ಮಾರ್ಚ್ 6ರಂದು ದಿಲ್ಲಿ ಮುತ್ತಿಗೆ ಹಾಕುವುದಾಗಿಯೂ ಹೇಳಿದೆ. ಮೋದಿಯವರ ಸರಕಾರವು ರೈತರ ಚಳವಳಿ ಹೊಸಕುವುದು ಸಾಧ್ಯವಿಲ್ಲ ಎಂದು ಟಿಕಾಯತ್ ತಿಳಿಸಿದ್ದಾರೆ.
ಬಿಜೆಪಿಯವರ ನಂಬಿಕೆಗೆ ಅಭಾರಿ. ಆದರೆ ಅವರು ಟಿಕೆಟ್ ನೀಡಿದ್ದರೂ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಖ್ಯಾತ ಭೋಜಪುರಿ ನಟ, ಗಾಯಕ ಪವನ್ ಸಿಂಗ್ ಹೇಳಿದ್ದಾರೆ. ಬಿಜೆಪಿಯ ಲೋಕಸಭಾ ಸ್ಪರ್ಧಿಗಳ ಮೊದಲ ಪಟ್ಟಿಯಲ್ಲಿ ಪವನ್ ಸಿಂಗ್ರಿಗೆ ಅಸನ್ಸೋಲ್ ಟಿಕೆಟ್ ನೀಡಲಾಗಿದೆ. ಆದರೆ ಅವರು ನೇರ ರಾಜಕೀಯ ಪ್ರವೇಶ ಇಲ್ಲ ಎಂದಿದ್ದಾರೆ. ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೇಮಾಮಾಲಿನಿ ಸಹಿತ ಹಲವು ನಟ ನಟಿಯರು ಸ್ಪರ್ಧಿಸಲು ಕ್ಷೇತ್ರ ಪಡೆದಿದ್ದಾರೆ. ಭೋಜಪುರಿ ಭಾಷೆಯ