Home Archive by category Fresh News (Page 40)

ಉಳ್ಳಾಲ: ಯುವಕನ ಕೊಲೆಯತ್ನ : ಆರೋಪಿ ಬಂಧನ

ಉಳ್ಳಾಲ: ಬೈಕಲ್ಲಿ ಚಲಿಸುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ.66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಕುಂಪಲ ನಿವಾಸಿ ಮಹಮ್ಮದ್ ಆರೀಫ್(29)ಇರಿತಕ್ಕೊಳಗಾದ ಯುವಕ.ಆರೀಫ್ ಶುಕ್ರವಾರ ಬೆಳಿಗ್ಗೆ ಕೊಲ್ಯದಿಂದ-ಕುಂಪಲದ ಕಡೆಗೆ

ಕೇಂದ್ರ ಸರಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆಯೇರಿಕೆ ಇಳಿಸಲು,ದುಡಿಯುವ ಜನರ ಶೋಷಣೆ ತಪ್ಪಿಸಲು, ಕೊಂಡುಕೊಳ್ಳುವ ಸಾಮರ್ಥ್ಯ ಹೆಚ್ಚಿಸಲು,ಉದ್ಯೋಗ ಸ್ರಷ್ಠಿಸಲು ಆಗ್ರಹಿಸಿ,ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ಧ ರೈತ – ಕಾರ್ಮಿಕ – ಕ್ರಷಿ ಕೂಲಿಕಾರರಿಂದ ಇಂದು ದೇಶಾದ್ಯಂತ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CITU ಜಿಲ್ಲಾಧ್ಯಕ್ಷರಾದ

ಬಂಟ್ವಾಳ: ಕೊರಂಟಬೆಟ್ಟುಗುತ್ತಿನಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ

ಬಂಟ್ವಾಳ: ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕೊರಂಟಬೆಟ್ಟುಗುತ್ತು ಶ್ರೀ ವಿಷ್ಣುಮೂರ್ತಿ, ಕೊಡಮಣಿತ್ತಾಯ, ಬ್ರಹ್ಮಬೈದರ್ಕಳ ಕ್ಷೇತ್ರದಲ್ಲಿ ಬ್ರಹ್ಮ ಬೈದರ್ಕಳ ಜಾತ್ರೆ ವೈಭವಯುತವಾಗಿ ಸಂಪನ್ನಗೊಂಡಿತು. ಬ್ರಹ್ಮ ಬೈದರ್ಕಳ ಜಾತ್ರೆಯಂದು ಬೈದರ್ಕಳು ಒಲಿ ಮರೆಯಿಂದ ಹೊರಡುವುದು, ಬೈದರ್ಕಳು ಬಾಕಿಮಾರು ಗದ್ದೆಗೆ ಇಳಿಯುವುದು, ಬೈದರ್ಕಳ ಪಾತ್ರಿಗಳು ದರ್ಶನವಾಗಿ ಸುರ್ಯ ಹಾಕಿಕೊಳ್ಳುವುದು, ಬೈದರ್ಕಳು ಬಾಕಿಮಾರಿನಿಂದ ಗರಡಿಗೆ ಬಂದು ದರ್ಶನವಾಗಿ ಸುರ್ಯ ಹಾಕಿಕೊಳ್ಳುವುದು,

ಕರಾವಳಿಗೆ ಭರಪೂರ ಕೊಡುಗೆ: ಮಂಜುನಾಥ ಭಂಡಾರಿ

ಮಂಗಳೂರು: ರಾಜ್ಯ ಸರಕಾರದ ಬಜೆಟ್ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಕೃಷಿ, ಮೀನುಗಾರಿಕೆ, ಉದ್ಯಮ, ಕೈಗಾರಿಕೆ ಸೇರಿದಂತೆ ಎಲ್ಲ ವಲಯಗಳಿಗೆ ಪ್ರೋತ್ಸಾಹ ನೀಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು. ಅವರು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಅಯವ್ಯಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ರೈತ ಮಹಿಳೆಯರಿಗೆ ಹಸು-ಎಮ್ಮೆ ಖರೀದಿಗೆ ಸಾಲ ಸೌಲಭ್ಯ, ಮತ್ಸ್ಯ ಆಶಾಕಿರಣ ಯೋಜನೆಯಡಿ ಕರಾವಳಿ ಮೀನುಗಾರರ ಪರಿಹಾರ ಮೊತ್ತ 3ಸಾವಿರ

ರಾಜ್ಯದ ಆರ್ಥಿಕತೆಗೆ ಚೈತನ್ಯ: ಹರೀಶ್ ಕುಮಾರ್

ಮಂಗಳೂರು: ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ಅಭಿವೃದ್ಧಿ ಶಕೆಯೇ ಆರಂಭವಾಗಿದೆ. ಇಂದು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕತೆಗೆ ಚೈತನ್ಯ ತುಂಬಿದೆ ಎಂದು ವಿಧಾನ ಪರಿಷತ್‌ನ ಸದಸ್ಯರೂ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು. ಅವರು ರಾಜ್ಯ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದರು. ರಾಜ್ಯ ಸರಕಾರದ ಗ್ಯಾರಂಟಿ ಯೋಜನೆ ಜನಸಾಮಾನ್ಯರು, ಮಧ್ಯಮ ವರ್ಗದವರ ಆರ್ಥಿಕತೆಗೆ ಚೈತನ್ಯ ನೀಡಿದ್ದು,

ಬಂಟ್ವಾಳ: ಶ್ರೀ ಅನ್ನಪೂರ್ಣೇಶ್ವರಿ ದೇವಳದಲ್ಲಿ ಬ್ರಹ್ಮಕಲಶೋತ್ಸವ

ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ದೇವಸ್ಥಾನ ಬಿ.ಸಿ.ರೋಡ್ ನ ಪೊಲೀಸ್ ಲೈನ್ ನಲ್ಲಿದ್ದು, ಇದರ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆಬ್ರವರಿ 16ರಿಂದ ಆರಂಭಗೊಂಡು 24ರವರೆಗೆ ನಡೆಯಲಿದ್ದು, ಶುಕ್ರವಾರ ಸಂಜೆ 4.30ರಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಈ ವಿಚಾರವನ್ನು ವ್ಯವಸ್ಥಾಪನಾ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಮತ್ತು ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.ಅವರು ಬಂಟ್ವಾಳ ಪ್ರೆಸ್‌ಕ್ಲಬ್ ನಲ್ಲಿ

ಕಾಪು: ಇನ್ನಂಜೆ ದೇವಳದ ಕೆರೆಯಲ್ಲಿ ಯುವಕನ ಶವ ಪತ್ತೆ

ಕಾಪು ಸಮೀಪದ ಇನ್ನಂಜೆ ವಿಷ್ಣುಮೂರ್ತಿ ದೇವಸ್ಥಾನ ಕೆರೆಯಲ್ಲಿ ಯುವಕನ ಶವವೊಂದು ಪತ್ತೆಯಾಗಿದ್ದು ಆತ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಪಡುಬಿದ್ರಿ ನಿವಾಸಿ ವಿನಯ ರಾವ್(27) ಆತ್ಮಹತ್ಯೆ ಮಾಡಿಕೊಂಡ ಯುವಕ, ಈತ ಪಾಲಿಟೆಕ್ನಿಕ್ ಕಾಲೇಜೊಂದರಲ್ಲಿ ಅತಿಥಿ ಉಪನ್ಯಾಸಕನಾಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದ್ದು, ಈತ ನಿನ್ನೆಯ ದಿನ ದೇವಳದ ಪಕ್ಕದಲ್ಲಿ ಸುತ್ತಾಡಿಕೊಂಡಿದ್ದು ಸ್ಥಳೀಯ ನಾಯಿಯೊಂದಿಗೆ ಆಟವಾಡಿಕೊಂಡಿದ್ದ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಬಂಟ್ವಾಳ: ಫೆ.21ರಿಂದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ

ಬಂಟ್ವಾಳ: 1924ರಲ್ಲಿ ಆರಂಭವಾದ ಕಲ್ಲಡ್ಕ ಶ್ರೀರಾಮ ಮಂದಿರದ ಶತಾಬ್ದಿ ಸಂಭ್ರಮ ಕಾರ್ಯಕ್ರಮ ಫೆ.21 ರಿಂದ ಫೆ.24 ರ ವರೆಗೆ ಮಂದಿರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನೆರವೇರಲಿದೆ ಎಂದು ಶತಾಬ್ದಿ ಸಂಭ್ರಮ ಸಮಿತಿ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ತಿಳಿಸಿದರು.ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಬುಧವಾರ ಕರೆದ ಸುದ್ದಿಗೋಷ್ಟಿಯಲ್ಲಿ ಅವರು ಮಾಹಿತಿ ನೀಡಿ ಶತಾಬ್ದಿ ಕಾರ್ಯಕ್ರಮದಲ್ಲಿ ನೂತನವಾಗಿ ಶ್ರೀ ವಿದ್ಯಾಗಣಪತಿ ದೇವರ

ಮೂಡುಬಿದಿರೆ: ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಪುರಸಭಾ ಅಧಿಕಾರಿಗೆ ಚಾಟಿ ಬೀಸಿದ ಲೋಕಾಯುಕ್ತ ಅಧಿಕಾರಿಗಳು

ಮೂಡುಬಿದಿರೆ: ಇಲ್ಲಿನ ಸ್ವರಾಜ್ಯ ಮೈದಾನದ ಬಳಿ ಅಕ್ರಮವಾಗಿ ಗ್ಯಾರೇಜ್ ನಡೆಯುತ್ತಿದ್ದು ಇದರಿಂದ ಹೊರ ಬರುತ್ತಿರುವ ಕೊಳಚೆ ನೀರಿನಿಂದ ಸಾರ್ವಜನಿಕರು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಈ ಬಗ್ಗೆ ಪುರಸಭೆಗೆ ದೂರು ನೀಡಿದಾಗ ಕ್ರಮಕೈಗೊಂಡಿಲ್ಲ ನಂತರ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದು ಅವರು ಪುರಸಭೆಗೆ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರು ಆದರೆ ಮತ್ತೂ ಪುರಸಭೆ ಕ್ರಮ ಕೈಗೊಂಡಿಲ್ಲವೆಂದು ಸ್ಥಳೀಯರಾದ ಸದಾನಂದ ನಾರಾವಿ ಅವರು ಗುರುವಾರ ಆಡಳಿತ ಸೌಧದಲ್ಲಿ ನಡೆದ

ಮಂಗಳೂರು: ಟಾಟಾ ಸಮೂಹದ ತನಿಷ್ಕ್ ಜ್ಯುವೆಲ್ಲರಿ ಮಳಿಗೆ ಮರು ಆರಂಭ

ಭಾರತದ ಅತಿ ದೊಡ್ಡ ಆಭರಣ ರಿಟೇಲ್ ಬ್ರ್ಯಾಂಡ್ ಆಗಿರುವ ಟಾಟಾ ಸಮೂಹದ ತನಿಷ್ಕ್ ಚಿನ್ನಾಭರಣದ ಭವ್ಯ ಮಳಿಗೆಯು ಮಂಗಳೂರಿನಲ್ಲಿ ಮರು ಆರಂಭಗೊಂಡಿತು.ಟಾಟಾ ಸಮೂಹವು ತನ್ನ ರಿಟೇಲ್ ಉದ್ಯಮವಾದ ತನಿಷ್ಕ್ ಜ್ಯುವೆಲ್ಲರಿಯನ್ನು ಮಂಗಳೂರಿನಲ್ಲಿ ಮರು ಆರಂಭಿಸಿದ್ದು, ಟಾಟಾ ಸನ್ಸ್ ಪ್ರೈವೆಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾದ ಭಾಸ್ಕರ್ ಭಟ್ ಹಾಗೂ ರೀಜನಲ್ ಬಿಸ್ನೆಸ್ ಹೆಡ್ ಅಜಯ್ ದ್ವಿವೇದಿ ಅವರು ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಟಾಟಾ ಸನ್ಸ್ ಪ್ರೈವೆಟ್