Home Archive by category Fresh News (Page 47)

ದೇಶವಾಸಿಗಳಿಗೆ ನಿರಾಶೆಯ ಬಜೆಟ್ : ಮಂಜುನಾಥ ಭಂಡಾರಿ

ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ.

ಪ್ರಗತಿ ಹಿನ್ನಡೆಯ ಸಂಕೇತ: ಕೆ. ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ

ಕೇಂದ್ರ ಬಜೆಟ್ ನಿರಾಶಾದಾಯಕ : ಬಿ.ರಮನಾಥ ರೈ

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ. ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಮಂಗಳೂರು : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ವೈಷ್ಣವಿಗೆ ಸನ್ಮಾನ

ಕುಲಶೇಖರದ ಕಟ್ಟೆ ಫ್ರೆಂಡ್ಸ್ ವತಿಯಿಂದ 26ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಊರ ಹತ್ತು ಸಮಸ್ತರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಅಶ್ವಥ ಕಟ್ಟೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕುಮಾರಿ ವೈಷ್ಣವಿ ಯವರಿಗೆ ಶಾಲು ಹೊದಿಸಿ ಫಲ ಪುಷ್ಪ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ

ಅಕ್ಷತೆ ಅಕ್ಕಿ ಪಡಿತರ ಅಕ್ಕಿ ಕಾಳಗ

ಅಕ್ಷತೆಗೆ ಮತ ಹಾಕುತ್ತೀರಾ, ಅನ್ನದ ಅಕ್ಕಿಗೆ ಮತ ಹಾಕುತ್ತೀರಾ ಎಂದು ಪ್ರಶ್ನಿಸಿದ ಮಾಗಡಿ ಶಾಸಕ ಬಾಲಕೃಷ್ಣ ಅವರು ಅಕ್ಷತೆಯ ಅಕ್ಕಿಗೆ ಮತ ಹಾಕುವುದಾದರೆ ನಿಮಗೆ ಅನ್ನದ ಅಕ್ಕಿ ಕೊಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ವಾರಣಾಸಿ ಜ್ಞಾನವಾಪಿ ಮಸೀದಿಯ ಬೀಗ ಹಾಕಿದ ಭಾಗದಲ್ಲಿ ಹಿಂದೂಗಳಿಗೆ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಈಗ ಕೋರ್ಟು ಆದೇಶ ನೀಡಿದೆ. ಲೋಕ ಸಭೆ ಚುನಾವಣೆಗೆ ಮೊದಲು ತಾತ್ಕಾಲಿಕ ಆಯವ್ಯಯ ಆಗುವುದಕ್ಕೆ ಮೊದಲು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್

ಭ್ರಷ್ಟ ಭಾರತ ಸ್ಪಷ್ಟ

2023ರ ಲೆಕ್ಕಾಚಾರದ ಮೇಲೆ 2024ರ ಜಾಗತಿಕ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಹೊರಬಿದ್ದಿದೆ. ಭಾರತವು 40 ಅಂಕದೊಡನೆ 93ನೇ ಸ್ಥಾನದಲ್ಲಿ ಇದೆ. ಕಳೆದ ವರುಷ 39 ಅಂಕದೊಡನೆ 85ನೇ ಸ್ಥಾನದಲ್ಲಿ ಇದ್ದ ಭಾರತ ಮತ್ತಷ್ಟು ಭ್ರಷ್ಟ ಕೂಪಕ್ಕೆ ಜಾರಿದೆ. ಪಾರದರ್ಶಕ ಅಂತರರಾಷ್ಟ್ರೀಯ ಸಂಸ್ಥೆ ಅರ್ಥಾತ್ ಟ್ರಾನ್ಸ್‍ಫರೆನ್ಸಿ ಇಂಟರ್‍ನ್ಯಾಶನಲ್ ಸಂಸ್ಥೆ ಈ ಸೂಚ್ಯಂಕ ಪಟ್ಟಿ ಹೊರಗಿಟ್ಟಿದೆ. ಭಾರತದಲ್ಲಿ ಭ್ರಷ್ಟಾಚಾರ ವಿರೋಧಿ ಭ್ರಮಾ ವಲಯ ತುಂಬ ವಿಸ್ತಾರವಾಗಿದೆ ಎಂದೂ ವರದಿ ಹೇಳಿದೆ.

ಕೇಂದ್ರ ಬಜೆಟ್ : 2047ಕ್ಕೆ ಅರಳಲಿದೆ ವಿಕಸಿತ್ ಭಾರತ್ ಆಶ್ವಾಸನೆ

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಮಂತ್ರದ ಮೂಲಕ ಬಿಜೆಪಿ ಒಕ್ಕೂಟ ಸರಕಾರದ ಜನಪರ ಯೋಜನೆಗಳು ದೇಶದ ಮೂಲೆ ಮೂಲೆಗೆ ತಲುಪಿದೆ ಎಂದು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹೇಳುವುದರ ಮೂಲಕ ಚುನಾವಣಾ ಪೂರ್ವ ತಾತ್ಕಾಲಿಕ ಬಜೆಟ್ ಮಂಡಿಸಿದರು. 2047ಕ್ಕೆ ವಿಕಸಿತ ಭಾರತ್ ಅರಳಲು ತಮ್ಮ ಬಜೆಟ್ ಸಹಾಯಕ ಎಂದು ಅವರು ಹೇಳಿದರು.ತಾತ್ಕಾಲಿಕ ಬಜೆಟ್ಟಿನ ಕೆಲವು ಮುಖ್ಯಾಂಶಗಳು ಮುಂದಿನಂತಿವೆ. ದೇಶದ ಜನರು ನಮಗೆ ಬಹುಮತ ನೀಡಿ ಗೆಲ್ಲಿಸಿದ್ದಾರೆ. ಕಳೆದ ಹತ್ತು ವರುಷಗಳಿಂದ ಭಾರತದ

ಹೆಮ್ಮುಂಜೆ ಸ.ಹಿ.ಪ್ರಾ.ಶಾಲೆಗೆ ಕುಂದಾಪುರ ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿ ಪರಿಕರಗಳ ಕೊಡುಗೆ

ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು. ಶಾಲಾ ಸ್ಥಾಪಕ ಕುಟುಂಬದ ಸದಸ್ಯರು, ಹಿರಿಯ ವಿದ್ಯಾರ್ಥಿಯು ಹಾಗೂ ಅತ್ಯುತ್ತಮ ಜಿಲ್ಲಾ ಶಿಕ್ಷಕ

ಕುಂದಾಪುರ: ಸಮಾನ ಮನಸ್ಕ ಸಂಘಟನೆಗಳಿಂದ ಮಾನವ ಸರಪಳಿ ಸಮಾರೋಪ

ಕುಂದಾಪುರ: ಎಲ್ಲಿಯವರೆಗೆ ಬ್ರಿಟನ್ ದೇಶದ ಪಾರ್ಲಿಮೆಂಟ್ ಕಟ್ಟಡದ ಮಧ್ಯೆ ಗಾಂಧಿ ಪ್ರತಿಮೆ ಇರುತ್ತದೆಯೋ ಅಲ್ಲಿಯ ತನಕ ಗಾಂಧೀಜಿಯವರ ಚಿಂತನೆಗಳಿಗೆ ಸೋಲಿಲ್ಲ ಎಂದು ಬಸ್ರೂರು ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎಂ.ದಿನೇಶ್ ಹೆಗ್ಡೆ ಅಭಿಪ್ರಾಯಪಟ್ಟರು. ಮಹಾತ್ಮ ಗಾಂಧಿಜೀಯವರ ಹುತಾತ್ಮ ದಿನದ ಅಂಗವಾಗಿ ಸಮಾನ ಮನಸ್ಕ ಸಂಘಟನೆಗಳಿಂದ, ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಗಾಂಧೀಜಿ ಅವರ