Home Posts tagged #kinnigoli

ಕಿನ್ನಿಗೋಳಿ: ಮೆನ್ನಬೆಟ್ಟುವಿನ ಜಮೀನಿನಲ್ಲಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ವಿರೋಧ, ಗ್ರಾಮಸ್ಥರಿಂದ ಪ್ರತಿಭಟನೆ

ಬಜಪೆ ಪಟ್ಟಣ ಪಂಚಾಯತ್ ವ್ಯಾಪ್ತಿಯ ತ್ಯಾಜ್ಯ ವಸ್ತುಗಳನ್ನು ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮೆನ್ನಬೆಟ್ಟು ಗ್ರಾಮದಲ್ಲಿರುವ 17 ಗೋಮಾಳ ಜಮೀನಿನಲ್ಲಿ ಹಾಕಿ ಘಟಕ ನಿರ್ಮಾಣ ಮಾಡುವುದನ್ನು ವಿರೋಧಿಸಿ ಹಾಗೂ ಜಮೀನಿನಲ್ಲಿ ದಾಖಲು ಆಗಿರುವ ಮಂಜುರಾತಿಯನ್ನು ರದ್ದು ಮಾಡುವ ಬಗ್ಗೆ ಗ್ರಾಮಸ್ಧರಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಂಭಾಗ ಬೃಹತ್ ಪ್ರತಿಭಟನೆ

ಕಿನ್ನಿಗೋಳಿ : ಮಾರಕ ಕಾಯಿಲೆಯಿಂದ ಬಳಲುತ್ತಿರುವ ಮಮತಗೆ ಬೇಕಾಗಿದೆ ದಾನಿಗಳ ನೆರವು

ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಇದುವರೆಗೆ ಸುಮಾರು 65 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ದಾನಿಗಳ, ಮಹರಾಷ್ಟ್ರ ಸರಕಾರ ಅಲ್ಲದೆ

ಕೆಂಚನಕೆರೆ : ಧರೆಗುರುಳಿದ ಭಾರೀ ಗಾತ್ರದ ಮರ || Kinnigoli

ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಬಾರಿ ಗಾತ್ರದ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮರವು ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿ ಭೀಕರ ಶಬ್ದ ಉಂಟಾಗಿದ್ದು, ವಿದ್ಯುತ್ ಸಂಚಾರ ನಿಲುಗಡೆಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ.ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ ಹಾಗೂ ತಂತಿಗಳಿಗೆ ಹಾನಿಯಾಗಿದ್ದು ಕಿನ್ನಿಗೋಳಿ,

ಕುಡುಕರ ತಾಣವಾದ ಕಿನ್ನಿಗೋಳಿ ಬಸ್ಸು ತಂಗುದಾಣ

ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಿನ್ನಿಗೋಳಿ ಕೇಂದ್ರ ಬಸ್ಸು ತಂಗುದಾಣ ಹಾಗೂ ನಿಲ್ದಾಣ ಅವ್ಯವಸ್ದೆಗಳ ಅಗರವಾಗಿದ್ದು, ಇದೀಗ ಮದ್ಯವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ. ಒಂದೆಡೆ ಬಸ್ಸು ನಿಲ್ದಾಣದಲ್ಲಿ ಸೂಕ್ತ ಪಾರ್ಕಿಂಗ್ ವ್ಯವಸ್ಧೆ ಇಲ್ಲದೆ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ತೀವ್ರ ತೊಂದರೆಯಾಗಿದೆ. ಮತ್ತೊಂದೆಡೆ ನಿತ್ಯ ಪ್ರಯಾಣಿಕರಿಗೆ ಪ್ರಮುಖ ಆಸರೆಯಾಗಿದ್ದ ಈ ಬಸ್ಸು ನಿಲ್ದಾಣವನ್ನು ಇದೀಗ ಕುಡುಕರೇ ಆಳುತ್ತಿದ್ದಾರೆ. ಪ್ರತಿನಿತ್ಯ ಸುಮಾರು

ಉಮಾನಾಥ್ ಕೋಟ್ಯಾನ್‍ಗೆ ಬೇನಾಮಿ ಆಸ್ತಿ : ಮಿಥುನ್ ರೈ

ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಳ್ಕುಂಜೆ, ಉಳೆಪಾಡಿ, ಕೊಲ್ಲೂರು, ಅತಿಕಾರಿಬೆಟ್ಟು, ಕವತ್ತಾರು, ಬಜ್ಪೆ ವ್ಯಾಪ್ತಿಯಲ್ಲಿ ಕೈಗಾರಿಕೆಗಳಿಗೆ ಯೋಗ್ಯವಾದ ಸುಮಾರು ಒಂದು ಸಾವಿರ ಎಕರೆಗೂ ಮಿಕ್ಕಿ ಭೂಮಿಯಿದ್ದು, ಜನರು ಸರಕಾರಕ್ಕೆ ಕೊಡಲು ಉತ್ಸುಕರಾಗಿದ್ದು, ತಾವು ದಯವಿಟ್ಟು ಈ ಭಾಗದಲ್ಲಿ ಕೈಗಾರಿಕಾ ಅಭಿವೃದ್ಧಿಗಾಗಿ ಭೂ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಬೇಕು ಎಂದು ಶಾಸಕ ಉಮಾನಾಥ ಕೋಟ್ಯಾನ್ ಸರಕಾರ ಹಾಗೂ ಕೆಐಡಿಬಿ

ಕಿನ್ನಿಗೋಳಿ ಪಂಚಾಯತ್‍ನಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ : ಶಾಂತಿನಗರ-ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಮುಖ್ಯಾಧಿಕಾರಿ ಭೇಟಿ

ಕಿನ್ನಿಗೋಳಿ: ಪಂಚಾಯತ್ ವತಿಯಿಂದ ಪೂರೈಸುವ ನಳ್ಳಿ ನೀರಿನಲ್ಲಿ ವ್ಯತ್ಯಯ ಉಂಟಾಗಿದ್ದು ಈ ಕುರಿತು ಶಾಂತಿನಗರ – ಗುತ್ತಕಾಡು ಪರಿಸರದ ನಾಗರಿಕರ ನಿಯೋಗ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅವರನ್ನು ಭೇಟಿಯಾಗಿ ಚರ್ಚಿಸಿತು. ಇತ್ತೀಚೆಗೆ ಕುಡಿಯುವ ನೀರಿನ ಅಸಮರ್ಪಕ ಪೂರೈಕೆಯಿಂದ ತಾಳಿಪಾಡಿ ಗ್ರಾಮದ ಶಾಂತಿನಗರ ಗುತ್ತಕಾಡು ಪ್ರದೇಶದಲ್ಲಿ ಜನರು ಸಂಕಷ್ಟ ಅನುಭವಿಸುವಂತಾಗಿದೆ. ಈ ನಿಟ್ಟಿನಲ್ಲಿ ಖಿಲ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಪ್ರಧಾನ

ಕಿನ್ನಿಗೋಳಿಯಲ್ಲಿ ಯುವ ಸಂಕಲ್ಪ ಕಾರ್ಯಕ್ರಮ

ಕಿನ್ನಿಗೋಳಿ: ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯುವ ನಾಯಕ ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನೇತ್ರತ್ವದಲ್ಲಿ ಯುವ ಸಂಕಲ್ಪ ಕಾರ್ಯಕ್ರಮ ಕಿನ್ನಿಗೋಳಿ ಸಮೀಪದ ಎಸ್.ಕೋಡಿ ಪದ್ಮಾವತಿ ಸಭಾಭವನದಲ್ಲಿ ನಡೆಯಿತು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯ್ ಚಂದ್ರ ಜೈನ್ ಮಾತನಾಡಿ ಈಗಿನ ಬಿಜೆಪಿ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಬೆಲೆ ಏರಿಕೆಗೆ

ಕಿನ್ನಿಗೋಳಿ : ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆ

ಕಿನ್ನಿಗೋಳಿ: ಕಿನ್ನಿಗೋಳಿ ಸುತ್ತಮುತ್ತ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಹಗಲು ದರೋಡೆಗಿಳಿಯುವ ತಂಡ ಕಾರ್ಯಾಚರಿಸುತ್ತಿದೆ. ಮನೆ ಮನೆಗೆ ಭೇಟಿ ನೀಡುತ್ತಿರುವ ಯುವಕನೋರ್ವ ಚಿನ್ನದ ಒಡವೆಗಳನ್ನು ತೊಳೆಯುವ ನೆಪದಲ್ಲಿ ಒಡವೆಗಳನ್ನು ಪಡೆದು, ತನ್ನ ಬಳಿ ಇರುವ ಪುಡಿಯೊಂದರಲ್ಲಿ ತನ್ನ ಪಾತ್ರೆಯಲ್ಲಿರುವ ನೀರಿನಲ್ಲಿ ತೊಳೆಯುತ್ತಾನೆ ಚಿನ್ನದ ಒಡವೆಗಳಿಗೆ ಹೊಳಪು ಬರುತ್ತದೆ ಅದರೆ ಒಡವೆಯ ಸುಮಾರು 25% ಕರಗಿ ಅವರಲ್ಲಿರುವ ನೀರಿನಲ್ಲಿರುತ್ತದೆ. ಅದನ್ನು ಆ ಯುವಕ

ಕಿನ್ನಿಗೋಳಿ: ಯುವ ಸಮ್ಮೇಳನ ಡಿ ವೈ ಸಿ 2023

ಕಿನ್ನಿಗೋಳಿ: ನಾವು ಮಾಡುವ ಕೆಲಸದಿಂದ ಇನ್ನೊಬ್ಬರಿಗೆ ಮೆಚ್ಚುವಂತಾಗಿರಬೇಕು ಹಾಗೂ ಶಕ್ತಿಯುತ ಸಮುದಾಯವನ್ನು ಕಟ್ಟುವಂತ ಕೆಲಸ ಮಾಡಬೇಕು. ಸಮಾಜ ಸೇವೆಯಲ್ಲಿ ತೊಡಗಿ ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಮುನ್ಸೂಜಾರ್ ಮ್ಯಾಕ್ಸಿಮ ನೊರೋನ್ಹಾ ವಿಗರ್ ಜನರಲ್ ಮಂಗಳೂರು ಧರ್ಮ ಪ್ರಾಂತ್ಯ ಅವರು ಹೇಳಿದರು. ಅವರು ರೆಮೆದಿ ಅಮ್ಮನವರ ದೇವಾಲಯದ ಸಭಾಭವನದಲ್ಲಿ ಭಾರತೀಯ ಕಥೋಲಿಕ ಯುವ ಸಮ್ಮೇಳನ್ ಐಸಿ ವೈ ಎಂ ಕೇಂದ್ರೀಯ ಸಮಿತಿ ಮಂಗಳೂರು ಮತ್ತು ಸಂತ ಜೂಡ ಐಸಿ ವೈ ಎಂ

ಸತತ 20 ಗಂಟೆಗಳ ಕಾರ್ಯಾಚರಣೆ : ಕೊನೆಗೂ ಚಿರತೆಯು ಬೋನಿಗೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ನಿಡೋಡಿ ಚರ್ಚಿನ ಬಲಭಾಗದಲ್ಲಿರುವಂತ ದಡ್ಡಿನ ಫ್ಲೋರಿಂಗ್ ಇವರ ಮನೆಯ ಬಾವಿಗೆ ಶುಕ್ರವಾರ ರಾತ್ರಿ ಎಂದು ಚಿರತೆಯೂ ಬಿದ್ದಿರುವ ಘಟನೆಯು ನಡೆದಿದೆ. ಶನಿವಾರ ಮಧ್ಯಾಹ್ನ 11 ಗಂಟೆಯ ಹೊತ್ತಿಗೆ ಚಿರತೆಯು ಬಾವಿಯಲ್ಲಿ ಮನೆಯವರಿಗೆ ಬೆಳಕಿಗೆ ಬಂದಿದ್ದು ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಿಳಿಸಲಾಗಿತ್ತು ಕೂಡಲೆ ಅರಣ್ಯ ಇಲಾಖೆಯವರು ಇದಕ್ಕೆ ಸ್ಪಂದಿಸಿ ಎರಡು ಗಂಟೆಯ ಹೊತ್ತಿಗೆ ಸ್ಥಳಕ್ಕೆ ಭೇಟಿ ನೀಡಿ ಅದನ್ನು ಪರಿಶೀಲಿಸಿ‌ ಬೋನಿಯನ್ನ