Home Posts tagged #mangaluru (Page 6)

ಮಂಗಳೂರು: ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿ.ವೈ.ವಿಜಯೇಂದ್ರ

ಬರ ನಿರ್ವಹಣೆಯ ಬಗ್ಗೆ ಚರ್ಚಿಸಬೇಕಾದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಸಚಿವರು ಮುಂದಿನ ಲೋಕಸಭಾ ಚುನಾವಣೆ, ನಿಗಮ ಮಂಡಳಿ ನೇಮಕಾತಿಯ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಮಂಗಳೂರಿಗೆ ಆಗಮಿಸಿದ ಅವರು ನಗರದ ಬಿಜೆಪಿ

ಮಂಗಳೂರು : ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ಮತ್ತು ಮಾದರಿಯನ್ನು ನೀಡಿದೆ ಎಂದು ಸಂಸದ ನಳಿನ್‍ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮ ವಾಸ್ತವ್ಯದ ಮೂಲಕ ಹಳ್ಳಿಯ ಜನರ ಸಮಸ್ಯೆಯ

ಮಂಗಳೂರು: ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿದ್ದ ಯುವಕ ಕೊನೆಗೂ ತಾಯ್ನಾಡಿಗೆ..!!

ಮಾಡದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ 11 ತಿಂಗಳ ಸೆರೆಮನೆ ವಾಸದ ಬಳಿಕ ಈಗ ಬಂಧಮುಕ್ತವಾಗಿರುವ ಕಡಬದ ಚಂದ್ರಶೇಖರ್ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಸೋಮವಾರ ರಾತ್ರಿ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇದೇ ವೇಳೆ ಅವರ ತಾಯಿ ಹೇಮಾವತಿ, ಅಣ್ಣ ಹರೀಶ್, ಬಿಡುಗಡೆಗೆ ಯತ್ನಿಸಿದ್ದ ಕೊಕ್ಕಡ ಶ್ರೀಧರ ಗೌಡ ಮತ್ತಿತರರು ಅವರನ್ನು ಸ್ವಾಗತಿಸಿದರು. ಇದೇ ವೇಳೆ ಮಾತನಾಡಿದ ಚಂದ್ರಶೇಖರ್ ಮಾಧ್ಯಮಗಳಲ್ಲಿ ನನ್ನ ವಿಚಾರದ ಬಗ್ಗೆ ವರದಿ ಬಂದಿರುವ ಕಾರಣ ನನ್ನ

ಬೆಳಗಾವಿ: ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕಿದ ಶ್ವಾನ..!!

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪಾದಯಾತ್ರೆಯಲ್ಲಿ ಶ್ವಾನವೊಂದು ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕ್ತಿದೆ.ದಿನ ಪ್ರತಿ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳ ತಂಡ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ನವೆಂಬರ್ 4ರಂದು ಪಾದಯಾತ್ರೆ ಶುರುಮಾಡಿದ್ರು. ಗೋಕಾಕ್ ತಾಲೂಕಿನ ಗ್ರಾಮದಿಂದ ಶ್ವಾನವೊಂದು

ಮಂಗಳೂರು: ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ, ದ.ಕ ಜಿಲ್ಲೆಯ 10ವಿದ್ಯಾರ್ಥಿಗಳು ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೀದರ್‌ನ ಜಿಲ್ಲಾ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ೨೦೨೩-೨೪ನೇ ಸಾಲಿನ ೧೯ ವರ್ಷದೊಳಗಿನ ಬಾಲಕ – ಬಾಲಕಿಯರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ದ.ಕ ಜಿಲ್ಲೆಯ10ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯು ನ.21 ಮತ್ತು ನ.22 ರಂದು ನಡೆಯಲಿದ್ದು, ಮಂಗಳೂರಿನ ಸಂತ ಆಗ್ನೆಸ್ ಪಿಯು ಕಾಲೇಜಿನ ನಹ್ಲಾ ಫಾತಿಮಾ, ಸಂತ ಅಲೋಶಿಯಸ್ ಪಿಯು ಕಾಲೇಜಿನ ಆರ್ಣ ಸದೋರ್ತ, ಬಂಟ್ವಾಳದ ಕಾರ್ಮೆಲ್ ಕಂಪೊಸೈಟ್

ಮಂಗಳೂರು: ಸಭಾಧ್ಯಕ್ಷ ಸ್ಥಾನವನ್ನು ಪಕ್ಷವನ್ನು ಮೀರಿ ನೋಡಲು ಬಯಸುತ್ತೇನೆ: ಯು.ಟಿ. ಖಾದರ್

ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಸ್ಲಿಂ ಸ್ಪೀಕರ್‍ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ

ಉಡುಪಿ : ಹತ್ಯೆ ಪ್ರಕರಣ – ಕೊಲೆಗೆ ಬಳಸಿದ ಚೂರಿ ಪತ್ತೆಗೆ ಪೊಲೀಸರಿಂದ ತೀವ್ರ ಶೋಧ

ನೇಜಾರು ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆಗೈದ ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ(39) ಬಹಳ ಯೋಜಿತವಾಗಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಯಾವುದೇ ಸಾಕ್ಷ್ಯಾಧಾರ ಮತ್ತು ತನ್ನ ಮುಖ ಪರಿಚಯ ಸಿಗಬಾರದೆಂಬ ಉದ್ದೇಶದಿಂದ ಪ್ರವೀಣ್ ಚೌಗುಲೆ ಈ ಪೂರ್ವ ಯೋಜಿತ ಕೊಲೆಗಾಗಿ ತನ್ನ ಕಾರು, ಮಾಸ್ಕ್, ಹಲವು ರಿಕ್ಷಾ, ಬೈಕ್, ಬಸ್‍ಗಳನ್ನು ಬಳಸಿದ್ದನು. ಅದೇ ರೀತಿ ಬ್ಯಾಗ್ ಮತ್ತು

ಮಂಗಳೂರು: ನ.21ರಂದು ಪುರಭವನದಲ್ಲಿ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸಮ್ಮೇಳನವನ್ನು ನ.21ರಂದು ಬೆಳಿಗ್ಗೆ 10ಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ

ಮಂಗಳೂರು: ಅದೈತ್ ಹೂಂಡೈ ಕಾರು ಸಂಸ್ಥೆಯಿಂದ ಗ್ರಾಹಕರಿಗೆ ವಿಶೇಷ ಕೊಡುಗೆ..!

ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅದೈತ್ ಹ್ಯೂಂಡೈಯವರು ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.ಕಾರು ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಅದೈತ್ ಹೂಂಡಾಯಿ ಹೊಸ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ವಾಹನ ಖರೀದಿಗೆ ಆಕರ್ಷಕ ಬಹುಮಾನ ಹಾಗೂ ಉತ್ತಮ ಕ್ಯಾಶ್ ಪ್ರೈಸ್ ನೀಡಲಿದೆ.ಹೊಸ ಕಾರು ಖರೀದಿ ಮಾಡುವವರಿಗೆ ಟೆಕ್ನೋಬೈಟ್ ಬ್ಲುಟೂತ್ ಸ್ಪೀಕರ್, ಕಾಶ್ ಬ್ಯಾಕ್

ಡಾ|| ಚೂಂತಾರು ಕಸಾಪ ರಾಜ್ಯ ಸಮಿತಿಗೆ ನೇಮಕ

ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ ಪ್ರಕಟಣೆ ನೀಡಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ