ವಿದ್ಯಾರ್ಥಿಗಳು ಶಾಲೆಯ ಪ್ರಮುಖ ಆಸ್ತಿಯಾಗುತ್ತಾರೆ; ಅವರಿಲ್ಲದೆ, ಶಾಲೆಗಳು ಮತ್ತು ಶಿಕ್ಷಕರು ಏನೂ ಅಲ್ಲ. ಶಿಕ್ಷಕರ ಮೌಲ್ಯ ಮತ್ತು ಪ್ರಾಮುಖ್ಯತೆಯನ್ನು ಮಾಡುವಲ್ಲಿ ವಿದ್ಯಾರ್ಥಿಗಳು ದೊಡ್ಡ ಪಾತ್ರವನ್ನು ವಹಿಸುತ್ತಾರೆ. ವಿದ್ಯಾರ್ಥಿಯನ್ನು ಸರಿದಾರಿಗೆ ತರುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಆದಾಗ್ಯೂ, ಸರಿಯಾದ ದಾರಿಯಲ್ಲಿ ಇರಲು ತಮ್ಮ ಶಿಕ್ಷಕರ ಆದೇಶಗಳನ್ನು
ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮುಲ್ಕಿ ಇದರ ಅರ್ಧ ವಾರ್ಷಿಕ ಪ್ರಾದೇಶಿಕ ಮಹಾಸಭೆಯು ಮೂಡಬಿದ್ರೆ ತಾಲೂಕಿನ ಇರುವೈಲಿನ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಇರುವೈಲು ಸಂಘದ ಅಧ್ಯಕ್ಷರಾದ ಕುಮಾರ್ ಪೂಜಾರಿ,ಕರ್ನಾಟಕ ಉಚ್ಚ ನ್ಯಾಯಾಲಯದ ನಿರ್ದೇಶಿತ ಹಿರಿಯ ನ್ಯಾಯಾವಾದಿ ತಾರಾನಾಥ ಪೂಜಾರಿ, ಮಹಾಮಂಡಲದ ಕಾರ್ಯದರ್ಶಿ ಗಂಗಾಧರ ಪೂಜಾರಿ
ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಆಚರಿಸಲಿರುವ ದೀಪೋತ್ಸವ, ಕುಣಿತ ಭಜನೆ, ಪ್ರಯುಕ್ತ ಸೋಮವಾರ ಸಂಜೆ ಆರು ಗಂಟೆಗೆ ದೇವರ ಎದುರು ಪ್ರಾರ್ಥಿಸಿ ಶಂಖನಾದದಿಂದ ಆರಂಭವಾಗಲಿದೆ. ಈ ಪ್ರಯುಕ್ತ ಸಾದ್ಯವಾದಷ್ಟು ಮಂದಿ ಶಂಖದೊಂದಿಗೆ ಸಂಜೆ ಆರು ಗಂಟೆಗೆ ಉಪಸ್ಥಿತರಿದ್ದು ತಾವೂ ಶಂಖನಾದ ಸೇವೆ ನಡೆಸಿ ರಾಮನ ಸೇವೆಯನಲ್ಲಿ ಪಾಲ್ಗೊಳ್ಳಬೇಕಾಗಿ ಆಡಳಿಮಂಡಳಿಯವರು ವಿನಂತಿಕೊಂಡಿದ್ದಾರೆ.
ಮುಲ್ಕಿ ನಗರೋತ್ಧಾನ ಯೋಜನೆಯಡಿ ಸುಮಾರು 50 ಲಕ್ಷ ವೆಚ್ಚದ ವಿಶೇಷ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ನೂತನ ಕಛೇರಿ ಕಟ್ಟಡದ ಶಂಕುಸ್ದಾಪನೆ ಕಾರ್ಯಕ್ರಮವನ್ನು ರಾಜ್ಯ ಆರೋಗ್ಯ. ಸಚಿವ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನೆರವೇರಿಸಿದರು. ಈ ಸಂದರ್ಭ ಮಾತನಾಡಿ, ಸರಕಾರವು ರಾಜ್ಯದಲ್ಲಿ ಶಿಸ್ತು ಬದ್ದ ಹಾಗೂ ಪಾರದರ್ಶಕ ಆಡಳಿತದೊಂದಿಗೆ ಅಭಿವೃದ್ಧಿ ಕಾರ್ಯಗಳಿಗೆ ಅನೇಕ ಯೋಜನೆಗಳನ್ನು ತಯಾರಿಸಿದ್ದು ಅಭಿವೃದ್ಧಿ ನಿರಂತರವಾಗಿ ನಡೆಯಲಿದೆ ಎಂದರು. ಈ ಸಂದರ್ಭ
ಮೂಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ತುಳು ಕನ್ನಡ ಸಾಹಿತಿ ಡಾ ಗಣೇಶ ಅಮೀನ್ ಸಂಕಮಾರ್ ಆಯ್ಕೆಯಾಗಿದ್ದಾರೆ ಎಂದು ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಮಾಧ್ಯಮಕ್ಕೆ ತಿಳಿಸಿದ್ದಾರೆ. ಇದೇ ಡಿಸೆಂಬರ್ 27ರಂದು ಮೂಲ್ಕಿ ಕಾರ್ನಾಡು ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಾ.ಗಣೇಶ ಅಮೀನ್ ಸಂಕಮಾರ್ ಅವರು ತುಳು ಕನ್ನಡ ಜಾನಪದ ವಿದ್ವಾಂಸರಾಗಿ ಪ್ರಸಿದ್ಧರಾಗಿದ್ದಾರೆ. 33 ವರ್ಷಗಳ ಕಾಲ
ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಹೆದ್ದಾರಿ ಡಿವೈಡರ್ ಮೇಲೆ ಹತ್ತಿ ಪಾದಚಾರಿ ಮಾರ್ಗದ ಪಕ್ಕದಲ್ಲಿದ್ದ ವಾಹನಗಳಿಗೆ ಡಿಕ್ಕಿಯಾದ ಘಟನೆ ರಾ. ಹೆದ್ದಾರಿ 66 ರ ಮೂಲ್ಕಿ ಜಂಕ್ಷನ್ ಬಳಿ ನಡೆದಿದೆ.ಲಾರಿ ಚಾಲಕನ ನಿರ್ಲಕ್ಷ್ಯವೇ ಈ ಅವಘಡಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಘಟನೆಯ ಪರಿಣಾಮ ಸಂಚಾರ ಪೆÇಲೀಸ್ ಸಿಬ್ಬಂದಿ ಸೇರಿ ಮೂವರು ಗಾಯಗೊಂಡಿದ್ದಾರೆ. ಸ್ಕೂಟರ್ ಸವಾರ, ಬಪ್ಪನಾಡು ಬಳಿಯ ರೆಸಿಡೆನ್ಸಿಯೊಂದರ ವಾಚ್ ಮ್ಯಾನ್, ಉತ್ತರ ಕರ್ನಾಟಕ ಮೂಲದ ಗಂಭೀರ ಗಾಯಗೊಂಡು
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಧ್ಯಾತ್ಮಿಕ ಶಿಕ್ಷಣವನ್ನು ಪಡೆಯುವುದು ಅತೀ ಅಗತ್ಯ. ಇದರೊಂದಿಗೆ ಸಂಸ್ಕಾರ, ಆಚಾರ-ವಿಚಾರಗಳನ್ನು ದೇವಾಲಯದ ಸಂಬಂಧ ಪಟ್ಟ ವಿಭಾಗವು ನಡೆಸಿದರೆ ವಿದ್ಯಾರ್ಥಿಗಳ ಜೀವನಕ್ಕೆ ಅನುಕೂಲವಾಗುತ್ತದೆ ಇಂತಹ ಕಾರ್ಯಕ್ರಮವನ್ನು ಸಿಎಸ್ಐ ಜಿಲ್ಲಾ ಸಮಿತಿಯು,ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಅತಿಥೇಯದಲ್ಲಿ ನಡೆಸಿರುವುದು ಅಭಿನಂದನೀಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಮಿಥುನ್ ರೈ ಯವರು
ಪೇಜಾವರ ಸ್ವಾಮೀಜಿಗಳ ಪೂರ್ವಶ್ರಮದ ತೀರ್ಥ ರೂಪರಾದ ಶತಾಯುಷಿ ಪಕ್ಷಿಕೆರೆ ಸಮೀಪದ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ತಡರಾತ್ರಿ ನಿಧನ ರಾದರು.ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೃಷ್ಣ ಭಟ್ಟರು ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ಸಹಿತ 5 ಪುತ್ರರು ಹಾಗೂ 6 ಪುತ್ರಿಯರನ್ನು ಅಗಲಿದ್ದಾರೆ. ಪಕ್ಷಿಕೆರೆ ಸಮೀಪದ ಅಂಗಡಿಮಾರು ಬಳಿ ಹಿರಿಯ ಕೃಷಿಕರಾಗಿದ್ದ ಅವರು ಕಳೆದ ಹಲವಾರು ವರುಷಗಳಿಂದ ಪುರೋಹಿತ ವೃತ್ತಿ ಜತೆಗೆ ತುಳುನಾಡ ಪಂಚಾಗ ರಚಿಸಿದ್ದರು.ತಮ್ಮ ಮನೆಯಲ್ಲಿ
ಮೂಲ್ಕಿ: ರಾಷ್ಟ್ರೀಯ ಹೆದ್ದಾರಿ 66 ರ ಮಂಗಳೂರು ಹೊರ ವಲಯದ ಮೂಲ್ಕಿ “ವಿಜಯ ಸನ್ನಿಧಿ” ಜಂಕ್ಷನ್ ಬಳಿ ಬೈಕ್ಗೆ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಸಹ ಸವಾರೆ ಕೊನೆಯುಸಿರೆಳೆದು, ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರನ್ನ ವರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಬಾಕ್ರಬೈಲು ಕೊರುಂಗ್ ಮನೆ ನಿವಾಸಿ ಪ್ರಗತಿಪರ ಕೃಷಿಕರೂ, ಪಾತೂರಿನಲ್ಲಿ ಅಕ್ಕಿಯ ಮಿಲ್ ಮಾಲಕರಾಗಿರುವ, ಜಯರಾಮ ಶೆಟ್ಟಿ ಮತ್ತು ಸುಭಿತಾ ದಂಪತಿಯ
ಮುಲ್ಕಿ : ದಕ್ಷಿಣ ಕನ್ನಡ ಜಿಲ್ಲಾ ಪದ್ಮಶಾಲಿ ಮಹಾ ಸಭಾದ 77ನೇ ವಾರ್ಷಿಕ ಮಹಾಸಭೆ ಮತ್ತು ವಿದ್ಯಾ ವರ್ಧಕ ಸಂಘದ 33ನೇ ವಾರ್ಷಿಕ ಮಹಾಸಭೆ ಕಿನ್ನಿಗೋಳಿಯ ನೇಕಾರ ಸೌಧದಲ್ಲಿ ನಡೆಯಿತು. ರಾಮದಾಸ್ ಶೆಟ್ಟಿಗಾರ್ ಮತ್ತು ಲಕ್ಷ್ಮಣ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಪದ್ಮಶಾಲಿ ಸಾಮಾಜಿಕ ನಾಯಕತ್ವ ಪ್ರಶಸ್ತಿಯನ್ನು ವಿ.ನಾರಾಯಣ ಶೆಟ್ಟಿಗಾರ್ ವಕ್ವಾಡಿ ಯವರಿಗೆ ನೀಡಲಾಯಿತು. ಸಮಾಜದ ವಿವಿಧ ಕ್ಷೇತ್ರದ ಸಾಧಕರು,ಪ್ರತಿಭಾವಂತರನ್ನು ಮತ್ತು