ಬಿಎಪಿಎಸ್ಎ ಇಲ್ಲವೇ ಬಾಪ್ಸಾ ಅರ್ಥಾತ್ ಬಿರ್ಸ ಅಂಬೇಡ್ಕರ್ ಫುಲೆ ಸ್ಟುಡೆಂಟ್ಸ್ ಎಸೋಸಿಯೇಶನ್ ಎಂಬುದು ದಿಲ್ಲಿಯ ಜೆಎನ್ಯು- ಜವಾಹರಲಾಲ್ ನೆಹರು ವಿಶ್ವಿವಿದ್ಯಾ ನಿಲಯದ ಒಂದು ವಿದ್ಯಾರ್ಥಿ ಸಂಘಟನೆಯಾಗಿದೆ. ಇದರ ನಾಯಕಿ ಪ್ರಿಯಾಂಸಿಯವರು ಇತ್ತೀಚೆಗೆ ಜೆಎನ್ಯು ಕ್ಯಾಂಪಸ್ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಹೊಸ ನಕಲು ಹೆಸರುಗಳಲ್ಲಿ ಕಳೆದು ಹೋಗುವವರಿಗೆ ನಮಗಾಗಿ
ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,
ಮಂಗಳೂರು: ತೆಂಗಿನಿಂದ ಸಿಗುವ ಸೀಯಾಳದಿಂದ ಹಿಡಿದು ಗೆರಟೆ, ಚಿಪ್ಪಿನ ವರೆಗೂ ಅನೇಕ ಬಗೆಯ ಕಚ್ಚಾ ವಸ್ತುಗಳನ್ನು ವಿವಿಧ ಮಾದರಿಯ ಮೌಲ್ಯವರ್ಧಿತ ಉತ್ಪನ್ನಗಳನ್ನಾಗಿಸಿ ಹೊಸ ಮಾರುಕಟ್ಟೆ ಸಾಧ್ಯತೆಗಳನ್ನು ತೆರೆದಿಟ್ಟಿರುವ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ. ಸಂಸ್ಥೆಯ ಬಹುನಿರೀಕ್ಷಿತ ಕಲ್ಪವೃಕ್ಷ ಯೋಜನೆಯ ಉತ್ಪಾದನಾ ಘಟಕಗಳ ನೀಲನಕಾಶೆ ಹಾಗೂ ಕಲ್ಪವೃಕ್ಷ ಷೇರು ಪ್ರಮಾಣ ಪತ್ರವನ್ನು ತುಮಕೂರಿನ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮೂಡುಬಿದಿರೆ : ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 682 ವಿದ್ಯಾರ್ಥಿಗಳು 95% ಶೇಕಡಾಕ್ಕಿಂತ ಅಧಿಕ ಅಂಕವನ್ನು ಪಡೆದು ಹೊಸ ದಾಖಲೆ ನಿರ್ಮಿಸಿದ್ದಲ್ಲದೆ ರಾಜ್ಯದ ಟಾಪ್ ಟೆನ್ ರ್ಯಾಂಕ್ನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ ಒಟ್ಟು 45 ವಿದ್ಯಾರ್ಥಿಗಳು ಸ್ಥಾನವನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸಾರ್ವತ್ರಿಕ ದಾಖಲೆಯನ್ನು ನಿರ್ಮಿಸಿದೆ.ಪಿಯುಸಿಯಲ್ಲಿ ಫಲಿತಾಂಶದಲ್ಲಿ
ಸುಳ್ಯ: ಪೇರಡ್ಕ ಮೋಹಿಯದ್ದಿನ್ ಜುಮಾ ಮಸ್ಜಿದ್ ನಲ್ಲಿ ನಡೆದ ಈದ್ ಪ್ರಾರ್ಥನೆಯಲ್ಲಿ ಖತೀಬ್ ಶಾಫಿ ಧಾರಿಮಿ ರಂಜಾನ್ ಪಾವಿತ್ರತೆ ಬಗ್ಗೆ ತಿಳಿ ಹೇಳಿ ದಾನ,ಧರ್ಮ,ಕುಟುಂಬ ಸಂಬಂಧ, ಸಹೋದರತೆ ಮಹತ್ವ ಬಗ್ಗೆ ತಿಳಿಸಿ ಅದಕ್ಕೆ ಹೆಚ್ಚು ಒತ್ತು ಕೊಡಬೇಕೆಂದು ಹೇಳಿ ಈದ್ ಹಬ್ಬದ ಶುಭಾಶಯ ತಿಳಿಸಿದರು. ಜಮಾತ್ ಅಧ್ಯಕ್ಷರಾದ ಟಿ ಎಂ ಶಾಹಿದ್ ತೆಕ್ಕಿಲ್ ಉಪಾಧ್ಯಕ್ಷರು ಟಿ ಬಿ ಹನೀಫ್, ಕಾರ್ಯದರ್ಶಿ ಪಿ ಕೆ ಉಮ್ಮರ್ ಗೂನಡ್ಕ, ಖಜಾಂಜಿ ಟಿ ಎ ಮೊಹಮ್ಮದ್ ಕುಂಞಿ ತೆಕ್ಕಿಲ್,ಎಂ ಆರ್ ಡಿ
ಮಂಗಳೂರು: ವಿಶ್ವ ನಾಯಕ, ದೇಶದ ಹೆಮ್ಮೆಯ ಪ್ರಧಾನಿ ಶ್ರೀ ನರೇಂದ್ರ ಮೋದೀಯವರು ಲೋಕಸಭಾ ಚುನಾವಣಾ ಪ್ರಚಾರದ ಭಾಗವಾಗಿ ಇದೇ ಏಪ್ರಿಲ್ 14 ರಂದು ಮಂಗಳೂರಿಗೆ ಆಗಮಿಸಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಇಡೀ ದೇಶವೇ ಈಗ ಲೋಕಸಭಾ ಚುನಾವಣೆಗೆ ಸಜ್ಜಾಗಿದ್ದು ನಮ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಪಕ್ಷ ಚಟುವಟಿಕೆಗಳು ಭರದಿಂದ
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಎ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ. ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ
ಬೆಂಗಳೂರಿನಲ್ಲಿ ಕೆಲವು ಕಾಲೆರಾ ಪ್ರಕರಣಗಳು ವರದಿಯಾಗಿದ್ದು ರಾಜ್ಯವು ಕೊರೋನಾದ ಬಳಿಕ ಕಾಲೆರಾ ಕಟಕಟೆಯೊಳಕ್ಕೆ ಬಿತ್ತೇ ಎಂಬುದು ಇನ್ನೂ ಸ್ಪಷ್ಟಗೊಂಡಿಲ್ಲ. ಹಾಗೆ ನೋಡಿದರೆ ಕಾಲರಾವು ವಯಸ್ಸಿನಲ್ಲಿ ಕೊರೋನಾಕ್ಕಿಂತ ತುಂಬ ಹಿರಿಯ. ಬೆಂಗಳೂರು ವೈದ್ಯಕೀಯ ಕಾಲೇಜಿನ 47 ವಿದ್ಯಾರ್ಥಿಗಳನ್ನು ಒಟ್ಟಿಗೆ ಕಾಡಿದ್ದರಿಂದ ಕಾಲರಾದ ಕಿತಾಪತಿ ಪಕ್ಕಾ ಬೆಳಕಿಗೆ ಬಂದಿದೆ. ಮಂಗಳೂರನ್ನೂ ಸಹ ಕಲಕಿದೆ.ಕಾಲರಾ ಎನ್ನುವುದು ಒಂದು ತೀವ್ರ ಕರುಳು ಕಾಯಿಲೆಯಾಗಿದೆ. ಇದರಲ್ಲಿ ವಾಂತಿ