Home Posts tagged #v4stream (Page 7)

ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿ, ನೇಣು ಬಿಗಿದು ಯುವಕ ಆತ್ಮಹತ್ಯೆ ‌

ಕಡಬ : ವಾಟ್ಸ್ಯಾಪ್ ಸ್ಟೇಟಸ್ ಹಾಕಿದ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಇಚಿಲಂಪಾಡಿಲ್ಲಿ ಕಳೆದ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ರೆನೀಶ್ (27) ವರ್ಷ ಎಂದು ಗುರುತಿಸಲಾಗಿದೆ. ಮೃತ ರೆನೀಶ್ ತಂದೆ ತಾಯಿ ಮರಣ ಹೊಂದಿದ್ದು, ಈತನ ತಮ್ಮ ಕಳೆದ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಅಂಬುಲೆನ್ಸ್ : ರೋಗಿಗಳು ಸಣ್ಣಪುಟ್ಟ ಗಾಯಗಳಿಂದ ಪಾರು

ಕಾರ್ಕಳ ಬಂಗ್ಲೆ ಗುಡ್ಡೆ ಬಳಿ, ಖಾಸಗಿ ಆಸ್ಪತ್ರೆಯ ರೋಗಿಗಳನ್ನು ತಮ್ಮ ಮನೆಗೆ ಬಿಡಲು ಕಾರ್ಕಳದಿಂದ ಕಡ್ತಲಕ್ಕೆ ಹೋಗುವಾಗ ಬಂಗ್ಲೆ ಗುಡ್ಡೆ ಬಳಿ ಅತಿ ವೇಗದಿಂದ ಬರುತ್ತಿದ್ದ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ಆಂಬುಲೆನ್ಸ್ ಮಾರ್ಗದಲ್ಲಿ ಪಲ್ಟಿ ಯಾದ ಘಟನೆ ನಡೆದಿದೆ. ಈ ವೇಳೆಯಲ್ಲಿ ಅಂಬುಲೆನ್ಸಿನ ಒಳಗಿದ್ದ ರೋಗಿಗಳಿಗೆ ಸಣ್ಣಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದ ಮಣಿಪಾಲ ರೋಟರಿ ಆಸ್ಪತ್ರೆಗೆ ಸೇರಿದ ಅಂಬುಲೆನ್ಸ್ ಎದುರಿನಿಂದ ವೇಗವಾಗಿ

ಚುನಾವಣೆ ಅಕ್ರಮ ತಡೆಗೆ 17 ಕಡೆ ಚೆಕ್ ಪೋಸ್ಟ್, ಈವರೆಗೆ 42 ಲಕ್ಷ ರೂ.ವಶ ಎಸ್ಪಿ ಅಕ್ಷಯ್ ಎಂ. ಎಚ್ ಮಾಹಿತಿ

ಉಡುಪಿ:ಚುನಾವಣಾ ಅಕ್ರಮಗಳು ನಡೆಯದಂತೆ ಹಾಗೂ ವಾಹನಗಳ ವಿಶೇಷ ತಪಾಸಣೆಗಾಗಿ ಜಿಲ್ಲೆಯ 17 ಕಡೆಗಳಲ್ಲಿ ಚೆಕ್‍ಪೆÇೀಸ್ಟ್‍ಗಳನ್ನು ತೆರೆಯಲಾಗಿದೆ. ಇದು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ. ಎಚ್ ತಿಳಿಸಿದ್ದಾರೆ. ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯೊಳಗೆ ಸಂಚರಿಸುವ ಹಾಗೂ ಹೊರಜಿಲ್ಲೆಗಳ ಸಂಚಾರಗಳ ಮೇಲೆ ನಿಗಾ ಇರಿಸಲು ಈ

ಪರೀಕ್ಷಾ ಮುನ್ನಾ ದಿನವೇ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನಾಪತ್ತೆ. ನದಿಯಲ್ಲಿ ಶವ ಪತ್ತೆ

ಕಡಬ ಖಾಸಗಿ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಕೋಡಿಂಬಾಳ ಗುಂಡಿಮಜಲು ನಿವಾಸಿ ಪರಿಕ್ಷಾ ಮುನ್ನಾ ದಿನವೇ ನಾಪತ್ತೆಯಾಗಿದ್ದು, ಗುರುವಾರ ಕೋಡಿಂಬಾಳ ಸಮೀಪದ ಕುಮಾರಾಧಾರ ನದಿಯ ನಾಕೂರ ಗಯದಲ್ಲಿ ಬಾಲಕನ ಶವ ಪತ್ತೆಯಾಗಿದೆ.ಕೋಡಿಂಬಾಳ ಗ್ರಾಮದ ಮಡ್ಯಡ್ಕ ನಿವಾಸಿ ಮಂಜುನಾಥ ಶೆಟ್ಟಿ ಅವರ ಪತ್ರ ಅದ್ವೆತ್ ಶೆಟ್ಟಿ ಮೃತಪಟ್ಟ ಬಾಲಕ, ಈತ ಕಡಬ ಖಾಸಗಿ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯಾಗಿದ್ದು, ಕಲಿಕೆಯಲ್ಲಿ ಸ್ವಲ್ಪ ಹಿಂದೆ ಇದ್ದ, ಇದೇ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ: ಮೇ 13ರಂದು ಫಲಿತಾಂಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ. 224 ವಿಧಾನಸಭಾ ಕ್ಷೇತ್ರಗಳಿಗೆ ಮೇ 10 ರಂದು ಒಂದೇ ಹಂತದ ಮತದಾನ ಹಾಗೂ ಮೇ 13ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಾಹಿತಿ ನೀಡಿದರು. ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ 10

ನಗರದ ಬೊಂದೆಲ್ ನಲ್ಲಿ ಸರ್ವಜ್ಞ ವೃತ್ತ ನಿರ್ಮಾಣ – ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಮುತುವರ್ಜಿಯಿಂದ ಬೊಂದೆಲ್ ಬಳಿ ನಿರ್ಮಾಣವಾದ ಸರ್ವಜ್ಞ ವೃತ್ತವನ್ನು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಮುಡಾ ವತಿಯಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಆಗಿದೆ. ರವಿಶಂಕರ್ ಮಿಜಾರ್ ನೇತೃತ್ವದಲ್ಲಿ ಕೆಲಸ ಆಗಿದೆ. ಕೆರೆ ಅಭಿವೃದ್ಧಿಗೆ ಅನುದಾನ ಕೊಟ್ಟು ಸಹಕರಿಸಿದ್ದಾರೆ ಎಂದು ಶ್ಲಾಘಿಸಿದರು. ಪಾರ್ಕ್

ಚುನಾವಣೆ ಹಿನ್ನೆಲೆ; ರಾ.ಹೆದ್ದಾರಿಗಳಲ್ಲಿ ಸಾಗುತ್ತಿರುವ ವಾಹನಗಳ ತಪಾಸಣೆ

ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು ಪಿಎಸ್‍ಐ ನಿರಂಜನ್ ಗೌಡ ಗಂಗೊಳ್ಳಿ ಪಿ ಎಸ ಐ ವಿನಯ್ ,ಕೊಲ್ಲೂರ್ ಪಿಎಸ್‍ಐ ಈರಣ್ಣ ಸಿರಗುಪ್ಪಿ

ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕನಿಗೆ ಢಿಕ್ಕಿ, ಸ್ಥಳದಲ್ಲೇ ಮೃತ್ಯು

ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಸೋಮವಾರ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಹಿಮ್ಮುಖವಾಗಿ ಚಲಿಸುವಾಗ

“ಭಾರತದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳೇ..!” : ಶಾಸಕ ಡಾ.ಭರತ್ ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು, “ಶಾಸಕ ಭರತ್ ಶೆಟ್ಟಿ ಅವರ ಅವಧಿಯಲ್ಲಿ ಕುಂಜತ್ತಬೈಲ್ ದಕ್ಷಿಣ ವಾರ್ಡ್ ಸಂಪೂರ್ಣ

ನನಗೆ ಗೆಲುವಿನೊಂದಿಗೆ ವಿದಾಯ ಹೇಳಿ ಸೋಲಿನೊಂದಿಗೆ ಬೇಡ : ವಿನಯಕುಮಾರ್ ಸೊರಕೆ

ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ. ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ