ಯಕ್ಷಗಾನ ಇತಿಹಾಸದಲ್ಲೇ ಪರಿಪೂರ್ಣ ಮೇಳವೊಂದು ಪ್ರಪ್ರಥಮ ಬಾರಿಗೆ ವಿದೇಶಕ್ಕೆ ತೆರಳಿ ಯಕ್ಷಗಾನ ಪ್ರದರ್ಶನ ನೀಡಲು ಸಿದ್ಧವಾಗಿದೆ.ತೆಂಕುತಿಟ್ಟಿನ ಪ್ರಸಿದ್ಧ ಶ್ರೀ ಗೆಜ್ಜೆಗಿರಿ ಮೇಳವು ಮಸ್ಕತ್ ಮತ್ತು ದುಬೈ ಯಲ್ಲಿ ಆದಿ ಮಾಯೆ ಪರಾಶಕ್ತಿ ಧೂಮಾವತಿ ಮತ್ತು ಮಾತೆ ದೇಯಿ ಬೈದೆತಿ ಅಮ್ಮನವರ ಬೆಳಕಿನ ಯಕ್ಷಗಾನ ಗೆಜ್ಜೆಸೇವೆ ನೀಡಲಿದ್ದು ಪೂರ್ಣ ಪ್ರಮಾಣದ ಮೇಳವೊಂದು ವಿದೇಶಿ
ಮೂಡುಬಿದಿರೆ: ಯಕ್ಷಗಾನ ಲೋಕದ ಮೇರು ಭಾಗವತ ದಿ. ಬಲಿಪ ನಾರಾಯಣ ಭಾಗವತ ಅವರ ಮೊದಲ ವರ್ಷದ ಸಂಸ್ಮರಣೆಯ ಅಂಗವಾಗಿ ಹಿರಿಯ ಕಲಾವಿದ ಗೋವಿಂದ ಭಟ್ ಅವರಿಗೆ ಬಲಿಪ ಭಾಗವತ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಾರೂರಿನ ನೂಯಿಯಲ್ಲಿರುವ ಬಲಿಪರ ನಿವಾಸದ ಆವರಣದಲ್ಲಿ ಜರಗಿದ ಕಟೀಲು ಮೇಳದ ಹರಿಕೆ ಬಯಲಾಟದ ರಂಗಸ್ಥಳದಲ್ಲಿ ಮಾನಪತ್ರ, ನಗದು ಗೌರವದೊಂದಿಗೆ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಗೋವಿಂದ ಭಟ್ ಅವರು ಪ್ರಶಸ್ತಿ ಸ್ವೀಕರಿಸಿ ಮಾತನಾಡಿ ಬಲಿಪರು ಎಂದರೆ ಯಕ್ಷಗಾನ ಯಕ್ಷಗಾನ
ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಜ್ಷಗಾನದ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ
ನೆಲ್ಯಾಡಿ: ಕೀರ್ತಿಶೇಷ ಶಾಂತಿಗೋಡು ಗೋಪಾಲಕೃಷ್ಣ ಶಗ್ರಿತ್ತಾಯ-ಜಾನಕಿ ಅಮ್ಮ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಸಹಯೋಗದಲ್ಲಿ ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನಾ ಸಮಾರಂಭ, ಗುರುವಂದನೆ, ಮಕ್ಕಳ ರಂಗಪ್ರವೇಶ ಕಾರ್ಯಕ್ರಮವು ದಂದು ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರಂಗಮಂದಿರದಲ್ಲಿ ನಡೆಯಿತು.ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್
ಕರಾವಳಿ ತೀರದ ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ವಿದ್ವಾಂಸ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು. ಯಕ್ಷಗಾನದಲ್ಲಿ ಪ್ರಸಂಗ ಕರ್ತೃವಿಗೆ ಸ್ವಾತಂತ್ರ್ಯ ಕಡಿಮೆಯೆ. ಆದರೂ ಕಲೆಯ ಮೂಲಕ ವೈಚಾರಿಕತೆಯನ್ನೂ ಪ್ರತಿಪಾದಿಸಿ ಯಕ್ಷಗಾನ
ಕುಂದಾಪುರ ಸಮೀಪದ ಹೇರಿಕುದ್ರು ಎಂಬಲ್ಲಿ ಮಹಾಗಣಪತಿ ಮಾನಸ ಮಂದಿರದಲ್ಲಿ ರಾತ್ರಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅನುಮತಿಸಿದ ಸಮಯ ಮೀರಿ ಮೈಕ್ ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಮೇಲೆ ಆಗಮಿಸಿದ ಪೆÇಲೀಸರು ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ಘಟನೆ ವ್ಯಾಪಕ ಟೀಕೆಗೆ, ಯಕ್ಷಗಾನ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಕ್ಷಗಾನ ನಿಲ್ಲಿಸಬಾರದಿತ್ತು, ಖಾಸಗಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆಗೆ ನಿಯಂತ್ರಣ
ಬೆಳ್ತಂಗಡಿ ತಾಲೂಕಿನ ಶಿಶಿಲ ಶ್ರೀ ವನ ದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಕಲಾವಿದರಿಂದ ಮನೆ ಮನೆ ಯಕ್ಷಗಾನ ಕಾರ್ಯಕ್ರಮ ನಡೆಯಿತು. ಮೇಳದ ಭಾಗವತರಾದ ಮೋಹನ್ ಶಿಶಿಲ ಮಾತನಾಡಿ, ಯಕ್ಷಗಾನ ಕಲೆ ಹಲವಾರು ವರ್ಗಗಳಿಂದ ಇದೆ ಆದರೆ ಜನರು ಈಗೀಗ ಟಿವಿ ಮೊಬೈಲ್ ಗಳಲ್ಲಿ ಬೇರೆ ಬೇರೆ ಕಾರ್ಯಕ್ರಮ ನೋಡುತ್ತಾರೆ ಆದ್ದರಿಂದ ಹಳ್ಳಿ ಜನರಿಗೆ ಯಕ್ಷಗಾನದ ಅರಿವು ಮೂಡಿಸುವ ಕಾರ್ಯಕ್ರಮ ನಾವು ಮಾಡುತ್ತಿದ್ದೇವೆ,ಇದರಿಂದ ಬಂದ ಉಳಿಕೆ ಹಣವನ್ನು ಅಂಗವಿಕಲರಿಗೆ ಹಾಗೂ
ಬ್ರಹ್ಮಾವರ : ಬ್ರಹ್ಮಾವರ ಬಳಿಯ ಚೇರ್ಕಾಡಿಯಲ್ಲಿ ಬಡಗುತಿಟ್ಟಿನ ಯಕ್ಷಗಾನ ಸವ್ಯಸಾಚಿ ಗುರು ಮಂಜುನಾಥ್ ಪ್ರಭು 32 ವರ್ಷದ ಹಿಂದೆ ಸ್ಥಾಪಿಸಿದ ಕಲಾಶ್ರೀ ಬಾಲಕಿಯರ ಯಕ್ಷಗಾನ ಮೇಳದವರಿಂದ ಶ್ರೀ ಕೃಷ್ಣ ಪಾರಿಜಾತ ಪ್ರಸಂಗ ನೀಲಾವರ ಶ್ರೀ ಮಹಿಷಮರ್ಧಿನೀ ದೇವಸ್ಥಾನದಲ್ಲಿ ಜರುಗಿತು. ಎಂಜಿನಿಯರಿಂಗ್ ಸೇರಿದಂತೆ ನಾನಾ ಉನ್ನತ ಶಿಕ್ಷಣ ಪಡೆಯುವ 7 ಯುವತಿಯರಿಂದ ಪ್ರದರ್ಶನ ಕಂಡ ಶ್ರೀ ಕೃಷ್ಣ ಪಾರಿಜಾತ ಪ್ರಸಂಗ ಯಕ್ಷಗಾನ ಈ ತಂಡದ 1334 ನೇ ಪ್ರದರ್ಶನವಾಗಿದೆ . ರಜಾ ದಿನದಲ್ಲಿ
ಅತ್ಯಂತ ವಿನೀತ, ಮೃದು ಭಾಷಿ,ಸಾತ್ವಿಕ ಮನೋಭಾವದ ಸಹೃದಯಿ ವಿದ್ವಾಂಸ ಹರಿದಾಸ ಅಂಬಾತನಯ ಮುದ್ರಾಡಿ (88) ಇಂದು ಮುಂಜಾನೆ ನಮ್ಮನ್ನಗಲಿದ್ದಾರೆ. ಶಿಕ್ಷಕ, ಹರಿದಾಸ,ತಾಳಮದ್ದಲೆ ಅರ್ಥಧಾರಿ, ವೇಷಧಾರಿ, ಪ್ರವಚನಕಾರ, ಸಾಹಿತಿ ಹೀಗೆ ಎಲ್ಲಾ ವಿಭಾಗದಲ್ಲಿ ವೈಶಿಷ್ಟ ಪೂರ್ಣವಾದ ಸಾಧನೆಯನ್ನು ಮಾಡಿದ,ಸಮಾಜದ ಎಲ್ಲ ಮಂದಿಗೆ ಮನೆಯ ಸದಸ್ಯನಂತೆ ಇದ್ದು ಮಾರ್ಗದರ್ಶನ ಮಾಡಿ ಸಾರ್ಥಕವಾಗಿ ಬದುಕನ್ನು ಪೂರೈಸಿದ ಅಂಬಾತನಯರದ್ದು ಆದರ್ಶ ಜೀವನ. ಕಳೆದ ವಾರ ಉಡುಪಿಯಲ್ಲಿ ಜರಗಿದ ಪ್ರಥಮ
ಮಂಗಳೂರು: ‘ಯಕ್ಷಗಾನವನ್ನು ನಿರಂತರವಾಗಿ ಉಳಿಸಿ, ಬೆಳೆಸಲು ಕಲಾಪೋಷಕರ ಪಾತ್ರ ಹಿರಿದು, ಬೊಂಡಾಲದಲ್ಲಿ ದೀರ್ಘಕಾಲ ಯಕ್ಷಗಾನವನ್ನು ಸೇವಾರೂಪದಲ್ಲಿ ಆಡಿಸುವುದಲ್ಲದೆ, ಕಲಾವಿದರನ್ನು ಸನ್ಮಾನಿಸುವ ಮೂಲಕ ಕಲಾಮಾತೆಯ ಸೇವೆಯನ್ನೂ ನಡೆಸಿಕೊಂಡು ಬರುತ್ತಿರುವುದು ಸ್ತುತ್ಯರ್ಹ’ ಎಂದು ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ಅನಂತಪದ್ಮನಾಭ ಆಸ್ರಣ್ಣ ಹೇಳಿದ್ದಾರೆ. ಹಳೆ ತಲೆಮಾರಿನ ಅರ್ಥಧಾರಿ, ಶಿಕ್ಷಕ ಮತ್ತು ಶಂಭೂರು ಗ್ರಾಮದ ಪಟೇಲ ದಿ.ಬೊಂಡಾಲ ಜನಾರ್ಧನ