ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಅಕ್ರಮಗಳನ್ನು ತಡೆಯಲು ಕಟ್ಟೆಚ್ಚರ ವಹಿಸಲಾಗಿದ್ದು, ಕಳೆದ ಒಂದು ವಾರದಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಒಟ್ಟು 8.81ಲಕ್ಷ ರೂ. ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 3.50ಲಕ್ಷ ರೂ., ಕಾಪು
ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ ವೈ ರಮೇಶ್ ಭಟು, ಈ ಹಿಂದೆ ಉಡುಪಿಯ ರೇಷ್ಮೆ ಇಲಾಖೆಯಲ್ಲಿ ಸುಮಾರು 12 ವರ್ಷಗಳ ಕಾಲ ದಿನಗೂಲಿ
ದೇವಳದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರ ಇಕ್ಕೆಲಲ್ಲಿ ಬೃಹತ್ತಾಗಿ ಕಾಣಿಸಿಕೊಂಡ ಬೆಂಕಿ ಕೆಲ ಹೊತ್ತು ಆತಂಕ ಸೃಷ್ಟಿಸಿದೆ. ಜಿಯೋ ನೆಟ್ವರ್ಕ್ ಕಂಪನಿಯು ಬಳಕೆ ಮಾಡಿ ಹೆಚ್ಚುವರಿಯಾದ ಕೇಬಲ್ ಬಂಡಲನ್ನು ರಸ್ತೆಯಂಚಿನಲ್ಲಿ ಉಳಿಸಿ ಹೋಗಿದ್ದು, ಆ ಕೇಬಲ್ ರಾಶಿಗೆ ಬೆಂಕಿ ತಗುಲಿ ಪರಿಸವೆಲ್ಲಾ ಪಸರಿಸಿದೆ. ತೀರ ಸಮೀಪದಲ್ಲೇ ವಾಸದ ಮನೆಗಳಿದ್ದು ಆತಂಕ ಸೃಷ್ಟಿಯಾಗಿದ್ದು, ಪಡುಬಿದ್ರಿ ಪೊಲೀಸರು, ಗ್ರಾ.ಪಂ. ಪ್ರತಿನಿಧಿಗಳು, ಹೆಜಮಾಡಿ ಟೋಲ್ ಸಿಬ್ಬಂದಿಗಳು ಹಾಗೂ
ಕರ್ನಾಟಕದ ಕರಾವಳಿ ಮತ್ತು ಮಲೆನಾಡು, ತೆಂಕಣ ಒಳನಾಡಿನಲ್ಲಿ ಮಾರ್ಚ್ 21ರಿಂದ ಮೂರು ದಿನಗಳ ಕಾಲ ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿಯಲ್ಲಿ ಮೋಡ ಮುಚ್ಚಿದ ವಾತಾವರಣ ಮುಂದುವರಿಯಲಿದೆ. ಗಾಳಿ ಕೂಡ ಬಲವಾಗಿ ಬೀಸಲಿದೆ ಎನ್ನಲಾಗಿದೆ. ಕರ್ನಾಟಕದ ಬಡಗಣ ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಕೊಪ್ಪಳದಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅದು ಆ ಸುತ್ತ ಕೆಲ ದಿನಗಳ ಕಾಲ ಮುಂದುವರಿಯುತ್ತದೆ ಎಂದೂ ತಿಳಿಸಲಾಗಿದೆ.
ಮಾಜೀ ಮುಖ್ಯಮಂತ್ರಿ ಸದಾನಂದ ಗೌಡರ ಹೆಸರು ಈಗ ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೂ ಕೇಳಿ ಬರುತ್ತಿದೆ. ಅವರು ಹಿಂದೆ ಅಲ್ಲಿ ಸಂಸದರಾಗಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಡಿ. ಕೆ. ಸದಾನಂದ ಗೌಡರು ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆದರೆ ಅವರಿಗೆ ದಿಢೀರನೆ ಮುಖ್ಯಮಂತ್ರಿ ಆಗುವ ಅವಕಾಶ ಬಂದುದರಿಂದ ರಾಜೀನಾಮೆ ನೀಡಿದ್ದರು. ಉಪ ಚುನಾವಣೆಯಲ್ಲಿ ಜಯಪ್ರಕಾಶ್ ಹೆಗ್ಡೆ ಗೆದ್ದಿದ್ದರು. ಈಗ ಜಯಪ್ರಕಾಶ್ ಹೆಗ್ಡೆ ಅವರ ಜೊತೆಗೆ ಸದಾನಂದ
ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ ಉತ್ಪಾದಕ ಘಟಕವು ಸುಮಾರು ಆರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮೂರು ವರ್ಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ ಅದರಿಂದ ತಯಾರಿಸಲಾಗುವ ವಿವಿಧ ಖಾದ್ಯಗಳು ಮತ್ತು ಆರೋಗ್ಯಕ್ಕೆ ಆಗುವ ಉಪಯೋಗಗಳ ಮೂಲಕ, ಸ್ಥಳೀಯ ಜನರಿಗೆ ಉದ್ಯೋಗ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ
ಉಡುಪಿಯ ಮಹಾತ್ಮ ಗಾಂಧಿ ಮೈದಾನದಲ್ಲಿ ಗ್ಯಾರೆಂಟಿ ಸಮಾವೇಶದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಗ್ಯಾರಂಟಿ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರೆಂಟಿ ಯೋಜನೆ ಬಗ್ಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ನೇರವಾಗಿ ಫಲಾನುಭವಿಗಳಿಗೆ ಪ್ರಯೋಜನ ತಿಳಿಸಲು ಈ ಸಮಾವೇಶವನ್ನು ಹಮ್ಮಿಕೊಂಡಿದ್ದೇವೆ. ಜಿಲ್ಲಾ ಮಟ್ಟದಲ್ಲಿ ಅನುಷ್ಟಾನ ಸಮಿತಿ ರಚನೆ ಮಾಡಿದ್ದೇವೆ. ಎಲ್ಲಾ ಅರ್ಹರಿಗೆ ಗ್ಯಾರೆಂಟಿ ತಲುಪಬೇಕು.
ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ
ಉಡುಪಿ: ಕಾಪು ಹೊಸ ಮಾರಿಗುಡಿಯ ಜೀರ್ಣೋದ್ಧಾರ ಕಾರ್ಯವು ಭರದಿಂದ ಸಾಗುತ್ತಿದ್ದು,ಹೊಸ ಮಾರಿಗುಡಿಗೆ ಮಂಗಳವಾರದಂದು ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷರಾದ ಡಾ. ರಾಜ್ ಶೇಖರ್ ಕೋಟ್ಯಾನ್ ರವರು ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಕ್ಷೇತ್ರದ ಅಭಿವೃದ್ಧಿ ಕಾರ್ಯಕ್ಕೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಮ್ಮ ಸಮಾಜಕ್ಕೆ ಮೀಸಲಿಟ್ಟ ಒಂದು ಕೋಟಿ ವೆಚ್ಚದ ಬೃಹತ್ ಶಿಲಾ ಸ್ತಂಭದ ವೆಚ್ಚವನ್ನು ತಮ್ಮ ಸಮಾಜ ಬಾಂಧವರಿಂದಲೇ ಭರಿಸಿ ಶೀಘ್ರದಲ್ಲೇ ನೀಡುವುದಾಗಿ