ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ
ಉಳ್ಳಾಲ: ಮಂಗಳೂರಿನ ಪಡೀಲ್ ಸಮೀಪ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಒಡೆದ ಪರಿಣಾಮ ದುರಸ್ತಿ ಕಾರ್ಯಕ್ಕಾಗಿ ಉಳ್ಳಾಲ ನಗರಕ್ಕೆ ಒಂದು ವಾರದ ಕಾಲ ನೀರು ಸರಬರಾಜು ಇರುವುದಿಲ್ಲ ಎಂದು ಉಳ್ಳಾಲ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ.ಫೆ. 6 ರಂದು ಪಂಪ್ವೆಲ್ ಮಹಾವೀರ ವೃತ್ತ ಸಮೀಪದ ಪಡೀಲ್ ರೋಹನ್ ಸ್ಕ್ವೇರ್ ಕಟ್ಟಡದ ಮುಂಭಾಗದಲ್ಲಿ ತುಂಬೆ ಅಣೆಕಟ್ಟಿನಿಂದ ಉಳ್ಳಾಲಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ ಲೈನ್ ಹಾನಿಯಾಗಿದೆ. ಈ ನಿಟ್ಟಿನಲ್ಲಿ
ಬೈಂದೂರು ತಾಲೂಕುಗುಡ್ಡೆ ಹೋಟೆಲ್ ಅಯ್ಯಪ್ಪ ಸ್ವಾಮಿ ಮಂದಿರದ ಗುರು ಸ್ವಾಮಿ ಕಾಮೇಶ್ ಹಾಗೂ ಭಕ್ತವೃಂದದವರು ಹೆಮ್ಮುಂಜೆಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸಿಹಿ ತಿಂಡಿ ಹಂಚಿ ರೂಪಾಯಿ ಹತ್ತು ಸಾವಿರದ ನೂರನ್ನು ಶಾಲೆಯ ಕಂಪ್ಯೂಟರ್ ಕ್ಯಾಬಿನ್ ರಚನೆಗೆ ದೇಣಿಗೆಯಾಗಿ ನೀಡಿದರು. ಶಾಲೆಯ ಬಗ್ಗೆ ಇರುವ ಕಾಳಜಿ, ಅಭಿಮಾನ ಹಾಗೂ ಪ್ರೋತ್ಸಾಹವನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ,ಎಸ್.ಎಮ್. ಡಿ .ಸಿ.ಯ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಊರಿನ ಜನತೆ ತಮ್ಮ
ಉಳ್ಳಾಲ: ಮೇಲ್ತೆನೆ’ ಸಂಘಟನೆ ಪ್ರಕಟಿಸಿದ ಕವಿ ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆ ಕಾರ್ಯಕ್ರಮ ತೊಕ್ಕೊಟ್ಟು ಜಂಕ್ಷನ್ನಲ್ಲಿರುವ ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ನಡೆಯಿತು. ಅಬುಧಾಬಿಯ ಬ್ಯಾರೀಸ್ ವೆಲ್ಫೇರ್ ಫೋರಂನ ಸ್ಥಾಪಕಾಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ಬಶೀರ್ ಅಹ್ಮದ್ ಕಿನ್ಯಾ ರಚಿಸಿರುವ ‘ಕವಿಯಲ್ಲ-ನಾನೊಬ್ಬ ಹಾಡುಗಾರ’ ಕವನ ಸಂಕಲನ ಬಿಡುಗಡೆಗೊಸಿದರು. ಬಳಿಕ ಮಾತನಾಡಿದ ಅವರು, ಪ್ರಸಕ್ತ ದಿನಗಳಲ್ಲಿ ಅಧಿಕ
ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು. ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು ಖಾಸಗಿ ಏಜೆನ್ಸಿ ಮೂಲಕ ಕೆಲಸಕ್ಕೆ ಇಟ್ಟುಕೊಂಡಿದ್ದು, ತಿಂಗಳಿಗೆ 20,000 ರೂ ಏಜೆನ್ಸಿಗೆ ಪಾವತಿಸುತ್ತಿದ್ದರು. ಫೆ.1 ರಂದು ಸಂಜೆ 3 ಕ್ಕೆ ಮನೆಯಿಂದ ಹೊರಹೋದಾಕೆ ನಂತರ
ಉಳ್ಳಾಲ: ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ನ ಮೀನುಗಾರರು ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರಿಗೆ ಸೇರಿದ`ನವಾಮಿ –
ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ
ಉಳ್ಳಾಲ : ಪಿಕಪ್ ವಾಹನವೊಂದು ಹಠಾತ್ ಬ್ರೇಕ್ ಹಾಕಿದ ಪರಿಣಾಮ ಅದರ ಹಿಂಬದಿಗೆ ಗುದ್ದಿದ ಸ್ಬಿಫ್ಟ್ ಕಾರಿಗೆ ಅದರ ಹಿಂದುಗಡೆಯಿದ್ದ ಗೂಡ್ಸ್ ಲಾರಿ ಢಿಕ್ಕಿ ಹೊಡೆದು ಎರಡು ವಾಹನಗಳ ನಡುವೆ ಸಿಲುಕಿದ ಕಾರು ಅಪ್ಪಚ್ಚಿಯಾದ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಕೆಲಸ ಮುಗಿಸಿ ಮಂಗಳೂರಿನತ್ತ ಮೂವರು ಯುವತಿಯರಿದ್ದ ಕಾರು ತೆರಳುವಾಗ , ಜನದಟ್ಟಣೆ ತೊಕ್ಕೊಟ್ಟು ರಿಕ್ಷಾ ಪಾಕ್೯ ಸಮೀಪದಲ್ಲೇ ಎದುರುಗಡೆಯಿದ್ದ ಪಿಕಪ್ ವಾಹನದ ಚಾಲಕ ಹಠಾತ್
ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಳ್ಳಾಲ ತಾಲೂಕು ವತಿಯಿಂದ ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ ಬರಹಗಳ ಸಂಕಲನ “ಮೇಲೋಗರ” ಕೃತಿ ಲೋಕಾರ್ಪಣೆ ಕಾರ್ಯಕ್ರಮ ದೇರಳಕಟ್ಟೆ ದಿ ಕಂಫರ್ಟ್ಸ್ ಇನ್ ಹೋಟೆಲ್ ನಲ್ಲಿ ನಡೆಯಿತು. ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ನಿವೃತ್ತ ಮುಖ್ಯಶಿಕ್ಷಕ ಕೆ. ರವೀಂದ್ರ ರೈ ಕಲ್ಲಿಮಾರ್ ಅವರ ಚಿಂತನ ಶಾಲೆಯ ಸಂಚಿತ
ಕಣಚೂರು ಸಮೂಹ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನುರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು. ಕಣಚೂರು ಪಬ್ಲಿಕ್ ಸ್ಕೂಲ್ನ ೮ನೇ ತರಗತಿಯ ವಿದ್ಯಾರ್ಥಿನಿಯಾದ ಫಾತಿಮ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು ಪ್ರಜಾಪ್ರಭುತ್ವದ ಅಸ್ಥಿತ್ವದ ಕುರಿತು ಮಾತನಾಡಿದರು. ಕಣಚೂರು ಇನ್ಸ್ಟಿಟ್ಯೂಟ್ ಆಫ್ ಅಲೈಯ್ಡ್