Home ಕರಾವಳಿ Archive by category ಪುತ್ತೂರು (Page 6)

ಪುತ್ತೂರು: ಶ್ರೀ ರಾಮಶ್ವ ಯಾತ್ರೆಗೆ ಚಾಲನೆ

ಪುತ್ತೂರು: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ನಡೆಯಲಿರುವ ಶ್ರೀ ರಾಮಲಲ್ಲ,ನ ಪ್ರತಿಷ್ಠಾಪನ ಪ್ರಯುಕ್ತ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ ಶ್ರೀ ರಾಮನ ದಿಗ್ವಿಜಯದ ಸಂಕೇತವಾಗಿ ಸೀಮೆಗೆ ಸಂಬಂಧಿಸಿ ಮೂರು ದಿವಸ ಪುತ್ತೂರು ತಾಲೂಕಿನ ದೇವಸ್ಥಾನಗಳಿಗೆ ಭೇಟಿ ನೀಡಲಿರುವ ಶ್ರೀ ರಾಮಶ್ವ ಯಾತ್ರೆಗೆ ದೇವಳದ ರಥ ಬೀದಿಯಲ್ಲಿ ಚಾಲನೆ ನೀಡಲಾಯಿತು. ಬೆಳಿಗ್ಗೆ

ವಿಟ್ಲ: ಶಾಲಾ ಬಸ್ ಮತ್ತು ಬೈಕ್

ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆ ಯಿಂದ ಬೈಕ್ ನಲ್ಲಿದ್ದ ಐಟಿಐ ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು

ಪುತ್ತೂರು: ಈಶ್ವರಮಂಗಲದ ಮೇನಾಲ ದರ್ಗಾಗೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು

ಕಡಬ: ಕೋಡಿಂಬಾಳದಲ್ಲಿ ರೈಲ್ವೇ ಹಳಿ ಸಮೀಪ ಆತ್ಮಹತ್ಯೆಗೆ ಶರಣಾದ ನಿವೃತ್ತ ರೈಲ್ವೇ ಉದ್ಯೋಗಿ

ಕೋಡಿಂಬಾಳ ದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು‌ ನಿವಾಸಿ ಮಾಧವ ರೈ ( 62 ವ) ಆತ್ಮಹತ್ಯೆ ಮಾಡಿಕೊಂಡವರು. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ ಪರೀಕ್ಷೆಗೆ ತರಲಾಗಿದೆ. ಮೃತರು ಕೋಡಿಂಬಾಳದ ಅಯಪ್ಪ ಭಜನಾ ಮಂದಿರದ ಸೇವಾ ಕಾರ್ಯದಲ್ಲಿಯೂ ಸಕ್ರಿಯವಾಗಿ

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ- ಆರು ಮಂದಿಗೆ ಗಾಯ

ವಿಟ್ಲ: ಚಾಲಕನ ನಿಯಂತ್ರಣ ಕಳೆದುಕೊಂಡ ಟಿ.ಟಿ ವಾಹನ ರಸ್ತೆಗೆ ಪಲ್ಟಿ ಹೊಡೆದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ಶಬರಿಮಲೆಯಿಂದ ವಿಟ್ಲ ರಸ್ತೆ ಮೂಲಕ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಚಂದಳಿಕೆ ಅಪಾಯಕಾರಿ ತಿರುವಿನಲ್ಲಿ ಈ ಘಟನೆ ಸಂಭವಿಸಿದೆ. ಟಿ.ಟಿ ವಾಹನದಲ್ಲಿದ್ದ ಆರು ಮಂದಿ ಮಾಲಾಧಾರಿಗಳು ಗಾಯಗೊಂಡಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಉಜಿರೆ ನಿವಾಸಿಗಳೆಂದು ತಿಳಿದುಬಂದಿದೆ. ಶಬರಿಮಲೆ

ಪುತ್ತೂರು: ಅಯೋಧ್ಯೆಯ ಸಮಗ್ರ ಕಥನ ಶ್ರೀರಾಮ ಕಥಾವೈಭವ

ಪುತ್ತೂರು: ರಾಮ ರಾಜ್ಯದ ನಿರ್ಮಾಣದ ಭಾಗವಾಗಿ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠೆಯಾಗುತ್ತಿದೆ. ರಾಮ ಹಾಗೂ ರಾಮ ರಾಜ್ಯದ ಪ್ರತಿಷ್ಠೆಯನ್ನು ಹಳ್ಳಿ ಹಳ್ಳಿಯಲ್ಲಿ ಸಂಭ್ರಮ ಪಡಬೇಕು. ಶ್ರೀ ರಾಮನ ಪ್ರತಿಷ್ಠೆಯಿಂದ ಮನುಷ್ಯ ಮಾತ್ರವಲ್ಲದೆ ಪ್ರತಿ ಜೀವ ಸಂಕುಲಗಳಿಗೂ ಆನಂದ ಉಂಟಾಗಲಿದೆ. ಇದರಿಂದ ಜಗತ್ತಿಗೇ ಒಳಿತಾಗಲಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.ಅವರು ಪುತ್ತೂರಿನ ತೆಂಕಿಲದಲ್ಲಿ ಶ್ರೀರಾಮ ಕಥಾವೈಭವ

ಪುತ್ತೂರು: ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಡಗನ್ನೂರುಃ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ (ರಿ.) ಶ್ರೀ ಕ್ಷೇತ್ರ ಗೆಜ್ಜೆಗಿರಿ ವರ್ಷಾವಧಿ ಜಾತ್ರೋತ್ಸವವು ಫೆ.25 ರಿಂದ 28 ತನಕ ನಡೆಯಲಿದ್ದು ಇದರ ಅಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಪ್ರಾರಂಭದಲ್ಲಿ ಶ್ರೀ ಕ್ಷೇತ್ರದ ಸರ್ವಶಕ್ತಿಗಳಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.ಗೆಜ್ಜೆಗಿರಿ ಕ್ಷೇತ್ರಾಢಳಿತ ಸಮಿತಿ ಅಧ್ಯಕ್ಷ ಪೀತಾಂಬರ ಹೆರಾಜೆ,ರವರು ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ

ಪುತ್ತೂರು: ತನಿಯ ಮೋಟಾರ್ಸ್ಸ್‌ನ ಶೋರೂಂ ಶುಭಾರಂಭ

ಮೊಂಟ್ರಾ ಇಲೆಕ್ಟ್ರಿಕ್‌ನ ಅಧಿಕೃತ ಡೀಲರ್ ತನಿಯ ಮೋಟಾರ್‍ಸ್‌ನ ಮತ್ತೊಂದು ಶೋರೂಂ ಪುತ್ತೂರಿನ ದಾರಂದಕುಕ್ಕು ಡಿಕೆ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಇಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗುತ್ತಿದೆ. ಇದೀಗ ತ್ರಿಚಕ್ರದ ವಾಹನಗಳು ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗುತ್ತಿದೆ. ಮೊಂಟ್ರಾ ಎಲೆಕ್ಟ್ರಿಕ್‌ನ ಆಟೋ ಮಾರುಕಟ್ಟೆಗೆ ಬಿಡುಗಡೆಗೊಳ್ಳುತ್ತಿದೆ. ಒಂದು ಬಾರಿ ಚಾರ್ಜ್ ಮಾಡಿದ್ರೆ 197 ಕಿಲೋ ಮೀಟರ್‌ಗಳ

ಪುತ್ತೂರು: ಅಂದ್ರಟ್ಟ ಸೇತುವೆ ಕಾಮಗಾರಿಗೆ ಎರೆಡೆರಡು ಬಾರಿ ಶಿಲಾನ್ಯಾಸ

ಪುತ್ತೂರು: ಶಾಂತಿಗೋಡು ಮತ್ತು ನರಿಮೊಗರು ಗ್ರಾಮದ ಅಂದ್ರಟ್ಟದ ಸಂಪರ್ಕ ಸೇತುವೆಗೆ 2023 ರ ಮಾರ್ಚ್ 19ರಂದು ಆಗಿನ ಶಾಸಕ ಸಂಜೀವ ಮಠಂದೂರು ಅವರು ಶಿಲಾನ್ಯಾಸ ನೆರವೇರಿಸಿದ್ದರು. ಇದೀಗ ಅದೇ ಕಾಮಗಾರಿಗೆ ಈಗಿನ ಶಾಸಕ ಅಶೋಕ್ ಕುಮಾರ್ ರೈ ಅವರು ಶಿಲಾನ್ಯಾಸ ನೆರವೇರಿಸಿದ್ದಾರೆ ಎಂದು ಶಾಂತಿಗೋಡು ಶಕ್ತಿ ಕೇಂದ್ರದ ಅಧ್ಯಕ್ಷ ಶ್ಯಾಂ ಭಟ್ ಮತ್ತು ಚಿಕ್ಕಮುಡ್ನೂರು ಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದ್ರಟ್ಟದಲ್ಲಿ 2ನೇ

ವಿಟ್ಲ: ಜ.13ರಂದು ಕನ್ಯಾನ ದೇಲಂತಬೆಟ್ಟು ಶಾಲೆಯ ಅಮೃತ ಮಹೋತ್ಸವ

ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ