Home ಕರಾವಳಿ Archive by category ಮಂಗಳೂರು (Page 10)

ಪಡುಬಿದ್ರಿ: ಯುಪಿಸಿಎಲ್‌ನಿಂದ ಕೇರಳಕ್ಕೆ ವಿದ್ಯುತ್ ಸರಬರಾಜು, ಗ್ರಾಮಸ್ಥರ ವಿರೋಧ

ಪಡುಬಿದ್ರಿ ಸಮೀಪದ ಯುಪಿಸಿಎಲ್ ಕಂಪನಿಯಿಂದ ಕೇರಳಕ್ಕೆ ವಿದ್ಯುತ್ ಸರಬರಾಜು ನಡೆಸಲು ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತದ ನಿರ್ದೇಶನದಂತೆ ಗ್ರಾಮಸ್ಥರಿಗೆ ಮಾಹಿತಿ ನೀಡದೆ ಆಗಮಿಸಿದ ಅಧಿಕಾರಿಗಳ ತಂಡವನ್ನು ಗ್ರಾಮಸ್ಥರು ವಾಪಾಸು ಕಳುಹಿಸಿದ ಘಟನೆ ಇನ್ನಾ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಮಾತನಾಡಿದ ಇನ್ನಾ ಗ್ರಾ.ಪಂ.ಸದಸ್ಯ ದೀಪಕ್ ಕೋಟ್ಯಾನ್, ಜನರ ವಿರೋಧದ ನಡುವೆಯೂ

ಚಿಕ್ಕಮಂಗಳೂರು: ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ

ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆಯು ಚಿಕ್ಕಮಂಗಳೂರು ಜಿಲ್ಲೆಯ ಮಲ್ಲಂದೂರ್ ನಾರಾಯಣ ಗುರು ಸಮಾಜ ಸೇವಾ ಸಂಘದಲ್ಲಿ ಅಧ್ಯಕ್ಷರಾದ ರಾಘವೇಂದ್ರ ಪೂಜಾರಿಯವರ ನೇತೃತ್ವದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ಡಾ। ರಾಜಶೇಖರ್ ಕೋಟ್ಯಾನ್,ಉಪಾಧ್ಯಕ್ಷರಾದ ಹರೀಶ್ ಸಾಲ್ಯಾನ್,ಮಹಾಮಂಡಲದ ಸದಸ್ಯರಾದ ರತ್ನಾಕರ್ ಸಾಲ್ಯಾನ್ ಗೋವಾ,ವಾಸು ಪೂಜಾರಿ,ಗಣೇಶ್ ಪೂಜಾರಿ,ಉಪಾಧ್ಯಕ್ಷರಾದ ಸತೀಶ್

ದೇಶವಾಸಿಗಳಿಗೆ ನಿರಾಶೆಯ ಬಜೆಟ್ : ಮಂಜುನಾಥ ಭಂಡಾರಿ

ಕೇಂದ್ರ ಸರಕಾರದ ಮಧ್ಯಂತರ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಆದಾಯ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. ವಿತ್ತ ಸಚಿವರು 55 ನಿಮಿಷಗಳ ಕಾಲ ಚುನಾವಣಾ ಭಾಷಣ ಮಾಡಿದರೇ ಹೊರತು ದೇಶದ ಅಭಿವೃದ್ಧಿ ದೃಷ್ಟಿಕೋನದಿಂದ ಯಾವುದೇ ಯೋಜನೆ ಪ್ರಕಟಿಸಿಲ್ಲ. ದೇಶದ ಆದಾಯ ಮೂಲವಾದ ಕೃಷಿ, ಉದ್ಯಮ, ಸೇವಾ ಕ್ಷೇತ್ರವನ್ನು ಕಡೆಗಣಿಸಲಾಗಿದೆ. ಬಹುನಿರೀಕ್ಷೆಯಿಂದ ಬಜೆಟ್‌ನ್ನು ಕಾಯುತ್ತಿದ್ದ ದೇಶವಾಸಿಗಳಿಗೆ ಕೇಂದ್ರ ಸರಕಾರ ನಿರಾಶೆ ಮೂಡಿಸಿದೆ ಎಂದು

ಪ್ರಗತಿ ಹಿನ್ನಡೆಯ ಸಂಕೇತ: ಕೆ. ಹರೀಶ್ ಕುಮಾರ್

ಮಂಗಳೂರು: ದೇಶದ ಬಿಜೆಪಿ ಸರಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲö ಎಂದು ವಿಧಾನ ಪರಿಷತ್ ಶಾಸಕರುಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ

ಬಿಪಿಎಲ್ ಕುಟುಂಬಗಳಿಗೆ ಡಿಸೆಂಬರ್‌ನಲ್ಲಿ 17.68 ಕೋಟಿ ರೂ. ನಗದು ಜಮಾ

ಸಾರ್ವಜನಿಕ ವಿತರಣಾ ಪದ್ಧತಿಯಡಿ ಸರಕಾರದಿಂದ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಪ್ರತೀ ತಿಂಗಳು ವಿತರಿಸಲಾಗುತ್ತಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಹಸಿವು ಮುಕ್ತ ಕರ್ನಾಟಕದ ಪರಿಕಲ್ಪನೆಯೊಂದಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತೀ ತಿಂಗಳು ಅರ್ಹ ಫಲಾನುಭವಿಗಳಿಗೆ ಪಡಿತರ ನೀಡಲಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 460 ನ್ಯಾಯಬೆಲೆ ಅಂಗಡಿಗಳಿದ್ದು ಒಟ್ಟು 451593 ಪಡಿತರ ಚೀಟಿಗಳಿವೆ.ಅಂತ್ಯೋದಯ ಅನ್ನಯೋಜನೆಯಡಿ ಜಿಲ್ಲೆಯಲ್ಲಿ ಬಡತನ

ಮಂಗಳೂರು : ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ವೈಷ್ಣವಿಗೆ ಸನ್ಮಾನ

ಕುಲಶೇಖರದ ಕಟ್ಟೆ ಫ್ರೆಂಡ್ಸ್ ವತಿಯಿಂದ 26ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆಯು ಊರ ಹತ್ತು ಸಮಸ್ತರು ಹಾಗೂ ಭಕ್ತಾದಿಗಳ ಸಮ್ಮುಖದಲ್ಲಿ ಶ್ರೀ ವೀರನಾರಾಯಣ ಅಶ್ವಥ ಕಟ್ಟೆಯಲ್ಲಿ ಬಹಳ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಧ್ಯಪ್ರದೇಶದ ದೇವಾಸ್ ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಕುಮಾರಿ ವೈಷ್ಣವಿ ಯವರಿಗೆ ಶಾಲು ಹೊದಿಸಿ ಫಲ ಪುಷ್ಪ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ

ಫೆ.2ರಂದು ಕರಾವಳಿಯಲ್ಲಿ ಕ್ಲಾಂತ ಸಿನಿಮಾ ಬಿಡುಗಡೆ

ಸಸ್ಪೆನ್ಸ್, ಥ್ರಿಲ್ಲರ್, ಆಕ್ಷನ್ ಬೇಸ್ಡ್ ಸಿನಿಮಾ `ಕ್ಲಾಂತ ಕರಾವಳಿಯ ಸಿನಿಮಾ ಮಂದಿರದಲ್ಲಿ ಫೆ.2ರಂದು ಬಿಡುಗಡೆ ಕಾಣಲಿದೆ. ಚಿತ್ರದ ಬಹುತೇಕ ಭಾಗ ಕರಾವಳಿಯಲ್ಲಿಯೇ ಚಿತ್ರೀಸಲಾಗಿದೆ ಎಂದು ಚಿತ್ರದ ನಿರ್ದೇಶಕ ವೈಭವ್ ಪ್ರಶಾಂತ್ ಹೇಳಿದರು.ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಮಣ್ಣಿನ ಮಹಿಮೆ, ಆಚಾರ ವಿಚಾರ, ಸಂಸ್ಕೃತಿಯ ಜತೆಯಲ್ಲಿ ಕೊರಗಜ್ಜ ದೈವದ ಪವಾಡ ಸಾರುವ ವಿಚಾರಗಳು ಚಿತ್ರದಲ್ಲಿ ನೀಡಲಾಗಿದೆ.

ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮಂಗಳೂರು: ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವು ನಡೆಯಿತು. ಸಾಮಾಜಿಕ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಬೆಂಗರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಹಾಗೂ ಅಮೃತ ಮಹೋತ್ಸವ ಸಮಿತಿಯ ಸಹಯೋಗದೊಂದಿಗೆ ಇಂದು ಸ್ವಚ್ಛತಾ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗರೆಯ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ರಮದಲ್ಲಿ ಎಲ್ಲರೂ ಬೆಳಗ್ಗಿನಂದಲೇ ತೊಡಗಿಕೊಂಡಿದ್ದರು. ಸಮಿತಿಯ ಪ್ರತಿಯೊಬ್ಬರು ಸ್ವಚ್ಛತಾ

ಮಂಗಳೂರು: ಆತ್ಮಶಕ್ತಿ ಸ್ಥಾಪನಾ ದಿನ: ಸೌರ ವಿದ್ಯುತ್ ಘಟಕದ ಉದ್ಘಾಟನೆ

ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಮತ್ತು ಹವಾ ನಿಯಂತ್ರಿತ ಸಭಾಂಗಣ ಹಾಗೂ ನೂತನ ಸೌರ ವಿದ್ಯುತ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಪಡೀಲ್‌ನ ಆತ್ಮಶಕ್ತಿ ಸೌಧದಲ್ಲಿ ನಡೆಯಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಆತ್ಮಶಕ್ತಿ ಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಮಾಜಿ ಸಚಿವರಾದ ರಮಾನಾಥ ರೈ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಅವರು ಸೌರ ವಿದ್ಯುತ್ ಘಟಕವನ್ನು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ

ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆ

ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಚಿನ್ನ ಹಾಗೂ ವನ್ಯಜೀವಿಗಳ ಕಳ್ಳಸಾಗಾಣೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ವಿತರಿಸಲಾಯಿತು. ಅಂತರರಾಷ್ಟ್ರೀಯ ಕಸ್ಟಮ್ಸ್ ದಿನಾಚರಣೆಯನ್ನು ಕೋಸ್ಟ್‌ಗಾರ್ಡ್ ಕರ್ನಾಟಕದ ಕಮಾಂಡೆಂಟ್ ಪ್ರವೀಣ್ ಕುಮಾರ್ ಮಿಶ್ರ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು,