ಕೋಡಿಂಬಾಳ ದಲ್ಲಿ ನಿವೃತ್ತ ರೈಲ್ವೇ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಾಧವ ರೈ ( 62 ವ) ಆತ್ಮಹತ್ಯೆ ಮಾಡಿಕೊಂಡವರು. ಕೋಡಿಂಬಾಳದ ರೈಲು ಮಾರ್ಗದ ಸಮೀಪ ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಪತ್ತೆಯಾಗಿದೆ .ಮೃತದೇಹವನ್ನು ಕಡಬ ಸರಕಾರಿ ಆಸ್ಪತ್ರೆಗೆ ಮರಣೊತ್ತರ
ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರ ತನಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ನಡೆಯಲಿದ್ದು ಜ.10 ರಂದು ಗೊನೆ ಮುಹೂರ್ತ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ದಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ, ಪವಿತ್ರಪಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ, ಸದಸ್ಯರಾದ
ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಅದರಲ್ಲಿ
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಎಂ. ಸಿ ಸುಧಾಕರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ ಉಪನಾಯಕನಾಗಿ ಆಯ್ಕೆಗೊಂಡಿದ್ದು, 10
ಓಮ್ನಿ ಹಾಗೂ ಕ್ರೆಟಾ ಕಾರು ಢಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಡಿ.23ರ ಶನಿವಾರ ಮಧ್ಯಾಹ್ನ ನಡೆದಿದೆ. ಓಮ್ನಿ ಚಲಾಯಿಸುತ್ತಿದ್ದ ಸೋಮವಾರ ಪೇಟೆಯ ಚೌಡ್ಲು ಗ್ರಾಮದ ಕೆಂಚುಮನೆ ನಿವಾಸಿ ರವಿ (53) ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ರವಿ ಅವರ ತಾಯಿ ಮಣಿಯಮ್ಮ(75), ಪತ್ನಿ ವಾಣಿ (47), ಪುತ್ರಿ ರಿಷಾ (19), ಪುತ್ರ ಶರಣ್
ದ.ಕ, ಜಿಲ್ಲಾ ಹಾಗೂ ಕಡಬ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಶನ್ ಹಾಗೂ ಕೇಪು ಕುಟ್ರುಪ್ಪಾಡಿ ಐಡಿಯಲ್ ಪ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ, ಟೀಮ್ ಸಾರಂಗ್ ಸಾರಥ್ಯದಲ್ಲಿ ಮ್ಯಾಟ್ ಅಂಕಣದ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟ ಡಿ.23ನೇ ಕಡಬ ಗ್ರಾಮದ ಮುಳಿಮಜಲು ಎಂಬಲ್ಲಿ ಸಂಜೆ ನಡೆಯಲಿದೆ ಎಂದು ಟೀಮ್ಸಾರಂಗ್ ಮುಖಂಡ ಹರೀಶ್ ರೈ ಮೈಲೇರಿ ತಿಳಿಸಿದರು. ಅವರು ಕಡಬ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಹದಿನೈದು ವರ್ಷಗಳಿಂದ
ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರ್ಗಶಿರ ಶುದ್ಧ ಸಪ್ತಮಿಯ ದಿನವಾದ ಮಂಗಳವಾರ ಬೆಳಗ್ಗೆ ಕುಮಾರಾಧಾರಾ ನದಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವ ಸಂಪನ್ನವಾಯಿತು. ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಅವಭೃತೋತ್ಸವದ ಧಾರ್ಮಿಕ ವಿದಿವಿಧಾನ ನೆರವೇರಿಸಿದರು. ಶ್ರೀ ದೇವಳದ ಅರ್ಚಕರಾದ ವೇದಮೂರ್ತಿ ರಾಜೇಶ್ ನಡ್ಯಂತಿಲ್ಲಾಯರು ಮತ್ತು
ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು| ಭಾಗಿರಥಿ ಮುರುಳ್ಯ ಚಾಲನೆ ನೀಡಿದರು. ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ. ಕಾರ್ತಿಕ ಮಾಸದ ಶುದ್ಧ ಪೌರ್ಣಿಮಿ ದಿನ ಸಹಸ್ರನಾಮಾರ್ಚನೆಯ ಬಳಿಕ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮೂಹೂರ್ತವನ್ನು ಕ್ಷೇತ್ರ ಪುರೋಹಿತರು ನೆರವೇರಿಸಿದ್ದರು. ಆನಂತರ
ಸುಳ್ಯ ತಾಲೂಕಿನ ಮಂಡೆಕೋಲು ಸುತ್ತಮುತ್ತ ಆನೆಗಳ ಹಿಂಡು ಒಂದು ತಳವೂರಿದ್ದು ಕಾಡಿಗಿಂತ ಹೆಚ್ಚಾಗಿ ನಾಡನ್ನು ಆಶ್ರಯಿಸಿದ್ದು, ಸುತ್ತ ಮುತ್ತ ಸಿಕ್ಕ ಕೃಷಿ ಬೆಳೆಗಳನ್ನೆಲ್ಲ ಒಂದು ಹದ ಮಾಡಿವೆ.ಒಂಬತ್ತು ಆನೆಗಳ ಈ ಹಿಂಡಿನಲ್ಲಿ ಒಂದು ಮರಿಯಾನೆ ಕೂಡ ಇದೆ. ಮರಿಯನ್ನು ಜತನದಿಂದ ನೋಡಿಕೊಳ್ಳುವ ಆನೆಗಳು ಜನರತ್ತ, ಜನ ನಿವಾಸಿಗಳತ್ತ ಸಿಟ್ಟಿನಿಂದಲೇ ಇರುವುದಾಗಿಯೂ, ಜನರು ಭಯದಿಂದ ಬದುಕುವ ವಾತಾವರಣ ಇದೆ ಎನ್ನಲಾಗಿದೆ. ಮಂಡೆಕೋಲು ಬಳಿಯ ಪಂಜಿಕಲ್ಲು ಎಂಬಲ್ಲಿ ಪಯಸ್ವಿನಿ