Home ಕರಾವಳಿ Archive by category ಸುಳ್ಯ (Page 6)

ಕಡಬದಲ್ಲಿ ಸಾರ್ವಜನಿಕರಿಂದ ಜಿಲ್ಲಾಧಿಕಾರಿಗೆ ಮನವಿ

ದ.ಕ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಅವರು ಬುಧವಾರ ಸುಬ್ರಹ್ಮಣ್ಯಕ್ಕೆ ಹೋಗಿ ಮಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಸಂಜೆ ಕಡಬದಲ್ಲಿ ಸಾರ್ವಜನಿರಿಂದ ಮನವಿ ಸ್ವೀಕರಿಸಿದರು. ಜಿಲ್ಲಾಧಿಕಾರಿಯವರು ಕಡಬಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದ್ದರೂ ಸುಬ್ರಹ್ಮಣ್ಯದಿಂದ ಹೊರಡುವಾಗ ತಡವಾಗಿರುವುದರಿಂದ ಕಡಬದ ಕಾರ್ಯಕ್ರಮ ರದ್ದು ಗೊಳಿಸಿದ್ದರು. ಜಿಲ್ಲಾಧಿಕಾರಿಯವರ ಕಾರು ಕಡಬಕ್ಕೆ

ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ

ಸುಳ್ಯ : ಸುಳ್ಯ ಪೇಟೆಯಲ್ಲಿ ಮಳೆಗೆ ಧರೆಗುರುಳಿದ ಟ್ರಾನ್ಸ್ ಫಾರ್ಮರ್

ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರಾಶಾಹಿಯಾಗಿರುವ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.

ಕಡಬ: ಸಂಪೂರ್ಣ ಹದಗೆಟ್ಟ ನೆಲ್ಯಾಡಿ-ಪಡುಬೆಟ್ಟು ರಸ್ತೆ: ಕೆಸರು ತುಂಬಿದ ರಸ್ತೆ, ವಾಹನ ಸವಾರರ ಪರದಾಟ

ಕಡಬದ ನೆಲ್ಯಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಕೆಸರು ತುಂಬಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ಸಂಚರಿಸಲು ಕಷ್ಟ ಅನುಭವಿಸುತ್ತಿದ್ದಾರೆ. ಕಡಬ ತಾಲೂಕಿನ ನೆಲ್ಯಾಡಿ ಗ್ರಾಮ ಪಂಚಾಯತ್ ಗೆ ಒಳಪಟ್ಟ ನೆಲ್ಯಾಡಿಯಿಂದ-ಪಡುಬೆಟ್ಟು ತನಕ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಪಂಚಾಯತ್ ವತಿಯಿಂದ ಮಣ್ಣುಹಾಕಿ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಜನಸಾಮಾನ್ಯರು ಹಾಗೂ ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು

ಕಡಬ: ಮಳೆ ಬರುತ್ತಿದ್ದ ಹಿನ್ನೆಲೆ – ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ಪಲ್ಟಿ

ಕಡಬ :ಚಾಲಕನ ನಿಯಂತ್ರಣ ತಪ್ಪಿದ ಕೆಎಸ್ಸಾರ್ಟಿಸಿ ಬಸ್ಸೊಂದು ಪಲ್ಟಿಯಾದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕೋಡಂದೂರು ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಳೆ ಬರುತ್ತಿದ್ದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಕುಕ್ಕೆ: ಅ.28 ಗ್ರಹಣ ನಿಮಿತ್ತ ದರುಶನ ಸಮಯದಲ್ಲಿ ವ್ಯತ್ಯಯ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅ.28ರಂದು ಶನಿವಾರ ಚಂದ್ರಗ್ರಹಣ ಇರುವುದರಿಂದ ಶ್ರೀ ದೇವಳದ ಪ್ರಧಾನ ಅರ್ಚಕರ ನಿರ್ದೇಶನದಂತೆ ಭಕ್ತಾಧಿಗಳಿಗೆ ಶ್ರೀ ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅ.28ರಂದು ಶನಿವಾರ ರಾತ್ರಿ ಮಹಾಪೂಜೆ ಸಾಯಂಕಾಲ ಗಂಟೆ 6.30ಕ್ಕೆ ಮುಕ್ತಾಯಗೊಳ್ಳಲಿದೆ.ಆ ಬಳಿಕ ಶ್ರೀ ದೇವರ ದರುಶನಕ್ಕೆ ಅವಕಾಶ ಇರುವುದಿಲ್ಲ. ಅಲ್ಲದೆ ಅಂದು ಸಾಯಂಕಾಲ ಸಂಜೆಯ ಆಶ್ಲೇಷ ಬಲಿ ಸೇವೆ ನೆರವೇರುವುದಿಲ್ಲ. ರಾತ್ರಿ

ಸುಳ್ಯ: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಕಲೆಕ್ಷನ್ ಕೇಂದ್ರವಾಗಿದೆ. ಬರಕ್ಕೆ ತುತ್ತಾಗಿರುವ ರೈತರಿಗೆ ಪರಿಹಾರ ನೀಡಿಲ್ಲ. ತುಷ್ಟೀಕರಣದಲ್ಲಿ ಸರ್ಕಾರ ಮುಳುಗಿದೆ. ಇತ್ಯಾದಿ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ಬಿಜೆಪಿ ವತಿಯಿಂದ ಸುಳ್ಯದಲ್ಲಿ ಪ್ರತಿಭಟನೆ ನಡೆಸಿದರು. ಸುಳ್ಯದ ತಾಲೂಕು ಕಚೇರಿ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮುಖಂಡರು, ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ.

ಕಡಬ: ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆ ಜಾಥಾಕ್ಕೆ ಚಾಲನೆ

ದೇಶದ ರಕ್ಷಣೆಯೊಂದಿಗೆ ನಮ್ಮಲ್ಲರ ರಕ್ಷಣೆ ಮಾಡುವ ಯೋಧರಿಗೆ ಸ್ಮಾರಕ ನಿರ್ಮಾಣ ಮಾಡುವ ಕಾರ್ಯಕ್ಕೆ ಇಳಿದಿರುವ ಪ್ರಧಾನಿ ನರೇಂದ್ರ ಮೋದಿಯವರು ಯೋಧರಿಗೆ ಅತ್ಯತ ಹೆಚ್ಚು ಗೌರವ ನೀಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಸುಳ್ಯ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಕಡಬದಲ್ಲಿ ನೆಹರು ಯುವ ಕೇಂದ್ರ ಮಂಗಳೂರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ ಸ,ಪ.ಪೂ.ಕಾಲೇಜು ಕಡಬ ,ತಾಲೂಕು ಯುವಜನ ಒಕ್ಕೂಟ ಕಡಬ, ತಾ.ಪಂ.ಕಡಬ ,ಪಟ್ಟಣ

ಕಡಬ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ನೇಮಕ

ಕಡಬ:ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸರ್ವೋತ್ತಮ ಗೌಡ ಇವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆದೇಶ ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಕಾರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಸೂಚಿಸಲಾಗಿದೆ‌‌ ಎಂದು ತಿಳಿದು ಬಂದಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಹೊಸಮನೆ ನಿವಾಸಿಯಾಗಿರುವ ಸರ್ವೋತ್ತಮ ಗೌಡ ಅವರು ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ದಂಪತಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಭಾರತ ಸರ್ಕಾರದ ಮಾಜಿ ಪ್ರಧಾನ ಮಂತ್ರಿ ಹಾಗೂ ರಾಜ್ಯ ಸಭಾ ಸಂಸತ್ ಸದಸ್ಯರಾದ ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ದೇವೇಗೌಡ ದಂಪತಿಗಳು ನಿನ್ನೆ ಮಧ್ಯಾಹ್ನ ಬೆಂಗಳೂರು ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ ಸಕಲೇಶಪುರ, ಸುಬ್ರಹ್ಮಣ್ಯ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದ