Home Archive by category ಕರಾವಳಿ (Page 10)

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ 55ನೇ ಸಂಸ್ಥಾಪನಾ ದಿನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 55ನೇ ಸಂಸ್ಥಾಪನ ದಿನವನ್ನು ರೋಟರಿ ಕ್ಲಬ್ ಬಂಟ್ವಾಳದ ಸಭಾಂಗಣದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್, ಕ್ಲಬ್‌ನ ಪೂರ್ವಾಧ್ಯಕ್ಷ ಎನ್.ಪ್ರಕಾಶ್ ಕಾರಂತ್ ಅನಿಸಿಕೆ ವ್ಯಕ್ತಪಡಿಸಿ 55 ವರ್ಷಗಳಲ್ಲಿ ರೋಟರಿ ಕ್ಲಬ್

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ

ನಾಮಪತ್ರ ಸಲ್ಲಿಕೆಗೆ ಮುನ್ನ ಕ್ಯಾ. ಬೃಜೇಶ್ ಚೌಟರಿಗೆ ಹರಸಿದ ‘ನಾರೀಶಕ್ತಿ’

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬೃಜೇಶ್ ಚೌಟ ಅವರು ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಮಹಿಳೆಯರು, ತಾಯಂದಿರ ಬೆಂಬಲದ ಸಂಕೇತವಾಗಿ ಚುನಾವಣಾ ಠೇವಣಿಯ ಮೊತ್ತಕ್ಕೆ ಕಿರು ದೇಣಿಗೆಗಳನ್ನು ಸಲ್ಲಿಸಲಾಯಿತು. ಪಕ್ಷದ ಚುನಾವಣಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭ್ಯರ್ಥಿ ಕ್ಯಾ. ಚೌಟರಿಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು, ದೇಣಿಗೆ ನೀಡಿ ಗೆದ್ದು ಬರುವಂತೆ ಹರಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಯಾ. ಚೌಟ ಅವರು,

ವಿಟ್ಲ: ಖಾಸಗಿ ಬಸ್ ಹಾಗೂ ಪಿಕಪ್ ವಾಹನ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ ಬಸ್‌ನಲ್ಲೂ ಹಲವು ಪ್ರಯಾಣಿಕರಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಉದನೆ: ಖಾಸಗಿ ಬಸ್, ಕಂಟೈನರ್ ಡಿಕ್ಕಿ-ಹಲವರಿಗೆ ಗಾಯ

ನೆಲ್ಯಾಡಿ: ಖಾಸಗಿ ಬಸ್ಸ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಎ.3ರಂದು ಸಂಜೆ ನಡೆದಿದೆ. ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಎದುರುಗಡೆಯಿಂದ ಬರುತ್ತಿದ್ದ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಸುಮಾರು 20ಕ್ಕೂ

ಕಾರ್ಕಳ : ಮತದಾನದ ಬಗ್ಗೆ ಜಾಗೃತಿ ಕಾರ್ಯಕ್ರಮ

ಕಾರ್ಕಳ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವು ಕಾರ್ಕಳದ ಬಸ್ ನಿಲ್ದಾಣದಲ್ಲಿ ನಡೆಯಿತು. ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಕಾರ್ಕಳ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರು ಶಾಂತಪ್ಪ, ಹಾಗೂ ಪುರಸಭಾ ಮುಖ್ಯ ಅಧಿಕಾರಿ, ರೂಪಾ ಟಿ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.ಸಭೆ ಉದ್ದೇಶಿಸಿ ಮಾತನಾಡಿದ ಕಾರ್ಕಳ ತಾಲೂಕು ದಂಡಾಧಿಕಾರಿ ನರಸಪ್ಪ, ಭಾರತ ಒಂದು ಪ್ರಪಂಚದಲ್ಲಿ ಅತಿ ಬಲಿಷ್ಠವಾದ

ಪುತ್ತೂರು‌ : ಏ.9ರಂದು ಮಹಿಳಾ ಮೋರ್ಚಾದ ವತಿಯಿಂದ ನಡೆಯಲಿರು‌ವ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ

ಪುತ್ತೂರು‌ : ಏ.9ರಂದು ಪುತ್ತೂರು‌ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಸಮಾವೇಶ ನಡೆಯಲಿದ್ದು, ಇದರ ಪೂರ್ವಭಾವಿ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪುತ್ತೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸುಲೋಚನ ಬಿಕೆ ಭಟ್‌ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು, ದ.ಕ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಅವರನ್ನು ಗೆಲ್ಲಿಸಿಕೊಡುವ ಜೊತೆಗೆ ಮಹಿಳಾ ಸಮಾವೇಶ ಯಶಸ್ವಿಯಾಗಿ ನಡೆಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಾಜಿ ಶಾಸಕ‌ ಸಂಜೀವ ಮಠಂದೂರು ಸಹಿತ‌ ಮಹಿಳಾ

ಉಡುಪಿ : ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಸಿದರು. ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿ ಬಳಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ಕೋಟ ಶ್ರೀನಿವಾಸ ಪೂಜಾರಿ ಅವರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಮುಖಂಡ ಸಿ.ಟಿ.ರವಿ, ಶಾಸಕರಾದ ಯಶ್ಪಾಲ್ ಸುವರ್ಣ,

ಉಡುಪಿ: ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ: ಚಿಕ್ಕಮಗಳೂರು-ಉಡುಪಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಚಿಕ್ಕಮಗಳೂರು ಕಾಂಗ್ರೇಸ್ ಅಧ್ಯಕ್ಷ

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ