Home Archive by category ಕರಾವಳಿ (Page 17)

ಉಡುಪಿ: ಅನಾರೋಗ್ಯ ಪೀಡಿತ ಕುಟುಂಬಕ್ಕೆ ಬೇಕಾಗಿದೆ ಸಹಾಯ ಹಸ್ತ

ಸರಕಾರಿ ಕೆಲಸದಿಂದ ನಿವೃತ್ತಿ ಹೊಂದಿ ಗಂಡನೊಂದಿಗೆ ತನ್ನ ಮುದ್ದಾದ ಮಗುವಿನೊಂದಿಗೆ ಸುಂದರವಾದ ಬದುಕಿನ ಕನಸು ಕಾಣುತ್ತಿದ್ದ ಆ ಮುದ್ದಾದ ಕುಟುಂಬಕ್ಕೆ, ಅದ್ಯಾರ ಕಣ್ಣು ಬಿತ್ತೋ.. ಗೊತ್ತಿಲ್ಲ.! ಬೈಕ್ ಸಾವರನೊಬ್ಬನ ಅತೀವೇಗ , ಅತೀ ಅವಸರ ಇಡೀ ಕುಟುಂಬವನ್ನೇ ಜೀವನಪೂರ್ತಿ ಕಣ್ಣೀರ ಕಡಲಲ್ಲಿ ಕಳೆಯುವಂತೆ ಮಾಡಿದೆ ಈ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ. ಇವರು ಉಡುಪಿಯ

ಮಂಗಳೂರು: ಪಂಪ್ವೆಲ್ ಬಳಿ ಭೀಕರ ಅಪಘಾತ

ನಗರದ ಪಂಪ್ವೆಲ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತೊಕ್ಕೊಟ್ಟು ನಿವಾಸಿ ಸಮಿತ್ ಶೆಟ್ಟಿ (30) ಮೃತಪಟ್ಟ ಯುವಕ. ಸಮಿತ್ ಶೆಟ್ಟಿ ಕೊಟ್ಟಾರದಲ್ಲಿರುವ ತನ್ನ ರೂಮ್ ನಿಂದ ಇಂದು ಬೆಳಗ್ಗೆ ತೊಕ್ಕೊಟ್ಟಿಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾ.ಹೆ. 66ರ ಪಂಪ್ವೆಲ್ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ

ಮೂಡುಬಿದಿರೆಗೆ ಆಗಮಿಸಿದ ಮತದಾನ ಜಾಗೃತಿ ಜಾಥಾ ರಥ

ಮೂಡುಬಿದಿರೆ: ಏ. 26 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆ- 2024 ರ ಪ್ರಯುಕ್ತ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮತದಾನ‌ ಜಾಗೃತಿ ಜಾಥಾ ರಥವು ಶನಿವಾರ ಮೂಡುಬಿದಿರೆ ತಾಲೂಕು ಪಂಚಾಯತ್ ಗೆ ಆಗಮಿಸಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಎಸ್. ವೆಂಕಟಚಲಪತಿ ಜಾಗೃತಿ ರಥವನ್ನು ಸ್ವಾಗತಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಸ್ಥಳೀಯ ಶಾಲೆಯ ಮುಖ್ಯೋಪಾಧ್ಯರು, ಶಿಕ್ಷಕರು ಹಾಜರಿದ್ದರು.ನಂತರ ಮತದಾನ

ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಖಚಿತ : ಕೆ.ಅಭಯಚಂದ್ರ ಜೈನ್ ವಿಶ್ವಾಸ

ಮೂಡುಬಿದಿರೆ: ಕಾಂಗ್ರೆಸ್ ಯಾವತ್ತಿಗೂ ಹರಿಯುವ ನದಿ. ಕರ್ನಾಟಕದಲ್ಲಿ ಕಾಂಗ್ರೆಸನ್ನು ನಿರ್ನಾಮ ಮಾಡುವುದಾಗಿ ಹೇಳಿದ್ದ ಬಿಜೆಪಿ ಇಂದು ಅಧಿಕಾರವನ್ನು ಕಳೆದುಕೊಂಡಿದೆ. ಜನಸಾಮಾನ್ಯರಿಗೆ ಸದಾ ಸ್ಪಂದಿಸುವ ಗುಣ ಹೊಂದಿರುವ ಕಾಂಗ್ರೆಸನ್ನು ನಿರ್ನಾಮ ಮಾಡಲು ಸಾಧ್ಯವೇ ಇಲ್ಲ. ಈ ಬಾರಿ ಸಂಸತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಈ ಮೂಲಕ ಕರಾವಳಿ ಭಾಗದಲ್ಲೂ ಕಾಂಗ್ರೆಸ್ ಗೆಲುವು ಪಡೆದುಕೊಳ್ಳಲಿದೆ ಎಂದು ಮಾಜಿ ಸಚಿವ

ರಾಜ್ಯವನ್ನು ದಿವಾಳಿಯೆಬ್ಬಿಸಿ ಅರಾಜಕತೆ ಸೃಷ್ಟಿಸಿದ ಕಾಂಗ್ರೆಸ್ ಸರಕಾರ: ಡಾ. ವೈ ಭರತ್ ಶೆಟ್ಟಿ

ಗ್ಯಾರಂಟಿಗಳ ಆಸರೆಯಿಂದ ಅಧಿಕಾರಕ್ಕೇರಿದ ಕಾಂಗ್ರೆಸ್, ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕುಬೂದಿ ಎರಚಿದೆ. ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಕಾಂಗ್ರೆಸ್ ಒಂದೇ ವರ್ಗದ ಅತಿಯಾದ ಓಲೈಕೆಯಲ್ಲಿ ತೊಡಗಿದೆ ಎಂದು ಮಂಗಳೂರು ಉತ್ತರದ ಶಾಸಕ ಡಾ. ವೈ ಭರತ್ ಶೆಟ್ಟಿ ಆರೋಪಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಲೋಕಸಭಾ ಚುನಾವಣೆ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು.ಕಾಂಗ್ರೆಸ್ ಪಕ್ಷ ತನ್ನ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನ ದಾರುಣ ಅಂತ್ಯ

ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ್ದಾನೆ. ಹೊಸಂಗಡಿ ಸಮೀಪದ ಅಂಗಡಿಪದವು ನಿವಾಸಿ ದಿವಂಗತ ಅಶೋಕ್ – ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಸಾವನ್ನಪ್ಪಿದ ದುರ್ದೈವಿ. ಅಂಗಡಿಪದವಿನ ಅಂಗಡಿಯೊಂದರ ಮುಂಭಾಗದಲ್ಲಿ ವಿದ್ಯುತ್ ಹರಿಯುತ್ತಿದ್ದ ಕಬ್ಬಿಣದ ಗೇಟ್ ನ್ನು ತಿಳಿಯದೆ ಸ್ಪರ್ಶಿಸಿದಾಗ ವಿದ್ಯುತ್ ಶಾಕ್ ತಗುಲಿದ್ದು, ಬೊಬ್ಬೆ ಕೇಳಿದ ಸ್ಥಳೀಯರು ವಿದ್ಯುತ್ ವಯರ್ ನ್ನು ವಿಚ್ಚೆದಿಸಿ, ಕೂಡಲೇ ಉಪ್ಪಳದ ಖಾಸಗಿ

ಬಂಟ್ವಾಳ: ಎಂಜಿನಿಯರಿಂಗ್ ವಿದ್ಯಾರ್ಥಿಯ ಯಕ್ಷ ಪಯಣ..!

ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ಯಕ್ಷಗಾನದತ್ತ ಯುವ ಸಮುದಾಯ ಆಕರ್ಷಿತಗೊಳ್ಳುತ್ತಿದೆ. ಆದರೆ ಇಂತಹ ಶ್ರೇಷ್ಠ ಎಲ್ಲರಿಗೂ ಒಲಿಯವುದಿಲ್ಲ. ನಿರಂತರ ಅಭ್ಯಾಸ, ಅಧ್ಯಯನ ಶೀಲತೆ, ಕಲೆಯ ಮೇಲಿನ ಒಲುಮೆ, ಪ್ರೀತಿ, ಅಭಿಮಾನ ಆ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಮಾಡುತ್ತದೆ. ಬಂಟ್ವಾಳದ ಎಂಜಿನಿಯರ್ ವಿದ್ಯಾರ್ಥಿಯೋರ್ವನಿಗೆ ಯಕ್ಷಗಾನ ಕಲೆ ಒಲಿದಿದೆ. ಬಾಲ್ಯದಿಂದಲೂ ಯಜ್ಷಗಾನದ ಮೇಲಿನ ಆಸಕ್ತಿ ಇಂದು ಈ ಕಲಾವಿದನನ್ನು ಯಕ್ಷ ಲೋಕದಲ್ಲಿ ಸಾಧನೆ ಮಾಡುವಂತೆ ಮಾಡಿದೆ. ಯಕ್ಷಗಾನದ

ಮಂಗಳೂರು: ಸೌಹಾರ್ದ ಇಫ್ತಾರ್ ಕೂಟ – 2024

ಸಂತ ಮದರ್ ತೆರೇಸಾ ವಿಚಾರ ವೇದಿಕೆ ಹಾಗೂ ದ.ಕ.ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವ್ರದ್ದಿ ಸಂಘ ಇವುಗಳ ಜಂಟಿ ಆಶ್ರಯದಲ್ಲಿ ಪ್ರೀತಿ ಹರಡಲಿ ಎಲ್ಲೆಡೆ ಎಂಬ ಘೋಷವಾಕ್ಯದೊಂದಿಗೆ, ಸರ್ವ ಧರ್ಮಗಳ ಹಬ್ಬಗಳು ಸರ್ವ ಜನತೆಯ ಹಬ್ಬವಾಗಲಿ ಎಂಬ ಆಶಯದೊಂದಿಗೆ ನಗರದ ಪುರಭವನದಲ್ಲಿ ಜರುಗಿದ ಸೌಹಾರ್ದ ಇಫ್ತಾರ್ ಕೂಟ ನಡೆಯಿತು. SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿ, CSI ಕರ್ನಾಟಕ ದಕ್ಷಿಣ ಪ್ರಾಂತದ ಧರ್ಮಾಧ್ಯಕ್ಷರಾದ ಅತೀ ವಂದನೀಯ ಹೇಮಚಂದ್ರ ಕುಮಾರ್,

ಮಂಗಳೂರು : ಮತದಾರರ ಜಾಗೃತಿ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶ್ವವಿದ್ಯಾನಿಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಗರದ ವಿಶ್ವವಿದ್ಯಾನಿಲಯ ಕಾಲೇಜು ಆವರಣದ ರವೀಂದ್ರ ಕಲಾಭನವನದಲ್ಲಿ ಸ್ವೀಪ್ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಅಭಿಯಾನವನ್ನು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಡಾ. ಆನಂದ್ ಕೆ.,

ಮೂಡುಬಿದಿರೆ ತಾ.ಪಂಗೆ ಅಧಿಕೃತ EO ಯಾರು?

ಮೂಡುಬಿದಿರೆ : ಇಲ್ಲಿನ ತಾಲೂಕು ಪಂಚಾಯತ್ ನಲ್ಲಿ ಇದೀಗ ಇಬ್ಬರು ಕಾರ್ಯನಿರ್ವಾಹಕ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿದ್ದು ಅಧಿಕೃತ ಕಾರ್ಯನಿರ್ವಾಹಕ ಅಧಿಕಾರಿ ಯಾರೆಂಬುದು ಸಾರ್ವಜನಿಕರಲ್ಲಿ ಗೊಂದಲ ಮೂಡಿದೆ.ಶಿಕ್ಷಣ ಇಲಾಖೆಯಿಂದ ಕಳೆದ ಏಳು ತಿಂಗಳ ಹಿಂದೆ ಮೂಡುಬಿದಿರೆ ತಾ.ಪಂ.ಗೆ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಲೊಕೇಶ್ ಸಿ.ಅವರನ್ನು ಚುನಾವಣಾ ಆದೇಶದ ಹಿನ್ನಲೆಯಲ್ಲಿ ವರ್ಗಾವಣೆ ಮಾಡಲಾಗಿದೆ. ಇಲ್ಲಿಗೆ ಕೋಲಾರದ ವೆಂಕಟಾಚಲಪತಿ ರಾಜ್