ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಆದಿವಾಸಿ ಮಹಿಳೆಯರಿಗೆ ಇದೀಗ ದೆಹಲಿಯ ವಿಮಾನವೇರುವ ಭಾಗ್ಯ ಒದಗಿಬಂದಿದೆ. ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆಯ ಯೋಜನೆಯಾಗಿದ್ದು, ಸಂಜೀವಿನೀ -ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯ ಮಾರ್ಗದರ್ಶನದಲ್ಲಿ ಅನುಷ್ಠಾನಗೊಳ್ಳಲಿದೆ. ಮಾರ್ಚ್ 1 ರಂದು ರಾಷ್ಟ್ರಪತಿಗಳ ಭೇಟಿ ಹಾಗೂ
ಮಂಜೇಶ್ವರ: ಕನ್ನಡ ಮತ್ತು ತುಳು ಚಿತ್ರರಂಗದ ಪ್ರಖ್ಯಾತ ಪೋಷಕ ಮತ್ತು ಹಾಸ್ಯ ನಟರಾದ ಪ್ರಕಾಶ್ ಕೆ. ತೂಮಿನಾಡು ಅವರ ಮಾತೃಶ್ರೀಯವರಾದ ಗಿರಿಜಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರ ಅಂತಿಮ ವಿಧಿ ವಿಧಾನಗಳು ಮಂಗಳವಾರ ಬೆಳಿಗ್ಗೆ ೧೦ ಗಂಟೆಗೆ ತೂಮಿನಾಡು ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ನೈಸರ್ಗಿಕವಾಗಿ ದೊರಕುವ, ದೇಹದ ಕಾವನ್ನು ತಣಿಸಿ ಬಾಯಾರಿಕೆಯನ್ನು ಇಂಗಿಸಿ, ಮನಸ್ಸಿಗೆ ಉಲ್ಲಾಸ ನೀಡುವಅತೀ ಉತ್ತಮ ಪೇಯವೆಂದರೆ ಅದು ಎಳನೀರು ಎಂದರೆ ಅತಿಶಯೋಕ್ತಿಯಾಗಲಾರದು. ಬಹಳ ಸುಲಭವಾಗಿ ಹಳ್ಳಿ, ನಗರ, ಪೇಟೆ, ಊರು, ಕೇರಿ ಹೀಗೆ ಎಲ್ಲೆಡೆ ಅತೀ ಕಡಿಮೆ ದರಕ್ಕೆ ದೊರಕುವ ಈ ನೈಸರ್ಗಿಕ ಪೇಯವನ್ನು ಅಮೃತ ಸದೃಶ ಪೇಯ ಎಂದೂ ಕರೆಯಲಾಗುತ್ತದೆ. ಇದರಲ್ಲಿ ದೊರಕುವ ವಿಟಮಿನ್, ಖನಿಜಾಂಶ, ಪೋಷಕಾಂಶ ಮತ್ತು ಇತರ ಸಮೃದ್ಧವಾದ ಸೋಡಿಯಂ, ಪೊಟಾಷಿಯಂ ಮುಂತಾದ ಲವಣಗಳಿಂದಾಗಿ,
ಬೆಂಗಳೂರಿನಲ್ಲಿ ಲಂಟಾನದಿಂದ ಮಾಡಿದ ಆನೆಗಳು ಈಗ ನೂರಾರು ಸಂಖ್ಯೆಯಲ್ಲಿ ಕಬ್ಬನ್ ಪಾರ್ಕ್, ಲಾಲ್ಬಾಗ್, ವಿಧಾನ ಸೌಧ ಎಂದು ನಾನಾ ಕಡೆಗಳಲ್ಲಿ ಲಗ್ಗೆ ಇಟ್ಟಿವೆ; ದಾಳಿ ಮಾಡಿವೆ. ಇವು ಬೆಂಗಳೂರಿನ ಅಂಚಿನ ಆನೆಕಲ್ ತಾಲೂಕು, ಕನಕಪುರ ರಸ್ತೆಗಳಲ್ಲಿ ಕಾಣಿಸುವ ನಿಜ ಆನೆಗಳಲ್ಲ. ಇವೆಲ್ಲ ಲಂಟಾನದಿಂದ ತಯಾರಿಸಿದ ಆನೆಗಳಾಗಿವೆ. ಕರ್ನಾಟಕ, ತಮಿಳುನಾಡು, ಕೇರಳದ 150ಕ್ಕೂ ಹೆಚ್ಚು ಬಡಕಟ್ಟು ಜನರು ಲಂಟಾನ ಬಳಸಿ ಈ ನಿಜ ಆನೆ ಗಾತ್ರದ ಆನೆಗಳನ್ನು ನಿರ್ಮಿಸಿದ್ದಾರೆ. ಪರಿಸರ
ಇತ್ತೀಚೆಗೆ ಸೋನಿಯಾ ಗಾಂಧಿಯವರು ಕೊಟ್ಟ ಪ್ರಮಾಣಪತ್ರದಲ್ಲಿ ಒಂದಷ್ಟು ಹೂಡಿಕೆ, ಆಭರಣ, ಉಳಿತಾಯ ನನ್ನದೇ ಇದ್ದರೂ ಭಾರತದಲ್ಲಿ ನನಗೆ ಸ್ವಂತ ಮನೆಯಾಗಲಿ, ಸ್ವಂತ ಕಾರು ಇಲ್ಲ ಎಂದು ಹೇಳಿದ್ದಾರೆ. ಅವರಿಗೆ ಇಟೆಲಿಯಲ್ಲಿ ಅವರ ಹಿರಿಯರಿಂದ ಬಂದ ಒಂದು ಮನೆ ಇದೆಯಂತೆ. ಇನ್ನೊಂದು ವಿಷಯವೆಂದರೆ ಭಾರತದಲ್ಲಿ ಭಾರತ ಸರಕಾರದ ಬಳಿಕ ಅತಿ ಹೆಚ್ಚು ಆಸ್ತಿ ಹೊಂದಿರುವ ಸಿಬಿಸಿಐಗೆ ರೋಮ್ ಸಾಮ್ರಾಜ್ಯದ ಒಡೆತನದ ಮುದ್ರೆ ಇದೆ. ಈಗ ಎಲ್ಲ ಕಡೆ ಆಸ್ತಿ ಹೊಂದಿರುವವರು ಮತ್ತು ಆಸ್ತಿ
ಮದುವೆ ಪ್ರಸ್ತಾಪ ತಿರಸ್ಕರಿಸಿದ ಟಿವಿ ನಿರೂಪಕನನ್ನು ಅಪಹರಿಸಿ ಮದುವೆಗೆ ಒತ್ತಾಯಿಸಿದ ಮಹಿಳಾ ಉದ್ಯಮಿ ಒಬ್ಬರು ಈಗ ಪೋಲೀಸು ಕಸ್ಟಡಿ ಸೇರಿರುವ ಘಟನೆಯು ಹೈದರಾಬಾದ್ನಲ್ಲಿ ನಡೆದಿದೆ.ಬಂಧಿತ ಯುವತಿ ಭೋಗಿರೆಡ್ಡಿ ತ್ರಿಶಾ. ಈಕೆ ಐದು ಸ್ಟಾರ್ಟಪ್ ಕಂಪೆನಿಗಳ ವ್ಯವಸ್ಥಾಪಕ ನಿರ್ದೇಶಕಿ ಆಗಿದ್ದಾರೆ. ಮ್ಯಾಟ್ರಿಮೊನಿ ಜಾಲ ತಾಣದ ಮೂಲಕ ಟಿವಿ ಸಂಗೀತ ಚಾನಲ್ ಒಂದರ ನಿರೂಪಕ ಪ್ಣವ್ ಪ್ರೊಫೈಲ್ ನೋಡಿ ಆತನಲ್ಲಿ ತ್ರಿಶಾ ಮದುವೆಯ ಪ್ರಸ್ತಾಪ ಮಾಡಿದ್ದಾಳೆ. ಆದರೆ ಆತ ಮದುವೆಗೆ
ಉಳ್ಳಾಲ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಎಸಿಪಿ ನೇತೃತ್ವದ ಮಾದಕ ದ್ರವ್ಯ ವಿರೋಧಿ ತಂಡ ಬೆಳ್ಮ ಗ್ರಾ.ಪಂ ವ್ಯಾಪ್ತಿಯ ಖಾಲಿ ಜಾಗದಿಂದ ಬಂಧಿಸಲಾಗಿದೆ.ಕೋಟೆಕಾರು ಬೀರಿ ನಿವಾಸಿ ಮಹಮ್ಮದ್ ಇರ್ಫಾನ್ (22) ಬಂಧಿತ.ಬಂಧಿತನಿಂದ ರೂ. 9,660 ಬೆಲೆಯ 322 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯಾ ನಾಯಕ್, ಕೊಣಾಜೆ ಠಾಣಾ ಉಪನಿರೀಕ್ಷಕ ನಾಗರಾಜ್ ಹಾಗೂ
ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಪೂಜೆ ಮತ್ತು ಉತ್ಸವದಲ್ಲಿ, ಮೂಡುಬಿದಿರೆ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಶ್ರೀ ಹನುಮಂತ ದೇವಸ್ಥಾನದ ಸ್ವಯಂಸೇವಕರ ತಂಡ ನಿರಂತರ 3 ದಿನಗಳ ಕಾಲ ಪಲ್ಲಕ್ಕಿ ಹೊರುವ ಸೇವೆಯಲ್ಲಿ ಪಾಲ್ಗೊಂಡರು. ಮದ್ವ ನವಮಿ ಶುಭ ಸಂದರ್ಭದಲ್ಲಿ ಮೂಲ ಮೂರ್ತಿ ಶ್ರೀ ಬಾಲ ರಾಮನಿಗೆ ಭೋಗ ನೈವೇದ್ಯವನ್ನು ನೀಡುವ ಅವಕಾಶವನ್ನೂ ಪಡೆದು
2004ರಿಂದ 2019ರ ನಡುವೆ ಸಂಸದರ ಸಂಪತ್ತು ಏರಿಕೆಯಲ್ಲಿ ಕರ್ನಾಟಕದ ಸಂಸದ ರಮೇಶ ಜಿಗಜಿಣಗಿ ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಸಂಪತ್ತು 2004ರಲ್ಲಿ 54.8 ಲಕ್ಷ ಇದ್ದುದು 2019ಕ್ಕೆ 51.41 ಕೋಟಿಗೆ ಎಂದರೆ 9,098 ಶೇಕಡಾ ಏರಿಕೆ ಆಗಿತ್ತು. ಇಂದೆಲ್ಲ ಬಡವರು ಚುನಾವಣೆಗೆ ನಿಲ್ಲುವುದು ಸಾಧ್ಯವಿಲ್ಲ. 1975ರವರೆಗೆ ಕಾಸಿಲ್ಲದವರು ಕೂಡ ಚುನಾವಣೆಗೆ ನಿಂತುದಿದೆ. ಗೆದ್ದುದೂ ಇದೆ. ಶಾಂತವೇರಿ ಗೋಪಾಲಗೌಡರು ಜನರಿಂದಲೇ ಚಿಲ್ಲರೆ ಸಂಗ್ರಹಿಸಿ ಚುನಾವಣೆ ಗೆಲ್ಲುತ್ತಿದ್ದರು.
ಬಂಟ್ವಾಳ ತಾಲೂಕಿನ ಅನಿಲ್ ಜಾನ್ ಸಿಕ್ವೇರಾ ತನ್ನ 25ನೇ ವಯಸ್ಸಿನಲ್ಲೇ ನ್ಯಾಯಾಧೀಶರಾಗಿ ಆಯ್ಕೆಯಾಗುವ ಮೂಲಕ ರಾಜ್ಯದ ಅತ್ಯಂತ ಚಿಕ್ಕ ವಯಸ್ಸಿನ ನ್ಯಾಯಾಧೀಶ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಮೂಲಕ ಕರಾವಳಿ ಜಿಲ್ಲೆಯ ಅನಿಲ್ ಅಪರೂಪದ ಸಾಧಕರಾಗಿ ಗುರುತಿಸಲ್ಪಟ್ಟಿದ್ದಾರೆ. ಅನಿಲ್ ಜಾನ್ ಸಿಕ್ವೇರಾ ಅವರು ಪ್ರಿಲಿಮ್ಸ್, ಮೇನ್ಸ್ ಹಾಗೂ ಸಂದರ್ಶನ ಹೀಗೆ 2023ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸದ್ಯ ಸಿವಿಲ್ ನ್ಯಾಯಧೀಶರಾಗಿ