Home Archive by category ಕರಾವಳಿ (Page 51)

ಬಂಟ್ವಾಳ: ಸಾರ್ವಜನಿಕ ಕುಂದು ಕೊರತೆಗಳಿಗೆ ಸ್ಪಂದಿಸುವಲ್ಲಿ ಜಿಲ್ಲಾಡಳಿತ ವಿಫಲ: ಪ್ರಭಾಕರ ಪ್ರಭು ಆರೋಪ

ಬಂಟ್ವಾಳ: ಸಾರ್ವಜನಿಕರಿಗೆ ಅತ್ಯಾವಶ್ಯಕವಾಗುವ ಕಂದಾಯ ಇಲಾಖೆಯ ಕೆಲಸ ಕಾರ್ಯಗಳು ತುಂಬಾ ವಿಳಂಬವಾಗುತ್ತಿದ್ದು, ಜನಸಾಮಾನ್ಯರು ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮೇಲೆ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದು, ನೊಂದವರು ಜಿಲ್ಲಾಡಳಿತ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ತಾ.ಪಂ. ಮಾಜಿ ಸದಸ್ಯ ಪ್ರಭಾರಕ ಪ್ರಭು ಆರೋಪಿಸಿದರು.ಅವರು

ಪುತ್ತೂರು: ಪಂಜಳ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮುಂಡೂರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲ ಮೇಳದಲ್ಲಿ ಮಾತನಾಡಿದರು.ಪುಟ್ಟ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಇಲ್ಲಿ ನೀಡಲಾಗುತ್ತಿದ್ದು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವಂತೆ ಶಾಸಕರು ಮನವಿ ಮಾಡಿದರು.

ಪಡುಬಿದ್ರಿ: ಮರಳು ಕದ್ದು ಸಾಗಾಟ: ಚಾಲಕ, ಮರಳು ಸಹಿತ ಟಿಪ್ಪರ್ ವಶಕ್ಕೆ

ಪಡುಬಿದ್ರಿ: “ಶ್ರೀ ಕಟೀಲು” ಹೆಸರಿನ ಟಿಪ್ಪರ್ ನಲ್ಲಿ ಕದ್ದು ಮರಳು ಸಾಗಿಸುತ್ತಿದ್ದ ಈಚರ್ ಲಾರಿ ಮರಳು ಸಹಿತ ಅದರ ಚಾಲಕನನ್ನು ಪಡುಬಿದ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಕೆ.ಎ.20-ಎ.ಬಿ. 3474 ನೋದಾನಿ ಸಂಖ್ಯೆಯ ಶ್ರೀ ಕಟೀಲ್ ಹೆಸರಿನ ಈಚರ್ ನಲ್ಲಿ ಚಾಲಕ ಪ್ರಮೋದ್ ಎಂಬಾತ ಅಕ್ರಮವಾಗಿ ಮರಳು ಸಾಗಿಸುವಾಗ ವಾಹನ ತಪಾಸಣೆ ನಡೆಸುತ್ತಿದ್ದ ಪಡುಬಿದ್ರಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾನೆ. ಮರಳುಗಾರಿಕೆ ಬಗ್ಗೆ ಪರ್ಮಿಟ್ ಆಗಲಿ, ಪರವಾನಿಗೆ ಯಾಗಲಿ,

ಉಡುಪಿ: ಹಿಂದುಗಳ ಮೇಲೆ ಸರ್ಕಾರದಿಂದ ಧಮನಕಾರಿ ಅಸ್ತ್ರ ಪ್ರಯೋಗ: ಆರ್. ಅಶೋಕ್

ರಾಜ್ಯ ಸರ್ಕಾರ ಹಿಂದುಗಳ ಮೇಲೆ ಧಮನಕಾರಿ ಅಸ್ತ್ರವನ್ನು ಪ್ರಯೋಗ ಮಾಡುತ್ತಿದೆ. ಈ ಹಿಂದೆ ದೇಣಿಗೆ ಕೇಳಿದಾಗ ರಾಮಮಂದಿರವನ್ನು ವಿವಾದಿತ ಎಂದಿದ್ದರು. ಅಯೋಧ್ಯೆಯ ಬಗ್ಗೆ ಸಿದ್ದರಾಮಯ್ಯರಿಗೆ ದ್ವೇಷ ಮತ್ತು ವೈರತ್ವ ಇದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಅಲ್ಪಸಂಖ್ಯಾತ ಮತ ಕ್ರೋಡೀಕರಿಸಿ ಚುನಾವಣೆಗೆ ಸಿದ್ಧತೆ ಮಾಡುತ್ತಿದ್ದಾರೆ. ಅಲ್ಪಸಂಖ್ಯಾತರಿಗೆ ೧೦ ಸಾವಿರ ಕೋಟಿ ಕಾಲೋನಿಗೆ ೧ ಸಾವಿರ ಕೋಟಿ

ಉಳ್ಳಾಲ : ಸೋಮೇಶ್ವರ ಪುರಸಭೆ ಚುನಾವಣೆ-ನೂತನ ಸದಸ್ಯರಿಗೆ ಅಭಿನಂದನೆ

ಸೋಮೇಶ್ವರ ಪುರಸಭೆಯಾಗಿ ಮೇಲ್ದರ್ಜೆಗೊಂಡ ಬಳಿಕ ಮೊದಲ ಬಾರಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಪ್ರಚಂಡ ಬಹುಮತದಿಂದ ವಿಜಯಿಗೊಳಿಸಿದ ಮತದಾರ ಬಂಧುಗಳಿಗೆ, ಕಾರ್ಯಕರ್ತರಿಗೆ ಹಾಗೂ ನೂತನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಹಿರಿಯರಾದ ಸೀತಾರಾಮ ಬಂಗೇರಾ ರವರು ದೀಪ ಪ್ರಜ್ವಲನೆಗೊಳಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಸದರಾದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ತಿನ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ

ಪೆರ್ನಾಜೆ: ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜ್ ಮತ್ತು ಪ್ರೌಢಶಾಲೆಯಲ್ಲಿ ಪ್ರತಿಭಾ ಲಾಲಿತ್ಯ 2023 -24

ಪೆರ್ನಾಜೆ ಶ್ರೀ ಸೀತಾರಾಘವ ಪದವಿ ಪೂರ್ವ ಕಾಲೇಜಿನಲ್ಲಿ ಜ.2 ರಂದು “ಪೆರ್ನಾಜೆ ಪ್ರತಿಭಾ ಲಾಲಿತ್ಯ 2023 24 ರ ಪೆರ್ನಾಜೆ ಶ್ರೀ ದಿ. ಸೀತಾರಾಮ್ ಭಟ್ ವೇದಿಕೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪರಮಪೂಜ್ಯ ಸಾದ್ವಿ ಶ್ರೀ ಶ್ರೀ ಮಾತಾ ನಂದಮಯೀ ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಂ ಇವರು ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಈ ಸಂಸ್ಥೆ ಉತ್ತರೋತ್ತರ ಅಭಿವೃದ್ದಿ ಹೊಂದಿ ಮುಂದಿನ ದಿನಗಳಲ್ಲಿ ಈ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕು

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಆಯ್ಕೆ

ಮೂಡುಬಿದಿರೆ: ಪಾಲಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ನಿ. ಕೇಮಾರು ಇದರ ಅಧ್ಯಕ್ಷೆಯಾಗಿ ನೀರಜಾಕ್ಷಿ ಎಸ್.ಶೆಟ್ಟಿ ಪುನರಾಯ್ಕೆಯಾಗಿದ್ದಾರೆ.ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಈ ಹಿಂದಿನ ಎಲ್ಲಾ ನಿರ್ದೇಶಕರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನೀರಜಾಕ್ಷಿ ಶೆಟ್ಟಿ ಅವರು ಸತತ 5ನೇ ಬಾರಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಅಮಿತಾ ನಾಯ್ಕ್, ನಿರ್ದೇಶಕರುಗಳಾಗಿ ನಳಿನಾಕ್ಷಿ

ಕಾಟಿಪಳ್ಳ ಹುಡುಕಿದ ಕಾಟಿ

ಮಂಗಳೂರಿನ ಕದ್ರಿ, ನೀರುಮಾರ್ಗಗಳ ಹಲವೆಡೆ ಕಾಟಿ ನನ್ನ ಕಾಡು ಎಲ್ಲಿದೆ ಎಂದು ಹುಡುಕಿ ಹೋಗುವುದು ವರದಿಯಾಗಿದೆ. ಮಲೆನಾಡಿನ ಎಲ್ಲ ಕಡೆ ಯಾವ ಬೇಲಿಗಳಿಗೂ ಕಾಟಿ, ಕಾಡುಕೋಣ ಜಗ್ಗುವುದಿಲ್ಲ ಎಂದು ಮಲೆನಾಡಿಗರು ದೂರುತ್ತಿದ್ದಾರೆ. ಕಾಡುಕೋಣಗಳಲ್ಲಿ ಕಾಡೆಮ್ಮೆ ಹೆಣ್ಣು ಇದ್ದರೂ ಕಾಡುಕೋಣ ಎಂದೇ ಕರೆಯುತ್ತಾರೆ. ಇದು ಪುರುಷ ವರ್ಗದ ಮೇಲಾಳ್ಕೆ ಕಿತಾಪತಿ ಎಂದು ಕೆಲವು ಮಹಿಳಾ ಹೋರಾಟಗಾರ್ತಿಯರು ದೂರಿದ್ದಾರೆ. ಮಲೆನಾಡಿಗರು ನಮ್ಮ ಬೇಲಿಯನ್ನು ಕಾಡುಕೋಣ ಮುರಿಯುತ್ತಿದೆ ಎಂದು

ಸುಳ್ಯ: ರಾಮಮಂದಿರ ಲೋಕಾರ್ಪಣಾ ಬ್ಯಾನರ್ ಹರಿದ ಕಿಡಿಗೇಡಿಗಳು

ಸುಳ್ಯ ಪೇಟೆಯಲ್ಲಿ ಹಾಕಲಾಗಿರುವ ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದಿದ್ದು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯವರನ್ನ ಆಗ್ರಹಿಸಿದ್ದಾರೆ. ಸುಳ್ಯದ ಮುಖ್ಯರಸ್ತೆಯಲ್ಲಿ ಸುಳ್ಯ ಜಾತ್ರೆ, ಅಯೋಧ್ಯೆ ರಾಮಮಂದಿರ ಹಾಗೂ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ ಬಿಎಂಎಸ್ ನ ಬೆಳ್ಳಿಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಅಳವಡಿಕೆ ಮಾಡಲಾಗಿದೆ. ಅದರಲ್ಲಿ

ಮೂಡುಬಿದಿರೆ : ಹೃದಯಾಘಾತಕ್ಕೆ ಪಂಚಾಯತ್ ಸಿಬ್ಬಂದಿ ಬಲಿ

ಮೂಡುಬಿದಿರೆ : ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ನ ಸಿಬ್ಬಂದಿ ಚಂದ್ರಹಾಸ (29ವ) ಇಂದು ಬೆಳಿಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಲಮುಂಡ್ಕೂರು ಗ್ರಾ.ಪಂಚಾಯತ್ ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ.ದಾದು ಎಂಬವರ ಪುತ್ರರಾಗಿರುವ ಚಂದ್ರಹಾಸ್ ಅವರು ಇಂದು ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಗೆ ನಡೆದುಕೊಂಡು ಬರುತ್ತಿದ್ದ ಸಂದರ್ಭ ಮನೆಯಿಂದ ನೂರು ಮೀ.ದೂರದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ಕಳೆದ 10 ವರ್ಷಗಳಿಂದ ಪಂಚಾಯತ್ ನಲ್ಲಿ