ಉಡುಪಿ : ಉಡುಪಿ ಜಿಲ್ಲೆಯ ಉದ್ಯಾವರ ಮಹತೋಭಾರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪರಿವಾರ ದೈವಗಳಾದ ವಾರ್ತಾಳಿ ಪಾಶಾಣ ಕಲ್ಲುರ್ಟಿ ದೈವಗಳಿಗೆ ಬ್ರಹ್ಮಕಲಶೋತ್ಸವ, ರಾಶಿ ಪೂಜೆ ಮತ್ತು ಸಿರಿ ಸಿಂಗಾರದ ನೇಮೋತ್ಸವದ ಪ್ರಯುಕ್ತ ಬೆಳಿಗ್ಗೆ ನವಕ ಪ್ರಧಾನ ಕಲಶಾಭಿಷೇಕ ನಡೆದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಭಂಡಾರ ಇಳಿದು ಮಧ್ಯಾಹ್ನ ಅನ್ನಸಂತರ್ಪಣೆ ಜರಗಿತು. ರಾತ್ರಿ
ಉಡುಪಿ : ನೆನ್ನೆಯಿಂದ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಇಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತ್ರತ್ವದಲ್ಲಿ ನೆಡೆದ ಚಂಡಿಹೋಮ ಹಾಗೂ ಇತರೆ ವಿಶೇಷ ಪೂಜೆಯಲ್ಲಿ ಭಾಗಿಯಾದರು. ಇವರ ಆತ್ಮೀಯರು ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹಾಕಯ್ ಅಕ್ಷಯ ಎಂ . ಇವರೊಂದಿಗೆ ಭಾಗಿಯಾಗಿದ್ದರು.
ದಿನ ಕಳೆದಂತೆ ಹತ್ತಿರವಾಗುತ್ತಿದೆ ಉಡುಪಿಯ ಭವ್ಯ ಆಚರಣೆ. ಇಡೀ ಜಗತ್ತಿನಲ್ಲೇ ವಿಶಿಷ್ಟವಾದ ಸಂಪ್ರದಾಯಗಳಲ್ಲಿ ಒಂದು, ಶತಮಾನಗಳಿಂದ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಚಾಚೂ ತಪ್ಪದೇ ಆಚರಿಸಿಕೊಂಡು ಬರುತ್ತಿರುವ “ಪರ್ಯಾಯ”ಮಹೋತ್ಸವ. ಉಡುಪಿಯ 8 ಮಠಗಳ ನಡುವೆ ಶ್ರೀ ಕೃಷ್ಣ ದೇವಾಲಯದ ಜವಾಬ್ದಾರಿಗಳ ಹಸ್ತಾಂತರವನ್ನೇ ಪರ್ಯಾಯ ಮಹೋತ್ಸವ ಎನ್ನುತ್ತಾರೆ. ಪ್ರಸ್ತುತ ಕೃಷ್ಣಪುರ ಮಠದ ವಿದ್ಯಾಸಾಗರ ತೀರ್ಥರು ಶ್ರೀ ಕೃಷ್ಣನ ಆರಾಧನೆಯಲ್ಲಿ ತೊಡಗಿದ್ದರೆ, ಮುಂದಿನ ಸರದಿಯಲ್ಲಿ
ಜೀವನದಲ್ಲಿ ಉತ್ತಮವಾಗಿ ಬದುಕುವುದೇ ಧರ್ಮ. ಪ್ರತಿಯೊಂದು ಜೀವರಾಶಿಗೂ ಬದುಕುವ ಹಕ್ಕು ಇದೆ. ಧರ್ಮ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವ ಕಾರ್ಯ ನಮ್ಮಿಂದ ನಡೆಯಬೇಕು ಎಂದು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಹಳೆಯಂಗಡಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಧಾನದ ಅಷ್ಟಬಂಧ ಬ್ರಹ್ಮಕುಂಭಾಭೀಷೇಕದ ಅಂಗವಾಗಿ ಸ್ಕಂದ ಮಂಟಪದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದ ಅವರು ಇಂದಿನ ಯುಗದಲ್ಲಿ ಸಂಸ್ಕಾರವನ್ನು
ಕುಲಶೇಖರ, ಮೇ 11: ಮಂಗಳೂರು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಆಡಳಿತದಲ್ಲಿರುವ ಇತಿಹಾಸ ಪ್ರಸಿದ್ಧ ಕುಲಾಲ ಸಮುದಾಯದ ಕುಲದೇವರಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನವು ಶಿಲಾಮಯವಾಗಿ ರೂ. ಹತ್ತು ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿದ್ದು, ಮೇ 14ರಿಂದ 25ವರೆಗೆ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಬಹಳ ವಿಜೃಂಭನೆಯಿಂದ ಜರಗಲಿದೆ ಎಂದು ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ, ಬ್ರಹ್ಮಕಲಶೋತ್ಸವ
ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಬ್ರಹ್ಮಕಲಶದ ವಿವಿಧ ಸಮಿತಿಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ
ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ.ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ
ಮಂಜೇಶ್ವರದ ಮಿಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಟ್ಟತ್ತಮೊಗರುವಿನಲ್ಲಿ ಮೊಗೇರ ದೈವದ ಪವಾಡ ಕಂಡು ಅಲ್ಲಿನ ಜನತೆ ಅಚ್ಚರಿಗೆ ಒಳಗಾಗಿದ್ದಾರೆ. ಮೊಗೇರ ದೈವಗಳ ವರ್ಷಾವಧಿ ನೇಮೋತ್ಸವ ನಡೆಯುತ್ತದೆ. ಈ ಬಾರಿ ದೈವಗಳ ಭಂಡಾರವನ್ನು ಈ ವರ್ಷದ ಉತ್ಸವಕ್ಕೆಂದು ತೆಗೆದಿಡುವಾಗ, ಕಳೆದ ವರ್ಷ ದೈವದ ಭಂಡಾರಕ್ಕೆ ಅರ್ಪಿಸಿದ ಮಲ್ಲಿಗೆ ಹೂ ವರ್ಷ ಕಳೆದರೂ ಇಂದಿಗೂ ಬಾಡದೆ ಹಾಗೆ ಇರುವುದು ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ಇದು ದೈವದ ಕಾರಣಿಕ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ. 10ರಿಂದ 20ರ ತನಕ ನಡೆಯಲಿರುವ ವೈಭವದ ಜಾತ್ರೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆಯಾಯಿತು. ಹೊರೆಕಾಣಿಕೆ ಮೆರವಣಿಗೆಗೆ ಪುತ್ತೂರು ಸೀಮೆ ಹಾಗೂ ವಿವಿಧ ಧಾರ್ಮಿಕ ಕ್ಷೇತ್ರಗಳಿಂದ ಹೊರೆಕಾಣಿಕೆ ದರ್ಬೆ ವೃತ್ತ ಹಾಗೂ ಬೊಳುವಾರಿನ ಸುಬ್ರಹ್ಮಣ್ಯ ನಗರದಲ್ಲಿ ಸೇರಿ ಏಕಕಾಲದಲ್ಲಿ ಚಾಲನೆ ನೀಡಲಾಯಿತು. ದರ್ಬೆ ವೃತ್ತದಲ್ಲಿ ಶ್ರಿ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮಿಜಿ ತೆಂಗಿನಕಾಯಿ
ಮಂಜೇಶ್ವರ : ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ಮಂಜೇಶ್ವರ ಝೋನಲ್ ಸಮಿತಿಯ ವತಿಯಿಂದ ಹೊಸಂಗಡಿ ಗ್ರ್ಯಾಂಡ್ ಆಡಿಟೋರಿಯಂನಲ್ಲಿ ಪವಿತ್ರವಾದ ರಂಝಾನ್ ಇಫ್ತಾರ್ ಸಂಗಮ ಹಮ್ಮಿಕೊಳ್ಳಲಾಯಿತು. ಖ್ಯಾತ ವಿದ್ವಾಂಸ ಮುಜಾಹಿದ್ ಬಾಳುಶ್ಯೇರಿ ಯವರು “ನಾಳೆಗಾಗಿ ಸಿದ್ಧರಾಗಿ” ಎಂಬ ವಿಷಯದ ಕುರಿತು ಪ್ರವಚನ ನೀಡಿದರು. ರಂಜಾನ್ ತಿಂಗಳಲ್ಲಿ ಧರ್ಮದ ಹೆಸರಿನಲ್ಲಿ ವಿಶ್ವಾಸಿಗಳನ್ನು ವಂಚಿಸಿ ಹಣ ಸಂಪಾದಿಸಲು ಬಯಸುವ ಮೋಸದ ಪುರೋಹಿತರ ಬಗ್ಗೆ ವಿಶ್ವಾಸಿಗಳು ಹೆಚ್ಚು