Home Archive by category ಹಾನಿ (Page 2)

ನೆಲ್ಯಾಡಿ: ಶಾರ್ಟ್‌ಸರ್ಕ್ಯೂಟ್‌ನಿಂದ ಕಾರು ಭಸ್ಮ

ನೆಲ್ಯಾಡಿ : ಸ್ವಿಫ್ಟ್ ಕಾರೊಂದರ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದ ಕಾರಣ ಕಾರಿನ ಮುಂಭಾಗ ಸಂಪೂರ್ಣ ಸುಟ್ಟು ಕರಕಲಾದ ಘಟನೆ ನೆಲ್ಯಾಡಿ ಸಮೀಪದ ಗೋಳಿತೊಟ್ಟು ಸರಕಾರಿ ಶಾಲೆಯ ಬಳಿ ಸಂಭವಿಸಿದೆ. ಕಾರಿನಲ್ಲಿ ಪುತ್ತೂರು ಮೂಲದ ಗೋಕುಲದಾಸ ಹಾಗೂ ಮೆಲ್ವಿನ್ ಬೆಂಗಳೂರಿನಿಂದ ತಮ್ಮ ಊರಿಗೆ ಪ್ರಯಾಣಿಸುತ್ತಿದ್ದರು. ದುರ್ಘಟನೆಯಲ್ಲಿ ಪ್ರಯಾಣಿಕರಿಬ್ಬರೂ ಅದೃಷ್ಟವಶಾತ್

ಬಂಟ್ವಾಳ: ಬಸ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ

ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿ ನಿವಾಸಿ ಮಹಮ್ಮದ್ ಸುಹೈಲ್ (40) ಗಂಭೀರವಾಗಿ ಗಾಯಗೊಂಡಿದ್ದಾರೆ. ಬಂಟ್ವಾಳ ಕೆಳಗಿನ ಪೇಟೆಗೆ ಬಂದು ಬೆಳ್ತಂಗಡಿ ಗೆ ತೆರಳುವ ವೇಳೆ ಜಕ್ರಿಬೆಟ್ಟು ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ. ಬಂಟ್ವಾಳ ಪೇಟೆಯಿಂದ ಜಕ್ರಿಬೆಟ್ಟು ಜಂಕ್ಷನ್

ಗಂಗೊಳ್ಳಿ ಜೆಟ್ಟಿ ಕುಸಿತ ಪ್ರಕರಣ – ಕಳಪೆ ಕಾಮಗಾರಿ ಕಂಡು ಬಂದಲ್ಲಿ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು : ಎಸ್. ಅಂಗಾರ

ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿತ ಪ್ರಕರಣ ಇಡೀ ಸರಕಾರ ಮತ್ತು ನಮಗೆ ಮಾಡಿದ ಅವಮಾನವಾಗಿದ್ದು, ಪ್ರಕರಣವನ್ನು ಖಾಸಗಿ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಯಾರೇ ತಪ್ಪಿತಸ್ಥರಾದರೂ ಅವರ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಿದೆ  ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆ, ಉಡುಪಿ ಜಿಲ್ಲಾ ಉಸ್ತುವರಿ ಸಚಿವ ಎಸ್. ಅಂಗಾರ ಹೇಳಿದರು. ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಅವರು

ಗಂಗೊಳ್ಳಿ ಮೀನುಗಾರಿಕಾ ಬಂದರು ಪ್ರದೇಶ ಜೆಟ್ಟಿ ಭಾಗ ಕುಸಿತ

ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಕಾರಣಗಳಿಂದಾಗಿ ಸುದ್ದಿಯಾಗುತ್ತಲೇ ಇದ್ದ ಕುಂದಾಪುರದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಸಂಜೆ 5.30 ರ ಹೊತ್ತಿಗೆ ಘಟನೆ ನಡೆದಿದ್ದು, ನಿರಂತರವಾಗಿ

ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ. 135 ಮಂದಿ ಪ್ರಯಾಣಿಕರೊಂದಿಗೆ ಕೋಝಿಕ್ಕೋಡ್

ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಆರ್ ಟಿಸಿ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅವಘಡ

ಕಡಬ : ಕಾರುಗಳೆರಡರ ಓವರ್ ಟೇಕ್ ಭರದಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಭಾರೀ ಅವಘಡವೊಂದು ತಪ್ಪಿದ ಘಟನೆ ಕಡಬ ಸಮೀಪದ ಮರ್ಧಾಳದ ಬ್ರಾಂತಿಕಟ್ಟೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಎಕ್ಸ್ಪ್ರೆಸ್ ಬಸ್ ಗೆ ಬ್ರಾಂತಿಕಟ್ಟೆ ತಿರುವಿನಲ್ಲಿ ಕಾರೊಂದು ಓವರ್ಟೇಕ್ ಮಾಡುವಾಗ ಹೊಡೆದು ಮುಂದೆ ಸಾಗಿದ್ದು, ಅಪಾಯವನ್ನರಿತ ಬಸ್ ಚಾಲಕ ರಸ್ತೆಯಿಂದ ಬಸ್ಸನ್ನು ಕೆಳಗಿಳಿಸಿ ನಿಯಂತ್ರಿಸಿದ

ಸುಳ್ಯ : ಇನ್ನು ದುರಾಸ್ಥಿಯಾಗದೆ ಉಳಿದ 1954 ನೇ ಇಸವಿಯ ಪುನರ್ಜಿತ ರಸ್ತೆ

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು

ಕಾರ್ಕಳ:ಕೆಲವೆಡೆ ಬೀಸಿದ ಸುಂಟರ ಗಾಳಿ, ಹಲವು ಮನೆಗಳಿಗೆ ಹಾನಿ

ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಅದಲ್ಲದೆ ಸಾಕಿದ ಕುರಿಯ ಮೇಲೆ ಚಾವಣಿ ತಗಡು ಬಿದ್ದು ಸುಮಾರು ಏಳು ಸಾವಿರ ರೂಪಾಯಿ ಮೌಲ್ಯದ ಕುರಿ ಸಾವನಪ್ಪಿದೆ. ಅದೇ ರೀತಿ ಜಹೀರ್ ಎಂಬವರ ಮನೆ ಚಾವಣಿ ಹಾರಿ ಹೋಗಿ ಸುಮಾರು 25,000 ನಷ್ಟ ಉಂಟಾಗಿದೆ. ಅಲ್ಲಿ ಸಮೀಪ ಮುನಾವರ್ ಸಾಹೇಬರ ಮನೆ ಚಾವಣಿ ಹಾರಿ […]

ಮರಗಳು ಉರುಳಿಬಿದ್ದು `ಕೊಲ್ಯ ಕೆರೆ’ಗೆ ಹಾನಿ

ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ ಭಾಗ ಕುಸಿದು ಅಪಾಯದ ಸ್ಥಿತಿಯಲ್ಲಿದ್ದು, ರಸ್ತೆ ಸಂಪರ್ಕಕ್ಕೆ ತಡೆಯಾಗುವ ಆತಂಕ ಎದುರಾಗಿದೆ.

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ