Home Archive by category ಕರಾವಳಿ

ಅಲೋಶಿಯಸ್ ವಿವಿಯ ಪ್ರಥಮ ಕುಲಪತಿಯಾಗಿ ಡಾ. ಪ್ರವೀಣ್ ಮಾರ್ಟಿಸ್ ನೇಮಕ

ಸಂತ ಅಲೋಶಿಯಸ್ (ಸ್ವಾಯತ್ತ) ಕಾಲೇಜು ಇತ್ತೀಚೆಗೆ ಯುಜಿಸಿಯಿಂದ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯವೆಂದು ಮಾನ್ಯತೆಪಡೆದಿದ್ದು, ಕಾಲೇಜಿನ ಪ್ರಾಂಶುಪಾಲರಾಗಿದ್ದ ರೆ.ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಅವರು ಅದರ ಪ್ರಥಮ ಕುಲಪತಿಯಾಗಿನೇಮಕಗೊಂಡಿರುತ್ತಾರೆ ಎಂದು ಕರ್ನಾಟಕ ಜೆಸ್ವಿಟ್ ಪ್ರಾಂತ್ಯದ ಪ್ರೊವಿನ್ಶಿಯಲ್ ಹಾಗೂ ಕುಲಾಧಿಪತಿಯವರಾದ ವಂ. ಫಾ.

ಹರೇಕಳ ಕೊಲೆಯತ್ನ ಪ್ರಕರಣ – 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಉಳ್ಳಾಲ: ಕಳೆದ ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹರೇಕಳ ಕಡವಿನಬಳಿಯ ಅಂಗಡಿ ಮಾಲೀಕನ ದರೋಡೆ ಮತ್ತು ಕೊಲೆಯತ್ನ ಪ್ರಕರಣಕ್ಕೆ ಸಂ ಬAಧಿಸಿದ ಉಳ್ಳಾಲ ಉಳಿಯ ಮರಿಯಕ್ಲಬ್ ನಿವಾಸಿ ರಾಜೇಶ್ ಸುವರ್ಣ (24) ಎಂಬಾತನನ್ನು ಎಸಿಪಿ ಧನ್ಯಾ ನಾಯಕ್ ನೇತೃತ್ವದ ಮಾದಕದ್ರವ್ಯ ವಿರೋಧಿ ಪೊಲೀಸ್ ತಂಡ ಬಂಧಿಸಿದೆ.ಹರೇಕಳ ಕಡವಿನ ಬಳಿ ಬಳಿಯಿರುವ ಎನ್ .ಎಫ್ ಜನರಲ್ ಸ್ಟೋರ್ ಮಾಲೀಕ ಅಬ್ದುಲ್ ರಹಿಮಾನ್ ಎಂಬವರ ಮೇಲೆ 2017ರ ಮೇ.24 ರಂದು ರಿಕ್ಷಾದಲ್ಲಿ

ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಮೋಹನ್ ಕೊಪ್ಪಲ ಆಯ್ಕೆ

ಮಂಗಳೂರು : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಂಗಳೂರು ಘಟಕದ ಸಂಚಾಲಕರು, ತುಳು ನಾಟಕ ಕಲಾವಿದರ ಒಕ್ಕೂಟದ ಕೋಶಾಧಿಕಾರಿ, ತುಳು ರಂಗಭೂಮಿ, ಚಲನಚಿತ್ರ ನಟರಾದ ಶ್ರೀ ಮೋಹನ್ ಕೊಪ್ಪಲ ಕದ್ರಿ ಯವರು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.ಮೋಹನ್ ಕೊಪ್ಪಲ ರವರು ಈ ಹಿಂದೆ ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ ಹಾಗೂ ಲಯನ್ಸ್ ಕ್ಲಬ್ ಕೊಡಿಯಾಲ್ ಬೈಲ್ ಇದರ ಅಧ್ಯಕ್ಷರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ.

ನೆಲ್ಯಾಡಿ: ಹೊಸಮಜಲುನಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ.ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೌಕ್ರಾಡಿ, ವರ್ತಕರ ಹಾಗೂ ಕೈಗಾರಿಕಾ ಸಂಘ ಕೌಕ್ರಾಡಿ-ನೆಲ್ಯಾಡಿ, ಅಶ್ವತ್ಥ ಗೆಳೆಯರ ಬಳಗ ಹೊಸಮಜಲು, ಕೌಕ್ರಾಡಿ ಗ್ರಾ.ಪಂ.ಹಾಗೂ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲಾ ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಸುಳ್ಯ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಾಗಾರ ಹಾಗೂ ಉಚಿತ

ಕರ್ನಾಟಕ ಸರಕಾರ ಆಹಾರ ಆಯೋಗದ ಸದಸ್ಯರಾಗಿ ಹಿರಿಯ ಕಾಂಗ್ರೆಸ್ಸಿಗ ಸುಮಂತ್ ರಾವ್ ಆಯ್ಕೆ

1991ರಿಂದ ವಿದ್ಯಾರ್ಥಿ ಕಾಂಗ್ರೆಸ್ ನಲ್ಲಿ (nsui ) ಗುರುತಿಸಿಕೊಂಡು ಯು. ಟಿ ಖಾದರ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿ ಹೋರಾಟವನ್ನು ಸಂಘಟಿಸಿಕೊಂಡು ಎನ್ ಎಸ್ ಯು ಐ ಯಲ್ಲಿ ಅವಿಭಾಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಧಾರ್ಮಿಕ ಕ್ಷೇತ್ರದಲ್ಲಿ ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾವೂರಿನಲ್ಲಿ ಪರಿಚಯ ಕಲಾ ರಂಗ

ಹೆಣ್ಣು ಸಂಖ್ಯೆ ಮಾತ್ರ ಅಭಿವೃದ್ದಿ ಸೂಚಕವಲ್ಲ

ಭಾರತದ ಹನ್ನೆರಡು ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯು ಗಂಡಸರಿಗಿಂತ ಹೆಚ್ಚು ಇರುವುದಾಗಿ ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಭಾರತದಲ್ಲಿ 1,000 ಗಂಡಸರಿಗೆ 948 ಸ್ತ್ರೀ ಮತದಾರರು ಮಾತ್ರ ಇದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಆದರೆ 12 ರಾಜ್ಯಗಳಲ್ಲಿ ಗಂಡಿಗಿಂತ ಹೆಣ್ಣು ಮತದಾರರ ಸಂಖ್ಯೆಯೇ ಹೆಚ್ಚು ಎಂಬುದು ತಿಳಿದು ಬಂದಿದೆಪುರುಷರಿಗಿಂತ ಹೆಚ್ಚು ಸ್ತ್ರೀ ಮತದಾರರಿರುವ ಕ್ಷೇತ್ರಗಳಲ್ಲಿ ಮಂಗಳೂರು

ಉಳ್ಳಾಲ: ಬೈಕ್ ಢಿಕ್ಕಿ- ಪಾದಚಾರಿ ಬೇಕರಿ ಮಾಲೀಕ ಸಾವು

ಉಳ್ಳಾಲ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49)ಮೃತರು. ರಾಜೇಶ್ ಅವರಿಗೆ ತಲಪಾಡಿ ಹಳೆ ಬಸ್ಸು ತಂಗುದಾಣದ ಬಳಿ ಬೇಕರಿ ಇದ್ದು, ಎದುರಿನ ಹೆದ್ದಾರಿ ಬದಿಯಲ್ಲೇ ಮನೆಯಿದೆ. ಭಾನುವಾರದಂದು ತಲಪಾಡಿ ದೇವಿಪುರದ ರಥೋತ್ಸವ ಇದ್ದ ಹಿನ್ನಲೆ ರಾಜೇಶ್ ಅವರು ಮನೆಗೆ ಬಂದಿದ್ದ ನೆಂಟರನ್ನು ಉಪಚರಿಸಿ

ಮಂಗಳೂರು : “ದಾಸ ನಮನ”- ಸಂಗೀತ ಕಾರ್ಯಾಗಾರ

ಮಂಗಳೂರು: ಧ್ಯಾನಸಂಗೀತ ಅಕಾಡೆಮಿ ಕಲಾ ಟ್ರಸ್ಟಿನ ವತಿಯಿಂದ ಸಂಗೀತ ವಿದ್ಯಾರ್ಥಿಗಳಿಗಾಗಿ ಮತ್ತು ಸಂಗೀತಾಸಕ್ತರಿಗಾಗಿ  “ದಾಸ ನಮನ” ಸಂಗೀತ ಕಾರ್ಯಾಗಾರವು  ಮಂಗಳೂರು ವಿಟಿ ರಸ್ತೆಯ ಶ್ರೀ ಕೃಷ್ಣ ಮಂದಿರ ಸಭಾಂಗಣದಲ್ಲಿ  ನಡೆಯಿತು.  ಕಲಾವಿದರಾದ ಹುಬ್ಬಳ್ಳಿಯ ಪಂಡಿತ್ ಮಲ್ಲಿಕಾರ್ಜುನ ಸಂಶಿ  ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ಮಾಡಿದರು. ದಾಸಪರಂಪರೆಯಲ್ಲಿ ಬಂದ ಅಪರೂಪದ ಹಾಡುಗಳಿಗೆ ಹಿಂದೂಸ್ತಾನಿ ರಾಗ ಆಧಾರಿತ ಸ್ವರಸಂಯೋಜನೆ ಮತ್ತು ಕಲಿಕಾ ವಿಧಾನದ

ಉಳ್ಳಾಲ: ಮೂಲಭೂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ : ಯು.ಟಿ ಖಾದರ್

ಉಳ್ಳಾಲ: ಚುನಾವಣಾ ಸಂದರ್ಭದಲ್ಲಿ ಅಭಿವೃದ್ಧಿ ಗೆ ಸಂಬಂಧಿಸಿದಂತೆ ಯಾವುದೆಲ್ಲ ಭರವಸೆ ನೀಡಿದ್ದೇನೆ ಯೊ ಅದನ್ನು ಮುಂದಿನ ವರ್ಷದಲ್ಲಿ ಕಾರ್ಯಗತ ಗೊಳಿಸಲಾಗುವುದು ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.ಅವರು ಕೋಟೆಕಾರ್ ಪ.ಪಂ‌ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ರಸ್ತೆಗಳ ಅಭಿವೃದ್ಧಿ ಆಗಿದೆ.ಸೋಮೇಶ್ವರ ಪುರಸಭೆ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಗೆ 70 ಕೋಟಿ ರೂ. ಮಂಜೂರು ಮಾಡಲಾಗಿದೆ.ಈ ಪೈಕಿ 25 ಕೋಟಿ ರೂ

ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಉದ್ಘಾಟನೆ

ಸ್ವಂತ ಕಟ್ಟಡಗಳು ಇರುವ ಅಂಗನವಾಡಿಗಳಿಗೆ ಡಿಜಿಟಲ್ ವ್ಯವಸ್ಥೆ ಆಗಿದೆ. ಉಳಿದ ಕೇಂದ್ರಗಳಿಗೆ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಬೇಕಿದೆ. ನರಿಂಗಾನದಲ್ಲಿ ಗ್ರಾಮ ಪಂಚಾಯಿತಿ ಮುತುವರ್ಜಿ ವಹಿಸಿರುವುದು ಉತ್ತಮ ಬೆಳವಣಿಗೆ ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದರು.ನರಿಂಗಾನದ ಕಲ್ಲರಕೋಡಿಯಲ್ಲಿ ಅಂಗನವಾಡಿ ಕೇಂದ್ರದ ಡಿಜಿಟಲ್ ವ್ಯವಸ್ಥೆ ಶನಿವಾರ ಉದ್ಘಾಟಿಸಿ ಮಾತನಾಡಿದರು.ಸ್ಥಳದಾನಿಗಳಾದ ಮಹಮ್ಮದ್ ಪಾರೆ, ರಝಾಕ್ ಪಾರೆ, ಮಜೀದ್ ಪಾರೆ, ಜನಶಿಕ್ಷಣ