ಭಾರತದ ಹನ್ನೆರಡು ರಾಜ್ಯಗಳಲ್ಲಿ ಮಹಿಳಾ ಮತದಾರರ ಸಂಖ್ಯೆಯು ಗಂಡಸರಿಗಿಂತ ಹೆಚ್ಚು ಇರುವುದಾಗಿ ಚುನಾವಣಾ ಆಯೋಗ ನೀಡಿರುವ ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಭಾರತದಲ್ಲಿ 1,000 ಗಂಡಸರಿಗೆ 948 ಸ್ತ್ರೀ ಮತದಾರರು ಮಾತ್ರ ಇದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. ಆದರೆ 12 ರಾಜ್ಯಗಳಲ್ಲಿ ಗಂಡಿಗಿಂತ ಹೆಣ್ಣು ಮತದಾರರ ಸಂಖ್ಯೆಯೇ ಹೆಚ್ಚು
ತಾನು ಕಳ್ಳ ಪರರ ನಂಬ ಎಂಬ ಸ್ಥಿತಿ ಯಾರದ್ದು ಎಂದು ನೀವೇ ಲೆಕ್ಕ ಹಾಕಿಕೊಳ್ಳಿ. ಒಳಾಡಳಿತ ಮಂತ್ರಿಗಳಾದ ಅಮಿತ್ ಶಾ ಹೇಳುವುದು ಕೇಳಿ. ನಾವು ಚುನಾವಣಾ ಬಾಂಡ್ ಮೂಲಕ ಮಾತ್ರ ಪಕ್ಷದ ನಿಧಿ ಪಡೆದಿದ್ದೇವೆ. ಆದರೆ ಕಾಂಗ್ರೆಸ್ ಮತ್ತಿತರ ಪಕ್ಷಗಳು ನಗದು ದೇಣಿಗೆ ಪಡೆದು ಸಾವಿರ ರೂಪಾಯಿ ಕಿಸೆಗೆ ಹಾಕಿಕೊಂಡು, ನೂರು ರೂಪಾಯಿ ಮಾತ್ರ ಪಕ್ಷದ ಖಾತೆಗೆ ಜಮಾ ಮಾಡಿವೆ. ಅಮಿತ್ ಶಾ ಅವರ ಈ ಹೇಳಿಕೆಗೆ ಬಪ್ಪರೆ ಭಳಿರೇ ಎನ್ನದೆ ವಿಧಿಯಿಲ್ಲ.ಭಾರ್ತಿ ಏರ್ಟೆಲ್ನವರು ಬಿಜೆಪಿ ಪಕ್ಷಕ್ಕೆ
ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಇಂದು ನಮ್ಮ ಪ್ರಮುಖ ಬೂತ್ ಕಾರ್ಯಕರ್ತರು ಜೊತೆಗಿದ್ದೀರಿ.
ಪಶ್ಚಿಮ ಬಂಗಾಳದ ಎಲ್ಲಾ 42 ಲೋಕಸಭಾ ಸ್ಥಾನಗಳಿಗೆ ಟಿಎಂಸಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಕನಿಷ್ಠ ಎಂಟು ಹಾಲಿ ಸಂಸದರನ್ನು ಕೈಬಿಟ್ಟಿದೆ ಮತ್ತು ಮಾಜಿ ಕ್ರಿಕೆಟಿಗರಾದ ಯೂಸುಫ್ ಪಠಾಣ್ ಮತ್ತು ಕೀರ್ತಿ ಆಜಾದ್ ಅವರಂತಹ ಹಲವು ಹೊಸ ಮುಖಗಳನ್ನು ಕಣಕ್ಕಿಳಿಸಿದೆ. ಈ ಬಾರಿಯ ಲೋಕಸಭೆ ಚುನಾವಣೆಗೆ ಪಕ್ಷವು 16 ಹಾಲಿ ಸಂಸದರನ್ನು ಮತ್ತು 12 ಮಹಿಳೆಯರನ್ನು ಕಣಕ್ಕಿಳಿಸಿದೆ. ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ದ್ದಾರೆ,
ಕೇರಳದ ಮುಖ್ಯಮಂತ್ರಿಯಾಗಿದ್ದ ಎ. ಕೆ. ಕರುಣಾಕರ್ ಮಕ್ಕಳು ಎರಡು ದಾರಿ ಹಿಡಿದಿದ್ದರೂ ಕಾಂಗ್ರೆಸ್ ತಲೆ ಕೆಡಿಸಿಕೊಳ್ಳದೆ ಮುರಳೀಧರನ್ರಿಗೆ ಟಿಕೆಟ್ ನೀಡಿದೆ. ಮರಳೀಧರನ್ರು ಸದ್ಯ ವಡಕ್ಕರ ಸಂಸದರು. ಆದರೆ ಅವರಿಗೆ ಈಗ ತ್ರಿಶೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ತ್ರಿಶೂರು ಕರುಣಾಕರನ್ರ ಮೂಲ ನೆಲೆ. ಪದ್ಮಜಾರು ಬಿಜೆಪಿಗೆ ಸೇರಿರುವುದರಿಂದ ಮುರಳೀಧರನ್ರಿಗೆ ಕ್ಷೇತ್ರ ಬದಲಿಸಿ ಟಿಕೆಟ್ ನೀಡಲಾಗಿದೆ. ತ್ರಿಶೂರ್ನಲ್ಲಿ ಲೋಕಸಭೆಗೆ ಸ್ಪರ್ಧಿಸಿದ ಕರುಣಾಕರನ್
ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ಕರಾಳ ದಿನ ಎಂದು ಕರೆದದ್ದು ತಪ್ಪಲ್ಲ. ಅದು ಅವರು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ. ಸರಕಾರದ ಕ್ರಮಗಳನ್ನು ಟೀಕಿಸುವ ಹಕ್ಕು ಪ್ರಜಾಪ್ರಭುತ್ವದಲ್ಲಿ ಪ್ರಜೆಗೆ ಇದೆ ಎಂದೂ ಅದು ಹೇಳಿದೆ. ಇದೇ ಸಂದರ್ಭದಲ್ಲಿ ಇನ್ನೊಂದು ಮಾತನ್ನು ಸಹ ಸುಪ್ರೀಂ ಕೋರ್ಟು ಹೇಳಿದೆ. ಪಾಕಿಸ್ತಾನಕ್ಕೆ ಯಾರಾದರೂ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದರೆ ಅದು ಅಪರಾಧ ಆಗುವುದಿಲ್ಲ. ಅದು ಸ್ನೇಹ ಸೂಚಕ
ಕಲ್ಕತ್ತಾ ಹೈಕೋರ್ಟಿನ ನ್ಯಾಯಮೂರ್ತಿ ಗಂಗೋಪಾಧ್ಯಾಯರು ನ್ಯಾಯಾಲಯ ಬಿಟ್ಟು, ಬಿಜೆಪಿಯ ರಾಜಕೀಯ ಮಾಡಲು ಹೊರಟಿದ್ದಾರೆ. ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿ ಇದೆ ಎಂದರೆ ಅದು ಪೂರ್ಣ ಸುಳ್ಳಲ್ಲ.ಭಾರತದ ಪ್ರಜಾಪ್ರಭುತ್ವ ಹಲವು ಅಪಾಯಗಳಿಂದ ಪಾರಾಗಿ ಬಂದಿದೆ. ಆದರೆ ಪ್ರಜಾಪ್ರಭುತ್ವದ ಹೆಸರಲ್ಲೇ ನಿರಂಕುಶ ಅಧಿಕಾರದ ಅಮಲು ಈಗ ಸ್ಪಷ್ಟವಾಗಿದೆ. ಅದಾನಿ, ಅಂಬಾನಿ ಮಂದಿ ಪ್ರಧಾನಿ ಕಚೇರಿಯಲ್ಲಿ ಧಾರಾಳವಾಗಿ ಸಿಗುತ್ತಾರೆ. ಜಾರಿ ನಿರ್ದೇಶನಾಲಯ ಪ್ರತಿಪಕ್ಷಗಳನ್ನು ಮಾತ್ರ
ಕರ್ನಾಟಕದ ವಶ ಇರುವ ದಿವಂಗತ ಜಯಲಲಿತಾರಿಗೆ ಸೇರಿದ ಚಿನ್ನಾಭರಣಗಳನ್ನು ತಮಿಳುನಾಡು ಸರಕಾರಕ್ಕೆ ಒಪ್ಪಿಸುವುದಕ್ಕೆ ಹೈಕೋರ್ಟ್ ಮಧ್ಯಾವಧಿ ತಡೆ ನೀಡಿತು. ಇವುಗಳಲ್ಲಿ ಹೆಚ್ಚಿನ ಆಭರಣಗಳು ನನ್ನ ಅಜ್ಜಿ ನಟಿ ಸಂಧ್ಯಾರಿಗೆ ಸೇರಿದ್ದು ಎಂದು ಜಯಲಲಿತಾರ ಸಹೋದರನ ಮಗಳು ಜೆ. ದೀಪಾ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಪಿ. ಎಂ. ನವಾಜ್ ಅವರು ಚಿನ್ನಾಭರಣ ಹಸ್ತಾಂತರಕ್ಕೆ ತಾತ್ಕಾಲಿಕ ತಡೆ ನೀಡಿದರು.
ದಿಲ್ಲಿ : ಮಾರ್ಚ್ 10ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದ ಎಲ್ಲೆಡೆ ರೈಲು ತಡೆ ನಡೆಸಲಾಗುತ್ತದೆ ಎಂದು ದಿಲ್ಲಿ ಚಲೋ ಪ್ರತಿಭಟನೆಯ ರೈತರು ತಿಳಿಸಿದ್ದಾರೆ. ಸಂಯುಕ್ತ ಕಿಸಾನ್ ಸಂಘಟನೆ ಕೂಟವು ಈ ಬಗೆಗೆ ಹೇಳಿಕೆ ನೀಡಿದ್ದು, ಎಲ್ಲರೂ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ರೈತ ಸಂಘಟನೆಯವರು ಮಾರ್ಚ್ 6ರಂದು ದಿಲ್ಲಿ ಮುತ್ತಿಗೆ ಹಾಕುವುದಾಗಿಯೂ ಹೇಳಿದೆ. ಮೋದಿಯವರ ಸರಕಾರವು ರೈತರ ಚಳವಳಿ ಹೊಸಕುವುದು ಸಾಧ್ಯವಿಲ್ಲ ಎಂದು ಟಿಕಾಯತ್ ತಿಳಿಸಿದ್ದಾರೆ.
ಬಿಜೆಪಿಯವರ ನಂಬಿಕೆಗೆ ಅಭಾರಿ. ಆದರೆ ಅವರು ಟಿಕೆಟ್ ನೀಡಿದ್ದರೂ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಖ್ಯಾತ ಭೋಜಪುರಿ ನಟ, ಗಾಯಕ ಪವನ್ ಸಿಂಗ್ ಹೇಳಿದ್ದಾರೆ. ಬಿಜೆಪಿಯ ಲೋಕಸಭಾ ಸ್ಪರ್ಧಿಗಳ ಮೊದಲ ಪಟ್ಟಿಯಲ್ಲಿ ಪವನ್ ಸಿಂಗ್ರಿಗೆ ಅಸನ್ಸೋಲ್ ಟಿಕೆಟ್ ನೀಡಲಾಗಿದೆ. ಆದರೆ ಅವರು ನೇರ ರಾಜಕೀಯ ಪ್ರವೇಶ ಇಲ್ಲ ಎಂದಿದ್ದಾರೆ. ಬಿಜೆಪಿಯ ಮೊದಲ ಪಟ್ಟಿಯಲ್ಲಿ ಹೇಮಾಮಾಲಿನಿ ಸಹಿತ ಹಲವು ನಟ ನಟಿಯರು ಸ್ಪರ್ಧಿಸಲು ಕ್ಷೇತ್ರ ಪಡೆದಿದ್ದಾರೆ. ಭೋಜಪುರಿ ಭಾಷೆಯ