ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್ಪೇಟ್ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ
ಅಯೋಧ್ಯೆಯ ನೂತನ ಮಂದಿರದಲ್ಲಿ ಶ್ರೀರಾಮನ ವಿಧ್ಯುಕ್ತ ಪ್ರತಿಷ್ಠಾಪನೆಯ ನಂತರ ಮಂಗಳವಾರದಿಂದ 48 ದಿನಗಳ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯಲಿರುವ ಮಂಡಲೋತ್ಸವ ಆರಂಭಗೊಂಡಿದೆ. ಪೇಜಾವರ ಶ್ರೀಗಳು ಮಂಗಳವಾರವೂ ವಿವಿಧ ಮಂತ್ರಗಳಿಂದ ಪ್ರತಿಮೆಗೆ ತತ್ವನ್ಯಾಸಾದಿಗಳನ್ನು ನೆರವೇರಿಸಿ ಕಲಶಪೂಜೆ ಚಾಮರಸೇವೆ ಮಂಗಳಾರತಿಗಳನ್ನು ನೆರವೇರಿಸಿ ಪೂಜೆ ಸಲ್ಲಿಸಿದರು.ಇದಕ್ಕೂ ಮೊದಲು ಪಿಲೂರ್ಣಪ್ರಜ್ಞ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ಸತ್ಯನಾರಾಯಣಾಚಾರ್ಯ ,ವಿಷ್ಣುಮೂರ್ತಿ
ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್
ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು ಪ್ರಭೇದನೆಗಳಿಗೆ ಒಳಗಾಗದಂತೆ ಪ್ರಾರ್ಥಿಸೋಣ ಎಂಬ ವಿಷಯದ ಬಗ್ಗೆ ಭಕ್ತಾದಿಗಳಿಗೆ ದೇವರ ವಿಶೇಷ ಸಂದೇಶ ನೀಡಿದರು. ಪ್ರಭೇದನಿಗೆ ಒಳಗಾಗದಂತೆ ಒಂದು ದಿನದ ವಿಷಯವನ್ನು ಧ್ಯಾನಿಸಿ ಅವರು ಗಾಯನ ಬಲಿ ಪೂಜೆ ನೆರವೇರಿಸಿ
ಮಂಗಳೂರು : ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಲುವಾಗಿ ಮಹಾವೀರ ಶಾಖೆ, ಬಜಿಲಕೇರಿ ವತಿಯಿಂದ ನಗರದ ಟಿ. ಟಿ ರಸ್ತೆಯಲ್ಲಿರುವ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ (ಗೋಧೆ) “ಶ್ರೀ ರಾಮೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಸಂಜೆ 6:30 ಗಂಟೆಗೆ ರಾಮ ದೇವರ ಭಾವಚಿತ್ರಕ್ಕೆ ಪುಷ್ಪವೃಶ್ಟಿ ಮೂಲಕ ಮೆರವಣಿಗೆ ಆಗಮಿಸಿತು. ಪುಟಾಣಿ ಮಕ್ಕಳು ಶ್ರೀ ರಾಮ, ಸೀತಾ ಮಾತೆ, ಲಕ್ಷ್ಮಣ ಹಾಗೂ ಹನುಮಂತನ ವೇಷ ಧರಿಸಿದ್ದು ಎಲ್ಲರ
ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ
ಎಸ್.ಕೆ.ಎಸ್.ಎಸ್.ಎಫ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಜ.26 ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರತಿ ವರ್ಷ ಜ.26 ಗಣರಾಜ್ಯೋತ್ಸವದಂದು ಜಿಲ್ಲಾ ವ್ಯಾಪ್ತಿಯಲ್ಲಿ ‘ಮಾನವ ಸರಪಳಿ’ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದು ಈ ವರ್ಷ ಕೂಡಾ
ಜನರನ್ನು ಕಂಬಕ್ಕೆ ಕಟ್ಟಿ ಹೊಡೆಯಲು ನಿಮಗೆ ಅಧಿಕಾರ ಇದೆಯೇ? ಹೋಗಿ ಜೈಲು ಸಿಕ್ಷೆ ಅನುಭವಿಸಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಗವಾಯಿಯವರು ಕೋಪದಿಂದ ಹೇಳಿದರು. ಅಲ್ಲದೆ ಸರ್ವೋಚ್ಚ ನ್ಯಾಯಾಲಯವು ಶಿಕ್ಷಿತ ಪೋಲೀಸರಿಗೆ ಛೀಮಾರಿ ಹಾಕಿತು. ಇನ್ಸ್ಪೆಕ್ಟರ್ ಎ. ವಿ. ಪರ್ಮಾರ್, ಸಬ್ ಇನ್ಸ್ಪೆಕ್ಟರ್ ಡಿ. ಬಿ. ಕುಮಾವತ್ ಮತ್ತು ಇಬ್ಬರು ಕಾನ್ಸ್ಟೇಬಲ್ಗಳು ಶಿಕ್ಷಿತ ಪೋಲೀಸರು. ನ್ಯಾಯಮೂರ್ತಿಗಳಾದ ಬಿ. ಆರ್. ಗವಾಯಿ, ಸಂದೀಪ್
ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಹೋಗಲು ಇದು ಬಹಳ ಹತ್ತಿರ ಇರುವುದರಿಂದ ಈ ರಸ್ತೆಯನ್ನು ಸರಿಪಡಿಸಲು ಸಂಬಂಧಪಟ್ಟ ಅರಣ್ಯ
ಸಣ್ಣ ಮಕ್ಕಳು ಬಾಯಲ್ಲಿ ಕೈಬೆರಳು ಹಾಕಿ ಚೀಪುವುದು ಸಾಮಾನ್ಯ ಲಕ್ಷಣ. ಇದೇನೂ ಬಹಳ ದೊಡ್ಡ ಸಮಸ್ಯೆ ಏನಲ್ಲ. ಸಾಮಾನ್ಯವಾಗಿ ಚಿಕ್ಕ ಮಕ್ಕಳು ಸುಸ್ತಾದಾಗ, ಬೇಸರವಾದಾಗ, ನಿದ್ದೆ ಬರುವ ಹೊತ್ತಲ್ಲಿ, ಸಾಂತ್ವನದ ಅವಶ್ಯಕತೆ ಇದ್ದಾಗ ಹೆಬ್ಬೆರಳನ್ನು ಚೀಪುವುದು ಕಂಡು ಬರುತ್ತದೆ. ಈ ಬೆರಳು ಚೀಪುವ ಅಭ್ಯಾಸ ಗರ್ಭಾವಸ್ಥೆಯ (15ನೇ ವಾರದಲ್ಲಿ) ಆರಂಭವಾಗುತ್ತದೆ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ಗರ್ಭಾಶಯದ ಒಳಗೆ ಮಗು ದಿನಕ್ಕೆ ನೂರಾರು ಬಾರಿ ಆಕಳಿಸುತ್ತದೆ ಎಂದೂ