ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ
ಬೈಂದೂರು: ಕಳೆದ 40 ವರ್ಷಗಳಿಂದ ಭಾರತೀಯ ಜನತಾ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತೊಡಗಿಸಿಕೊಂಡಿದ್ದೇನೆ. ಹಿಂದುತ್ವ ದೇಶ ಅಭಿವೃದ್ಧಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕುರಿತು ಜನ ಸ್ಪಷ್ಟ ಫಲಿತಾಂಶ ನೀಡಲಿದ್ದಾರೆ.ಯಾವ ಒತ್ತಡಗಳಿಗೂ ಮಣಿಯಲಾರೆ.ಬ್ರಹ್ಮ ಬಂದು ಹೇಳಿದರು ಈ ಚುನಾವಣೆಯಿಂದ ಹಿಂದೆ ಸರಿಯಲಾರೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿದರು. ಅವರು ಉಪ್ಪಂದದಲ್ಲಿ ಉಪ್ಪುಂದ ಪರಿಚಯ ಹೋಟೆಲ್ ಸಭಾಭವನದಲ್ಲಿ ನಡೆದ ಈಶ್ವರಪ್ಪ ಬೆಂಬಲಿತ ಕಾರ್ಯಕರ್ತರ
ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು. ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ
ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು. ಶಾಲಾ ಸ್ಥಾಪಕ ಕುಟುಂಬದ ಸದಸ್ಯರು, ಹಿರಿಯ ವಿದ್ಯಾರ್ಥಿಯು ಹಾಗೂ ಅತ್ಯುತ್ತಮ ಜಿಲ್ಲಾ ಶಿಕ್ಷಕ
ಸಂಸದ ಬಿ.ವೈ ರಾಘವೇಂದ್ರ ಅವರು ಇಂದು ದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಕಿಶನ್ ರೆಡ್ಡಿ ಗಂಗಾಪುರಂ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿರುವ ಬೈಂದೂರು ಮೂಕಾಂಬಿಕಾ ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ಮನವಿ ಸಲ್ಲಿಸಿದರು. ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ, ಮೂಕಾಂಬಿಕಾ ವನ್ಯಜೀವಿ ಅಭಯಾರಣ್ಯ, ಕೊಡಚಾದ್ರಿ, ಸೋಮೇಶ್ವರ ಬೀಚ್, ತ್ರಾಸಿ-ಮರವಂತೆಗಳಂತಹ ಸಾಕಷ್ಟು ಪ್ರವಾಸೋದ್ಯಮ ಸ್ಥಳಗಳಿಂದ ಶ್ರೀಮಂತವಾಗಿರುವ ಕ್ಷೇತ್ರ,
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ
ಹಲವು ಶತಮಾನಗಳ ಇತಿಹಾಸ ಹೊಂದಿರುವ ಉಡುಪಿ ಜಿಲ್ಲೆ ಬೈಂದೂರು ಸಮೀಪದ ತಗ್ಗರ್ಸೆ ಸಾಂಪ್ರದಾಯಿಕ ಕಂಬಳೋತ್ಸವವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಂಭ್ರಮದಿಂದ ನಡೆಯಿತು. 60ಕ್ಕೂ ಅಧಿಕ ಜೊತೆ ಕೋಣಗಳು ಹರಕೆ ಹಾಗೂ ಸ್ವರ್ಧೆಯಲ್ಲಿ ಭಾಗವಹಿಸುವ ಮೂಲಕ ತಗ್ಗರ್ಸೆ ಕಂಬಳದ ಮೆರುಗು ಮತ್ತಷ್ಟು ಹೆಚ್ಚಿತು. ಕಂಠದಮನೆ ಟಿ. ನಾರಾಯಣ ಹೆಗ್ಡೆಯವರ ಕುಟುಂಬದವರಿಂದ ಸಾಂಪ್ರದಾಯಿಕ ಕಂಬಳ ವರ್ಷಂಪ್ರತಿ ನಡೆಯುತ್ತಿದ್ದು ಈ ಬಾರಿ
ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಶಿವಮೊಗ್ಗ ಸಂಸದರಾದ ಡಿ. ವೈ. ರಾಘವೇಂದ್ರ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭ ಮಕ್ಕಳಿಗೆ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ ವಿಶೇಷ ಮಕ್ಕಳ ಸಂಸ್ಥೆ ನಡೆಸುವುದು ಸುಲಭದ ಕೆಲಸವಲ್ಲ. ಅದಕ್ಕೆ ಬಧ್ಧತೆ ಬೇಕು ಮತ್ತು ವಿಶೇಷ ಮಕ್ಕಳಿಗೆ ಬದುಕು ರೂಪಿಸಿಕೊಳ್ಳಲು
ವಿಶ್ವಹಿಂದೂ ಪರಿಷತ್ ಭಜರಂಗದಳ ಬೈಂದೂರು ಪ್ರಖಂಡ ಇದರ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಪ್ರಯುಕ್ತ ಪಂಜಿನ ಮೆರವಣಿಗೆ ಬೈಂದೂರಿನಲ್ಲಿ ನಡೆಯಿತು. ಯೋಜನಾನಗರದ ನಾಗಬನ ಸಮಿತಿ ಅಧ್ಯಕ್ಷರಾದ ಕೃಷ್ಣದೇವಾಡಿಗ ಬೈಂದೂರು ಪಂಜಿನ ಮೆರವಣಿಗೆಗೆ ವಿದ್ಯುಕ್ತ ಚಾಲನೆ ನೀಡಿದರು. ಸಭಾಕಾರ್ಯಕ್ರಮದಲ್ಲಿ ಕೊಲ್ಲೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಜಯಾನಂದ ಹೋಬಳಿದಾರ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ದಿಕ್ಸುಚಿ ಭಾಷಣಕಾರರಾಗಿ
ಬೈಂದೂರು: ತಾಲೂಕಿನ ಉಪ್ಪುಂದ ಕರ್ಕಿಕಳಿ ಎಂಬಲ್ಲಿ ನಡೆದ ದೋಣಿ ದುರಂತ ಪ್ರದೇಶ ಹಾಗೂ ಮೃತ ಮೀನುಗಾರರ ಮನೆಗಳಿಗೆ ಸಚಿವ ಮಾಂಕಾಳ ವೈದ್ಯ ಮತ್ತು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಸಚಿವ ಮಾಂಕಾಳ ವೈದ್ಯ ಮಾತನಾಡಿ ದೋಣಿ ದುರಂತದ ಬಗ್ಗೆ ನೋವಿದೆ. ಮೀನುಗಾರ ಕುಟುಂಬಕ್ಕೆ 24 ಗಂಟೆಯೊಳಗೆ ಸಂಕಷ್ಟ ಪರಿಹಾರ ನಿಧಿ ದೊರಕಿಸಿಕೊಡಬೇಕೆಂಬುದು ಶ್ರಮವಹಿಸಿದ್ದು, ಮೃತ ಮೀನುಗಾರರ ಕುಟುಂಬಕ್ಕೆ ತಲಾ ಲಕ್ಷ 6 ಹಸ್ತಾಂತರಿಸಲಾಗುತ್ತಿದೆ.