ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್
ಬೆಳ್ತಂಗಡಿಯ ದಿಡುಪೆಯಿಂದ ಸಂಸೆ ರಸ್ತೆಯನ್ನು ಮಾಡಲು ಶೀಘ್ರದಲ್ಲಿ ಅಧಿಕಾರಿಗಳನ್ನು ಕರೆದು ಮಾತನಾಡುತ್ತೇನೆ ಎಂದು ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹೇಳಿದರು. ಅವರು, ಬೆಳ್ತಂಗಡಿ ತಾಲೂಕಿನ ಎಳನೀರು ಪ್ರದೇಶದಲ್ಲಿ ರಸ್ತೆ ವೀಕ್ಷಿಸಿ ಅವರು ಮಾತನಾಡಿದರು. ಕಲಸ ಹೊರನಾಡು ಈ ಪ್ರದೇಶದ ಜನರಿಗೆ ಹಾಸ್ಪಿಟಲ್, ವಿದ್ಯಾಭ್ಯಾಸ ಹಾಗೂ ವಿವಿಧ ಕ್ಷೇತ್ರಕ್ಕೆ ಸುಬ್ರಹ್ಮಣ್ಯ ಧರ್ಮಸ್ಥಳಕ್ಕೆ ಹೋಗಲು ಇದು ಬಹಳ ಹತ್ತಿರ ಇರುವುದರಿಂದ ಈ ರಸ್ತೆಯನ್ನು ಸರಿಪಡಿಸಲು ಸಂಬಂಧಪಟ್ಟ ಅರಣ್ಯ
ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಅರಣ್ಯಧಿಕಾರಿಗಳು ವಲಯ ಅರಣ್ಯಾಧಿಕಾರಿ ಸಂಘದ ಅಧ್ಯಕ್ಷರಾದ ಜಿ ಡಿ ದಿನೇಶ್ ಅವರ ನೇತೃತ್ವದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಗೆ ದೂರು ನೀಡಿದ್ದಾರೆ. ತಮಗೆ ಕರ್ತವ್ಯದ ಸಂದರ್ಭದಲ್ಲಿ ರಕ್ಷಣೆ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿಗಳ ಸಂಘದಿಂದ ದೂರು ಸಲ್ಲಿಸಿದ್ದಾರೆ. ಉಪ್ಪಿನಂಗಡಿ ಅರಣ್ಯ ವಲಯದ ವ್ಯಾಪ್ತಿಯಲ್ಲಿನ ಬೆಳ್ತಂಗಡಿ ತಾಲೂಕಿನ ಕಳಂಜ ಗ್ರಾಮದಲ್ಲಿ
ಪುತ್ತೂರು: ಪುತ್ತೂರಿನಲ್ಲಿ ಬಿಜೆಪಿ ಮುಖಂಡರ ಭಾವಚಿತ್ರವುಳ್ಳ ಬ್ಯಾನರ್ ಮೇಲೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರಿಂದ ದೌರ್ಜನ್ಯಕ್ಕೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತರು ಅಸ್ಪತ್ರೆಗೆ ದಾಖಲಾಗಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಗಾಯಾಳುಗಳನ್ನು ಭೇಟಿಯಾಗಿ ವಿಚಾರಿಸಿದ್ದಾರೆ. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು ಇಂತಹ ಘಟನೆ ಮತ್ತೆ ಮರುಕಳಿಸಬಾರದು, ಇದೊಂದು ಹೀನ ಕೃತ್ಯ, ಪೊಲೀಸರ ಈ ಅಮಾನವೀಯ ಕೃತ್ಯವನ್ನು
ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಅವರು ಗರ್ಡಾಡಿಯ ಸೈಂಟ್ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 123 ರಲ್ಲಿ ಮತ ಚಲಾಯಿಸಿದರು. ಪ್ರಜಾಪ್ರಭುತ್ವದ ಅತ್ಯಂತ ಪವಿತ್ರ ಹಬ್ಬ ಎಂದು ಕರೆಸಿಕೊಳ್ಳುವ ಮತದಾನ ಸಂಭ್ರಮದಲ್ಲಿ ಕ್ಷೇತ್ರದ ಎಲ್ಲಾ ಮತದಾರರು ಭಾಗಿಯಾಗಬೇಕೆಂದು ಮನವಿ ಮಾಡಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಬಹಿರಂಗ ಪ್ರಚಾರ ಸಭೆಗೆ ಮುನ್ನುಡಿ ಬರೆದಿದ್ದು, ಈಗಾಗಲೇ ಹಲವಾರು ಯಶಸ್ವಿ ಸಭೆ ನಡೆದಿದೆ. ಪ್ರತಿ ಸಭೆಯಲ್ಲೂ ಸಾವಿರಕ್ಕೂ ಅಧಿಕ ಜನರು ಉಪಸ್ಥಿತರಿರುವ ಮೂಲಕ ಬಿಜೆಪಿ ಪರವಾದ ಸ್ಪಷ್ಟ ವಾತಾವರಣ ಸೃಷ್ಟಿಯಾಗುತ್ತಿದೆ. ಈ ಮಧ್ಯೆ ಬಿಜೆಪಿ ಯಶಸ್ಸು ನೋಡುತ್ತಿರುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಜೊತೆಗೆ ಕೈ ಜೋಡಿಸುತ್ತಿದ್ದಾರೆ. ನೆರಿಯದಲ್ಲಿ ನಡೆದ ಸಾರ್ವಜನಿಕ ಚುನಾವಣಾ ಪ್ರಚಾರ ಸಭೆಯಲ್ಲಿ
ಶಾಸಕ ಹರೀಶ್ ಪೂಂಜ ಅವರು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಪ್ರಚುರಪಡಿಸುವ ” ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಂ ಸಾಂಗ್ ನ್ನು ಶಾಸಕ ಹರೀಶ್ ಪೂಂಜ ಬಿಡುಗಡೆಗೊಳಿಸಿದರು. ಎಪಿಕೆ ಕ್ರಿಯೆಶನ್ಸ್ ಬ್ಯಾನರ್ ಅಡಿಯಲ್ಲಿ ಅಜಿತ್ ಪೂಜಾರಿ ಕನ್ಯಾಡಿ ರಾಗಸಂಯೋಜನೆ ಮಾಡಿ ಈ ಹಾಡನ್ನು ಹಾಡಿದ್ದಾರೆ. ನಿಧೀಶ್ ಶೆಟ್ಟಿ ಕನ್ಯಾಡಿ, ನವೀನ್ ಸುವರ್ಣ ಕನ್ಯಾಡಿ, ಅವಿನಾಶ ಶೆಟ್ಟಿ ಕನ್ಯಾಡಿ,ಸಹನ್ ಉಜಿರೆ, ರಾಘವೇಂದ್ರ ಗೌಡ ಕೊಂಕ್ರೋಟ್ಟು, ಅಶೋಕ್ ಬಂಗೇರ
ಬೆಳ್ತಂಗಡಿ ತಾಲೂಕಿನ ಎಲ್ಲಾ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಕುಟುಂಬಗಳು ಕೃಷಿ ನೀರಿಗೆ ಸಮಸ್ಯೆಯಾಗ ಬಾರದು ಎಂದು ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನಾದ್ಯಂತ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಪಂಗಡ 25 ಮತ್ತು ಪರಿಶಿಷ್ಟ ಜಾತಿ 25 ಕುಟುಂಬಗಳಿಗೆ ಸುಮಾರು ಒಂದು ಕೋಟಿ 25 ಲಕ್ಷ ರೂಪಾಯಿ ಮೊತ್ತವನ್ನು ಕಾವೇರಿ ಜಲ ಅಭಿವೃದ್ದಿ ನಿಗಮ ಯೋಜನೆಯಡಿ ಕೊಳವೆ ಬಾವಿಗೆ ಪಂಪ್ ಅಳವಡಿಕೆ ಮತ್ತು ಪೈಪ್ ಲೈನಿಗೆ ಚಾಲನೆ
ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಅರ್ಹ ಫಲಾನುಭವಿಗಳಿಗೆ ಕೆಲವು ಅಶಕ್ತರ ಮನೆಗೆ ಮನೆಯ ಹಕ್ಕು ಪತ್ರ ತಂದು ನೀಡಿದರು. ಹಕ್ಕು ಪತ್ರ ವಿತರಣಾ ಸಮಾರಂಭ ಹಾಗೂ ಶಿಲಾನ್ಯಾಸ ಕಾರ್ಯಕ್ರಮ ಕಾಳಿಕಾಂಬ ದೇವಸ್ಥಾನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜಾ ನೆರಿಯ ಗ್ರಾಮದ ಹಲವಾರು ಕುಟುಂಬಗಳಿಗೆ ಹಕ್ಕುಪತ್ರ ಸಿಗದೆ 70 ವರ್ಷಗಳಿಂದ ಅಲೆದಾಡುತಿದ್ದರು ಆದರೆ ಈಗ ಹಕ್ಕು ಪತ್ರವನ್ನು ಅವರ