Home Posts tagged #kundapura (Page 2)

ಕುಂದಾಪುರ: ಹೇರಿಕುದ್ರುವಿನಲ್ಲಿ ಮಕ್ಕಳ ಯಕ್ಷಗಾನ ಅರ್ಧದಲ್ಲೇ ಸ್ಥಗಿತ: ಯಕ್ಷಗಾನ ಪ್ರೇಮಿಗಳಿಂದ ತೀವ್ರ ಆಕ್ರೋಶ

ಕುಂದಾಪುರ ಸಮೀಪದ ಹೇರಿಕುದ್ರು ಎಂಬಲ್ಲಿ ಮಹಾಗಣಪತಿ ಮಾನಸ ಮಂದಿರದಲ್ಲಿ ರಾತ್ರಿ ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಅನುಮತಿಸಿದ ಸಮಯ ಮೀರಿ ಮೈಕ್ ಬಳಕೆ ಮಾಡಲಾಗುತ್ತಿದೆ ಎಂಬ ದೂರಿನ ಮೇಲೆ ಆಗಮಿಸಿದ ಪೆÇಲೀಸರು ಯಕ್ಷಗಾನ ಪ್ರದರ್ಶನಕ್ಕೆ ತಡೆಯೊಡ್ಡಿದ್ದಾರೆ. ಈ ಘಟನೆ ವ್ಯಾಪಕ ಟೀಕೆಗೆ, ಯಕ್ಷಗಾನ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಯಕ್ಷಗಾನ

ಕುಂದಾಪುರ: ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ಭೇಟಿ, ಆಸ್ಪತ್ರೆಯ ಕಾರ್ಯವೈಖರಿ ವೀಕ್ಷಣೆ

ಕುಂದಾಪುರ: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ.

ಕುಂದಾಪುರ: ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ

ಕುಂದಾಪುರ|| ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 20 ಮಂದಿ ಪ್ರಯಾಣಿಕರಿಗೆ ಗಾಯ

ಕುಂದಾಪುರ: ಅತಿ ವೇಗದಿಂದ ಸಾಗುತ್ತಿದ್ದ ಖಾಸಗಿ ಬಸ್‍ವೊಂದು ಚಾಲಕ ನಿಯಂತ್ರಣ ತಪ್ಪಿ ಅರಾಟೆ ಎಂಬಲ್ಲಿ ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಪಕ್ಕದ ರಸ್ತೆಗೆ ಉರುಳಿದ ಘಟನೆ ನಡೆದಿದೆ. ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಸುಮಾರು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಪ್ರಯಾಣಿಕರನ್ನು ಹೊತ್ತ ಬಸ್ ರಾಷ್ಟ್ರೀಯ

ಕುಂದಾಪುರ: ಸೇನಾಪುರ ರೈಲ್ವೇ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆಗೆ ಹೋರಾಟ ಸಮಿತಿಯಿಂದ ಆಗ್ರಹ

ಕುಂದಾಪುರದ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ನೇತೃತ್ವದಲ್ಲಿ ಸೇನಾಪುರ ನಿಲ್ದಾಣದಲ್ಲಿ ಎಕ್ಸ್‍ಪ್ರೆಸ್ ರೈಲು ನಿಲುಗಡೆ ಆಗ್ರಹಿಸಿ ಚಲೋ ಸೇನಾಪುರ ಬೃಹತ್ ಪ್ರತಿಭಟನೆ ನಡೆಸಿದರು. ಬೃಹತ್ ಪ್ರತಿಭಟನೆ ಮೆರವಣಿಗೆ ನಾಡಾ ಗ್ರಾಮ ಪಂಚಾಯತ್‍ನಿಂದ ಆರಂಭಗೊಂಡು ಸೇನಾಪುರ ರೈಲ್ವೇ ನಿಲ್ದಾಣದವರೆಗೆ ಸಾಗಿಬಂದು, ಬಳಿಕ ರೈಲ್ವೇ ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಸಂಚಾಲಕ ರಾಜೀವ್

ಕುಂದಾಪುರ: ಕೊಲ್ಲೂರು ಕ್ಷೇತ್ರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ವಿಶೇಷ ಪೂಜೆ ಸಲ್ಲಿಕೆ

ಕುಂದಾಪುರ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಅವರು ದೇವರ ದರ್ಶನ ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ದೇಗುಲಕ್ಕೆ ಭೇಟಿ ನೀಡಿದ ರಾಜ್ಯಪಾಲರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ರಾಜ್ಯಪಾಲರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರುರಾಜ್

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

ಕುಂದಾಪುರದಲ್ಲಿ ರವಿವಾರ ಸಂಜೆ ವೇಳೆ ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಕುಂದಾಪುರದ ರಾಘವೇಂದ್ರ (42) ರಾಘು ಸೋಮವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕುಂದಾಪುರದ ಖಾರ್ವಿಕೇರಿ ನಿವಾಸಿ ರಾಘವೇಂದ್ರ ಶೇರುಗಾರ್ ರವಿವಾರ ರಾತ್ರಿ ಚಿಕ್ಕಮ್ಮನಸಾಲು ರಸ್ತೆಯ ಪೋಸ್ಟ್ ಆಫೀಸ್ ಬಳಿ ತಮ್ಮ ಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರಿಗೆ ಸೈಡ್ ಕೊಡುವ ವಿಚಾರದಲ್ಲಿ ಗಲಾಟೆಯಾಗಿತ್ತು. ಗಲಾಟೆ

ಕುಂದಾಪುರ: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು

ಸುಳ್ಸೆ ಯಕ್ಷಿಬ್ರಹ್ಮ ನಂದಿಕೇಶ್ವರ ದೈವಸ್ಥಾನ ಸಮೀಪದ ಸುಳ್ಸೆಯರ ಮನೆ ನಿವಾಸಿ ಮಹಾಬಲ ದೇವಾಡಿಗ (55) ಪತ್ನಿ ಲಕ್ಷ್ಮೀ ದೇವಾಡಿಗ (49) ಮೃತಪಟ್ಟ ದಂಪತಿಗಳು. ಮಹಾಬಲ ದೇವಾಡಿಗ ಸುಳ್ಸೆ ಕರಣಿಕರ ಮನೆಯಲ್ಲಿ ದಿನಗೂಲಿ ಕೆಲಸ ನಿರ್ವಹಿಸುತ್ತಿದ್ದು, ಶುಕ್ರವಾರ ಕೆಲಸಕ್ಕೆ ತೆರಳಿದ್ದರು. ಮಧ್ಯಾಹ್ನ ಕಳೆದರೂ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಪತ್ನಿ ಲಕ್ಷ್ಮೀ ಅನುಮಾನಗೊಂಡು ಕರಣಿಕರ ಮನೆಗೆ ತೆರಳಿದ್ದರು. ಈ ವೇಳೆ ಕರಣಿಕರ ಮನೆಗೆ ಹೋಗುವ ಕಾಲುದಾರಿಯಲ್ಲಿ ಮುರಿದು

ಕುಂದಾಪುರ|| ಗೋಪಾಡಿ ಅಂಬೇಡ್ಕರ್ ಭವನ ನಿರ್ಮಾಣದ ತನಿಖೆಯಾಗಲಿ: ಗೋಪಾಡಿ ಗ್ರಾಮಸಭೆಯಲ್ಲಿ ದಲಿತ ಮುಖಂಡರ ಆಗ್ರಹ

ಕುಂದಾಪುರ: ದಲಿತ ಸಮುದಾಯದ ಮನೆಗಳೇ ಇಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲಾಗಿದ್ದು, ದಲಿತರು ಭವನವನ್ನು ಬಳಸಬಾರದು ಎನ್ನುವ ದೃಷ್ಠಿಯಲ್ಲಿ ನಿರ್ಮಿಸಿದಂತಿದೆ. ಅಂಬೇಡ್ಕರ್ ಭವನ ನಿರ್ಮಾಣದ ಹಿಂದಿನ ಉದ್ದೇಶವೇನು? ಯಾರ ಲಾಭಕ್ಕಾಗಿ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ ಎನ್ನುವುದರ ಕುರಿತು ಸಮಗ್ರ ತನಿಖೆ ನಡೆಯಲಿ ಎಂದು ದಸಂಸ ಮುಖಂಡ ರಾಜು ಬೆಟ್ಟಿನಮನೆ ಆಗ್ರಹಿಸಿದ್ದಾರೆ. ಗೋಪಾಡಿ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಮಾತನಾಡಿದ

ಕುಂದಾಪುರ: ಚಟುವಟಿಕೆಗಳಿಲ್ಲದೇ ಪಾಳು ಬಿದ್ದಿದೆ ಗೋಪಾಡಿ ಅಂಬೇಡ್ಕರ್ ಭವನ: ತನಿಖೆಗಾಗಿ ದಸಂಸ ಆಗ್ರಹ

ದಲಿತರಿಗಾಗಿಯೇ ಆಳುವ ಸರ್ಕಾರಗಳು ತರುತ್ತಿರುವ ಹೊಸ-ಹೊಸ ಯೋಜನೆಗಳು ಉಳ್ಳವರ ಪಾಲಾಗುತ್ತಿವೆ ಎಂಬ ಆರೋಪಗಳು ಆಗಾಗೆ ಕೇಳಿ ಬರುತ್ತಲೇ ಇವೆ. ಗೋಪಾಡಿಯಲ್ಲಿ ಕಳೆದ ಆರು ವರ್ಷಗಳ ಹಿಂದೆ ನಿರ್ಮಾಣಗೊಂಡ ಅಂಬೇಡ್ಕರ್ ಭವನ ಈ ಆರೋಪಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಈ ಕುರಿತಾದ ಸ್ಪೆಶಲ್ ರಿಪೋರ್ಟ್ ನೋಡಿ. ದಲಿತರ ಸಬಲೀಕರಣಕ್ಕಾಗಿ ಸರ್ಕಾರ ನಾನಾ ಯೋಜನೆಗಳನ್ನು ಹೊರತರುತ್ತಿದೆ. ಅತ್ಯಂತ ತೀರ ಹಿಂದುಳಿದ ದಲಿತ ಸಮಾಜದ ಕಾರ್ಯ ಚಟುವಟಿಕೆಗಳಿಗೆ ಆಯಾ ಗ್ರಾ.ಪಂ ವ್ಯಾಪ್ತಿಯಲ್ಲಿ