Home Posts tagged #mangalore heavy rain

ಭಾರೀ ಮಳೆಗೆ ಕುಸಿದ ಮೋರಿ : ಹೊಳೆಯ ಪಾಲಾದ ರಸ್ತೆ

ಬೈಂದೂರು ವಿಧಾನಸಭಾ ಕ್ಷೇತ್ರದ, ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಸೂರಕುಂದ ಸಮೀಪದ ಕಲ್ಮಕ್ಕಿಯಲ್ಲಿ ಕಳೆದ 2-3ದಿನಗಳಿಂದ ಸುರಿದ ಭಾರಿ ಮಳೆಗೆ ರಸ್ತೆಗೇ ಅಳವಡಿಸಿದ್ದ ಮೋರಿ ಕುಸಿದು ಸಂಪರ್ಕ ರಸ್ತೆ ಹೊಳೆಯ ಪಾಲಾಗಿದೆ. ಹಲವಾರು ಮನೆಗೆ ಸಂಪರ್ಕವೇ ಇಲ್ಲದಂತಾಗಿದೆ. ಶಾಸಕರಾದ ಸುಕುಮಾರ ಶೆಟ್ಟಿ ಯವರು ಸ್ಥಳಕ್ಕೆ ಆಗಮಿಸಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ, ಪಟ್ಟಣ

ಬೆಳ್ಳಾರೆಯ ನೆಟ್ಟಾರು ಎಂಬಲ್ಲಿ ಗುಡ್ಡ ಕುಸಿತ

ಪುತ್ತೂರು -ಬೆಳ್ಳಾರೆ ರಾಜ್ಯ ಹೆದ್ದಾರಿಯ ನೆಟ್ಟಾರ್  ಎಂಬಲ್ಲಿ ಗುಡ್ಡ ಕುಸಿದು ರಾಜ್ಯ ಹೆದ್ದಾರಿಗೆ ಗುಡ್ಡದ ಮಣ್ಣು ಮತ್ತು ಮರ  ಅಪಾಯದ ಅಂಚಿನಲ್ಲಿ ಇರುವುದನ್ನು ಮನಗಂಡು ತಕ್ಷಣ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ. ಬೆಳ್ಳಾರೆ ಗ್ರಾಮ ಪಂಚಾಯತಿ  ಪಿಡಿಒ ಅನುಸೂಯ, ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್ ಪರಮೇಶ್ವರ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಜೂನಿಯರ್ ಇಂಜಿನಿಯರ್ ಪ್ರಸಾದ್, ಹಾಗೂ ಪೆರುವಾಜೆ  ಅರಣ್ಯಧಿಕಾರಿ ಪ್ರಸಾದ್  ಗ್ರಾಮಕರಣಿಕರ

ವಿಪರೀತ ಮಳೆಯಿಂದಾಗಿ ಮನೆಕುಸಿತ : ಬೀದಿಪಾಲಾಗುವ ಪರಿಸ್ಥಿತಿಯಲ್ಲಿ ಬಡ ಕುಟುಂಬ

ಪುತ್ತೂರು : ಪುತ್ತೂರು ನಗರದ ಹೊರವಲಯದ ಕಬಕ ಗ್ರಾಮದ ಮಂಜಲ್ಪಡ್ಪು ಜನತಾ ಕಾಲೋನಿಯ ನಿವಾಸಿ ವಸಂತ ಹೆಗ್ಡೆ ಅವರ ಮನೆ ವಿಪರೀತ ಮಳೆಯಿಂದಾಗಿ ಕುಸಿದು ಬಿದ್ದಿದ್ದು, ಈ ಬಡ ಕುಟುಂಬ ಬೀದಿ ಪಾಲಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ವಸಂತ ಅವರ ತಾಯಿ ಅನಾರೋಗ್ಯ ಮತ್ತು ಮಾನಸಿಕ ಪೀಡಿತರಾಗಿದ್ದು, ವಸಂತ ಅವರು ಕೂಲಿ ಕೆಲಸ ಮಾಡಿಕೊಂಡು ಸಂಸಾರದ ನಿರ್ವಹಣೆ ಮಾಡುತ್ತಿದ್ದರು, ಹಂಚು, ಸಿಮೆಂಟು ಶೀಟು ಅಳವಡಿಕೆಯೊಂದಿಗೆ ಸ್ವಲ್ಪಭಾಗ ತಾರಸಿ ಮಾಡಿರುವ ವಸಂತ ಹೆಗ್ಡೆ ಅವರ ಮನೆಯ

ಕರಾವಳಿಯಲ್ಲಿ ಭಾರೀ ಮಳೆ – ರೆಡ್ ಅಲರ್ಟ್

ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ ಎಂಬಲ್ಲಿ ದೇವಸ್ಥಾನದ ಅಂಗಣ ಪೂರ್ತಿ ನೀರಿನಲ್ಲಿ ಮುಳುಗಿದೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದರಿಂದ

ಭಾರೀ ಮಳೆ : ದಕ್ಷಿಣ ಕನ್ನಡ ಆರೆಂಜ್ ಅಲರ್ಟ್ ಘೋಷಣೆ

ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,