Home Posts tagged #manjeshwara (Page 2)

ಮಂಜೇಶ್ವರ: ನವ ಕೇರಳ ಯಾತ್ರೆಗೆ ಸಿಎಂ ಪಿಣರಾಯಿ ವಿಜಯನ್ ಚಾಲನೆ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಪೈವಳಿಕೆಗೆ ಆಗಮಿಸಿದ್ದ ನವ ಕೇರಳ ಯಾತ್ರೆಗೆ ಕೇರಳದ ಸಿಎಂ ಪಿಣರಾಯಿ ವಿಜಯ್ ಅವರು ಚಾಲನೆ ನೀಡಿದರು. ರಾಜ್ಯ ಸರಕಾರದ ಅಭಿವೃದ್ದಿಯನ್ನು ಕೊಂಡಾಡಿದ ಮುಖ್ಯಮಂತ್ರಿಯವರು ಕೇಂದ್ರ ಸರಕಾರವನ್ನು ಹಾಗೂ ಯುಡಿಎಫ್‍ನ ಬಗ್ಗೆ ಅಸಮಧಾನ ವ್ಯಕ್ತಪಡಿಸಿ, ಅವರ ವಿರುದ್ಧ ಗಟ್ಟಿಯಾದ ಧ್ವನಿಯಲ್ಲಿ ಆಕ್ರೋಶ ವ್ಯಕ್ತ

ಚಿಕ್ಕಪ್ಪನ ಕಾರಿನಡಿಗೆ ಸಿಲುಕಿ ಒಂದೂವರೆ ವರ್ಷದ ಮಗುವಿನ ದಾರುಣ ಸಾವು

ಮಂಜೇಶ್ವರ : ತಂದೆಯ ಸಹೋದರ ಕಾರನ್ನು ಮುಂದಕ್ಕೆ ತೆಗೆಯುತ್ತಿರುವ ಮಧ್ಯೆ ಕಾರಿನಡಿಯಲ್ಲಿ ಸಿಲುಕಿ ಒಂದೂವರೆ ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ್ದಾನೆ. ಸೋಂಕಾಲ್ ಕೋಡಂಗ ರಸ್ತೆಯ ನಿಸಾರ್ – ತಸ್ರೀಫಾ ದಂಪತಿಗಳ ಪುತ್ರ ಮಾಶಿತುಲ್ ಜಿಶಾನ್ ಸಾವನ್ನಪ್ಪಿದ ದುರ್ದೈವಿ. ಉಪ್ಪಳಕ್ಕೆ ಹೋಗಲು ಬಾಲಕನ ಚಿಕ್ಕಪ್ಪ ಮನೆಯ ಗೇಟಿನೊಳಗೆ ಕಾರಿನಲ್ಲಿ ಆಗಮಿಸುತ್ತಿರುವಾಗ ಕಾರನ್ನು ನೋಡಿ ಎದುರಿಗೆ ಹೋದ ಮಗು ಕಾರಿನ ಮುಂಬಾಗದ ಚಕ್ರದಡಿ ಸಿಲುಕಿ ಈ ದುರ್ಘಟನೆ ಸಂಭವಿಸಿದೆ.

ತಹಶೀಲ್ದಾರ್‌ಗೆ ಹಲ್ಲೆ ಮಾಡಿದ ಶಾಸಕ : ಶಾಸಕರಿಗೆ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

: ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್‌ (MLA AKM Ashraf) ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್‌ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಒಂದು ವರ್ಷ ಸಜೆ ವಿಧಿಸಿದೆ.2015ರಲ್ಲಿ ನವೆಂಬರ್‌ 25 ರಂದು ಮಂಜೇಶ್ವರ ಬ್ಲಾಕ್‌ ಪಂಚಾಯತ್‌ ಕಾನ್ಪರೆನ್ಸ್‌ ಹಾಲ್‌ನಲ್ಲಿ ಚುನಾವಣೆ ಕುರಿತು ಹಿಯರಿಂಗ್‌ ನಡೆಯುತ್ತಿದ್ದ ಸಂದರ್ಭದಲ್ಲಿ ಮತದಾರನೋರ್ವನ ಅರ್ಜಿಯಲ್ಲಿ ಲೋಪ ಇರುವ ಕಾರಣ ಬದಿಗಿರಿಸಿದ್ದರು. ಇದರಿಂದ ಕೋಪಗೊಂಡ ಕೆಎಂ ಅಶ್ರಫ್‌ ಮತ್ತಿತರರು ಅಂದಿನ

ಮಂಜೇಶ್ವರ: ಸಾರ್ವಜನಿಕ ಸ್ಥಳದಲ್ಲಿ ವಸತಿ ಸಮುಚ್ಚಯದ ಕೊಳಚೆ ನೀರು: ಸ್ಥಳೀಯಾಡಳಿತದ ವಿರುದ್ಧ ಸಾರ್ವಜನಿಕರ ಆಕ್ರೋಶ

ಮಂಜೇಶ್ವರ ಸಮೀಪದ ಕುಂಜತ್ತೂರಿನ ದಾರುಸ್ಸಲಾಂ ಸಲಫಿ ಮಸೀದಿ ತಿರುವಿನಲ್ಲಿರುವ ಖಾಸಗಿ ಅಪಾರ್ಟ್ಮೆಂಟ್‍ನಿಂದ ಶೌಚಾಲಯದ ನೀರು ಸಾರ್ವಜನಿಕ ಸ್ಥಳಕ್ಕೆ ಹಾಗೂ ಸಮೀಪದ ರಸ್ತೆಗೆ ಹರಿದು ಬರುತಿದ್ದು, ಪರಿಸರವೆಲ್ಲ ದುರ್ವಾಸನೆ ಆವರಿಸಿದೆ. ಪರಿಸರವಾಸಿಗಳು ಹಾಗೂ ಈ ದಾರಿಯಿಂದ ಸಾಗುವವರು ಮೂಗು ಮುಚ್ಚಿಕೊಂಡು ಸಾಗುವ ಪರಿಸ್ಥಿತಿ ಎದುರಾಗಿದೆ. ಈ ದಾರಿಯಾಗಿ ದಿನನಿತ್ಯ ಶಾಲೆಗೂ ಮದ್ರಸಕ್ಕೂ ನೂರಾರು ವಿದ್ಯಾರ್ಥಿಗಳು ಈ ಶೌಚಾಲಯದ ನೀರನ್ನು ದಾಟಿಕೊಂಡೇ ಸಾಗಬೇಕಾದ

ಮಂಜೇಶ್ವರ|| ಸರ್ಕಾರಿ ಶಾಲೆಯಲ್ಲಿ ಶುಚಿತ್ವವಿಲ್ಲದ ಶೌಚಾಲಯ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಶಾಲಾ ಮಕ್ಕಳು

ಮಂಜೇಶ್ವರದ ಉಪಜಿಲ್ಲಾ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳಲ್ಲಿ ಹಾಗೂ ಖಾಸಗಿ ಶಾಲೆಗಳ ಶೌಚಾಲಯಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಭೀತಿಯನ್ನು ಹೆಚ್ಚಿಸಿದೆ. ಮಂಜೇಶ್ವರ ಉಪಜಿಲ್ಲೆಯ ವ್ಯಾಪ್ತಿಯಲ್ಲಿರುವ ಶಾಲೆಯೊಂದರಲ್ಲಿ ಶೌಚಾಲಯದಲ್ಲಿ ಮಾಲಿನ್ಯ ಕಟ್ಟಿ ನಿಂತು ದುರ್ವಾಸನೆಯಿಂದ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಆದರೂ ಶಾಲೆಯ ಉಸ್ತುವಾರಿ ವಹಿಸಿಕೊಂಡಿರುವವರು ಈ ಬಗ್ಗೆ ಗಮನ ಹರಿಸುತ್ತಿಲ್ಲ

ಮಂಜೇಶ್ವರ: ನೆತ್ತಿಲ ಪದವು ಗೋವಿಂದ ಪೈ ರಸ್ತೆ ಕಳಪೆ ಕಾಮಗಾರಿ ಆರೋಪ

ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ

ಮಂಜೇಶ್ವರ: ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಡ್ರಗ್ಸ್ ಜಾಗೃತಿ ಶಿಬಿರ

ಮಂಜೇಶ್ವರದ ಕುನ್ನಿಲ್ ನೋಬಲ್ ಫೌಂಡೇಶನ್‍ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಡ್ರಗ್ಸ್ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಸಂಘಟನೆಯ ಅಧ್ಯಕ್ಷ ಝಕರಿಯ್ಯ ಶಾಲಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ರಾಜೇಶ್ ತೆರುವತ್ತ್ ಪೀಡಿಗಯಿಲ್ ಉದ್ಘಾಟಿಸಿದರು. ಮಂಜೇಶ್ವರ ಠಾಣೆಯ ಜನ ಮೈತ್ರಿ ಪೊಲೀಸ್ ಅಧಿಕಾರಿಗಳಾದ ಮಧು ಕರಕಡವತ್ ಹಾಗೂ ಅನೂಪ್

ಮಂಜೇಶ್ವರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎನ್‍ಆರ್ ಇಜಿ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ

ಮಂಜೇಶ್ವರ: ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸುವ ಕ್ರಮವನ್ನು ಕೊನೆಗೊಳಿಸಿ, ಹೆಚ್ಚಿಸಿದ ಮಜೂರಿಯನ್ನು ಕೂಡಲೇ ವಿತರಿಸಿ, ಕಡಿತಗೊಳಿಸಿದ ಲೇಬರ್ ಬಜೆಟ್ ಪುನಸ್ತಾಪಿಸಿ ಇತ್ಯಾದಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಎನ್‍ಆರ್‍ಇಜಿ ಯೂನಿಯನ್ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನೆ ನಡೆಸಿದರು. ಸಭೆಯನ್ನು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಏ. ಕರೀಂ ಉದ್ಘಾಟಿಸಿದರು. ಮೀಂಜ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಅಧ್ಯಕ್ಷತೆ

ಕಾಸರಗೋಡು: ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ

ಕಾಸರಗೋಡು: ಉಪ್ಪಳ ಮಂಗಲ್ಪಾಡಿ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆ, ಪಂಚಾಯತ್ ಗೆ ಬೀಗ ಹಾಕಿದ ಪಂಚಾಯತ್ ಸದಸ್ಯ ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಅಧಿಕಾರಿಗಳ ಕೊರತೆಯ ಹಿನ್ನೆಲೆಯಲ್ಲಿ ಪಂಚಾಯತ್ ಗೆ ಬೀಗ ಹಾಕಿದ ಘಟನೆ ನಡೆದಿದೆ. ಮಂಗಲ್ಪಾಡಿ ಪಂಚಾಯತ್ ಆಫೀಸ್ನಲ್ಲಿ ಹಲವಾರು ದಿನಗಳಿಂದ ಉದ್ಯೋಗಸ್ತರ ಕೊರತೆ ಇದ್ದು,ಮೊನ್ನೆ ಬಿಜೆಪಿ ಪಂಚಾಯತ್ ಸಮಿತಿ ವತಿಯಿಂದ ಸೂಚನಾ ಪ್ರತಿಭಟನೆ ನಡೆದರು ಈ ಬಗ್ಗೆ ತಮಗೇನು ಗೊಡವೆ ಇಲ್ಲದ ರೀತಿಯಲ್ಲಿ ವರ್ತಿಸುತ್ತಿರುವ

ಮಂಜೇಶ್ವರ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ- ಗಂಭೀರ ಗಾಯ

ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಿಂದ ಬಂದ ಇನೋವಾ ಕಾರೊಂದು ರಸ್ತೆದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗಳೊಂದಿಗೆ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ನಿಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಗಾಯಗೊಂಡ ವಿದ್ಯಾರ್ಥಿ. ಈತನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.