ಮೂಡುಬಿದಿರೆ: ಮೂಡುಬಿದಿರೆಯಲ್ಲಿ ನಡೆಯಲಿರುವ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರಿಗೆ ಸ್ವಾಗತ ಕೋರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಮೂಡುಬಿದಿರೆ ಪರಿಸರದಲ್ಲಿ ಹಾಕಿರುವ ಫ್ಲೆಕ್ಸ್ಗಳನ್ನು ಯಾರೋ ದುಷ್ಕರ್ಮಿಗಳು ಹರಿದು ಹಾಕಿದ್ದಲ್ಲದೆ ಮಿಥುನ್ ರೈ ಪೋಟೋಕೆ ಹಾನಿ
ಮಂಗಳೂರಿನ ಮಣ್ಣಗುಡ್ಡದಲ್ಲಿ ಅಪ್ಸರಾ ಐಸ್ಕ್ರೀಂನ ಮತ್ತೊಂದು ಶಾಖೆಯು ಮಾರ್ಚ್ 11ರಂದು ಶುಭಾರಂಭಗೊಳ್ಳಲಿದೆ. ಈಗಾಗಲೇ ಖ್ಯಾತಿಯನ್ನು ಪಡೆದಿರುವ ಕಾಮಾಕ್ಷಿ ವೇಂಚರ್ಸ್ನ ಅಪ್ಸರಾ ಐಸ್ಕ್ರೀಂ ಐಸ್ಕ್ರೀಂ ಪ್ರೀಯರ ನೆಚ್ಚಿನ ಶಾಖೆಯಾಗಿದೆ. ವಿವಿಧ ಫ್ಲೇವರ್ಗಳ ಟೇಸ್ಟಿ ಐಸ್ಕ್ರೀಂಗಳಿಗೆ ಜನಪ್ರಸಿದ್ಧಿಯನ್ನು ಪಡೆದಿದೆ. ಇದೀಗ ನಗರದ ಮಣ್ಣಗುಡ್ಡದ ಲೋಟಸ್ ದಾಮ್ನ ನೆಲಮಹಡಿಯಲ್ಲಿ ಅಪ್ಸರಾ ಐಸ್ಕ್ರೀಂನ ಶಾಖೆಯು ಮಾರ್ಚ್ 11ರಂದು ಬೆಳಿಗ್ಗೆ 11 ಗಂಟೆಗೆ
ತುಳುನಾಡ ರಾಜಧಾನಿ ಆಗಿದ್ದ ದೇವಾಲಯಗಳ, ರಾಜ ಮಹಾರಾಜರುಗಳ ಖ್ಯಾತಿಯ ಬಾರಕೂರು ಕೋಟೆಯಲ್ಲಿ 5 ವರ್ಷಗಳ ಹಿಂದೆ ನಡೆದ ಅಳುಪೋತ್ಸವ ನಡೆದಿತ್ತು. ಅಲ್ಲಿ ಈಗ ಮುಳ್ಳು ಪೊದೆಗಳು ರಾಜ್ಯಭಾರ ನಡೆಸಿವೆ. 2019 ಜನವರಿ 25ರಿಂದ 27ರತನಕ ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲಾಡಳಿತ ಮತ್ತು ಸ್ಥಳಿಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ಅಳುಪೋತ್ಸವ ಬಾರಕೂರಿನ ಗತ ವೈಭವಕ್ಕೆ ಸಾಕ್ಷಿಯಾಗಿತ್ತು. ಕೋಟೆಯ ಸುತ್ತ ಏರು
ಜಮ್ಮು ಮತ್ತು ಕಾಶ್ಮೀರದ 370ನೇ ವಿಧಿಯನ್ನು ಕರಾಳ ದಿನ ಎಂದು ಕರೆದದ್ದು ತಪ್ಪಲ್ಲ. ಅದು ಅವರು ಅಭಿವ್ಯಕ್ತಿ ಸ್ವಾತಂತ್ರ್ಯ ಎಂದು ಸರ್ವೋಚ್ಚ ನ್ಯಾಯಾಲಯವು ಅಭಿಪ್ರಾಯ ಪಟ್ಟಿದೆ. ಸರಕಾರದ ಕ್ರಮಗಳನ್ನು ಟೀಕಿಸುವ ಹಕ್ಕು ಪ್ರಜಾಪ್ರಭುತ್ವದಲ್ಲಿ ಪ್ರಜೆಗೆ ಇದೆ ಎಂದೂ ಅದು ಹೇಳಿದೆ. ಇದೇ ಸಂದರ್ಭದಲ್ಲಿ ಇನ್ನೊಂದು ಮಾತನ್ನು ಸಹ ಸುಪ್ರೀಂ ಕೋರ್ಟು ಹೇಳಿದೆ. ಪಾಕಿಸ್ತಾನಕ್ಕೆ ಯಾರಾದರೂ ಸ್ವಾತಂತ್ರ್ಯೋತ್ಸವದ ಶುಭಾಶಯ ಹೇಳಿದರೆ ಅದು ಅಪರಾಧ ಆಗುವುದಿಲ್ಲ. ಅದು ಸ್ನೇಹ ಸೂಚಕ
ಉತ್ತರ ಕರ್ನಾಟಕ ಮೂಲದ ಬೆಂಗಳೂರು ನಿವಾಸಿ ಇನ್ಫೋಸಿಸ್ ಸ್ಥಾಪಕರಲ್ಲಿ ಒಬ್ಬರಾದ ಸುಧಾ ಮೂರ್ತಿಯವರನ್ನು ರಾಜ್ಯ ಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ. ಈ ಬಗೆಗೆ ಪ್ರಧಾನಿ ಮೋದಿಯವರು ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ನೀಡಿ, ರಾಷ್ಟ್ರಪತಿಯವರು ತಮ್ಮನ್ನು ನೇಮಿಸಿರುವುದು ಆನಂದ ತಂದಿದೆ ಎಂದು ಸಂತೋಷ ಹಂಚಿಕೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ನಾಮ ನಿರ್ದೇಶನ ಮಾಡಿದ್ದಾರೆ. ಇದರಿಂದ ನಾರೀ ಶಕ್ತಿಗೆ ಬಲ ಬಂದಂತಾಗಿದೆ ಎಂದೂ ಹೇಳಲಾಗಿದೆ.
ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಆರೋಪಿಗಳು ವ್ಯಕ್ತಿಯ ಕುತ್ತಿಗೆಯಲ್ಲಿದ್ದ 5 ಪವನ್ ಚಿನ್ನದ ಸರ, ಪರ್ಸ್ ನಲ್ಲಿದ್ದ ಹಣವನ್ನು ಕಸಿದುಕೊಂಡು ಅವ್ಯಾಚವಾಗಿ ಬೈದು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ನಲ್ಲಿ ನಡೆದಿದೆ. ಮಾಣಿ ಗ್ರಾಮ ಬಂಟ್ವಾಳ ನಿವಾಸಿ ಸ್ಟೀವನ್ ಆಲ್ವೀನ್ ಪಾಯಸ್ (೫೧) ಎಂಬುವರು ಮಾರ್ಚ್ ೫ರಂದು ಬೆಳಗ್ಗೆ, ಅವರ ಮೋಟಾರ್ ಸೈಕಲ್ನಲ್ಲಿ ಕಛೇರಿಗೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ಕ್ಲಬ್ ದಿನಾಚರಣೆ ಮಾ.10ರಂದು ಬೆಳಗ್ಗೆ 9.30ರಿಂದ ಮರವೂರಿನ ದಿ ಗ್ರ್ಯಾಂಡ್ ಬೇಯಲ್ಲಿ ನಡೆಯಲಿದೆ. ಹಿರಿಯ ಪತ್ರಕರ್ತರಾದ ಅನ್ನು ಮಂಗಳೂರು, ರಾಘವೇಂದ್ರ ಭಟ್, ಪ್ರಕಾಶ್ ಮಂಜೇಶ್ವರ , ಕೃಷ್ಣ ಕೋಲ್ಚಾರ್, ರವಿ ಪೊಸವಣಿಕೆ, ರವೀಂದ್ರ ಶೆಟ್ಟಿ ಕುತ್ತೆತ್ತೂರು, ರಾಜೇಶ್ ಕಿಣಿ, ಅಶೋಕ್. ಶೆಟ್ಟಿ ಬಿ.ಎನ್.V4 ನ್ಯೂಸ್ ನ ವರದಿಗಾರ ಶರತ್ ಸಾಲಿಯಾನ್ ಇವರುಗಳು ಪ್ರೆಸ್ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ತಾಯಿ ಒಬ್ಬರು ಪ್ರಿಯಕರನೊಡನೆ ಸೇರಿ ಎರಡೂವರೆ ವರುಷದ ಮಗುವನ್ನು ಹಿಂಸಿಸಿದ್ದು ವರದಿಯಾಗಿದೆ. ಬೆಂಗಳೂರು ಹೊಸಕೆರೆಹಳ್ಳಿಯ ಈ ಪ್ರಕರಣದಲ್ಲಿ ಅಕ್ರಮ ದಂಪತಿಯನ್ನು ಬಂಧಿಸಲಾಗಿದೆ. ತಿಂಗಳ ಹಿಂದೆ ಅದೇ ಬೆಂಗಳೂರಿನಲ್ಲಿ ಇದೇ ರೀತಿಯ ಅಕ್ರಮ ದಂಪತಿಯು ಮಗುವನ್ನು ಕೊಂದು ಈಗ ಜೈಲಿನಲ್ಲಿ ಇದ್ದಾರೆ. ಮೊಕದ್ದಮೆ ನಡೆದಿದೆ. ಎಲ್ಲ ತಾಯಂದಿರು ಒಂದಲ್ಲ ಒಂದು ಬಾರಿ ಮಗುವಿಗೆ ಹೊಡೆಯುತ್ತಾರೆ. ಆಮೇಲೆ ಅವರೇ ಮುದ್ದು ಮಾಡುತ್ತಾರೆ. ಸಾಮಾನ್ಯವಾಗಿ ಹಠ
ಮೂಡುಬಿದಿರೆ : ‘ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ, ಮೌಲ್ಯ ಹಾಗೂ ಗೌರವವು ಅವಶ್ಯವಾಗಿದೆ. ಮಹಿಳೆಯರ ಆಶಯ ಪರಿಗಣಿಸದೇ ಯಾವುದೇ ಪ್ರಗತಿ ಸಾಧ್ಯವಿಲ್ಲ ಎಂಬುದನ್ನು ಪುರುಷರು ಅರಿತುಕೊಳ್ಳಬೇಕಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆನಂದ ಕೆ. ಹೇಳಿದರು.ಅವರು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ -2024ರ ಪ್ರಯುಕ್ತ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿವಿಧ ಸಂಘ -ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಳ್ವಾಸ್ ಕಾಲೇಜಿನ
ನೆಲ್ಯಾಡಿ: 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ. ನೆಲ್ಯಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 2ನೇ ವಾರ್ಡಿನ ಕೊಟೇಲು, ದರ್ಖಾಸು ಎಂಬಲ್ಲಿ 7.30 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ ಮಾ.04 ರಂದು ನೆರವೇರಿತು.ನೆಲ್ಯಾಡಿ ಗ್ರಾಮ ಪಂಚಾಯಿತಿನ ಅಧ್ಯಕ್ಷರಾದ ಸಲಾಂ ಬಿಲಾಲ್, ಉಪಾಧ್ಯಕ್ಷೆ ಶ್ರೀಮತಿ ರೇಶ್ಮಾ ಶಶಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿದರು.15ನೇ ಹಣಕಾಸು ಯೋಜನೆಯಡಿ ಪಂಚಾಯತ್ ಅನುದಾನ