Home Posts tagged #v4stream (Page 4)

ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯದ ವೃದ್ಧಿಗೆ ಶಿಬಿರ ಸಹಕಾರಿ- ಸುಬ್ರಮಣ್ಯ ರಾವ್

ಸಂಸ್ಕೃತಿ, ಸಂಸ್ಕಾರ ಜೀವನ ವಿಧಾನಗಳ ಬಗ್ಗೆ ಕೇವಲ ಭಾಷಣ, ಬೋಧನೆಯ ಬದಲಾಗಿ ಪ್ರಾಯೋಗಿಕವಾಗಿ ಮಕ್ಕಳಿಗೆ ಅರಿವು ಮೂಡಿಸುವುದು ಇಂದಿನ ಅಗತ್ಯವಾಗಿದೆ ಹಾಗೂ ಇಂತಹ ಶಿಬಿರಗಳು ಮಕ್ಕಳ ಮಾನಸಿಕ ಮತ್ತು ಬೌದ್ಧಿಕ ಆರೋಗ್ಯದ ವೃದ್ಧಿಗೆ ಸಹಕಾರಿಯಾಗಲಿದೆ ಎಂದು ತೋಕೂರಿನ ವೇದ ವಿದ್ವಾಂಸರಾದ ವೇ.ಮೂ.ಟಿ.ಸುಬ್ರಹ್ಮಣ್ಯ ರಾವ್ ಅವರು ಪುನರೂರು ಪ್ರತಿಷ್ಠಾನ (ರಿ.) ಇದರ ಆಶಯದಲ್ಲಿ

ಆಮ್ ಆದ್ಮಿ ಪಕ್ಷದಿಂದ ರಾಷ್ಟ್ರಾದ್ಯಂತ ಸ್ಪರ್ಧೆ : ದ.ಕ.ಜಿಲ್ಲೆಯ 5 ಮಂದಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಪುತ್ತೂರು: ಆಮ್ ಆದ್ಮಿ ಪಕ್ಷ ಕಳೆದ 10 ವರ್ಷಗಳಲ್ಲಿ ಒಂದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದ್ದು, ರಾಷ್ಟ್ರಾದ್ಯಂತ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಈಗಾಗಲೇ ದ.ಕ.ಜಿಲ್ಲೆಯಲ್ಲಿ ಐದು ಸ್ಥಾನಗಳಲ್ಲಿ ಅಭ್ಯರ್ಥಿಯ ಪಟ್ಟಿ ಬಿಡುಗಡೆಗೊಂಡಿದೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ್ ಎಡಮಲೆ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಪುತ್ತೂರಿನ ಸರಕಾರ ಆಸ್ಪತ್ರೆ

ಮೂಡುಬಿದರೆಯಲ್ಲಿ ತುಳು ಮಹಾಕೂಟ-2023ಕ್ಕೆ ಚಾಲನೆ

ಮೂಡುಬಿದಿರೆ: ಅಖಿಲ ಭಾರತ ತುಳು ಒಕ್ಕೂಟ(ರಿ.) ಮತ್ತು ತುಳುಕೂಟ ಬೆದ್ರ ಸಹಯೋಗದಲ್ಲಿ ಮೂಡುಬಿದಿರೆ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ತುಳು ಮಹಾಕೂಟ-2023ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶನಿವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಆಳ್ವರು, ಬೇರೆ ಬೇರೆ ಸಮುದಾಯದವರು ತುಳು ಭಾಷೆಯನ್ನು ಅಪ್ಪಿ ಒಪ್ಪಿಕೊಂಡಿದ್ದಾರೆ. ಇತರ ಸಮುದಾಯಗಳು ಇರುವಲ್ಲಿ ಅಲ್ಲಲ್ಲಿ ತುಳು ಸಂಘಟನೆಗಳನ್ನು ಮಾಡಬೇಕಾಗಿದೆ ಆ ಮೂಲಕ ಮುಂದಿನ

ವಸತಿ ರಹಿತರಿಗೆ ಪ್ಲಾಟ್ ಹಸ್ತಾಂತರ : ಕೇರಳ ಸರ್ಕಾರದ ಮಹತ್ವದ ಯೋಜನೆ

ನಾಳೆ ರಾಜ್ಯದ ಮುಖ್ಯಮಂತ್ರಿ ಶ್ರೀ. ಪಿಣರಾಯಿ ವಿಜಯನ್ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ. ನಾಳೆಯಿಂದ ಮನೆ, ಜಮೀನು ಇಲ್ಲದ 174 ಕುಟುಂಬಗಳು ಸ್ವಂತ ಮನೆ ಹೊಂದಲಿದ್ದು, ಇವರಿಗೆ ಸ್ವಂತ ಮನೆ ಕನಸಾಗಿತ್ತು. ಈ ವಸತಿ ಸಮುಚ್ಚಯಗಳು ಕಣ್ಣೂರು ಜಿಲ್ಲೆಯ ಕದಂಪುರ್, ಕೊಲ್ಲಂ ಜಿಲ್ಲೆಯ ಪುನಲೂರ್, ಕೊಟ್ಟಾಯಂ ಜಿಲ್ಲೆಯ ವಿಜಯಪುರಂ ಮತ್ತು ಇಡುಕ್ಕಿ ಜಿಲ್ಲೆಯ ಕರಿಮಣ್ಣೂರಿನಲ್ಲಿವೆ. ಪ್ರತಿ ವಸತಿ ಸಮುಚ್ಚಯ ನಿರ್ಮಿಸಲು 6.7 ಕೋಟಿಯಿಂದ 7.85 ಕೋಟಿ ವೆಚ್ಚ ಮಾಡಲಾಗಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಬೇಸಿಗೆ ರಜೆಯ ಹಿನ್ನೆಲೆ ಹರಿದು ಬಂದ ಜನಸಾಗರ

ಕುಂದಾಪುರ: ರಜೆಯ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಜನ ಸಾಗರವೆ ಹರಿದು ಬಂದಿದೆ. ಆಡಳಿತ ಮಂಡಳಿ ಸದಸ್ಯರಾದ ಗೋಪಾಲಕೃಷ್ಣ ನಾಡ ಮಾತನಾಡಿ, ನಿರಂತರವಾಗಿ ಸರಕಾರಿ ರಜೆ ಇದಿದ್ದರಿಂದ ಕಳೆದ ಮೂರು ದಿನಗಳಲ್ಲಿ 25,000 ಕ್ಕೂ ಅಧಿಕ ಜನರು ಭೇಟಿ ನೀಡಿದ್ದು ಶ್ರೀ ಕ್ಷೇತ್ರದಲ್ಲಿ ಭಕ್ತ ಸಮೂಹವೆ ಕಂಡು ಬಂದಿದೆ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡು ದೇವಿಯ ದರ್ಶನವನ್ನು ಪಡೆದರು. ಶಾಲಾ ಮಕ್ಕಳಿಗೆ

ನಾನು ಟಿಕೆಟ್ ಆಕಾಂಕ್ಷಿಯಲ್ಲ : ಕ್ಯಾ. ಗಣೇಶ್ ಕಾರ್ಣಿಕ್

ಈ ಬಾರಿಯ ವಿಧಾನಸಭೆ ಚುನಾವಣೆಗೆ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೇಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್.ಗಣೇಶ್ ಕಾರ್ಣಿಕ್ ಅವರು ತಿಳಿಸಿದ್ದಾರೆ. ಬಿಜೆಪಿಯ ಟಿಕೆಟ್ ಆಕಾಂಕ್ಷಿಗಳ ಪಟ್ಟಿಯಲ್ಲಿ ಗಣೇಶ್ ಕಾರ್ಣಿಕ್ ಅವರ ಹೆಸರು ಇದೆ ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುದ್ಧಿಗೆ ಅವರು ಪತ್ರಿಕ್ರಿಯಿಸಿ ನಾನು ಯಾವುದೇ ಕ್ಷೇತ್ರದಿಂದಲೂ ಟಿಕೆಟ್ ಆಕಾಂಕ್ಷಿಯಾಗಿರುವುದಿಲ್ಲ ಎಂದು ಸ್ವಷ್ಟಪಡಿಸಿದರು

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ :ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹ

ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಎಲ್ಲಾ ವಾರ್ಡಿನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು ತಕ್ಷಣ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ ವಿಪಕ್ಷ ಸದಸ್ಯರು ಪುರಸಭೆಯಲ್ಲಿ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ನೀಡಿ ಮುಖ್ಯಾಧಿಕಾರಿಯವರನ್ನು ಆಗ್ರಹಿಸಿದರು, ವಾರ್ಡ್ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆಯನ್ನು ಗುರುತಿಸಿ ಸಮರ್ಪಕ ವಿತರಣೆಗೆ ಕ್ರಮ ಜರುಗಿಸಲಾಗುವುದು ಮತ್ತು ಅಗತ್ಯವಿರು ಸ್ಥಳಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಭರವಸೆಯನ್ನು

ಬೆಳ್ತಂಗಡಿ : ಬಿಜೆಪಿ ಮುಖಂಡ ಕಾಂಗ್ರೆಸ್ ಸೇರ್ಪಡೆ

ಮರೋಡಿ ಗ್ರಾಮದ ಮಾಜಿ ಪಂಚಾಯತ್ ಉಪಾಧ್ಯಕ್ಷರು ಬಿಜೆಪಿಯ ಮುಖಂಡರು ರವಿರಾಜ್ ಬಲ್ಲಾಳ್ ಬಿಜೆಪಿಯ ದುರಡಳಿತಕ್ಕೆ ಬೇಸತ್ತು ಬೆಳ್ತಂಗಡಿಯ ಯುವ ನಾಯಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃದಲ್ಲಿ ನಾರಾವಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು ಈ ಸಂದರ್ಭದಲ್ಲಿ ನಾರವಿ ಗ್ರಾಮದ ಪಕ್ಷದ ಪ್ರಮುಖರು ,ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಕಳ ವಿಧಾನ ಸಭಾ ಕ್ಷೇತ್ರ : ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಮಮತಾ ಹೆಗ್ಡೆ ದಿಲ್ಲಿ ಭೇಟಿ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಾವಿತ್ರಿ ಸತ್ಯವಾನ್ ಟ್ರಸ್ಟ್ ಅಧ್ಯಕ್ಷೆ ಡಾ.ಮಮತಾ ಹೆಗ್ಡೆ ಅವರು ಹೊಸ ದಿಲ್ಲಿಯಲ್ಲಿ ಕೇಂದ್ರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಹಿರಿಯ ನಾಯಕರನ್ನು ಭೇಟಿ ಮಾಡಿದರು. ಇದೇ ವೇಳೆ ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಬಂದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಾರ್ಕಳ ಕ್ಷೇತ್ರದಲ್ಲಿ ಸಾಮಾಜಿಕ, ಶೈಕ್ಷಣಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಡಾ.ಮಮತಾ ಹೆಗ್ಡೆ ಅವರು ಚುನಾವಣಾ

ಅವ್ಯವಸ್ಥೆಯ ಆಗರದಲ್ಲಿ ಸುರತ್ಕಲ್ ಮೀನು ಮಾರುಕಟ್ಟೆ, ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ

ಮೂಲಭೂತ ಸೌಕರ್ಯ ವಂಚಿತ ಮೀನು ಮಾರುಕಟ್ಟೆ, ತಾತ್ಕಾಲಿಕ ಮಾರುಕಟ್ಟೆಯೊಳಗಡೆ ತೆರೆದ ಚರಂಡಿ, ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಾರುಕಟ್ಟೆ, ಸಮರ್ಪಕ ನಿರ್ವಹಣೆ ಇಲ್ಲದೆ ಸೊರಗುತ್ತಿರುವ ಮಾರುಕಟ್ಟೆ, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಮೀನು ವ್ಯಾಪಾರ ಮಹಿಳೆಯರ ಅಳಲು ಇದು ಸುರತ್ಕಲ್ ಮೀನು ವ್ಯಾಪಾರ ಮಾರುಕಟ್ಟೆಯ ದುಸ್ಥಿತಿ. ಕಳೆದ ನಾಲ್ಕು ವರ್ಷದಿಂದ ಅಲ್ಲಿನ ಮೀನುಗಾರಿಗೆ ತಾತ್ಕಾಲಿಕ ಮಾರುಕಟ್ಟೆಯ ವ್ಯವಸ್ಥೆಯನ್ನು ರೂಪಿಸಿದ್ದರು. ಆದರೆ ವರ್ಷ ನಾಲ್ಕು ಕಳೆದರೂ,